Homeಮುಖಪುಟಅಜಿತ್‌ ಪವಾರ್‌ ನೇತೃತ್ವದ ಎನ್‌ಸಿಪಿ ಸೇರಿದ ಬಾಬಾ ಸಿದ್ದೀಕ್ ಪುತ್ರ ಝೀಶಾನ್ ಸಿದ್ದೀಕ್

ಅಜಿತ್‌ ಪವಾರ್‌ ನೇತೃತ್ವದ ಎನ್‌ಸಿಪಿ ಸೇರಿದ ಬಾಬಾ ಸಿದ್ದೀಕ್ ಪುತ್ರ ಝೀಶಾನ್ ಸಿದ್ದೀಕ್

- Advertisement -
- Advertisement -

ಇತ್ತೀಚೆಗೆ ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಮಹಾರಾಷ್ಟ್ರದ ಹಿರಿಯ ರಾಜಕಾರಣಿ ಹಾಗೂ ಎನ್‌ಸಿಪಿ (ಅಜಿತ್ ಪವಾರ್ ಬಣ) ನಾಯಕ ಬಾಬಾ ಸಿದ್ದೀಕ್ (ಬಾಬಾ ಝಿಯಾವುದ್ದೀನ್ ಸಿದ್ದೀಕ್) ಅವರ ಪುತ್ರ ಝೀಶಾನ್ ಸಿದ್ದೀಕ್ ಇಂದು (ಅ.25) ಬೆಳಿಗ್ಗೆ ಎನ್‌ಸಿಪಿ ಸೇರ್ಪಡೆಯಾಗಿದ್ದಾರೆ.

ಪಕ್ಷ ಸೇರ್ಪಡೆ ಬೆನ್ನಲ್ಲೇ ಝೀಶಾನ್ ಅವರನ್ನು ವಿಧಾನಸಭೆ ಚುನಾವಣೆಗೆ ಮುಂಬೈನ ಬಾಂದ್ರಾ ಪೂರ್ವ ಕ್ಷೇತ್ರದ ಅಭ್ಯರ್ಥಿಯಾಗಿ ಎನ್‌ಸಿಪಿ ಘೋಷಣೆ ಮಾಡಿದೆ.

ಎನ್‌ಸಿಪಿ ಸೇರ್ಪಡೆ ಬಳಿಕ ಮಾತನಾಡಿದ ಝೀಶಾನ್, “ಕಾಂಗ್ರೆಸ್‌ ಸೇರಿದಂತೆ ಮಹಾ ವಿಕಾಸ್ ಅಘಾಡಿಯ ನಾಯಕರು ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದರು. ಆದರೆ ಅವರು ಮೋಸ ಮಾಡುವ ಉದ್ದೇಶ ಹೊಂದಿದ್ದರು. ಕಾಂಗ್ರೆಸ್‌ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ. ಅವರು ಯಾವಾಗಲೂ ಶಿವಸೇನೆ (ಯುಬಿಟಿ) ಒತ್ತಡಕ್ಕೆ ಒಳಗಾಗುತ್ತಾರೆ” ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ಮಾಜಿ ಶಾಸಕ ಝೀಶಾನ್ : ಝೀಶಾನ್ ಅವರು 2019ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು. ಆದರೆ, ನಂತರ ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಅರೋಪದ ಮೇಲೆ ಕಾಂಗ್ರೆಸ್ ಅವರನ್ನು ಉಚ್ಚಾಟಿಸಿತ್ತು. ಈ ಚುನಾವಣೆಯಲ್ಲಿ ಝೀಶಾನ್ ಅವರು ಶಿವಸೇನೆ (ಯುಬಿಟಿ) ಅಭ್ಯರ್ಥಿ ವರುಣ್ ಸರ್ದೇಸಾಯಿ ವಿರುದ್ಧ ಸ್ಪರ್ಧಿಸಲಿದ್ದಾರೆ.

ಬಾಬಾ ಸಿದ್ದೀಕ್ ಹತ್ಯೆ : ಝೀಶಾನ್ ಸಿದ್ದೀಕ್ ಅವರ ತಂದೆ, ಮಹಾರಾಷ್ಟ್ರದ ಹಿರಿಯ ರಾಜಕಾರಣಿ ಬಾಬಾ ಸಿದ್ದೀಕ್ ಅವರನ್ನು, ದಸರಾ ಹಬ್ಬದ ಅಂಗವಾಗಿ ಝೀಶಾನ್ ಸಿದ್ದೀಕ್ ಕಚೇರಿ ಬಳಿ ಪಠಾಕಿ ಸಿಡಿಸುತ್ತಿದ್ದ ವೇಳೆ ಕಳೆದ ಅಕ್ಟೋಬರ್ 12ರಂದು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು.

ಗ್ಯಾಂಗ್‌ಸ್ಟರ್ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯನೊಬ್ಬ ಬಾಬಾ ಸಿದ್ದೀಕ್ ಅವರ ಹತ್ಯೆಯ ಹೊಣೆಗಾರಿಕೆ ಹೊತ್ತುಕೊಂಡಿದ್ದಾನೆ. ಬಾಲಿವುಡ್‌ ನಟ ಸಲ್ಮಾನ್ ಖಾನ್ ಅವರೊಂದಿಗಿನ ನಿಕಟ ಸಂಬಂಧ ಕಾರಣಕ್ಕೆ ಬಾಬಾ ಸಿದ್ದೀಕ್ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಹೇಳಲಾಗ್ತಿದೆ.

ಹಿರಿಯ ರಾಜಕಾರಣಿ ಬಾಬಾ ಸಿದ್ದೀಕ್ : ಬಾಬಾ ಸಿದ್ದೀಕ್ ಮುಂಬೈನ ಬಾಂದ್ರಾ ಪೂರ್ವ ಕ್ಷೇತ್ರದಿಂದ ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 2004 ಮತ್ತು 2008ರ ನಡುವೆ ಮುಖ್ಯಮಂತ್ರಿ ವಿಲಾಸ್‌ರಾವ್ ದೇಶಮುಖ್ ನೇತೃತ್ವದ ಮಹಾರಾಷ್ಟ್ರ ರಾಜ್ಯ ಸರ್ಕಾರದಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಕಾರ್ಮಿಕ ಇಲಾಖೆ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.

ಸಿದ್ದೀಕ್ ಅವರು ಈ ಹಿಂದೆ 1992 ಮತ್ತು 1997 ರ ನಡುವೆ ಸತತ ಎರಡು ಅವಧಿಗೆ ಮುಂಬೈ ಮುನ್ಸಿಪಲ್ ಕಾರ್ಪೊರೇಟರ್ ಆಗಿ ಸೇವೆ ಸಲ್ಲಿಸಿದ್ದರು. ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಂಬೈ ಪ್ರಾದೇಶಿಕ ಕಾಂಗ್ರೆಸ್ ಸಮಿತಿ ಮತ್ತು ಸಂಸದೀಯ ಮಂಡಳಿಯ ಅಧ್ಯಕ್ಷರು ಮತ್ತು ಹಿರಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದರು. 8 ಫೆಬ್ರವರಿ 2024ರಂದು, ಅವರು ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರು. ನಂತರ 12 ಫೆಬ್ರವರಿ 2024 ರಂದು ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷಕ್ಕೆ (ಎನ್‌ಸಿಪಿ) ಸೇರಿದರು.

ಇದನ್ನೂ ಓದಿ : ಮಹಾರಾಷ್ಟ್ರ ಚುನಾವಣೆ: 48 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದ ಕಾಂಗ್ರೆಸ್, 25 ಹಾಲಿ ಶಾಸಕರಿಗೂ ಟಿಕೆಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...