Homeಮುಖಪುಟಬಾಬಾ ಸಿದ್ದೀಕಿ ಹತ್ಯೆ ತನಿಖೆ | ಬಿಲ್ಡರ್‌ಗಳು, ರಾಜಕಾರಣಿಗಳನ್ನು ಹೆಸರಿಸಿದ ಪುತ್ರ ಜೀಶನ್

ಬಾಬಾ ಸಿದ್ದೀಕಿ ಹತ್ಯೆ ತನಿಖೆ | ಬಿಲ್ಡರ್‌ಗಳು, ರಾಜಕಾರಣಿಗಳನ್ನು ಹೆಸರಿಸಿದ ಪುತ್ರ ಜೀಶನ್

- Advertisement -
- Advertisement -

ಎನ್‌ಸಿಪಿ ನಾಯಕ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣದಲ್ಲಿ ಅವರ ಪುತ್ರ ಮಹಾರಾಷ್ಟ್ರದ ಮಾಜಿ ಶಾಸಕ ಜೀಶನ್ ಸಿದ್ದಿಕ್ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ಕೆಲವು ಬಿಲ್ಡರ್‌ಗಳು ಮತ್ತು ರಾಜಕಾರಣಿಗಳನ್ನು ಹೆಸರಿಸಿದ್ದಾರೆ ಎಂದು ವರದಿಯಾಗಿದೆ. ತಮ್ಮ ತಂದೆಯ ಹತ್ಯೆಯ ತನಿಖೆಯ ಸಮಯದಲ್ಲಿ ಬಾಂದ್ರಾದಲ್ಲಿನ ಕೊಳೆಗೇರಿ ಅಭಿವೃದ್ಧಿ ಯೋಜನೆಗಳ ಸಮಸ್ಯೆಗಳನ್ನು ಪರಿಗಣಿಸುವಂತೆ ಅವರು ಒತ್ತಾಯಿಸಿದ್ದಾರೆ. ಬಾಬಾ ಸಿದ್ದೀಕಿ ಹತ್ಯೆ ತನಿಖೆ

ಸಂದರ್ಭವೊಂದರಲ್ಲಿ ಡೆವಲಪರ್ ಒಬ್ಬ ತನ್ನ ತಂದೆಯ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿದ್ದಾರೆ ಎಂದು ಜೀಶನ್ ಸಿದ್ದಿಕ್ ಪೊಲೀಸರಿಗೆ ತಿಳಿಸಿದ್ದಾರೆ. ಪುನರಾಭಿವೃದ್ಧಿ ಯೋಜನೆಗಳಿಗಾಗಿ ಅನೇಕ ಡೆವಲಪರ್‌ಗಳು ತಮ್ಮ ತಂದೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು ಎಂದು ಇದೇ ವೇಳೆ ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಕ್ಟೋಬರ್ 12, 2024 ರಂದು ಮಾಜಿ ರಾಜ್ಯ ಸಚಿವರ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಸಲ್ಲಿಸಿದ ಆರೋಪಪಟ್ಟಿಯ ಭಾಗವಾಗಿ ಅವರು ಈ ಹೇಳಿಕೆ ನೀಡಿದ್ದಾರೆ. ಬಾಬಾ ಸಿದ್ದಿಕಿ (66) ಅವರನ್ನು ಮುಂಬೈನ ಬಾಂದ್ರಾ ಪೂರ್ವ ಪ್ರದೇಶದಲ್ಲಿ ತಮ್ಮ ಮಗನ ಕಚೇರಿಯ ಹೊರಗೆ ಮೂವರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೀಡಾಗಿದ್ದಾರೆ. ಬಾಬಾ ಸಿದ್ದೀಕಿ ಹತ್ಯೆ ತನಿಖೆ

ಮುಂಬೈನ ಬಾಂದ್ರಾ ಪ್ರದೇಶದ ಕೊಳೆಗೇರಿ ನಿವಾಸಿಗಳ ಹಕ್ಕುಗಳಿಗಾಗಿ ತಾನು ಮತ್ತು ತನ್ನ ತಂದೆ ನಿರಂತರವಾಗಿ ಹೋರಾಡುತ್ತಿದ್ದೇವೆ ಎಂದು ಜೀಶನ್ ಸಿದ್ದಿಕ್ ಪೊಲೀಸರಿಗೆ ತಿಳಿಸಿದ್ದು, ಪುನರಾಭಿವೃದ್ಧಿ ಯೋಜನೆಗೆ ಆಕ್ಷೇಪ ವ್ಯಕ್ತಪಡಿಸಿದ್ದಕ್ಕಾಗಿ ಅವರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

“ನನ್ನ ತಂದೆಯೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿದ್ದ ಅನೇಕ ಡೆವಲಪರ್‌ಗಳು ಇದ್ದಾರೆ. ನನ್ನ ತಂದೆಗೆ ಅವರ ದೈನಂದಿನ ಕೆಲಸದ ಬಗ್ಗೆ ಡೈರಿ ಬರೆಯುವ ಅಭ್ಯಾಸವಿತ್ತು. ಕೊಲೆಯಾದ ದಿನ ಸಂಜೆ 5.30 ರಿಂದ 6 ರ ಸುಮಾರಿಗೆ ಮೋಹಿತ್ ಕಾಂಬೋಜ್ (ಬಿಜೆಪಿ ಕಾರ್ಯಕರ್ತ) ನನ್ನ ತಂದೆಯನ್ನು ವಾಟ್ಸಾಪ್‌ನಲ್ಲಿ ಸಂಪರ್ಕಿಸಿದ್ದರು ಎಂದು ನನಗೆ ತಿಳಿದುಬಂದಿದೆ” ಎಂದು ಅವರು ಹೇಳಿದ್ದಾರೆ.

ಮುಂದ್ರಾ ಬಿಲ್ಡರ್ಸ್‌ನ ಬಾಂದ್ರಾದಲ್ಲಿನ ಯೋಜನೆಗೆ ಸಂಬಂಧಿಸಿದಂತೆ ಮೋಹಿತ್ ನನ್ನ ತಂದೆಯನ್ನು ಭೇಟಿಯಾಗಲು ಬಯಸಿದ್ದರು ಎಂದು ಜೀಶನ್ ಅವರು ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಎಸ್‌ಆರ್‌ಎ ಪುನರಾಭಿವೃದ್ಧಿ ಯೋಜನೆಗೆ ಸಂಬಂಧಿಸಿದಂತೆ ಕೆಲವು ವ್ಯಕ್ತಿಗಳೊಂದಿಗೆ ನಡೆದ ಸಭೆಯ ಸಮಯದಲ್ಲಿ ಬಿಲ್ಡರ್ ಒಬ್ಬರು ನನ್ನ ತಂದೆಯ ಬಗ್ಗೆ ನಿಂದನೀಯ ಪದಗಳನ್ನು ಬಳಸಿದ್ದಾರೆ. ನನ್ನ ತಂದೆಯ ಕೊಲೆಯ ತನಿಖೆಯಲ್ಲಿ ಮೇಲೆ ತಿಳಿಸಲಾದ ಎಲ್ಲಾ ವಿಷಯಗಳನ್ನು ವಿವರವಾಗಿ ತನಿಖೆ ಮಾಡಬೇಕೆಂದು ನಾನು ವಿನಂತಿಸುತ್ತೇನೆ” ಎಂದು ಜೀಸರ್ ಸಿದ್ದೀಕಿ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿಶೇಷ ಎಂಸಿಒಸಿಎ ನ್ಯಾಯಾಲಯಕ್ಕೆ 4,500 ಕ್ಕೂ ಹೆಚ್ಚು ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಬಂಧಿತ 26 ಆರೋಪಿಗಳ ವಿರುದ್ಧ ದಾಖಲಾಗಿದ್ದು, ಶುಭಂ ಲೋಂಕರ್, ಯಾಸಿನ್ ಅಖ್ತರ್ ಮತ್ತು ಅನ್ಮೋಲ್ ಬಿಷ್ಣೋಯ್ ಎಂಬ ಮೂವರು ವ್ಯಕ್ತಿಗಳನ್ನು ವಾಂಟೆಡ್ ಆರೋಪಿಗಳೆಂದು ಆರೋಪಿಸಲಾಗಿದೆ. ಎಲ್ಲಾ ಆರೋಪಿಗಳ ಮೇಲೆ ಕಠಿಣ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (MCOCA) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇದನ್ನೂಓದಿ:  ಉತ್ತರ ಪ್ರದೇಶ| ಶಿಕ್ಷಕಿ ಮತ್ತು ಆಕೆಯ ಪತಿ ಮೇಲೆ ಶಾಲಾ ಪ್ರಾಂಶುಪಾಲರ ತಂಡದಿಂದ ಹಲ್ಲೆ

ಉತ್ತರ ಪ್ರದೇಶ| ಶಿಕ್ಷಕಿ ಮತ್ತು ಆಕೆಯ ಪತಿ ಮೇಲೆ ಶಾಲಾ ಪ್ರಾಂಶುಪಾಲರ ತಂಡದಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...