Homeಕರ್ನಾಟಕಬಬಲೇಶ್ವರ ಬಿಜೆಪಿ ಅಭ್ಯರ್ಥಿಯ ಮಗನಿಂದ ಗುಂಡು ಹಾರಿಸಿ ಸಂಭ್ರಮಾಚರಣೆ; ಗೂಂಡಾ ಅಭ್ಯರ್ಥಿ ಎಂದ ಕಾಂಗ್ರೆಸ್

ಬಬಲೇಶ್ವರ ಬಿಜೆಪಿ ಅಭ್ಯರ್ಥಿಯ ಮಗನಿಂದ ಗುಂಡು ಹಾರಿಸಿ ಸಂಭ್ರಮಾಚರಣೆ; ಗೂಂಡಾ ಅಭ್ಯರ್ಥಿ ಎಂದ ಕಾಂಗ್ರೆಸ್

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆಯಾದ ಸಂದರ್ಭದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ಬಬಲೇಶ್ವರ ಕ್ಷೇತ್ರದಲ್ಲಿ ವಿಜುಗೌಡ ಪಾಟೀಲ ಅವರಿಗೆ ಟಿಕೆಟ್‌ ನೀಡಲಾಯಿತು. ಈ ವೇಳೆ ಅವರ ಪುತ್ರ ಸಮರ್ಥ ಗೌಡ ಗಾಳಿಯಲ್ಲಿ ಗುಂಡುಹಾರಿಸಿ ಸಂಭ್ರಮಿಸಿರುವ ವಿಡಿಯೊ ದೃಶ್ಯಗಳನ್ನು ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ಬಿಡುಗಡೆ ಮಾಡಿದೆ.

ಈ ಬಗ್ಗೆ ಗುರುವಾರ ಸುದ್ದಿಗೋಷ್ಠಿಯಲ್ಲಿ ನಡೆಸಿ, ವಿಡಿಯೊ ದೃಶ್ಯಗಳನ್ನು ಬಿಡುಗಡೆ ಮಾಡಿದ್ದಾರೆ. ಕೆಪಿಸಿಸಿ ಮುಖ್ಯ ವಕ್ತಾರ ಸಂಗಮೇಶ ಬಬಲೇಶ್ವರ ಮಾತನಾಡಿದ್ದು, ”ಟಿಕೆಟ್ ಸಿಕ್ಕಿರುವುದಕ್ಕೆ ಗುಂಡು ಹಾರಿಸಿ ಸಂಭ್ರಮಿಸಿರುವ ಬಿಜೆಪಿ ಅಭ್ಯರ್ಥಿ ವಿಜುಗೌಡ ಮತ್ತು ಅವರ ಪುತ್ರ ಸಮರ್ಥಗೌಡ ವಿರುದ್ದ ರಾಜ್ಯ ಚುನಾವಣಾ ಆಯೋಗ ಕ್ರಮಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಬಿಜೆಪಿ ಒಬ್ಬ ಗೂಂಡಾ ಅಭ್ಯರ್ಥಿಗೆ ಟಿಕೆಟ್ ನೀಡುವ ಮೂಲಕ ತನ್ನ ಸಂಸ್ಕೃತಿಯನ್ನು ಅನಾವರಣಗೊಳಿಸಿದೆ ಎಂದು ಅವರು ಆರೋಪ ಮಾಡಿದ್ದಾರೆ.

”ಬಿಜೆಪಿ, ಆರ್‌ಎಸ್‌ಎಸ್‌ನವರು ಯಾವಾಗಲೂ ಸಂಸ್ಕೃತಿ, ಸಂಸ್ಕಾರದ ಬಗ್ಗೆ ಮಾತನಾಡುತ್ತಾರೆ, ಇದಕ್ಕೆ ಸೂಕ್ತ ಉತ್ತರ ನೀಡಬೇಕು ಎಂದು ಒತ್ತಾಯಿಸಿದರು. ಬಬಲೇಶ್ವರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಜುಗೌಡ ಪಾಟೀಲ ತೆರೆಯ ಮುಂದೆ ಮತದಾರರ ಕಾಲಿಗೆ ಬಿದ್ದು, ಮೊಸಳೆ ಕಣ್ಣೀರು ಸುರಿಸಿ ಮತಯಾಚನೆ ಮಾಡುತ್ತಿದ್ದಾರೆ, ತೆರೆಯ ಹಿಂದೆ ಗುಂಡು ಹಾರಿಸಿ ಸಂಭ್ರಮಿಸುತ್ತಿದ್ದಾರೆ” ಎಂದು ಟೀಕಿಸಿದರು.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಬಾಗಲಕೋಟೆ: ಚರಂತಿಮಠ ವಿರುದ್ಧ ತಿರುಗಿಬಿದ್ದ ಸಂಘ ಪರಿವಾರದ ನಾಯಕರು; ಸುಲಭವಾಗಲಿದೆಯೇ ಮೇಟಿಯವರ ಗೆಲುವು?

”ಬಿಜೆಪಿಯ ನೈತಿಕ ಅಧಃಪಥನಕ್ಕೆ ಬಿಜೆಪಿ ಅಭ್ಯರ್ಥಿಯ ಗೂಂಡಾ ವರ್ತನೆ ಸಾಕ್ಷಿಯಾಗಿದೆ. ಇವರಿಂದ ಕ್ಷೇತ್ರದ ಜನತೆಯ ಭವಿಷ್ಯ ಆತಂಕದಲ್ಲಿ ಇದೆ” ಎಂದು ಸಂಗಮೇಶ ಅವರು ಹೇಳಿದರು.

”ಗೂಂಡಾ ಸಂಸ್ಕೃತಿಯ ವ್ಯಕ್ತಿ ವಿಜುಗೌಡ ಅವರಿಗೆ ಟಿಕೆಟ್ ನೀಡಲು ಮುಂಚೂಣಿಯಲ್ಲಿ ಶಿಫಾರಸು ಮಾಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿ.ಎಲ್. ಸಂತೋಷ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ತಮ್ಮ ಅಭ್ಯರ್ಥಿಯ ಈ ಕೃತ್ಯದ ಬಗ್ಗೆ ಉತ್ತರಿಸಬೇಕು” ಎಂದು ಆಗ್ರಹಿಸಿದರು.

”ಬಿಜೆಪಿ ಎಷ್ಟೇ ಗೂಂಡಾ ಸಂಸ್ಕೃತಿ ಪ್ರದರ್ಶಿದರೂ ಎಂ.ಬಿ.ಪಾಟೀಲ ಈ ಬಾರಿ 50 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

”ಬಬಲೇಶ್ವರ ಬಿಹಾರ ಆಗಬಾರದು, ಜಂಗಲ್ ರಾಜ್ ಆಗದಂತೆ ತಡೆಯಲು ಮತದಾರರು ಈ ಚುನಾವಣೆಯಲ್ಲಿ ಸುಸಂಸ್ಕೃತ, ಸಭ್ಯ ಹಾಗೂ ಅಭಿವೃದ್ಧಿಯ ಹರಿಹಾರ ಕಾಂಗ್ರೆಸ್ ಅಭ್ಯರ್ಥಿ ಎಂ.ಬಿ.ಪಾಟೀಲರನ್ನು ಬೆಂಬಲಿಸಬೇಕು” ಎಂದು ಈ ವೇಳೆ ಮನವಿ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...