Homeಕರ್ನಾಟಕಬಬಲೇಶ್ವರ ಬಿಜೆಪಿ ಅಭ್ಯರ್ಥಿಯ ಮಗನಿಂದ ಗುಂಡು ಹಾರಿಸಿ ಸಂಭ್ರಮಾಚರಣೆ; ಗೂಂಡಾ ಅಭ್ಯರ್ಥಿ ಎಂದ ಕಾಂಗ್ರೆಸ್

ಬಬಲೇಶ್ವರ ಬಿಜೆಪಿ ಅಭ್ಯರ್ಥಿಯ ಮಗನಿಂದ ಗುಂಡು ಹಾರಿಸಿ ಸಂಭ್ರಮಾಚರಣೆ; ಗೂಂಡಾ ಅಭ್ಯರ್ಥಿ ಎಂದ ಕಾಂಗ್ರೆಸ್

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆಯಾದ ಸಂದರ್ಭದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ಬಬಲೇಶ್ವರ ಕ್ಷೇತ್ರದಲ್ಲಿ ವಿಜುಗೌಡ ಪಾಟೀಲ ಅವರಿಗೆ ಟಿಕೆಟ್‌ ನೀಡಲಾಯಿತು. ಈ ವೇಳೆ ಅವರ ಪುತ್ರ ಸಮರ್ಥ ಗೌಡ ಗಾಳಿಯಲ್ಲಿ ಗುಂಡುಹಾರಿಸಿ ಸಂಭ್ರಮಿಸಿರುವ ವಿಡಿಯೊ ದೃಶ್ಯಗಳನ್ನು ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ಬಿಡುಗಡೆ ಮಾಡಿದೆ.

ಈ ಬಗ್ಗೆ ಗುರುವಾರ ಸುದ್ದಿಗೋಷ್ಠಿಯಲ್ಲಿ ನಡೆಸಿ, ವಿಡಿಯೊ ದೃಶ್ಯಗಳನ್ನು ಬಿಡುಗಡೆ ಮಾಡಿದ್ದಾರೆ. ಕೆಪಿಸಿಸಿ ಮುಖ್ಯ ವಕ್ತಾರ ಸಂಗಮೇಶ ಬಬಲೇಶ್ವರ ಮಾತನಾಡಿದ್ದು, ”ಟಿಕೆಟ್ ಸಿಕ್ಕಿರುವುದಕ್ಕೆ ಗುಂಡು ಹಾರಿಸಿ ಸಂಭ್ರಮಿಸಿರುವ ಬಿಜೆಪಿ ಅಭ್ಯರ್ಥಿ ವಿಜುಗೌಡ ಮತ್ತು ಅವರ ಪುತ್ರ ಸಮರ್ಥಗೌಡ ವಿರುದ್ದ ರಾಜ್ಯ ಚುನಾವಣಾ ಆಯೋಗ ಕ್ರಮಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಬಿಜೆಪಿ ಒಬ್ಬ ಗೂಂಡಾ ಅಭ್ಯರ್ಥಿಗೆ ಟಿಕೆಟ್ ನೀಡುವ ಮೂಲಕ ತನ್ನ ಸಂಸ್ಕೃತಿಯನ್ನು ಅನಾವರಣಗೊಳಿಸಿದೆ ಎಂದು ಅವರು ಆರೋಪ ಮಾಡಿದ್ದಾರೆ.

”ಬಿಜೆಪಿ, ಆರ್‌ಎಸ್‌ಎಸ್‌ನವರು ಯಾವಾಗಲೂ ಸಂಸ್ಕೃತಿ, ಸಂಸ್ಕಾರದ ಬಗ್ಗೆ ಮಾತನಾಡುತ್ತಾರೆ, ಇದಕ್ಕೆ ಸೂಕ್ತ ಉತ್ತರ ನೀಡಬೇಕು ಎಂದು ಒತ್ತಾಯಿಸಿದರು. ಬಬಲೇಶ್ವರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಜುಗೌಡ ಪಾಟೀಲ ತೆರೆಯ ಮುಂದೆ ಮತದಾರರ ಕಾಲಿಗೆ ಬಿದ್ದು, ಮೊಸಳೆ ಕಣ್ಣೀರು ಸುರಿಸಿ ಮತಯಾಚನೆ ಮಾಡುತ್ತಿದ್ದಾರೆ, ತೆರೆಯ ಹಿಂದೆ ಗುಂಡು ಹಾರಿಸಿ ಸಂಭ್ರಮಿಸುತ್ತಿದ್ದಾರೆ” ಎಂದು ಟೀಕಿಸಿದರು.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಬಾಗಲಕೋಟೆ: ಚರಂತಿಮಠ ವಿರುದ್ಧ ತಿರುಗಿಬಿದ್ದ ಸಂಘ ಪರಿವಾರದ ನಾಯಕರು; ಸುಲಭವಾಗಲಿದೆಯೇ ಮೇಟಿಯವರ ಗೆಲುವು?

”ಬಿಜೆಪಿಯ ನೈತಿಕ ಅಧಃಪಥನಕ್ಕೆ ಬಿಜೆಪಿ ಅಭ್ಯರ್ಥಿಯ ಗೂಂಡಾ ವರ್ತನೆ ಸಾಕ್ಷಿಯಾಗಿದೆ. ಇವರಿಂದ ಕ್ಷೇತ್ರದ ಜನತೆಯ ಭವಿಷ್ಯ ಆತಂಕದಲ್ಲಿ ಇದೆ” ಎಂದು ಸಂಗಮೇಶ ಅವರು ಹೇಳಿದರು.

”ಗೂಂಡಾ ಸಂಸ್ಕೃತಿಯ ವ್ಯಕ್ತಿ ವಿಜುಗೌಡ ಅವರಿಗೆ ಟಿಕೆಟ್ ನೀಡಲು ಮುಂಚೂಣಿಯಲ್ಲಿ ಶಿಫಾರಸು ಮಾಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿ.ಎಲ್. ಸಂತೋಷ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ತಮ್ಮ ಅಭ್ಯರ್ಥಿಯ ಈ ಕೃತ್ಯದ ಬಗ್ಗೆ ಉತ್ತರಿಸಬೇಕು” ಎಂದು ಆಗ್ರಹಿಸಿದರು.

”ಬಿಜೆಪಿ ಎಷ್ಟೇ ಗೂಂಡಾ ಸಂಸ್ಕೃತಿ ಪ್ರದರ್ಶಿದರೂ ಎಂ.ಬಿ.ಪಾಟೀಲ ಈ ಬಾರಿ 50 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

”ಬಬಲೇಶ್ವರ ಬಿಹಾರ ಆಗಬಾರದು, ಜಂಗಲ್ ರಾಜ್ ಆಗದಂತೆ ತಡೆಯಲು ಮತದಾರರು ಈ ಚುನಾವಣೆಯಲ್ಲಿ ಸುಸಂಸ್ಕೃತ, ಸಭ್ಯ ಹಾಗೂ ಅಭಿವೃದ್ಧಿಯ ಹರಿಹಾರ ಕಾಂಗ್ರೆಸ್ ಅಭ್ಯರ್ಥಿ ಎಂ.ಬಿ.ಪಾಟೀಲರನ್ನು ಬೆಂಬಲಿಸಬೇಕು” ಎಂದು ಈ ವೇಳೆ ಮನವಿ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...