Homeಕರ್ನಾಟಕಬಬಲೇಶ್ವರ ಬಿಜೆಪಿ ಅಭ್ಯರ್ಥಿಯ ಮಗನಿಂದ ಗುಂಡು ಹಾರಿಸಿ ಸಂಭ್ರಮಾಚರಣೆ; ಗೂಂಡಾ ಅಭ್ಯರ್ಥಿ ಎಂದ ಕಾಂಗ್ರೆಸ್

ಬಬಲೇಶ್ವರ ಬಿಜೆಪಿ ಅಭ್ಯರ್ಥಿಯ ಮಗನಿಂದ ಗುಂಡು ಹಾರಿಸಿ ಸಂಭ್ರಮಾಚರಣೆ; ಗೂಂಡಾ ಅಭ್ಯರ್ಥಿ ಎಂದ ಕಾಂಗ್ರೆಸ್

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆಯಾದ ಸಂದರ್ಭದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ಬಬಲೇಶ್ವರ ಕ್ಷೇತ್ರದಲ್ಲಿ ವಿಜುಗೌಡ ಪಾಟೀಲ ಅವರಿಗೆ ಟಿಕೆಟ್‌ ನೀಡಲಾಯಿತು. ಈ ವೇಳೆ ಅವರ ಪುತ್ರ ಸಮರ್ಥ ಗೌಡ ಗಾಳಿಯಲ್ಲಿ ಗುಂಡುಹಾರಿಸಿ ಸಂಭ್ರಮಿಸಿರುವ ವಿಡಿಯೊ ದೃಶ್ಯಗಳನ್ನು ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ಬಿಡುಗಡೆ ಮಾಡಿದೆ.

ಈ ಬಗ್ಗೆ ಗುರುವಾರ ಸುದ್ದಿಗೋಷ್ಠಿಯಲ್ಲಿ ನಡೆಸಿ, ವಿಡಿಯೊ ದೃಶ್ಯಗಳನ್ನು ಬಿಡುಗಡೆ ಮಾಡಿದ್ದಾರೆ. ಕೆಪಿಸಿಸಿ ಮುಖ್ಯ ವಕ್ತಾರ ಸಂಗಮೇಶ ಬಬಲೇಶ್ವರ ಮಾತನಾಡಿದ್ದು, ”ಟಿಕೆಟ್ ಸಿಕ್ಕಿರುವುದಕ್ಕೆ ಗುಂಡು ಹಾರಿಸಿ ಸಂಭ್ರಮಿಸಿರುವ ಬಿಜೆಪಿ ಅಭ್ಯರ್ಥಿ ವಿಜುಗೌಡ ಮತ್ತು ಅವರ ಪುತ್ರ ಸಮರ್ಥಗೌಡ ವಿರುದ್ದ ರಾಜ್ಯ ಚುನಾವಣಾ ಆಯೋಗ ಕ್ರಮಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಬಿಜೆಪಿ ಒಬ್ಬ ಗೂಂಡಾ ಅಭ್ಯರ್ಥಿಗೆ ಟಿಕೆಟ್ ನೀಡುವ ಮೂಲಕ ತನ್ನ ಸಂಸ್ಕೃತಿಯನ್ನು ಅನಾವರಣಗೊಳಿಸಿದೆ ಎಂದು ಅವರು ಆರೋಪ ಮಾಡಿದ್ದಾರೆ.

”ಬಿಜೆಪಿ, ಆರ್‌ಎಸ್‌ಎಸ್‌ನವರು ಯಾವಾಗಲೂ ಸಂಸ್ಕೃತಿ, ಸಂಸ್ಕಾರದ ಬಗ್ಗೆ ಮಾತನಾಡುತ್ತಾರೆ, ಇದಕ್ಕೆ ಸೂಕ್ತ ಉತ್ತರ ನೀಡಬೇಕು ಎಂದು ಒತ್ತಾಯಿಸಿದರು. ಬಬಲೇಶ್ವರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಜುಗೌಡ ಪಾಟೀಲ ತೆರೆಯ ಮುಂದೆ ಮತದಾರರ ಕಾಲಿಗೆ ಬಿದ್ದು, ಮೊಸಳೆ ಕಣ್ಣೀರು ಸುರಿಸಿ ಮತಯಾಚನೆ ಮಾಡುತ್ತಿದ್ದಾರೆ, ತೆರೆಯ ಹಿಂದೆ ಗುಂಡು ಹಾರಿಸಿ ಸಂಭ್ರಮಿಸುತ್ತಿದ್ದಾರೆ” ಎಂದು ಟೀಕಿಸಿದರು.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಬಾಗಲಕೋಟೆ: ಚರಂತಿಮಠ ವಿರುದ್ಧ ತಿರುಗಿಬಿದ್ದ ಸಂಘ ಪರಿವಾರದ ನಾಯಕರು; ಸುಲಭವಾಗಲಿದೆಯೇ ಮೇಟಿಯವರ ಗೆಲುವು?

”ಬಿಜೆಪಿಯ ನೈತಿಕ ಅಧಃಪಥನಕ್ಕೆ ಬಿಜೆಪಿ ಅಭ್ಯರ್ಥಿಯ ಗೂಂಡಾ ವರ್ತನೆ ಸಾಕ್ಷಿಯಾಗಿದೆ. ಇವರಿಂದ ಕ್ಷೇತ್ರದ ಜನತೆಯ ಭವಿಷ್ಯ ಆತಂಕದಲ್ಲಿ ಇದೆ” ಎಂದು ಸಂಗಮೇಶ ಅವರು ಹೇಳಿದರು.

”ಗೂಂಡಾ ಸಂಸ್ಕೃತಿಯ ವ್ಯಕ್ತಿ ವಿಜುಗೌಡ ಅವರಿಗೆ ಟಿಕೆಟ್ ನೀಡಲು ಮುಂಚೂಣಿಯಲ್ಲಿ ಶಿಫಾರಸು ಮಾಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿ.ಎಲ್. ಸಂತೋಷ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ತಮ್ಮ ಅಭ್ಯರ್ಥಿಯ ಈ ಕೃತ್ಯದ ಬಗ್ಗೆ ಉತ್ತರಿಸಬೇಕು” ಎಂದು ಆಗ್ರಹಿಸಿದರು.

”ಬಿಜೆಪಿ ಎಷ್ಟೇ ಗೂಂಡಾ ಸಂಸ್ಕೃತಿ ಪ್ರದರ್ಶಿದರೂ ಎಂ.ಬಿ.ಪಾಟೀಲ ಈ ಬಾರಿ 50 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

”ಬಬಲೇಶ್ವರ ಬಿಹಾರ ಆಗಬಾರದು, ಜಂಗಲ್ ರಾಜ್ ಆಗದಂತೆ ತಡೆಯಲು ಮತದಾರರು ಈ ಚುನಾವಣೆಯಲ್ಲಿ ಸುಸಂಸ್ಕೃತ, ಸಭ್ಯ ಹಾಗೂ ಅಭಿವೃದ್ಧಿಯ ಹರಿಹಾರ ಕಾಂಗ್ರೆಸ್ ಅಭ್ಯರ್ಥಿ ಎಂ.ಬಿ.ಪಾಟೀಲರನ್ನು ಬೆಂಬಲಿಸಬೇಕು” ಎಂದು ಈ ವೇಳೆ ಮನವಿ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...