Homeಕರ್ನಾಟಕಬಬಲೇಶ್ವರ ಬಿಜೆಪಿ ಅಭ್ಯರ್ಥಿಯ ಮಗನಿಂದ ಗುಂಡು ಹಾರಿಸಿ ಸಂಭ್ರಮಾಚರಣೆ; ಗೂಂಡಾ ಅಭ್ಯರ್ಥಿ ಎಂದ ಕಾಂಗ್ರೆಸ್

ಬಬಲೇಶ್ವರ ಬಿಜೆಪಿ ಅಭ್ಯರ್ಥಿಯ ಮಗನಿಂದ ಗುಂಡು ಹಾರಿಸಿ ಸಂಭ್ರಮಾಚರಣೆ; ಗೂಂಡಾ ಅಭ್ಯರ್ಥಿ ಎಂದ ಕಾಂಗ್ರೆಸ್

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆಯಾದ ಸಂದರ್ಭದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ಬಬಲೇಶ್ವರ ಕ್ಷೇತ್ರದಲ್ಲಿ ವಿಜುಗೌಡ ಪಾಟೀಲ ಅವರಿಗೆ ಟಿಕೆಟ್‌ ನೀಡಲಾಯಿತು. ಈ ವೇಳೆ ಅವರ ಪುತ್ರ ಸಮರ್ಥ ಗೌಡ ಗಾಳಿಯಲ್ಲಿ ಗುಂಡುಹಾರಿಸಿ ಸಂಭ್ರಮಿಸಿರುವ ವಿಡಿಯೊ ದೃಶ್ಯಗಳನ್ನು ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ಬಿಡುಗಡೆ ಮಾಡಿದೆ.

ಈ ಬಗ್ಗೆ ಗುರುವಾರ ಸುದ್ದಿಗೋಷ್ಠಿಯಲ್ಲಿ ನಡೆಸಿ, ವಿಡಿಯೊ ದೃಶ್ಯಗಳನ್ನು ಬಿಡುಗಡೆ ಮಾಡಿದ್ದಾರೆ. ಕೆಪಿಸಿಸಿ ಮುಖ್ಯ ವಕ್ತಾರ ಸಂಗಮೇಶ ಬಬಲೇಶ್ವರ ಮಾತನಾಡಿದ್ದು, ”ಟಿಕೆಟ್ ಸಿಕ್ಕಿರುವುದಕ್ಕೆ ಗುಂಡು ಹಾರಿಸಿ ಸಂಭ್ರಮಿಸಿರುವ ಬಿಜೆಪಿ ಅಭ್ಯರ್ಥಿ ವಿಜುಗೌಡ ಮತ್ತು ಅವರ ಪುತ್ರ ಸಮರ್ಥಗೌಡ ವಿರುದ್ದ ರಾಜ್ಯ ಚುನಾವಣಾ ಆಯೋಗ ಕ್ರಮಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಬಿಜೆಪಿ ಒಬ್ಬ ಗೂಂಡಾ ಅಭ್ಯರ್ಥಿಗೆ ಟಿಕೆಟ್ ನೀಡುವ ಮೂಲಕ ತನ್ನ ಸಂಸ್ಕೃತಿಯನ್ನು ಅನಾವರಣಗೊಳಿಸಿದೆ ಎಂದು ಅವರು ಆರೋಪ ಮಾಡಿದ್ದಾರೆ.

”ಬಿಜೆಪಿ, ಆರ್‌ಎಸ್‌ಎಸ್‌ನವರು ಯಾವಾಗಲೂ ಸಂಸ್ಕೃತಿ, ಸಂಸ್ಕಾರದ ಬಗ್ಗೆ ಮಾತನಾಡುತ್ತಾರೆ, ಇದಕ್ಕೆ ಸೂಕ್ತ ಉತ್ತರ ನೀಡಬೇಕು ಎಂದು ಒತ್ತಾಯಿಸಿದರು. ಬಬಲೇಶ್ವರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಜುಗೌಡ ಪಾಟೀಲ ತೆರೆಯ ಮುಂದೆ ಮತದಾರರ ಕಾಲಿಗೆ ಬಿದ್ದು, ಮೊಸಳೆ ಕಣ್ಣೀರು ಸುರಿಸಿ ಮತಯಾಚನೆ ಮಾಡುತ್ತಿದ್ದಾರೆ, ತೆರೆಯ ಹಿಂದೆ ಗುಂಡು ಹಾರಿಸಿ ಸಂಭ್ರಮಿಸುತ್ತಿದ್ದಾರೆ” ಎಂದು ಟೀಕಿಸಿದರು.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಬಾಗಲಕೋಟೆ: ಚರಂತಿಮಠ ವಿರುದ್ಧ ತಿರುಗಿಬಿದ್ದ ಸಂಘ ಪರಿವಾರದ ನಾಯಕರು; ಸುಲಭವಾಗಲಿದೆಯೇ ಮೇಟಿಯವರ ಗೆಲುವು?

”ಬಿಜೆಪಿಯ ನೈತಿಕ ಅಧಃಪಥನಕ್ಕೆ ಬಿಜೆಪಿ ಅಭ್ಯರ್ಥಿಯ ಗೂಂಡಾ ವರ್ತನೆ ಸಾಕ್ಷಿಯಾಗಿದೆ. ಇವರಿಂದ ಕ್ಷೇತ್ರದ ಜನತೆಯ ಭವಿಷ್ಯ ಆತಂಕದಲ್ಲಿ ಇದೆ” ಎಂದು ಸಂಗಮೇಶ ಅವರು ಹೇಳಿದರು.

”ಗೂಂಡಾ ಸಂಸ್ಕೃತಿಯ ವ್ಯಕ್ತಿ ವಿಜುಗೌಡ ಅವರಿಗೆ ಟಿಕೆಟ್ ನೀಡಲು ಮುಂಚೂಣಿಯಲ್ಲಿ ಶಿಫಾರಸು ಮಾಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿ.ಎಲ್. ಸಂತೋಷ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ತಮ್ಮ ಅಭ್ಯರ್ಥಿಯ ಈ ಕೃತ್ಯದ ಬಗ್ಗೆ ಉತ್ತರಿಸಬೇಕು” ಎಂದು ಆಗ್ರಹಿಸಿದರು.

”ಬಿಜೆಪಿ ಎಷ್ಟೇ ಗೂಂಡಾ ಸಂಸ್ಕೃತಿ ಪ್ರದರ್ಶಿದರೂ ಎಂ.ಬಿ.ಪಾಟೀಲ ಈ ಬಾರಿ 50 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

”ಬಬಲೇಶ್ವರ ಬಿಹಾರ ಆಗಬಾರದು, ಜಂಗಲ್ ರಾಜ್ ಆಗದಂತೆ ತಡೆಯಲು ಮತದಾರರು ಈ ಚುನಾವಣೆಯಲ್ಲಿ ಸುಸಂಸ್ಕೃತ, ಸಭ್ಯ ಹಾಗೂ ಅಭಿವೃದ್ಧಿಯ ಹರಿಹಾರ ಕಾಂಗ್ರೆಸ್ ಅಭ್ಯರ್ಥಿ ಎಂ.ಬಿ.ಪಾಟೀಲರನ್ನು ಬೆಂಬಲಿಸಬೇಕು” ಎಂದು ಈ ವೇಳೆ ಮನವಿ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...