Homeಕರ್ನಾಟಕಬಬಲೇಶ್ವರ ಬಿಜೆಪಿ ಅಭ್ಯರ್ಥಿಯ ಮಗನಿಂದ ಗುಂಡು ಹಾರಿಸಿ ಸಂಭ್ರಮಾಚರಣೆ; ಗೂಂಡಾ ಅಭ್ಯರ್ಥಿ ಎಂದ ಕಾಂಗ್ರೆಸ್

ಬಬಲೇಶ್ವರ ಬಿಜೆಪಿ ಅಭ್ಯರ್ಥಿಯ ಮಗನಿಂದ ಗುಂಡು ಹಾರಿಸಿ ಸಂಭ್ರಮಾಚರಣೆ; ಗೂಂಡಾ ಅಭ್ಯರ್ಥಿ ಎಂದ ಕಾಂಗ್ರೆಸ್

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆಯಾದ ಸಂದರ್ಭದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ಬಬಲೇಶ್ವರ ಕ್ಷೇತ್ರದಲ್ಲಿ ವಿಜುಗೌಡ ಪಾಟೀಲ ಅವರಿಗೆ ಟಿಕೆಟ್‌ ನೀಡಲಾಯಿತು. ಈ ವೇಳೆ ಅವರ ಪುತ್ರ ಸಮರ್ಥ ಗೌಡ ಗಾಳಿಯಲ್ಲಿ ಗುಂಡುಹಾರಿಸಿ ಸಂಭ್ರಮಿಸಿರುವ ವಿಡಿಯೊ ದೃಶ್ಯಗಳನ್ನು ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ಬಿಡುಗಡೆ ಮಾಡಿದೆ.

ಈ ಬಗ್ಗೆ ಗುರುವಾರ ಸುದ್ದಿಗೋಷ್ಠಿಯಲ್ಲಿ ನಡೆಸಿ, ವಿಡಿಯೊ ದೃಶ್ಯಗಳನ್ನು ಬಿಡುಗಡೆ ಮಾಡಿದ್ದಾರೆ. ಕೆಪಿಸಿಸಿ ಮುಖ್ಯ ವಕ್ತಾರ ಸಂಗಮೇಶ ಬಬಲೇಶ್ವರ ಮಾತನಾಡಿದ್ದು, ”ಟಿಕೆಟ್ ಸಿಕ್ಕಿರುವುದಕ್ಕೆ ಗುಂಡು ಹಾರಿಸಿ ಸಂಭ್ರಮಿಸಿರುವ ಬಿಜೆಪಿ ಅಭ್ಯರ್ಥಿ ವಿಜುಗೌಡ ಮತ್ತು ಅವರ ಪುತ್ರ ಸಮರ್ಥಗೌಡ ವಿರುದ್ದ ರಾಜ್ಯ ಚುನಾವಣಾ ಆಯೋಗ ಕ್ರಮಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಬಿಜೆಪಿ ಒಬ್ಬ ಗೂಂಡಾ ಅಭ್ಯರ್ಥಿಗೆ ಟಿಕೆಟ್ ನೀಡುವ ಮೂಲಕ ತನ್ನ ಸಂಸ್ಕೃತಿಯನ್ನು ಅನಾವರಣಗೊಳಿಸಿದೆ ಎಂದು ಅವರು ಆರೋಪ ಮಾಡಿದ್ದಾರೆ.

”ಬಿಜೆಪಿ, ಆರ್‌ಎಸ್‌ಎಸ್‌ನವರು ಯಾವಾಗಲೂ ಸಂಸ್ಕೃತಿ, ಸಂಸ್ಕಾರದ ಬಗ್ಗೆ ಮಾತನಾಡುತ್ತಾರೆ, ಇದಕ್ಕೆ ಸೂಕ್ತ ಉತ್ತರ ನೀಡಬೇಕು ಎಂದು ಒತ್ತಾಯಿಸಿದರು. ಬಬಲೇಶ್ವರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಜುಗೌಡ ಪಾಟೀಲ ತೆರೆಯ ಮುಂದೆ ಮತದಾರರ ಕಾಲಿಗೆ ಬಿದ್ದು, ಮೊಸಳೆ ಕಣ್ಣೀರು ಸುರಿಸಿ ಮತಯಾಚನೆ ಮಾಡುತ್ತಿದ್ದಾರೆ, ತೆರೆಯ ಹಿಂದೆ ಗುಂಡು ಹಾರಿಸಿ ಸಂಭ್ರಮಿಸುತ್ತಿದ್ದಾರೆ” ಎಂದು ಟೀಕಿಸಿದರು.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಬಾಗಲಕೋಟೆ: ಚರಂತಿಮಠ ವಿರುದ್ಧ ತಿರುಗಿಬಿದ್ದ ಸಂಘ ಪರಿವಾರದ ನಾಯಕರು; ಸುಲಭವಾಗಲಿದೆಯೇ ಮೇಟಿಯವರ ಗೆಲುವು?

”ಬಿಜೆಪಿಯ ನೈತಿಕ ಅಧಃಪಥನಕ್ಕೆ ಬಿಜೆಪಿ ಅಭ್ಯರ್ಥಿಯ ಗೂಂಡಾ ವರ್ತನೆ ಸಾಕ್ಷಿಯಾಗಿದೆ. ಇವರಿಂದ ಕ್ಷೇತ್ರದ ಜನತೆಯ ಭವಿಷ್ಯ ಆತಂಕದಲ್ಲಿ ಇದೆ” ಎಂದು ಸಂಗಮೇಶ ಅವರು ಹೇಳಿದರು.

”ಗೂಂಡಾ ಸಂಸ್ಕೃತಿಯ ವ್ಯಕ್ತಿ ವಿಜುಗೌಡ ಅವರಿಗೆ ಟಿಕೆಟ್ ನೀಡಲು ಮುಂಚೂಣಿಯಲ್ಲಿ ಶಿಫಾರಸು ಮಾಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿ.ಎಲ್. ಸಂತೋಷ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ತಮ್ಮ ಅಭ್ಯರ್ಥಿಯ ಈ ಕೃತ್ಯದ ಬಗ್ಗೆ ಉತ್ತರಿಸಬೇಕು” ಎಂದು ಆಗ್ರಹಿಸಿದರು.

”ಬಿಜೆಪಿ ಎಷ್ಟೇ ಗೂಂಡಾ ಸಂಸ್ಕೃತಿ ಪ್ರದರ್ಶಿದರೂ ಎಂ.ಬಿ.ಪಾಟೀಲ ಈ ಬಾರಿ 50 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

”ಬಬಲೇಶ್ವರ ಬಿಹಾರ ಆಗಬಾರದು, ಜಂಗಲ್ ರಾಜ್ ಆಗದಂತೆ ತಡೆಯಲು ಮತದಾರರು ಈ ಚುನಾವಣೆಯಲ್ಲಿ ಸುಸಂಸ್ಕೃತ, ಸಭ್ಯ ಹಾಗೂ ಅಭಿವೃದ್ಧಿಯ ಹರಿಹಾರ ಕಾಂಗ್ರೆಸ್ ಅಭ್ಯರ್ಥಿ ಎಂ.ಬಿ.ಪಾಟೀಲರನ್ನು ಬೆಂಬಲಿಸಬೇಕು” ಎಂದು ಈ ವೇಳೆ ಮನವಿ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...