Homeಕರ್ನಾಟಕಬಬಲೇಶ್ವರ ಬಿಜೆಪಿ ಅಭ್ಯರ್ಥಿಯ ಮಗನಿಂದ ಗುಂಡು ಹಾರಿಸಿ ಸಂಭ್ರಮಾಚರಣೆ; ಗೂಂಡಾ ಅಭ್ಯರ್ಥಿ ಎಂದ ಕಾಂಗ್ರೆಸ್

ಬಬಲೇಶ್ವರ ಬಿಜೆಪಿ ಅಭ್ಯರ್ಥಿಯ ಮಗನಿಂದ ಗುಂಡು ಹಾರಿಸಿ ಸಂಭ್ರಮಾಚರಣೆ; ಗೂಂಡಾ ಅಭ್ಯರ್ಥಿ ಎಂದ ಕಾಂಗ್ರೆಸ್

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆಯಾದ ಸಂದರ್ಭದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ಬಬಲೇಶ್ವರ ಕ್ಷೇತ್ರದಲ್ಲಿ ವಿಜುಗೌಡ ಪಾಟೀಲ ಅವರಿಗೆ ಟಿಕೆಟ್‌ ನೀಡಲಾಯಿತು. ಈ ವೇಳೆ ಅವರ ಪುತ್ರ ಸಮರ್ಥ ಗೌಡ ಗಾಳಿಯಲ್ಲಿ ಗುಂಡುಹಾರಿಸಿ ಸಂಭ್ರಮಿಸಿರುವ ವಿಡಿಯೊ ದೃಶ್ಯಗಳನ್ನು ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ಬಿಡುಗಡೆ ಮಾಡಿದೆ.

ಈ ಬಗ್ಗೆ ಗುರುವಾರ ಸುದ್ದಿಗೋಷ್ಠಿಯಲ್ಲಿ ನಡೆಸಿ, ವಿಡಿಯೊ ದೃಶ್ಯಗಳನ್ನು ಬಿಡುಗಡೆ ಮಾಡಿದ್ದಾರೆ. ಕೆಪಿಸಿಸಿ ಮುಖ್ಯ ವಕ್ತಾರ ಸಂಗಮೇಶ ಬಬಲೇಶ್ವರ ಮಾತನಾಡಿದ್ದು, ”ಟಿಕೆಟ್ ಸಿಕ್ಕಿರುವುದಕ್ಕೆ ಗುಂಡು ಹಾರಿಸಿ ಸಂಭ್ರಮಿಸಿರುವ ಬಿಜೆಪಿ ಅಭ್ಯರ್ಥಿ ವಿಜುಗೌಡ ಮತ್ತು ಅವರ ಪುತ್ರ ಸಮರ್ಥಗೌಡ ವಿರುದ್ದ ರಾಜ್ಯ ಚುನಾವಣಾ ಆಯೋಗ ಕ್ರಮಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಬಿಜೆಪಿ ಒಬ್ಬ ಗೂಂಡಾ ಅಭ್ಯರ್ಥಿಗೆ ಟಿಕೆಟ್ ನೀಡುವ ಮೂಲಕ ತನ್ನ ಸಂಸ್ಕೃತಿಯನ್ನು ಅನಾವರಣಗೊಳಿಸಿದೆ ಎಂದು ಅವರು ಆರೋಪ ಮಾಡಿದ್ದಾರೆ.

”ಬಿಜೆಪಿ, ಆರ್‌ಎಸ್‌ಎಸ್‌ನವರು ಯಾವಾಗಲೂ ಸಂಸ್ಕೃತಿ, ಸಂಸ್ಕಾರದ ಬಗ್ಗೆ ಮಾತನಾಡುತ್ತಾರೆ, ಇದಕ್ಕೆ ಸೂಕ್ತ ಉತ್ತರ ನೀಡಬೇಕು ಎಂದು ಒತ್ತಾಯಿಸಿದರು. ಬಬಲೇಶ್ವರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಜುಗೌಡ ಪಾಟೀಲ ತೆರೆಯ ಮುಂದೆ ಮತದಾರರ ಕಾಲಿಗೆ ಬಿದ್ದು, ಮೊಸಳೆ ಕಣ್ಣೀರು ಸುರಿಸಿ ಮತಯಾಚನೆ ಮಾಡುತ್ತಿದ್ದಾರೆ, ತೆರೆಯ ಹಿಂದೆ ಗುಂಡು ಹಾರಿಸಿ ಸಂಭ್ರಮಿಸುತ್ತಿದ್ದಾರೆ” ಎಂದು ಟೀಕಿಸಿದರು.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಬಾಗಲಕೋಟೆ: ಚರಂತಿಮಠ ವಿರುದ್ಧ ತಿರುಗಿಬಿದ್ದ ಸಂಘ ಪರಿವಾರದ ನಾಯಕರು; ಸುಲಭವಾಗಲಿದೆಯೇ ಮೇಟಿಯವರ ಗೆಲುವು?

”ಬಿಜೆಪಿಯ ನೈತಿಕ ಅಧಃಪಥನಕ್ಕೆ ಬಿಜೆಪಿ ಅಭ್ಯರ್ಥಿಯ ಗೂಂಡಾ ವರ್ತನೆ ಸಾಕ್ಷಿಯಾಗಿದೆ. ಇವರಿಂದ ಕ್ಷೇತ್ರದ ಜನತೆಯ ಭವಿಷ್ಯ ಆತಂಕದಲ್ಲಿ ಇದೆ” ಎಂದು ಸಂಗಮೇಶ ಅವರು ಹೇಳಿದರು.

”ಗೂಂಡಾ ಸಂಸ್ಕೃತಿಯ ವ್ಯಕ್ತಿ ವಿಜುಗೌಡ ಅವರಿಗೆ ಟಿಕೆಟ್ ನೀಡಲು ಮುಂಚೂಣಿಯಲ್ಲಿ ಶಿಫಾರಸು ಮಾಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿ.ಎಲ್. ಸಂತೋಷ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ತಮ್ಮ ಅಭ್ಯರ್ಥಿಯ ಈ ಕೃತ್ಯದ ಬಗ್ಗೆ ಉತ್ತರಿಸಬೇಕು” ಎಂದು ಆಗ್ರಹಿಸಿದರು.

”ಬಿಜೆಪಿ ಎಷ್ಟೇ ಗೂಂಡಾ ಸಂಸ್ಕೃತಿ ಪ್ರದರ್ಶಿದರೂ ಎಂ.ಬಿ.ಪಾಟೀಲ ಈ ಬಾರಿ 50 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

”ಬಬಲೇಶ್ವರ ಬಿಹಾರ ಆಗಬಾರದು, ಜಂಗಲ್ ರಾಜ್ ಆಗದಂತೆ ತಡೆಯಲು ಮತದಾರರು ಈ ಚುನಾವಣೆಯಲ್ಲಿ ಸುಸಂಸ್ಕೃತ, ಸಭ್ಯ ಹಾಗೂ ಅಭಿವೃದ್ಧಿಯ ಹರಿಹಾರ ಕಾಂಗ್ರೆಸ್ ಅಭ್ಯರ್ಥಿ ಎಂ.ಬಿ.ಪಾಟೀಲರನ್ನು ಬೆಂಬಲಿಸಬೇಕು” ಎಂದು ಈ ವೇಳೆ ಮನವಿ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...