Homeಕರ್ನಾಟಕಬಬಲೇಶ್ವರ ಬಿಜೆಪಿ ಅಭ್ಯರ್ಥಿಯ ಮಗನಿಂದ ಗುಂಡು ಹಾರಿಸಿ ಸಂಭ್ರಮಾಚರಣೆ; ಗೂಂಡಾ ಅಭ್ಯರ್ಥಿ ಎಂದ ಕಾಂಗ್ರೆಸ್

ಬಬಲೇಶ್ವರ ಬಿಜೆಪಿ ಅಭ್ಯರ್ಥಿಯ ಮಗನಿಂದ ಗುಂಡು ಹಾರಿಸಿ ಸಂಭ್ರಮಾಚರಣೆ; ಗೂಂಡಾ ಅಭ್ಯರ್ಥಿ ಎಂದ ಕಾಂಗ್ರೆಸ್

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆಯಾದ ಸಂದರ್ಭದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ಬಬಲೇಶ್ವರ ಕ್ಷೇತ್ರದಲ್ಲಿ ವಿಜುಗೌಡ ಪಾಟೀಲ ಅವರಿಗೆ ಟಿಕೆಟ್‌ ನೀಡಲಾಯಿತು. ಈ ವೇಳೆ ಅವರ ಪುತ್ರ ಸಮರ್ಥ ಗೌಡ ಗಾಳಿಯಲ್ಲಿ ಗುಂಡುಹಾರಿಸಿ ಸಂಭ್ರಮಿಸಿರುವ ವಿಡಿಯೊ ದೃಶ್ಯಗಳನ್ನು ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ಬಿಡುಗಡೆ ಮಾಡಿದೆ.

ಈ ಬಗ್ಗೆ ಗುರುವಾರ ಸುದ್ದಿಗೋಷ್ಠಿಯಲ್ಲಿ ನಡೆಸಿ, ವಿಡಿಯೊ ದೃಶ್ಯಗಳನ್ನು ಬಿಡುಗಡೆ ಮಾಡಿದ್ದಾರೆ. ಕೆಪಿಸಿಸಿ ಮುಖ್ಯ ವಕ್ತಾರ ಸಂಗಮೇಶ ಬಬಲೇಶ್ವರ ಮಾತನಾಡಿದ್ದು, ”ಟಿಕೆಟ್ ಸಿಕ್ಕಿರುವುದಕ್ಕೆ ಗುಂಡು ಹಾರಿಸಿ ಸಂಭ್ರಮಿಸಿರುವ ಬಿಜೆಪಿ ಅಭ್ಯರ್ಥಿ ವಿಜುಗೌಡ ಮತ್ತು ಅವರ ಪುತ್ರ ಸಮರ್ಥಗೌಡ ವಿರುದ್ದ ರಾಜ್ಯ ಚುನಾವಣಾ ಆಯೋಗ ಕ್ರಮಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಬಿಜೆಪಿ ಒಬ್ಬ ಗೂಂಡಾ ಅಭ್ಯರ್ಥಿಗೆ ಟಿಕೆಟ್ ನೀಡುವ ಮೂಲಕ ತನ್ನ ಸಂಸ್ಕೃತಿಯನ್ನು ಅನಾವರಣಗೊಳಿಸಿದೆ ಎಂದು ಅವರು ಆರೋಪ ಮಾಡಿದ್ದಾರೆ.

”ಬಿಜೆಪಿ, ಆರ್‌ಎಸ್‌ಎಸ್‌ನವರು ಯಾವಾಗಲೂ ಸಂಸ್ಕೃತಿ, ಸಂಸ್ಕಾರದ ಬಗ್ಗೆ ಮಾತನಾಡುತ್ತಾರೆ, ಇದಕ್ಕೆ ಸೂಕ್ತ ಉತ್ತರ ನೀಡಬೇಕು ಎಂದು ಒತ್ತಾಯಿಸಿದರು. ಬಬಲೇಶ್ವರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಜುಗೌಡ ಪಾಟೀಲ ತೆರೆಯ ಮುಂದೆ ಮತದಾರರ ಕಾಲಿಗೆ ಬಿದ್ದು, ಮೊಸಳೆ ಕಣ್ಣೀರು ಸುರಿಸಿ ಮತಯಾಚನೆ ಮಾಡುತ್ತಿದ್ದಾರೆ, ತೆರೆಯ ಹಿಂದೆ ಗುಂಡು ಹಾರಿಸಿ ಸಂಭ್ರಮಿಸುತ್ತಿದ್ದಾರೆ” ಎಂದು ಟೀಕಿಸಿದರು.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಬಾಗಲಕೋಟೆ: ಚರಂತಿಮಠ ವಿರುದ್ಧ ತಿರುಗಿಬಿದ್ದ ಸಂಘ ಪರಿವಾರದ ನಾಯಕರು; ಸುಲಭವಾಗಲಿದೆಯೇ ಮೇಟಿಯವರ ಗೆಲುವು?

”ಬಿಜೆಪಿಯ ನೈತಿಕ ಅಧಃಪಥನಕ್ಕೆ ಬಿಜೆಪಿ ಅಭ್ಯರ್ಥಿಯ ಗೂಂಡಾ ವರ್ತನೆ ಸಾಕ್ಷಿಯಾಗಿದೆ. ಇವರಿಂದ ಕ್ಷೇತ್ರದ ಜನತೆಯ ಭವಿಷ್ಯ ಆತಂಕದಲ್ಲಿ ಇದೆ” ಎಂದು ಸಂಗಮೇಶ ಅವರು ಹೇಳಿದರು.

”ಗೂಂಡಾ ಸಂಸ್ಕೃತಿಯ ವ್ಯಕ್ತಿ ವಿಜುಗೌಡ ಅವರಿಗೆ ಟಿಕೆಟ್ ನೀಡಲು ಮುಂಚೂಣಿಯಲ್ಲಿ ಶಿಫಾರಸು ಮಾಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿ.ಎಲ್. ಸಂತೋಷ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ತಮ್ಮ ಅಭ್ಯರ್ಥಿಯ ಈ ಕೃತ್ಯದ ಬಗ್ಗೆ ಉತ್ತರಿಸಬೇಕು” ಎಂದು ಆಗ್ರಹಿಸಿದರು.

”ಬಿಜೆಪಿ ಎಷ್ಟೇ ಗೂಂಡಾ ಸಂಸ್ಕೃತಿ ಪ್ರದರ್ಶಿದರೂ ಎಂ.ಬಿ.ಪಾಟೀಲ ಈ ಬಾರಿ 50 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

”ಬಬಲೇಶ್ವರ ಬಿಹಾರ ಆಗಬಾರದು, ಜಂಗಲ್ ರಾಜ್ ಆಗದಂತೆ ತಡೆಯಲು ಮತದಾರರು ಈ ಚುನಾವಣೆಯಲ್ಲಿ ಸುಸಂಸ್ಕೃತ, ಸಭ್ಯ ಹಾಗೂ ಅಭಿವೃದ್ಧಿಯ ಹರಿಹಾರ ಕಾಂಗ್ರೆಸ್ ಅಭ್ಯರ್ಥಿ ಎಂ.ಬಿ.ಪಾಟೀಲರನ್ನು ಬೆಂಬಲಿಸಬೇಕು” ಎಂದು ಈ ವೇಳೆ ಮನವಿ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...