Homeಕರ್ನಾಟಕಬಬಲೇಶ್ವರ ಬಿಜೆಪಿ ಅಭ್ಯರ್ಥಿಯ ಮಗನಿಂದ ಗುಂಡು ಹಾರಿಸಿ ಸಂಭ್ರಮಾಚರಣೆ; ಗೂಂಡಾ ಅಭ್ಯರ್ಥಿ ಎಂದ ಕಾಂಗ್ರೆಸ್

ಬಬಲೇಶ್ವರ ಬಿಜೆಪಿ ಅಭ್ಯರ್ಥಿಯ ಮಗನಿಂದ ಗುಂಡು ಹಾರಿಸಿ ಸಂಭ್ರಮಾಚರಣೆ; ಗೂಂಡಾ ಅಭ್ಯರ್ಥಿ ಎಂದ ಕಾಂಗ್ರೆಸ್

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆಯಾದ ಸಂದರ್ಭದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ಬಬಲೇಶ್ವರ ಕ್ಷೇತ್ರದಲ್ಲಿ ವಿಜುಗೌಡ ಪಾಟೀಲ ಅವರಿಗೆ ಟಿಕೆಟ್‌ ನೀಡಲಾಯಿತು. ಈ ವೇಳೆ ಅವರ ಪುತ್ರ ಸಮರ್ಥ ಗೌಡ ಗಾಳಿಯಲ್ಲಿ ಗುಂಡುಹಾರಿಸಿ ಸಂಭ್ರಮಿಸಿರುವ ವಿಡಿಯೊ ದೃಶ್ಯಗಳನ್ನು ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ಬಿಡುಗಡೆ ಮಾಡಿದೆ.

ಈ ಬಗ್ಗೆ ಗುರುವಾರ ಸುದ್ದಿಗೋಷ್ಠಿಯಲ್ಲಿ ನಡೆಸಿ, ವಿಡಿಯೊ ದೃಶ್ಯಗಳನ್ನು ಬಿಡುಗಡೆ ಮಾಡಿದ್ದಾರೆ. ಕೆಪಿಸಿಸಿ ಮುಖ್ಯ ವಕ್ತಾರ ಸಂಗಮೇಶ ಬಬಲೇಶ್ವರ ಮಾತನಾಡಿದ್ದು, ”ಟಿಕೆಟ್ ಸಿಕ್ಕಿರುವುದಕ್ಕೆ ಗುಂಡು ಹಾರಿಸಿ ಸಂಭ್ರಮಿಸಿರುವ ಬಿಜೆಪಿ ಅಭ್ಯರ್ಥಿ ವಿಜುಗೌಡ ಮತ್ತು ಅವರ ಪುತ್ರ ಸಮರ್ಥಗೌಡ ವಿರುದ್ದ ರಾಜ್ಯ ಚುನಾವಣಾ ಆಯೋಗ ಕ್ರಮಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಬಿಜೆಪಿ ಒಬ್ಬ ಗೂಂಡಾ ಅಭ್ಯರ್ಥಿಗೆ ಟಿಕೆಟ್ ನೀಡುವ ಮೂಲಕ ತನ್ನ ಸಂಸ್ಕೃತಿಯನ್ನು ಅನಾವರಣಗೊಳಿಸಿದೆ ಎಂದು ಅವರು ಆರೋಪ ಮಾಡಿದ್ದಾರೆ.

”ಬಿಜೆಪಿ, ಆರ್‌ಎಸ್‌ಎಸ್‌ನವರು ಯಾವಾಗಲೂ ಸಂಸ್ಕೃತಿ, ಸಂಸ್ಕಾರದ ಬಗ್ಗೆ ಮಾತನಾಡುತ್ತಾರೆ, ಇದಕ್ಕೆ ಸೂಕ್ತ ಉತ್ತರ ನೀಡಬೇಕು ಎಂದು ಒತ್ತಾಯಿಸಿದರು. ಬಬಲೇಶ್ವರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಜುಗೌಡ ಪಾಟೀಲ ತೆರೆಯ ಮುಂದೆ ಮತದಾರರ ಕಾಲಿಗೆ ಬಿದ್ದು, ಮೊಸಳೆ ಕಣ್ಣೀರು ಸುರಿಸಿ ಮತಯಾಚನೆ ಮಾಡುತ್ತಿದ್ದಾರೆ, ತೆರೆಯ ಹಿಂದೆ ಗುಂಡು ಹಾರಿಸಿ ಸಂಭ್ರಮಿಸುತ್ತಿದ್ದಾರೆ” ಎಂದು ಟೀಕಿಸಿದರು.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಬಾಗಲಕೋಟೆ: ಚರಂತಿಮಠ ವಿರುದ್ಧ ತಿರುಗಿಬಿದ್ದ ಸಂಘ ಪರಿವಾರದ ನಾಯಕರು; ಸುಲಭವಾಗಲಿದೆಯೇ ಮೇಟಿಯವರ ಗೆಲುವು?

”ಬಿಜೆಪಿಯ ನೈತಿಕ ಅಧಃಪಥನಕ್ಕೆ ಬಿಜೆಪಿ ಅಭ್ಯರ್ಥಿಯ ಗೂಂಡಾ ವರ್ತನೆ ಸಾಕ್ಷಿಯಾಗಿದೆ. ಇವರಿಂದ ಕ್ಷೇತ್ರದ ಜನತೆಯ ಭವಿಷ್ಯ ಆತಂಕದಲ್ಲಿ ಇದೆ” ಎಂದು ಸಂಗಮೇಶ ಅವರು ಹೇಳಿದರು.

”ಗೂಂಡಾ ಸಂಸ್ಕೃತಿಯ ವ್ಯಕ್ತಿ ವಿಜುಗೌಡ ಅವರಿಗೆ ಟಿಕೆಟ್ ನೀಡಲು ಮುಂಚೂಣಿಯಲ್ಲಿ ಶಿಫಾರಸು ಮಾಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿ.ಎಲ್. ಸಂತೋಷ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ತಮ್ಮ ಅಭ್ಯರ್ಥಿಯ ಈ ಕೃತ್ಯದ ಬಗ್ಗೆ ಉತ್ತರಿಸಬೇಕು” ಎಂದು ಆಗ್ರಹಿಸಿದರು.

”ಬಿಜೆಪಿ ಎಷ್ಟೇ ಗೂಂಡಾ ಸಂಸ್ಕೃತಿ ಪ್ರದರ್ಶಿದರೂ ಎಂ.ಬಿ.ಪಾಟೀಲ ಈ ಬಾರಿ 50 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

”ಬಬಲೇಶ್ವರ ಬಿಹಾರ ಆಗಬಾರದು, ಜಂಗಲ್ ರಾಜ್ ಆಗದಂತೆ ತಡೆಯಲು ಮತದಾರರು ಈ ಚುನಾವಣೆಯಲ್ಲಿ ಸುಸಂಸ್ಕೃತ, ಸಭ್ಯ ಹಾಗೂ ಅಭಿವೃದ್ಧಿಯ ಹರಿಹಾರ ಕಾಂಗ್ರೆಸ್ ಅಭ್ಯರ್ಥಿ ಎಂ.ಬಿ.ಪಾಟೀಲರನ್ನು ಬೆಂಬಲಿಸಬೇಕು” ಎಂದು ಈ ವೇಳೆ ಮನವಿ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...