Homeಸಿನಿಮಾಕ್ರೀಡೆಟಿ20 ವಿಶ್ವಕಪ್‌ನ ಮ್ಯಾನ್ ಆಫ್‌ ದಿ ಟೂರ್ನಿಮೆಂಟ್ ಬಾಬರ್ ಅಜಂಗೆ ಕೊಡಬೇಕಿತ್ತು: ಶೋಯಬ್ ಅಖ್ತರ್ ಅಸಮಾಧಾನ

ಟಿ20 ವಿಶ್ವಕಪ್‌ನ ಮ್ಯಾನ್ ಆಫ್‌ ದಿ ಟೂರ್ನಿಮೆಂಟ್ ಬಾಬರ್ ಅಜಂಗೆ ಕೊಡಬೇಕಿತ್ತು: ಶೋಯಬ್ ಅಖ್ತರ್ ಅಸಮಾಧಾನ

ಪಾಕ್ ಆಟಗಾರ ಬಾಬರ್ ಒಟ್ಟು ಅಜಂ 6 ಪಂದ್ಯಗಳಲ್ಲಿ 60.60 ಸರಾಸರಿಯಲ್ಲಿ 303 ರನ್ ಗಳಿಸಿದರೆ ಒಟ್ಟು ರನ್ ಗಳಿಕೆಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

- Advertisement -
- Advertisement -

ಬಹುನಿರೀಕ್ಷಿತ ಟಿ20 ವಿಶ್ವಕಪ್‌ ಅಭಿಯಾನ ಮುಕ್ತಾಯಗೊಂಡಿದೆ. ನ್ಯೂಜಿಲೆಂಡ್ ಎದುರು ಭಾನುವಾರ ನಡೆದ ಫೈನಲ್‌ ಪಂದ್ಯದಲ್ಲಿ ಕ್ರಿಕೆಟ್ ದಿಗ್ಗಜ ಆಸ್ಟ್ರೇಲಿಯಾ ಜಯಭೇರಿ ಭಾರಿಸಿ ಚೊಚ್ಚಲ ಬಾರಿಗೆ ಟಿ20 ವಿಶ್ವಕಪ್‌ಗೆ ಮುತ್ತಿಟ್ಟಿತು. 2019 ರಲ್ಲಿ ಏಕದಿನ ಕ್ರಿಕೆಟ್ ವಿಶ್ವಕಪ್‌ ಫೈನಲ್ ಪಂದ್ಯದಲ್ಲಿ ಸೂಪರ್ ಓವರ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಸೋತಿದ್ದ ನ್ಯೂಜಿಲೆಂಡ್ ತಂಡ ಭಾನುವಾದ ಟಿ20 ವಿಶ್ವಕಪ್‌ ಫೈನಲ್‌ನಲ್ಲಿಯೂ ಆಸ್ಟ್ರೇಲಿಯಾ ಎದುರು ಮುಗ್ಗರಿಸಿ ನಿರಾಶೆ ಅನುಭವಿಸಿತು.

ಆಸ್ಟ್ರೇಲಿಯಾ ಮೊದಲ ಬಾರಿಗೆ ಟಿ20 ವಿಶ್ವಕಪ್‌ ಗೆದ್ದರೆ ಅದೇ ತಂಡದ ಅನುಭವಿ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಮ್ಯಾನ್ ಆಫ್‌ ದಿ ಟೂರ್ನಿಮೆಂಟ್ ಮುಡಿಗೇರಿಸಿಕೊಂಡರು. ಈ ವಿಷಯವಾಗಿ ಪಾಕಿಸ್ತಾನದ ಮಾಜಿ ಆಟಗಾರ ಶೋಯಬ್ ಅಖ್ತರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಡೇವಿಡ್ ವಾರ್ನರ್‌ಗಿಂತ ಹೆಚ್ಚು ರನ್ ಗಳಿಸಿದ್ದ, ಹೆಚ್ಚು ಬ್ಯಾಟಿಂಗ್ ಸರಾಸರಿ ಹೊಂದಿದ್ದ ಪಾಕಿಸ್ತಾನದ ನಾಯಕ ಮತ್ತು ಬ್ಯಾಟ್ಸ್‌ಮನ್ ಬಾಬರ್ ಅಜಂರವರಿಗೆ ಆ ಶ್ರೇಯ ಸಲ್ಲಬೇಕಿತ್ತು ಎಂದು ಅಖ್ತರ್ ಅಭಿಪ್ರಾಯಪಟ್ಟಿದ್ದು, ಇದು ಐಸಿಸಿಯ ‘ಅನ್ಯಾಯದ ನಿರ್ಧಾರ’ ಎಂದು ಕರೆದಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಬಾಬರ್ ಅಜಂ ಮ್ಯಾನ್ ಆಫ್‌ ದಿ ಟೂರ್ನಿಮೆಂಟ್ ಆಗುತ್ತಾರೆ ಎಂದು ನಿರೀಕ್ಷಿಸಿದ್ದೆ. ನಿಜಕ್ಕೂ ಅನ್ಯಾಯದ ನಿರ್ಧಾರ” ಎಂದಿದ್ದಾರೆ.

ಪಾಕ್ ಆಟಗಾರ ಬಾಬರ್ ಒಟ್ಟು ಅಜಂ 6 ಪಂದ್ಯಗಳಲ್ಲಿ 60.60 ಸರಾಸರಿಯಲ್ಲಿ 303 ರನ್ ಗಳಿಸಿದರೆ ಮೊದಲ ಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಒಟ್ಟು 7 ಪಂದ್ಯಗಳಲ್ಲಿ 48.16 ಸರಾಸರಿಯಲ್ಲಿ 289 ರನ್ ಗಳಿಸಿದ್ದಾರೆ. ಪಾಕ್ ತಂಡದ ಮತ್ತೊಬ್ಬ ಆಟಗಾರ ಮೊಹಮ್ಮದ್ ರಿಜ್ವಾನ್ ಕೂಡ 6 ಪಂದ್ಯಗಳಲ್ಲಿ 70.25 ಸರಾಸರಿಯಲ್ಲಿ 281 ರನ್ ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ. ಬಾಬರ್ ಅಜಂ ಡೇವಿಡ್ ವಾರ್ನರ್‌ಗಿಂತ ಒಂದು ಇನ್ನಿಂಗ್ಸ್ ಕಡಿಮೆ ಆಡಿದರೂ ಸಹ ಅವರಿಗಿಂತ 14 ರನ್ ಹೆಚ್ಚು ಗಳಿಸಿದ್ದಾರೆ. ಸರಾಸರಿ ಸಹ ಉತ್ತಮವಾಗಿದೆ. ಹಾಗಾಗಿ ಅವರಿಗೆ ಮ್ಯಾನ್ ಆಫ್‌ ದಿ ಟೂರ್ನಿಮೆಂಟ್ ಪ್ರಶಸ್ತಿ ನೀಡಬೇಕಿತ್ತು ಎಂಬುದು ಅಖ್ತರ್‌ರವರ ವಾದವಾಗಿದೆ.

ಡೇವಿಡ್ ವಾರ್ನರ್ 3 ಅರ್ಧಶತಕಗಳನ್ನು ಭಾರಿಸಿ, 146.70 ಬ್ಯಾಟಿಂಗ್ ಸ್ಟ್ರೈಕ್‌ ರೇಟ್ ನಲ್ಲಿ ರನ್ ಗಳಿಸಿದ್ದಾರೆ. ಅಲ್ಲದೆ ಸೆಮಿಫೈನಲ್ ಪಂದ್ಯದಲ್ಲಿ ಪಾಕ್ ಎದುರು ಮತ್ತು ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರು ಆಸ್ಟ್ರೇಲಿಯಾ ಜಯ ಸಾಧಿಸುವುದರಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಹಾಗಾಗಿ ಅವರನ್ನು ಮ್ಯಾನ್ ಆಫ್‌ ದಿ ಟೂರ್ನಿಮೆಂಟ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಹಲವರು ಸಮರ್ಥಿಸಿಕೊಂಡಿದ್ದಾರೆ. ಬಾಬರ್ ಅಜಂ 4 ಅರ್ಧಶತಕಗಳನ್ನು ಗಳಿಸಿದ್ದರು ಮತ್ತು ಅವರ ಬ್ಯಾಟಿಂಗ್ ಸ್ಟ್ರೈಕ್‌ ರೇಟ್ 126.25 ಆಗಿದೆ.

ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ 20 ಓವರ್‌ಗಳಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡು 172 ರನ್ ಪೇರಿಸಿತ್ತು. ಅದಕ್ಕೆ ಉತ್ತರವಾಗಿ ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡದ ಆಟಗಾರರು ಲೀಲಾಜಾಲವಾಗಿ ಬ್ಯಾಟ್ ಬೀಸಿದರು. 18.5 ಓವರ್‌ಗಳಲ್ಲಿ 2 ವಿಕೆಟ್‌ ಕಳೆದುಕೊಂಡು ನಿರಾಯಾಸವಾಗಿ ಗೆಲುವಿನ ಗುರಿ ಮುಟ್ಟಿದರು. 8 ವಿಕೆಟ್‌ಗಳ ಜಯ ಸಾಧಿಸಿ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡರು.


ಇದನ್ನೂ ಓದಿ: ಟಿ20 ಕ್ರಿಕೆಟ್‌ನಲ್ಲಿ ದಾಖಲೆ: 4 ಓವರ್‌ನಲ್ಲಿ ಒಂದೂ ರನ್ ಕೊಡದ ಮೊದಲ ಬೌಲರ್ ಅಕ್ಷಯ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...