Homeಅಂಕಣಗಳುಬಹುಜನ ಭಾರತ; ಬಹುತ್ವದ ಮೇಲೆ ಬುಲ್ಡೋಜರ್ ಹರಿಸಿರುವ ಬಾಬಾ-ಮಾಮಾಗಳು

ಬಹುಜನ ಭಾರತ; ಬಹುತ್ವದ ಮೇಲೆ ಬುಲ್ಡೋಜರ್ ಹರಿಸಿರುವ ಬಾಬಾ-ಮಾಮಾಗಳು

- Advertisement -
- Advertisement -

ದೇಶದ ಅತಿದೊಡ್ಡ ರಾಜ್ಯವಾದ ಉತ್ತರಪ್ರದೇಶದ ಅಧಿಕಾರ ಸೂತ್ರವನ್ನು ಇತ್ತೀಚೆಗೆ ಎರಡನೆಯ ಬಾರಿಗೆ ಹಿಡಿದರು ಯೋಗಿ ಆದಿತ್ಯನಾಥ. ತುಸು ಮುನ್ನ ನಡೆದ ಚುನಾವಣಾ ಪ್ರಚಾರದಲ್ಲಿ ಆದಿತ್ಯನಾಥರನ್ನು ಬುಲ್ಡೋಜರ್ ಬಾಬಾ ಎಂದು ಮೂದಲಿಸಿತ್ತು ಸಮಾಜವಾದಿ ಪಾರ್ಟಿ. ಈ ಮೂದಲಿಕೆಯನ್ನೇ ತನ್ನ ಅನುಕೂಲಕ್ಕೆ ತಿರುಗಿಸಿಕೊಂಡಿತು ಬಿಜೆಪಿ. ಪಾತಕಿಗಳ ಅಕ್ರಮ ಆಸ್ತಿಪಾಸ್ತಿಗಳ ಮೇಲೆ ಬುಲ್ಡೋಜರ್ ಚಲಾಯಿಸುವವರು ಎಂದು ಯೋಗಿಯನ್ನು ಬಣ್ಣಿಸಿ ಪ್ರಚಾರ ಮಾಡಿತು.

ಅವರ ಕೋಮುವಾದಿ ಮುಸ್ಲಿಮ್ ದ್ವೇಷೀ ಧ್ರುವೀಕರಣ ಆಡಳಿತ ವೈಖರಿಯ ಅನುಕರಣೆಗೆ ಇಳಿದಿದ್ದಾರೆ ಅವರದೇ ಪಕ್ಷದ ಹಲವು ಮುಖ್ಯಮಂತ್ರಿಗಳು. ಈ ಪೈಕಿ ಮಧ್ಯಪ್ರದೇಶದ ಶಿವರಾಜಸಿಂಗ್ ಚೌಹಾಣ್ ಪ್ರಮುಖರು.

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣಕ್ಕೆಂದು ದೇಣಿಗೆ ಸಂಗ್ರಹಿಸಲು ಉಜ್ಜಯಿನಿ ಮತ್ತು ಇಂದೋರಿನ ರ್‍ಯಾಲಿಗಳ ಮೇಲೆ ಮುಸಲ್ಮಾನ ಬಹುಳ ಪ್ರದೇಶಗಳಲ್ಲಿ ಕಲ್ಲು ತೂರಾಟ ನಡೆದಿತ್ತು. ಆನಂತರ, ಕಲ್ಲು ತೂರುವವರನ್ನು ಶಿಕ್ಷಿಸುವುದೇ ಅಲ್ಲದೆ ಅವರಿಂದ ನಷ್ಟ ಪರಿಹಾರವನ್ನೂ ವಸೂಲು ಮಾಡುವ ಉತ್ತರಪ್ರದೇಶ ಮಾದರಿಯ ಕಾಯಿದೆಯನ್ನು ಕಳೆದ ವರ್ಷ ಜಾರಿಗೆ ತರಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ ದೀಪಾವಳಿಯಂದು ಉತ್ತರಪ್ರದೇಶದ ಯೋಗಿ ಸರ್ಕಾರ ಆಯೋಧ್ಯೆಯ ಸರಯೂ ನದೀ ತೀರದಲ್ಲಿ ಲಕ್ಷ ಲಕ್ಷ ದೀಪ ಬೆಳಗಿಸಿ ವಿಶ್ವದಾಖಲೆ ಸ್ಥಾಪಿಸಿತು. ಶಿವರಾಜಸಿಂಗ್ ಅವರು ತಮ್ಮ ರಾಜ್ಯದ ಉಜ್ಜಯಿನಿಯ ಶಿಪ್ರಾ ನದೀ ತೀರದಲ್ಲಿ ಇಂತಹುದೇ ಭವ್ಯ ದೀಪೋತ್ಸವವನ್ನು ನಡೆಸಿದರು. ತಾವು ಖುದ್ದು ಹಾಜರಿದ್ದರು.

ಆದಿತ್ಯನಾಥ್ ಸರ್ಕಾರ ಲವ್ ಜಿಹಾದ್ ಕಾಯಿದೆ ಎಂದೇ ಕರೆಯಲಾದ ಮತಾಂತರ ನಿಷೇಧ ಕಾಯಿದೆ ಜಾರಿಗೆ ತಂದಿತು. ಮಧ್ಯಪ್ರದೇಶ ಅದೇ ಹಾದಿಯಲ್ಲಿ ನಡೆಯಿತು. ಕರ್ನಾಟಕದ ಬಿಜೆಪಿ ಸರ್ಕಾರದ ದಿಕ್ಕು ದೆಸೆಗಳಲ್ಲೂ ಹೆಚ್ಚು ವ್ಯತ್ಯಾಸ ಇಲ್ಲ.

ಆದಿತ್ಯನಾಥ್ ’ಬುಲ್ಡೋಜರ್ ಬಾಬಾ’ ಎಂದು ಕರೆಯಿಸಿಕೊಂಡರೆ, ಶಿವರಾಜ್ ಬುಲ್ಡೋಜರ್ ಮಾಮಾ ಎಂಬ ಅಭಿದಾನ ತಮಗೆ ಗಟ್ಟಿಯಾಗಿ ಅಂಟಲೆಂದು ಬಯಸಿದ್ದಾರೆ. ಮುಸಲ್ಮಾನರ ’ಅಕ್ರಮ’ ಮನೆಗಳು ಮತ್ತು ಅಂಗಡಿಗಳ ಮೇಲೆ ಅವರ ಆಡಳಿತ ನಿರ್ದಯೆಯಿಂದ ಬುಲ್ಡೋಜರ್ ಹರಿಸುತ್ತಿದೆ. ಈ ಮಾತಿಗೆ ಖರ್ಗೋನ್ ಪ್ರಕರಣ ಇತ್ತೀಚಿನ ನಿದರ್ಶನ.

ಈ ಹಿಂದಿನ ತಮ್ಮ ಆಡಳಿತಾವಧಿಗಳಲ್ಲಿ ಅವರ ಆಡಳಿತ ವೈಖರಿ ಕೋಮು ಸಾಮರಸ್ಯವನ್ನು ಕದಡಿರಲಿಲ್ಲ. ಬದಲಾಗಿ ಮುಸಲ್ಮಾನರೂ ಈ ಬಿಜೆಪಿ ಮುಖ್ಯಮಂತ್ರಿಯನ್ನು ಇಷ್ಟಪಡುತ್ತಿದ್ದರು ಮತ್ತು ಅವರ ಪರವಾಗಿ ಮತ ಚಲಾಯಿಸುತ್ತಿದ್ದುದೂ ಉಂಟು. ಅದೊಂದು ಕಾಲವಿತ್ತು. ಮುಖ್ಯಮಂತ್ರಿ ಶಿವರಾಜ್ ಸರ್ಕಾರಿ ನಿವಾಸದಲ್ಲಿ ಕ್ರಿಸ್ಮಸ್ ಆಚರಿಸಲಾಗುತ್ತಿತ್ತು. ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪಕ್ಷದ ಏಕೈಕ ಮಹಿಳಾ ಮುಸಲ್ಮಾನ ಅಭ್ಯರ್ಥಿ ಫಾತಿಮಾ ಸಿದ್ದೀಖಿ ನಾಮಪತ್ರ ಸಲ್ಲಿಸಲು ತೆರಳಿದಾಗ ಖುದ್ದು ಮುಖ್ಯಮಂತ್ರಿಯೇ ಆಕೆಯ ಜೊತೆಗೆ ತೆರಳಿದ್ದರು.

ಮಧ್ಯಪ್ರದೇಶ ವಿಧಾನಸಭಾ ಚುನಾವಣೆ ಕೇವಲ ಒಂದೂವರೆ ವರ್ಷ ದೂರದಲ್ಲಿದೆ. ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ಮೂಲಕ ತಮ್ಮ ಕುರ್ಚಿಯನ್ನೂ ಭದ್ರಪಡಿಸಿಕೊಳ್ಳಬೇಕಿದೆ ಶಿವರಾಜಸಿಂಗ್. ಉತ್ತರಪ್ರದೇಶದಲ್ಲಿ ಯೋಗಿಯವರ ಕಟ್ಟರ್ ಹಿಂದುತ್ವ ಫಲ ನೀಡಿದೆ ಎಂಬುದು ಅವರ ಗಟ್ಟಿ ನಂಬಿಕೆ. ಅದೇ ವರ್ಚಸ್ಸನ್ನು ಆಲಿಂಗಿಸಿ ಧರಿಸಿದ್ದಾರೆ. ಬುಲ್ಡೋಜರ್ ರೂಪಕವನ್ನು ಯೋಗಿಯವರಿಂದ ಎರವಲು ಪಡೆದಿದ್ದಾರೆ.

ಜ್ಯೋತಿರಾದಿತ್ಯ ಸಿಂಧ್ಯ ಅವರಂತಹ ಕಾಂಗ್ರೆಸ್ಸಿಗರ ನೆರವಿನಿಂದಲೇ ಕಾಂಗ್ರೆಸ್ ಸರ್ಕಾರವನ್ನು ಕೆಡವಿ ಪುನಃ ಬಿಜೆಪಿಯನ್ನು ಅಧಿಕಾರಕ್ಕೆ ತಂದರು ಅಮಿತ್ ಶಾ. 2018ರಲ್ಲಿ ಸೋತ ಶಿವರಾಜ್ ಅವರಿಗೆ
ಮುಖ್ಯಮಂತ್ರಿಯಾಗಿ ಮತ್ತೊಂದು ಅವಕಾಶ ಸಿಕ್ಕಿತ್ತು. ಒಂದು ಕಾಲಕ್ಕೆ ನರೇಂದ್ರ ಮೋದಿ ಅವರಿಗೆ ಪೈಪೋಟಿ ಒಡ್ಡಿದ್ದ ಕಾರಣಕ್ಕೆ ಶಾ-ಮೋದಿ ಅವರ ಸರ್ವಶಕ್ತ ಜೋಡಿ ಶಿವರಾಜರನ್ನು ದೂರವೇ ಇರಿಸಿದೆ. 2023ರ ಡಿಸೆಂಬರ್ ಚುನಾವಣೆಯಲ್ಲಿ ತಮ್ಮ ಅಧಿಕಾರವನ್ನು ಕಳೆದುಕೊಳ್ಳಲು ಒಲ್ಲರು ಶಿವರಾಜ್. ಕಳೆದ ಮಾರ್ಚ್ 23ರಂದು ಎರಡು ವರ್ಷಗಳ ಆಡಳಿತಾವಧಿ ಪೂರೈಸಿದರು. ಬೆಂಬಲಿಗರು ಅವರನ್ನು ಬುಲ್ಡೋಜರ್ ಮಾಮಾ ಎಂದು ಕರೆದು ಸನ್ಮಾನಿಸಿದರು. ಈ ಬಿರುದಿನ ಭಿತ್ತಿಪತ್ರಗಳು ರಾಜ್ಯದ ತುಂಬೆಲ್ಲ ರಾರಾಜಿಸಿದವು.

ರಾಮೇಶ್ವರ ಶರ್ಮಾ ಎಂಬ ಬಿಜೆಪಿ ಶಾಸಕರೊಬ್ಬರು ತಮ್ಮ ಸರ್ಕಾರಿ ಬಂಗಲೆಯ ಮುಂದೆ ಸಾಲುಸಾಲಾಗಿ ಬುಲ್ಡೋಜರುಗಳನ್ನು ನಿಲ್ಲಿಸಿದರು. ನಮ್ಮ ಹೆಣ್ಣುಮಕ್ಕಳ ಮೇಲೆ ಕಣ್ಣು ಹಾಕುವವರನ್ನು ಹೊಸಕಿ ಹಾಕುವುದು ಮಾಮಾನ ಬುಲ್ಡೋಜರ್ ಎಂಬ ಅರ್ಥದ ದೊಡ್ಡ ಬಿತ್ತಿಪತ್ರವನ್ನು ಬರೆಯಿಸಿ ನಿಲ್ಲಿಸಿದರು.

ಈ ವಿದ್ಯಮಾನಕ್ಕೆ ತುಸು ಮುನ್ನ ಶಿವಪುರ, ಸಿಯೋನಿ ಹಾಗೂ ಶಾದೋಲ್ ಜಿಲ್ಲಾಧಿಕಾರಿಗಳು ತಮ್ಮ ಜಿಲ್ಲೆಗಳ ಮೂವರು ಅತ್ಯಾಚಾರ ಆರೋಪಿಗಳ ಮನೆಗಳ ಮೇಲೆ ಬುಲ್ಡೋಜರ್ ಹರಿಸಿ ಕೆಡವಿದ್ದರು.

ತಮ್ಮನ್ನು ಬುಲ್ಡೋಜರ್ ಮಾಮಾ ಎಂದು ಕರೆದ ಶರ್ಮಾ ಅವರಿಗೆ ಧನ್ಯವಾದ ಹೇಳಿದರು ಶಿವರಾಜ್. ’ಎಲ್ಲ ಪಾತಕಿಗಳು ಕೊಚ್ಚಿ ಹೋಗುವತನಕ ನಿಲ್ಲದು ಮಾಮಾನ ಬುಲ್ಡೋಜರ್. ಸಮಾಜವಿರೋಧಿ ಶಕ್ತಿಗಳನ್ನು ಸುಮ್ಮನೆ ಬಿಡುವುದಿಲ್ಲ ನಾವು’ ಎಂಬುದಾಗಿ ಟ್ವೀಟ್ ಮಾಡಿದರು.

ಇತ್ತೀಚೆಗೆ ರಾಮನವಮಿ ಮೆರವಣಿಗೆಯ ಮೇಲೆ ಕಲ್ಲು ತೂರಿದ ಅಲ್ಪಸಂಖ್ಯಾತ ಆಪಾದಿತರ ಅಂಗಡಿಗಳು- ಮನೆಗಳ ಮೇಲೆ ಬುಲ್ಡೋಜರುಗಳನ್ನು ಹರಿಸಿ ಕೆಡವಿಸಿದ್ದಾರೆ. ಈ ಮನೆಗಳಲ್ಲಿ ವಾಸವಿದ್ದವರೇ ಕಲ್ಲು ತೂರಿದ ನಿಜ ಅಪರಾಧಿಗಳೆಂಬುದು ಇನ್ನು ಸಾಬೀತಾಗಿಲ್ಲ. ಕಾಯಿದೆ ಕಾನೂನುಗಳನ್ನು ಎತ್ತಿ ಹಿಡಿದು ಆಡಳಿತ ಮಾಡಬೇಕಿರುವ ಸರ್ಕಾರವೇ ಕಾನೂನು ಪ್ರಕ್ರಿಯೆಯನ್ನು ಗಾಳಿಗೆ ತೂರಿ ನ್ಯಾಯಾಂಗದ ಪಾತ್ರವನ್ನೂ ತಾನೇ ವಹಿಸಿರುವುದು ಸಂವಿಧಾನಬಾಹಿರ ನಡೆ. ಕಾನೂನಿನ ಆಡಳಿತಕ್ಕೆ ಮಾರಕವೇ ವಿನಾ ತಾರಕ ಅಲ್ಲ.

ಮೂರನೆಯ ದರ್ಜೆಯ ಪ್ರಜೆಗಳಂತೆ ಬಹುಸಂಖ್ಯಾತರಿಗೆ ಅಡಿಯಾಳುಗಳಾಗಿ ಬಾಳದೆ ಸಮಾನರೆಂದು ತಲೆಯೆತ್ತಿದರೆ ನಿಮ್ಮ ನೆರಳು, ಬದುಕು-ಬಾಳುವೆ, ಅನ್ನದ ದಾರಿಗಳನ್ನು ಹಾಳುಗೆಡವುತ್ತೇವೆ ಎಂಬ ನಿಚ್ಚಳ ಸಂದೇಶವನ್ನು ಅಲ್ಪಸಂಖ್ಯಾತರಿಗೆ ದಿನನಿತ್ಯ ಹತ್ತು ಹಲವು ಬಗೆಗಳಲ್ಲಿ ರವಾನಿಸಲಾಗುತ್ತಿದೆ.

ಅಲ್ಪಸಂಖ್ಯಾತರ ನಡೆ ನುಡಿ ಉಡುಪು, ಉಣಿಸು ತಿನಿಸು, ಆರಾಧನೆ ಎಲ್ಲವನ್ನೂ ಖಳ-ಖೂಳಗೊಳಿಸಿ ಮುಸಲ್ಮಾನರ ಜನಾಂಗೀಯ ಹತ್ಯೆಯತ್ತ ಹೆಜ್ಜೆಯಿಟ್ಟಿದೆ ಭಾರತದ ರಾಜ್ಯಾಡಳಿತ ಕ್ರಮ. ನರೇಂದ್ರ ಮೋದಿ-ಅಮಿತ್ ಶಾ- ಸಂಘಪರಿವಾರ ಈ ಕ್ರಮದ ರೂವಾರಿಗಳು.

ವಾಸ್ತವವಾಗಿ ಬುಲ್ಡೋಜರುಗಳು ಹರಿದು ಕದಲಿರುವುದು ಭಾರತದ ಬಹುತ್ವದ ಅಡಿಪಾಯವೇ ವಿನಾ ಅಲ್ಪಸಂಖ್ಯಾತರ ಮನೆ ಮನಗಳು ಮಾತ್ರವೇ ಅಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಬಹುಜನ ಭಾರತ; ಪ್ರಾಚೀನ ಕಲಾಕೃತಿಗಳು-ಕೊಳ್ಳೆಯೇಕೆ ನಿಂತಿಲ್ಲ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...