Homeಅಂಕಣಗಳುಬಹುಜನ ಭಾರತ; ಬಹುತ್ವದ ಮೇಲೆ ಬುಲ್ಡೋಜರ್ ಹರಿಸಿರುವ ಬಾಬಾ-ಮಾಮಾಗಳು

ಬಹುಜನ ಭಾರತ; ಬಹುತ್ವದ ಮೇಲೆ ಬುಲ್ಡೋಜರ್ ಹರಿಸಿರುವ ಬಾಬಾ-ಮಾಮಾಗಳು

- Advertisement -
- Advertisement -

ದೇಶದ ಅತಿದೊಡ್ಡ ರಾಜ್ಯವಾದ ಉತ್ತರಪ್ರದೇಶದ ಅಧಿಕಾರ ಸೂತ್ರವನ್ನು ಇತ್ತೀಚೆಗೆ ಎರಡನೆಯ ಬಾರಿಗೆ ಹಿಡಿದರು ಯೋಗಿ ಆದಿತ್ಯನಾಥ. ತುಸು ಮುನ್ನ ನಡೆದ ಚುನಾವಣಾ ಪ್ರಚಾರದಲ್ಲಿ ಆದಿತ್ಯನಾಥರನ್ನು ಬುಲ್ಡೋಜರ್ ಬಾಬಾ ಎಂದು ಮೂದಲಿಸಿತ್ತು ಸಮಾಜವಾದಿ ಪಾರ್ಟಿ. ಈ ಮೂದಲಿಕೆಯನ್ನೇ ತನ್ನ ಅನುಕೂಲಕ್ಕೆ ತಿರುಗಿಸಿಕೊಂಡಿತು ಬಿಜೆಪಿ. ಪಾತಕಿಗಳ ಅಕ್ರಮ ಆಸ್ತಿಪಾಸ್ತಿಗಳ ಮೇಲೆ ಬುಲ್ಡೋಜರ್ ಚಲಾಯಿಸುವವರು ಎಂದು ಯೋಗಿಯನ್ನು ಬಣ್ಣಿಸಿ ಪ್ರಚಾರ ಮಾಡಿತು.

ಅವರ ಕೋಮುವಾದಿ ಮುಸ್ಲಿಮ್ ದ್ವೇಷೀ ಧ್ರುವೀಕರಣ ಆಡಳಿತ ವೈಖರಿಯ ಅನುಕರಣೆಗೆ ಇಳಿದಿದ್ದಾರೆ ಅವರದೇ ಪಕ್ಷದ ಹಲವು ಮುಖ್ಯಮಂತ್ರಿಗಳು. ಈ ಪೈಕಿ ಮಧ್ಯಪ್ರದೇಶದ ಶಿವರಾಜಸಿಂಗ್ ಚೌಹಾಣ್ ಪ್ರಮುಖರು.

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣಕ್ಕೆಂದು ದೇಣಿಗೆ ಸಂಗ್ರಹಿಸಲು ಉಜ್ಜಯಿನಿ ಮತ್ತು ಇಂದೋರಿನ ರ್‍ಯಾಲಿಗಳ ಮೇಲೆ ಮುಸಲ್ಮಾನ ಬಹುಳ ಪ್ರದೇಶಗಳಲ್ಲಿ ಕಲ್ಲು ತೂರಾಟ ನಡೆದಿತ್ತು. ಆನಂತರ, ಕಲ್ಲು ತೂರುವವರನ್ನು ಶಿಕ್ಷಿಸುವುದೇ ಅಲ್ಲದೆ ಅವರಿಂದ ನಷ್ಟ ಪರಿಹಾರವನ್ನೂ ವಸೂಲು ಮಾಡುವ ಉತ್ತರಪ್ರದೇಶ ಮಾದರಿಯ ಕಾಯಿದೆಯನ್ನು ಕಳೆದ ವರ್ಷ ಜಾರಿಗೆ ತರಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ ದೀಪಾವಳಿಯಂದು ಉತ್ತರಪ್ರದೇಶದ ಯೋಗಿ ಸರ್ಕಾರ ಆಯೋಧ್ಯೆಯ ಸರಯೂ ನದೀ ತೀರದಲ್ಲಿ ಲಕ್ಷ ಲಕ್ಷ ದೀಪ ಬೆಳಗಿಸಿ ವಿಶ್ವದಾಖಲೆ ಸ್ಥಾಪಿಸಿತು. ಶಿವರಾಜಸಿಂಗ್ ಅವರು ತಮ್ಮ ರಾಜ್ಯದ ಉಜ್ಜಯಿನಿಯ ಶಿಪ್ರಾ ನದೀ ತೀರದಲ್ಲಿ ಇಂತಹುದೇ ಭವ್ಯ ದೀಪೋತ್ಸವವನ್ನು ನಡೆಸಿದರು. ತಾವು ಖುದ್ದು ಹಾಜರಿದ್ದರು.

ಆದಿತ್ಯನಾಥ್ ಸರ್ಕಾರ ಲವ್ ಜಿಹಾದ್ ಕಾಯಿದೆ ಎಂದೇ ಕರೆಯಲಾದ ಮತಾಂತರ ನಿಷೇಧ ಕಾಯಿದೆ ಜಾರಿಗೆ ತಂದಿತು. ಮಧ್ಯಪ್ರದೇಶ ಅದೇ ಹಾದಿಯಲ್ಲಿ ನಡೆಯಿತು. ಕರ್ನಾಟಕದ ಬಿಜೆಪಿ ಸರ್ಕಾರದ ದಿಕ್ಕು ದೆಸೆಗಳಲ್ಲೂ ಹೆಚ್ಚು ವ್ಯತ್ಯಾಸ ಇಲ್ಲ.

ಆದಿತ್ಯನಾಥ್ ’ಬುಲ್ಡೋಜರ್ ಬಾಬಾ’ ಎಂದು ಕರೆಯಿಸಿಕೊಂಡರೆ, ಶಿವರಾಜ್ ಬುಲ್ಡೋಜರ್ ಮಾಮಾ ಎಂಬ ಅಭಿದಾನ ತಮಗೆ ಗಟ್ಟಿಯಾಗಿ ಅಂಟಲೆಂದು ಬಯಸಿದ್ದಾರೆ. ಮುಸಲ್ಮಾನರ ’ಅಕ್ರಮ’ ಮನೆಗಳು ಮತ್ತು ಅಂಗಡಿಗಳ ಮೇಲೆ ಅವರ ಆಡಳಿತ ನಿರ್ದಯೆಯಿಂದ ಬುಲ್ಡೋಜರ್ ಹರಿಸುತ್ತಿದೆ. ಈ ಮಾತಿಗೆ ಖರ್ಗೋನ್ ಪ್ರಕರಣ ಇತ್ತೀಚಿನ ನಿದರ್ಶನ.

ಈ ಹಿಂದಿನ ತಮ್ಮ ಆಡಳಿತಾವಧಿಗಳಲ್ಲಿ ಅವರ ಆಡಳಿತ ವೈಖರಿ ಕೋಮು ಸಾಮರಸ್ಯವನ್ನು ಕದಡಿರಲಿಲ್ಲ. ಬದಲಾಗಿ ಮುಸಲ್ಮಾನರೂ ಈ ಬಿಜೆಪಿ ಮುಖ್ಯಮಂತ್ರಿಯನ್ನು ಇಷ್ಟಪಡುತ್ತಿದ್ದರು ಮತ್ತು ಅವರ ಪರವಾಗಿ ಮತ ಚಲಾಯಿಸುತ್ತಿದ್ದುದೂ ಉಂಟು. ಅದೊಂದು ಕಾಲವಿತ್ತು. ಮುಖ್ಯಮಂತ್ರಿ ಶಿವರಾಜ್ ಸರ್ಕಾರಿ ನಿವಾಸದಲ್ಲಿ ಕ್ರಿಸ್ಮಸ್ ಆಚರಿಸಲಾಗುತ್ತಿತ್ತು. ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪಕ್ಷದ ಏಕೈಕ ಮಹಿಳಾ ಮುಸಲ್ಮಾನ ಅಭ್ಯರ್ಥಿ ಫಾತಿಮಾ ಸಿದ್ದೀಖಿ ನಾಮಪತ್ರ ಸಲ್ಲಿಸಲು ತೆರಳಿದಾಗ ಖುದ್ದು ಮುಖ್ಯಮಂತ್ರಿಯೇ ಆಕೆಯ ಜೊತೆಗೆ ತೆರಳಿದ್ದರು.

ಮಧ್ಯಪ್ರದೇಶ ವಿಧಾನಸಭಾ ಚುನಾವಣೆ ಕೇವಲ ಒಂದೂವರೆ ವರ್ಷ ದೂರದಲ್ಲಿದೆ. ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ಮೂಲಕ ತಮ್ಮ ಕುರ್ಚಿಯನ್ನೂ ಭದ್ರಪಡಿಸಿಕೊಳ್ಳಬೇಕಿದೆ ಶಿವರಾಜಸಿಂಗ್. ಉತ್ತರಪ್ರದೇಶದಲ್ಲಿ ಯೋಗಿಯವರ ಕಟ್ಟರ್ ಹಿಂದುತ್ವ ಫಲ ನೀಡಿದೆ ಎಂಬುದು ಅವರ ಗಟ್ಟಿ ನಂಬಿಕೆ. ಅದೇ ವರ್ಚಸ್ಸನ್ನು ಆಲಿಂಗಿಸಿ ಧರಿಸಿದ್ದಾರೆ. ಬುಲ್ಡೋಜರ್ ರೂಪಕವನ್ನು ಯೋಗಿಯವರಿಂದ ಎರವಲು ಪಡೆದಿದ್ದಾರೆ.

ಜ್ಯೋತಿರಾದಿತ್ಯ ಸಿಂಧ್ಯ ಅವರಂತಹ ಕಾಂಗ್ರೆಸ್ಸಿಗರ ನೆರವಿನಿಂದಲೇ ಕಾಂಗ್ರೆಸ್ ಸರ್ಕಾರವನ್ನು ಕೆಡವಿ ಪುನಃ ಬಿಜೆಪಿಯನ್ನು ಅಧಿಕಾರಕ್ಕೆ ತಂದರು ಅಮಿತ್ ಶಾ. 2018ರಲ್ಲಿ ಸೋತ ಶಿವರಾಜ್ ಅವರಿಗೆ
ಮುಖ್ಯಮಂತ್ರಿಯಾಗಿ ಮತ್ತೊಂದು ಅವಕಾಶ ಸಿಕ್ಕಿತ್ತು. ಒಂದು ಕಾಲಕ್ಕೆ ನರೇಂದ್ರ ಮೋದಿ ಅವರಿಗೆ ಪೈಪೋಟಿ ಒಡ್ಡಿದ್ದ ಕಾರಣಕ್ಕೆ ಶಾ-ಮೋದಿ ಅವರ ಸರ್ವಶಕ್ತ ಜೋಡಿ ಶಿವರಾಜರನ್ನು ದೂರವೇ ಇರಿಸಿದೆ. 2023ರ ಡಿಸೆಂಬರ್ ಚುನಾವಣೆಯಲ್ಲಿ ತಮ್ಮ ಅಧಿಕಾರವನ್ನು ಕಳೆದುಕೊಳ್ಳಲು ಒಲ್ಲರು ಶಿವರಾಜ್. ಕಳೆದ ಮಾರ್ಚ್ 23ರಂದು ಎರಡು ವರ್ಷಗಳ ಆಡಳಿತಾವಧಿ ಪೂರೈಸಿದರು. ಬೆಂಬಲಿಗರು ಅವರನ್ನು ಬುಲ್ಡೋಜರ್ ಮಾಮಾ ಎಂದು ಕರೆದು ಸನ್ಮಾನಿಸಿದರು. ಈ ಬಿರುದಿನ ಭಿತ್ತಿಪತ್ರಗಳು ರಾಜ್ಯದ ತುಂಬೆಲ್ಲ ರಾರಾಜಿಸಿದವು.

ರಾಮೇಶ್ವರ ಶರ್ಮಾ ಎಂಬ ಬಿಜೆಪಿ ಶಾಸಕರೊಬ್ಬರು ತಮ್ಮ ಸರ್ಕಾರಿ ಬಂಗಲೆಯ ಮುಂದೆ ಸಾಲುಸಾಲಾಗಿ ಬುಲ್ಡೋಜರುಗಳನ್ನು ನಿಲ್ಲಿಸಿದರು. ನಮ್ಮ ಹೆಣ್ಣುಮಕ್ಕಳ ಮೇಲೆ ಕಣ್ಣು ಹಾಕುವವರನ್ನು ಹೊಸಕಿ ಹಾಕುವುದು ಮಾಮಾನ ಬುಲ್ಡೋಜರ್ ಎಂಬ ಅರ್ಥದ ದೊಡ್ಡ ಬಿತ್ತಿಪತ್ರವನ್ನು ಬರೆಯಿಸಿ ನಿಲ್ಲಿಸಿದರು.

ಈ ವಿದ್ಯಮಾನಕ್ಕೆ ತುಸು ಮುನ್ನ ಶಿವಪುರ, ಸಿಯೋನಿ ಹಾಗೂ ಶಾದೋಲ್ ಜಿಲ್ಲಾಧಿಕಾರಿಗಳು ತಮ್ಮ ಜಿಲ್ಲೆಗಳ ಮೂವರು ಅತ್ಯಾಚಾರ ಆರೋಪಿಗಳ ಮನೆಗಳ ಮೇಲೆ ಬುಲ್ಡೋಜರ್ ಹರಿಸಿ ಕೆಡವಿದ್ದರು.

ತಮ್ಮನ್ನು ಬುಲ್ಡೋಜರ್ ಮಾಮಾ ಎಂದು ಕರೆದ ಶರ್ಮಾ ಅವರಿಗೆ ಧನ್ಯವಾದ ಹೇಳಿದರು ಶಿವರಾಜ್. ’ಎಲ್ಲ ಪಾತಕಿಗಳು ಕೊಚ್ಚಿ ಹೋಗುವತನಕ ನಿಲ್ಲದು ಮಾಮಾನ ಬುಲ್ಡೋಜರ್. ಸಮಾಜವಿರೋಧಿ ಶಕ್ತಿಗಳನ್ನು ಸುಮ್ಮನೆ ಬಿಡುವುದಿಲ್ಲ ನಾವು’ ಎಂಬುದಾಗಿ ಟ್ವೀಟ್ ಮಾಡಿದರು.

ಇತ್ತೀಚೆಗೆ ರಾಮನವಮಿ ಮೆರವಣಿಗೆಯ ಮೇಲೆ ಕಲ್ಲು ತೂರಿದ ಅಲ್ಪಸಂಖ್ಯಾತ ಆಪಾದಿತರ ಅಂಗಡಿಗಳು- ಮನೆಗಳ ಮೇಲೆ ಬುಲ್ಡೋಜರುಗಳನ್ನು ಹರಿಸಿ ಕೆಡವಿಸಿದ್ದಾರೆ. ಈ ಮನೆಗಳಲ್ಲಿ ವಾಸವಿದ್ದವರೇ ಕಲ್ಲು ತೂರಿದ ನಿಜ ಅಪರಾಧಿಗಳೆಂಬುದು ಇನ್ನು ಸಾಬೀತಾಗಿಲ್ಲ. ಕಾಯಿದೆ ಕಾನೂನುಗಳನ್ನು ಎತ್ತಿ ಹಿಡಿದು ಆಡಳಿತ ಮಾಡಬೇಕಿರುವ ಸರ್ಕಾರವೇ ಕಾನೂನು ಪ್ರಕ್ರಿಯೆಯನ್ನು ಗಾಳಿಗೆ ತೂರಿ ನ್ಯಾಯಾಂಗದ ಪಾತ್ರವನ್ನೂ ತಾನೇ ವಹಿಸಿರುವುದು ಸಂವಿಧಾನಬಾಹಿರ ನಡೆ. ಕಾನೂನಿನ ಆಡಳಿತಕ್ಕೆ ಮಾರಕವೇ ವಿನಾ ತಾರಕ ಅಲ್ಲ.

ಮೂರನೆಯ ದರ್ಜೆಯ ಪ್ರಜೆಗಳಂತೆ ಬಹುಸಂಖ್ಯಾತರಿಗೆ ಅಡಿಯಾಳುಗಳಾಗಿ ಬಾಳದೆ ಸಮಾನರೆಂದು ತಲೆಯೆತ್ತಿದರೆ ನಿಮ್ಮ ನೆರಳು, ಬದುಕು-ಬಾಳುವೆ, ಅನ್ನದ ದಾರಿಗಳನ್ನು ಹಾಳುಗೆಡವುತ್ತೇವೆ ಎಂಬ ನಿಚ್ಚಳ ಸಂದೇಶವನ್ನು ಅಲ್ಪಸಂಖ್ಯಾತರಿಗೆ ದಿನನಿತ್ಯ ಹತ್ತು ಹಲವು ಬಗೆಗಳಲ್ಲಿ ರವಾನಿಸಲಾಗುತ್ತಿದೆ.

ಅಲ್ಪಸಂಖ್ಯಾತರ ನಡೆ ನುಡಿ ಉಡುಪು, ಉಣಿಸು ತಿನಿಸು, ಆರಾಧನೆ ಎಲ್ಲವನ್ನೂ ಖಳ-ಖೂಳಗೊಳಿಸಿ ಮುಸಲ್ಮಾನರ ಜನಾಂಗೀಯ ಹತ್ಯೆಯತ್ತ ಹೆಜ್ಜೆಯಿಟ್ಟಿದೆ ಭಾರತದ ರಾಜ್ಯಾಡಳಿತ ಕ್ರಮ. ನರೇಂದ್ರ ಮೋದಿ-ಅಮಿತ್ ಶಾ- ಸಂಘಪರಿವಾರ ಈ ಕ್ರಮದ ರೂವಾರಿಗಳು.

ವಾಸ್ತವವಾಗಿ ಬುಲ್ಡೋಜರುಗಳು ಹರಿದು ಕದಲಿರುವುದು ಭಾರತದ ಬಹುತ್ವದ ಅಡಿಪಾಯವೇ ವಿನಾ ಅಲ್ಪಸಂಖ್ಯಾತರ ಮನೆ ಮನಗಳು ಮಾತ್ರವೇ ಅಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಬಹುಜನ ಭಾರತ; ಪ್ರಾಚೀನ ಕಲಾಕೃತಿಗಳು-ಕೊಳ್ಳೆಯೇಕೆ ನಿಂತಿಲ್ಲ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...