Homeಅಂಕಣಗಳುಬಹುಜನ ಭಾರತ; ಬಹುತ್ವದ ಮೇಲೆ ಬುಲ್ಡೋಜರ್ ಹರಿಸಿರುವ ಬಾಬಾ-ಮಾಮಾಗಳು

ಬಹುಜನ ಭಾರತ; ಬಹುತ್ವದ ಮೇಲೆ ಬುಲ್ಡೋಜರ್ ಹರಿಸಿರುವ ಬಾಬಾ-ಮಾಮಾಗಳು

- Advertisement -
- Advertisement -

ದೇಶದ ಅತಿದೊಡ್ಡ ರಾಜ್ಯವಾದ ಉತ್ತರಪ್ರದೇಶದ ಅಧಿಕಾರ ಸೂತ್ರವನ್ನು ಇತ್ತೀಚೆಗೆ ಎರಡನೆಯ ಬಾರಿಗೆ ಹಿಡಿದರು ಯೋಗಿ ಆದಿತ್ಯನಾಥ. ತುಸು ಮುನ್ನ ನಡೆದ ಚುನಾವಣಾ ಪ್ರಚಾರದಲ್ಲಿ ಆದಿತ್ಯನಾಥರನ್ನು ಬುಲ್ಡೋಜರ್ ಬಾಬಾ ಎಂದು ಮೂದಲಿಸಿತ್ತು ಸಮಾಜವಾದಿ ಪಾರ್ಟಿ. ಈ ಮೂದಲಿಕೆಯನ್ನೇ ತನ್ನ ಅನುಕೂಲಕ್ಕೆ ತಿರುಗಿಸಿಕೊಂಡಿತು ಬಿಜೆಪಿ. ಪಾತಕಿಗಳ ಅಕ್ರಮ ಆಸ್ತಿಪಾಸ್ತಿಗಳ ಮೇಲೆ ಬುಲ್ಡೋಜರ್ ಚಲಾಯಿಸುವವರು ಎಂದು ಯೋಗಿಯನ್ನು ಬಣ್ಣಿಸಿ ಪ್ರಚಾರ ಮಾಡಿತು.

ಅವರ ಕೋಮುವಾದಿ ಮುಸ್ಲಿಮ್ ದ್ವೇಷೀ ಧ್ರುವೀಕರಣ ಆಡಳಿತ ವೈಖರಿಯ ಅನುಕರಣೆಗೆ ಇಳಿದಿದ್ದಾರೆ ಅವರದೇ ಪಕ್ಷದ ಹಲವು ಮುಖ್ಯಮಂತ್ರಿಗಳು. ಈ ಪೈಕಿ ಮಧ್ಯಪ್ರದೇಶದ ಶಿವರಾಜಸಿಂಗ್ ಚೌಹಾಣ್ ಪ್ರಮುಖರು.

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣಕ್ಕೆಂದು ದೇಣಿಗೆ ಸಂಗ್ರಹಿಸಲು ಉಜ್ಜಯಿನಿ ಮತ್ತು ಇಂದೋರಿನ ರ್‍ಯಾಲಿಗಳ ಮೇಲೆ ಮುಸಲ್ಮಾನ ಬಹುಳ ಪ್ರದೇಶಗಳಲ್ಲಿ ಕಲ್ಲು ತೂರಾಟ ನಡೆದಿತ್ತು. ಆನಂತರ, ಕಲ್ಲು ತೂರುವವರನ್ನು ಶಿಕ್ಷಿಸುವುದೇ ಅಲ್ಲದೆ ಅವರಿಂದ ನಷ್ಟ ಪರಿಹಾರವನ್ನೂ ವಸೂಲು ಮಾಡುವ ಉತ್ತರಪ್ರದೇಶ ಮಾದರಿಯ ಕಾಯಿದೆಯನ್ನು ಕಳೆದ ವರ್ಷ ಜಾರಿಗೆ ತರಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ ದೀಪಾವಳಿಯಂದು ಉತ್ತರಪ್ರದೇಶದ ಯೋಗಿ ಸರ್ಕಾರ ಆಯೋಧ್ಯೆಯ ಸರಯೂ ನದೀ ತೀರದಲ್ಲಿ ಲಕ್ಷ ಲಕ್ಷ ದೀಪ ಬೆಳಗಿಸಿ ವಿಶ್ವದಾಖಲೆ ಸ್ಥಾಪಿಸಿತು. ಶಿವರಾಜಸಿಂಗ್ ಅವರು ತಮ್ಮ ರಾಜ್ಯದ ಉಜ್ಜಯಿನಿಯ ಶಿಪ್ರಾ ನದೀ ತೀರದಲ್ಲಿ ಇಂತಹುದೇ ಭವ್ಯ ದೀಪೋತ್ಸವವನ್ನು ನಡೆಸಿದರು. ತಾವು ಖುದ್ದು ಹಾಜರಿದ್ದರು.

ಆದಿತ್ಯನಾಥ್ ಸರ್ಕಾರ ಲವ್ ಜಿಹಾದ್ ಕಾಯಿದೆ ಎಂದೇ ಕರೆಯಲಾದ ಮತಾಂತರ ನಿಷೇಧ ಕಾಯಿದೆ ಜಾರಿಗೆ ತಂದಿತು. ಮಧ್ಯಪ್ರದೇಶ ಅದೇ ಹಾದಿಯಲ್ಲಿ ನಡೆಯಿತು. ಕರ್ನಾಟಕದ ಬಿಜೆಪಿ ಸರ್ಕಾರದ ದಿಕ್ಕು ದೆಸೆಗಳಲ್ಲೂ ಹೆಚ್ಚು ವ್ಯತ್ಯಾಸ ಇಲ್ಲ.

ಆದಿತ್ಯನಾಥ್ ’ಬುಲ್ಡೋಜರ್ ಬಾಬಾ’ ಎಂದು ಕರೆಯಿಸಿಕೊಂಡರೆ, ಶಿವರಾಜ್ ಬುಲ್ಡೋಜರ್ ಮಾಮಾ ಎಂಬ ಅಭಿದಾನ ತಮಗೆ ಗಟ್ಟಿಯಾಗಿ ಅಂಟಲೆಂದು ಬಯಸಿದ್ದಾರೆ. ಮುಸಲ್ಮಾನರ ’ಅಕ್ರಮ’ ಮನೆಗಳು ಮತ್ತು ಅಂಗಡಿಗಳ ಮೇಲೆ ಅವರ ಆಡಳಿತ ನಿರ್ದಯೆಯಿಂದ ಬುಲ್ಡೋಜರ್ ಹರಿಸುತ್ತಿದೆ. ಈ ಮಾತಿಗೆ ಖರ್ಗೋನ್ ಪ್ರಕರಣ ಇತ್ತೀಚಿನ ನಿದರ್ಶನ.

ಈ ಹಿಂದಿನ ತಮ್ಮ ಆಡಳಿತಾವಧಿಗಳಲ್ಲಿ ಅವರ ಆಡಳಿತ ವೈಖರಿ ಕೋಮು ಸಾಮರಸ್ಯವನ್ನು ಕದಡಿರಲಿಲ್ಲ. ಬದಲಾಗಿ ಮುಸಲ್ಮಾನರೂ ಈ ಬಿಜೆಪಿ ಮುಖ್ಯಮಂತ್ರಿಯನ್ನು ಇಷ್ಟಪಡುತ್ತಿದ್ದರು ಮತ್ತು ಅವರ ಪರವಾಗಿ ಮತ ಚಲಾಯಿಸುತ್ತಿದ್ದುದೂ ಉಂಟು. ಅದೊಂದು ಕಾಲವಿತ್ತು. ಮುಖ್ಯಮಂತ್ರಿ ಶಿವರಾಜ್ ಸರ್ಕಾರಿ ನಿವಾಸದಲ್ಲಿ ಕ್ರಿಸ್ಮಸ್ ಆಚರಿಸಲಾಗುತ್ತಿತ್ತು. ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪಕ್ಷದ ಏಕೈಕ ಮಹಿಳಾ ಮುಸಲ್ಮಾನ ಅಭ್ಯರ್ಥಿ ಫಾತಿಮಾ ಸಿದ್ದೀಖಿ ನಾಮಪತ್ರ ಸಲ್ಲಿಸಲು ತೆರಳಿದಾಗ ಖುದ್ದು ಮುಖ್ಯಮಂತ್ರಿಯೇ ಆಕೆಯ ಜೊತೆಗೆ ತೆರಳಿದ್ದರು.

ಮಧ್ಯಪ್ರದೇಶ ವಿಧಾನಸಭಾ ಚುನಾವಣೆ ಕೇವಲ ಒಂದೂವರೆ ವರ್ಷ ದೂರದಲ್ಲಿದೆ. ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ಮೂಲಕ ತಮ್ಮ ಕುರ್ಚಿಯನ್ನೂ ಭದ್ರಪಡಿಸಿಕೊಳ್ಳಬೇಕಿದೆ ಶಿವರಾಜಸಿಂಗ್. ಉತ್ತರಪ್ರದೇಶದಲ್ಲಿ ಯೋಗಿಯವರ ಕಟ್ಟರ್ ಹಿಂದುತ್ವ ಫಲ ನೀಡಿದೆ ಎಂಬುದು ಅವರ ಗಟ್ಟಿ ನಂಬಿಕೆ. ಅದೇ ವರ್ಚಸ್ಸನ್ನು ಆಲಿಂಗಿಸಿ ಧರಿಸಿದ್ದಾರೆ. ಬುಲ್ಡೋಜರ್ ರೂಪಕವನ್ನು ಯೋಗಿಯವರಿಂದ ಎರವಲು ಪಡೆದಿದ್ದಾರೆ.

ಜ್ಯೋತಿರಾದಿತ್ಯ ಸಿಂಧ್ಯ ಅವರಂತಹ ಕಾಂಗ್ರೆಸ್ಸಿಗರ ನೆರವಿನಿಂದಲೇ ಕಾಂಗ್ರೆಸ್ ಸರ್ಕಾರವನ್ನು ಕೆಡವಿ ಪುನಃ ಬಿಜೆಪಿಯನ್ನು ಅಧಿಕಾರಕ್ಕೆ ತಂದರು ಅಮಿತ್ ಶಾ. 2018ರಲ್ಲಿ ಸೋತ ಶಿವರಾಜ್ ಅವರಿಗೆ
ಮುಖ್ಯಮಂತ್ರಿಯಾಗಿ ಮತ್ತೊಂದು ಅವಕಾಶ ಸಿಕ್ಕಿತ್ತು. ಒಂದು ಕಾಲಕ್ಕೆ ನರೇಂದ್ರ ಮೋದಿ ಅವರಿಗೆ ಪೈಪೋಟಿ ಒಡ್ಡಿದ್ದ ಕಾರಣಕ್ಕೆ ಶಾ-ಮೋದಿ ಅವರ ಸರ್ವಶಕ್ತ ಜೋಡಿ ಶಿವರಾಜರನ್ನು ದೂರವೇ ಇರಿಸಿದೆ. 2023ರ ಡಿಸೆಂಬರ್ ಚುನಾವಣೆಯಲ್ಲಿ ತಮ್ಮ ಅಧಿಕಾರವನ್ನು ಕಳೆದುಕೊಳ್ಳಲು ಒಲ್ಲರು ಶಿವರಾಜ್. ಕಳೆದ ಮಾರ್ಚ್ 23ರಂದು ಎರಡು ವರ್ಷಗಳ ಆಡಳಿತಾವಧಿ ಪೂರೈಸಿದರು. ಬೆಂಬಲಿಗರು ಅವರನ್ನು ಬುಲ್ಡೋಜರ್ ಮಾಮಾ ಎಂದು ಕರೆದು ಸನ್ಮಾನಿಸಿದರು. ಈ ಬಿರುದಿನ ಭಿತ್ತಿಪತ್ರಗಳು ರಾಜ್ಯದ ತುಂಬೆಲ್ಲ ರಾರಾಜಿಸಿದವು.

ರಾಮೇಶ್ವರ ಶರ್ಮಾ ಎಂಬ ಬಿಜೆಪಿ ಶಾಸಕರೊಬ್ಬರು ತಮ್ಮ ಸರ್ಕಾರಿ ಬಂಗಲೆಯ ಮುಂದೆ ಸಾಲುಸಾಲಾಗಿ ಬುಲ್ಡೋಜರುಗಳನ್ನು ನಿಲ್ಲಿಸಿದರು. ನಮ್ಮ ಹೆಣ್ಣುಮಕ್ಕಳ ಮೇಲೆ ಕಣ್ಣು ಹಾಕುವವರನ್ನು ಹೊಸಕಿ ಹಾಕುವುದು ಮಾಮಾನ ಬುಲ್ಡೋಜರ್ ಎಂಬ ಅರ್ಥದ ದೊಡ್ಡ ಬಿತ್ತಿಪತ್ರವನ್ನು ಬರೆಯಿಸಿ ನಿಲ್ಲಿಸಿದರು.

ಈ ವಿದ್ಯಮಾನಕ್ಕೆ ತುಸು ಮುನ್ನ ಶಿವಪುರ, ಸಿಯೋನಿ ಹಾಗೂ ಶಾದೋಲ್ ಜಿಲ್ಲಾಧಿಕಾರಿಗಳು ತಮ್ಮ ಜಿಲ್ಲೆಗಳ ಮೂವರು ಅತ್ಯಾಚಾರ ಆರೋಪಿಗಳ ಮನೆಗಳ ಮೇಲೆ ಬುಲ್ಡೋಜರ್ ಹರಿಸಿ ಕೆಡವಿದ್ದರು.

ತಮ್ಮನ್ನು ಬುಲ್ಡೋಜರ್ ಮಾಮಾ ಎಂದು ಕರೆದ ಶರ್ಮಾ ಅವರಿಗೆ ಧನ್ಯವಾದ ಹೇಳಿದರು ಶಿವರಾಜ್. ’ಎಲ್ಲ ಪಾತಕಿಗಳು ಕೊಚ್ಚಿ ಹೋಗುವತನಕ ನಿಲ್ಲದು ಮಾಮಾನ ಬುಲ್ಡೋಜರ್. ಸಮಾಜವಿರೋಧಿ ಶಕ್ತಿಗಳನ್ನು ಸುಮ್ಮನೆ ಬಿಡುವುದಿಲ್ಲ ನಾವು’ ಎಂಬುದಾಗಿ ಟ್ವೀಟ್ ಮಾಡಿದರು.

ಇತ್ತೀಚೆಗೆ ರಾಮನವಮಿ ಮೆರವಣಿಗೆಯ ಮೇಲೆ ಕಲ್ಲು ತೂರಿದ ಅಲ್ಪಸಂಖ್ಯಾತ ಆಪಾದಿತರ ಅಂಗಡಿಗಳು- ಮನೆಗಳ ಮೇಲೆ ಬುಲ್ಡೋಜರುಗಳನ್ನು ಹರಿಸಿ ಕೆಡವಿಸಿದ್ದಾರೆ. ಈ ಮನೆಗಳಲ್ಲಿ ವಾಸವಿದ್ದವರೇ ಕಲ್ಲು ತೂರಿದ ನಿಜ ಅಪರಾಧಿಗಳೆಂಬುದು ಇನ್ನು ಸಾಬೀತಾಗಿಲ್ಲ. ಕಾಯಿದೆ ಕಾನೂನುಗಳನ್ನು ಎತ್ತಿ ಹಿಡಿದು ಆಡಳಿತ ಮಾಡಬೇಕಿರುವ ಸರ್ಕಾರವೇ ಕಾನೂನು ಪ್ರಕ್ರಿಯೆಯನ್ನು ಗಾಳಿಗೆ ತೂರಿ ನ್ಯಾಯಾಂಗದ ಪಾತ್ರವನ್ನೂ ತಾನೇ ವಹಿಸಿರುವುದು ಸಂವಿಧಾನಬಾಹಿರ ನಡೆ. ಕಾನೂನಿನ ಆಡಳಿತಕ್ಕೆ ಮಾರಕವೇ ವಿನಾ ತಾರಕ ಅಲ್ಲ.

ಮೂರನೆಯ ದರ್ಜೆಯ ಪ್ರಜೆಗಳಂತೆ ಬಹುಸಂಖ್ಯಾತರಿಗೆ ಅಡಿಯಾಳುಗಳಾಗಿ ಬಾಳದೆ ಸಮಾನರೆಂದು ತಲೆಯೆತ್ತಿದರೆ ನಿಮ್ಮ ನೆರಳು, ಬದುಕು-ಬಾಳುವೆ, ಅನ್ನದ ದಾರಿಗಳನ್ನು ಹಾಳುಗೆಡವುತ್ತೇವೆ ಎಂಬ ನಿಚ್ಚಳ ಸಂದೇಶವನ್ನು ಅಲ್ಪಸಂಖ್ಯಾತರಿಗೆ ದಿನನಿತ್ಯ ಹತ್ತು ಹಲವು ಬಗೆಗಳಲ್ಲಿ ರವಾನಿಸಲಾಗುತ್ತಿದೆ.

ಅಲ್ಪಸಂಖ್ಯಾತರ ನಡೆ ನುಡಿ ಉಡುಪು, ಉಣಿಸು ತಿನಿಸು, ಆರಾಧನೆ ಎಲ್ಲವನ್ನೂ ಖಳ-ಖೂಳಗೊಳಿಸಿ ಮುಸಲ್ಮಾನರ ಜನಾಂಗೀಯ ಹತ್ಯೆಯತ್ತ ಹೆಜ್ಜೆಯಿಟ್ಟಿದೆ ಭಾರತದ ರಾಜ್ಯಾಡಳಿತ ಕ್ರಮ. ನರೇಂದ್ರ ಮೋದಿ-ಅಮಿತ್ ಶಾ- ಸಂಘಪರಿವಾರ ಈ ಕ್ರಮದ ರೂವಾರಿಗಳು.

ವಾಸ್ತವವಾಗಿ ಬುಲ್ಡೋಜರುಗಳು ಹರಿದು ಕದಲಿರುವುದು ಭಾರತದ ಬಹುತ್ವದ ಅಡಿಪಾಯವೇ ವಿನಾ ಅಲ್ಪಸಂಖ್ಯಾತರ ಮನೆ ಮನಗಳು ಮಾತ್ರವೇ ಅಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಬಹುಜನ ಭಾರತ; ಪ್ರಾಚೀನ ಕಲಾಕೃತಿಗಳು-ಕೊಳ್ಳೆಯೇಕೆ ನಿಂತಿಲ್ಲ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...