Homeಅಂಕಣಗಳುಬಹುಜನ ಭಾರತ; ಬಹುತ್ವದ ಮೇಲೆ ಬುಲ್ಡೋಜರ್ ಹರಿಸಿರುವ ಬಾಬಾ-ಮಾಮಾಗಳು

ಬಹುಜನ ಭಾರತ; ಬಹುತ್ವದ ಮೇಲೆ ಬುಲ್ಡೋಜರ್ ಹರಿಸಿರುವ ಬಾಬಾ-ಮಾಮಾಗಳು

- Advertisement -
- Advertisement -

ದೇಶದ ಅತಿದೊಡ್ಡ ರಾಜ್ಯವಾದ ಉತ್ತರಪ್ರದೇಶದ ಅಧಿಕಾರ ಸೂತ್ರವನ್ನು ಇತ್ತೀಚೆಗೆ ಎರಡನೆಯ ಬಾರಿಗೆ ಹಿಡಿದರು ಯೋಗಿ ಆದಿತ್ಯನಾಥ. ತುಸು ಮುನ್ನ ನಡೆದ ಚುನಾವಣಾ ಪ್ರಚಾರದಲ್ಲಿ ಆದಿತ್ಯನಾಥರನ್ನು ಬುಲ್ಡೋಜರ್ ಬಾಬಾ ಎಂದು ಮೂದಲಿಸಿತ್ತು ಸಮಾಜವಾದಿ ಪಾರ್ಟಿ. ಈ ಮೂದಲಿಕೆಯನ್ನೇ ತನ್ನ ಅನುಕೂಲಕ್ಕೆ ತಿರುಗಿಸಿಕೊಂಡಿತು ಬಿಜೆಪಿ. ಪಾತಕಿಗಳ ಅಕ್ರಮ ಆಸ್ತಿಪಾಸ್ತಿಗಳ ಮೇಲೆ ಬುಲ್ಡೋಜರ್ ಚಲಾಯಿಸುವವರು ಎಂದು ಯೋಗಿಯನ್ನು ಬಣ್ಣಿಸಿ ಪ್ರಚಾರ ಮಾಡಿತು.

ಅವರ ಕೋಮುವಾದಿ ಮುಸ್ಲಿಮ್ ದ್ವೇಷೀ ಧ್ರುವೀಕರಣ ಆಡಳಿತ ವೈಖರಿಯ ಅನುಕರಣೆಗೆ ಇಳಿದಿದ್ದಾರೆ ಅವರದೇ ಪಕ್ಷದ ಹಲವು ಮುಖ್ಯಮಂತ್ರಿಗಳು. ಈ ಪೈಕಿ ಮಧ್ಯಪ್ರದೇಶದ ಶಿವರಾಜಸಿಂಗ್ ಚೌಹಾಣ್ ಪ್ರಮುಖರು.

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣಕ್ಕೆಂದು ದೇಣಿಗೆ ಸಂಗ್ರಹಿಸಲು ಉಜ್ಜಯಿನಿ ಮತ್ತು ಇಂದೋರಿನ ರ್‍ಯಾಲಿಗಳ ಮೇಲೆ ಮುಸಲ್ಮಾನ ಬಹುಳ ಪ್ರದೇಶಗಳಲ್ಲಿ ಕಲ್ಲು ತೂರಾಟ ನಡೆದಿತ್ತು. ಆನಂತರ, ಕಲ್ಲು ತೂರುವವರನ್ನು ಶಿಕ್ಷಿಸುವುದೇ ಅಲ್ಲದೆ ಅವರಿಂದ ನಷ್ಟ ಪರಿಹಾರವನ್ನೂ ವಸೂಲು ಮಾಡುವ ಉತ್ತರಪ್ರದೇಶ ಮಾದರಿಯ ಕಾಯಿದೆಯನ್ನು ಕಳೆದ ವರ್ಷ ಜಾರಿಗೆ ತರಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ ದೀಪಾವಳಿಯಂದು ಉತ್ತರಪ್ರದೇಶದ ಯೋಗಿ ಸರ್ಕಾರ ಆಯೋಧ್ಯೆಯ ಸರಯೂ ನದೀ ತೀರದಲ್ಲಿ ಲಕ್ಷ ಲಕ್ಷ ದೀಪ ಬೆಳಗಿಸಿ ವಿಶ್ವದಾಖಲೆ ಸ್ಥಾಪಿಸಿತು. ಶಿವರಾಜಸಿಂಗ್ ಅವರು ತಮ್ಮ ರಾಜ್ಯದ ಉಜ್ಜಯಿನಿಯ ಶಿಪ್ರಾ ನದೀ ತೀರದಲ್ಲಿ ಇಂತಹುದೇ ಭವ್ಯ ದೀಪೋತ್ಸವವನ್ನು ನಡೆಸಿದರು. ತಾವು ಖುದ್ದು ಹಾಜರಿದ್ದರು.

ಆದಿತ್ಯನಾಥ್ ಸರ್ಕಾರ ಲವ್ ಜಿಹಾದ್ ಕಾಯಿದೆ ಎಂದೇ ಕರೆಯಲಾದ ಮತಾಂತರ ನಿಷೇಧ ಕಾಯಿದೆ ಜಾರಿಗೆ ತಂದಿತು. ಮಧ್ಯಪ್ರದೇಶ ಅದೇ ಹಾದಿಯಲ್ಲಿ ನಡೆಯಿತು. ಕರ್ನಾಟಕದ ಬಿಜೆಪಿ ಸರ್ಕಾರದ ದಿಕ್ಕು ದೆಸೆಗಳಲ್ಲೂ ಹೆಚ್ಚು ವ್ಯತ್ಯಾಸ ಇಲ್ಲ.

ಆದಿತ್ಯನಾಥ್ ’ಬುಲ್ಡೋಜರ್ ಬಾಬಾ’ ಎಂದು ಕರೆಯಿಸಿಕೊಂಡರೆ, ಶಿವರಾಜ್ ಬುಲ್ಡೋಜರ್ ಮಾಮಾ ಎಂಬ ಅಭಿದಾನ ತಮಗೆ ಗಟ್ಟಿಯಾಗಿ ಅಂಟಲೆಂದು ಬಯಸಿದ್ದಾರೆ. ಮುಸಲ್ಮಾನರ ’ಅಕ್ರಮ’ ಮನೆಗಳು ಮತ್ತು ಅಂಗಡಿಗಳ ಮೇಲೆ ಅವರ ಆಡಳಿತ ನಿರ್ದಯೆಯಿಂದ ಬುಲ್ಡೋಜರ್ ಹರಿಸುತ್ತಿದೆ. ಈ ಮಾತಿಗೆ ಖರ್ಗೋನ್ ಪ್ರಕರಣ ಇತ್ತೀಚಿನ ನಿದರ್ಶನ.

ಈ ಹಿಂದಿನ ತಮ್ಮ ಆಡಳಿತಾವಧಿಗಳಲ್ಲಿ ಅವರ ಆಡಳಿತ ವೈಖರಿ ಕೋಮು ಸಾಮರಸ್ಯವನ್ನು ಕದಡಿರಲಿಲ್ಲ. ಬದಲಾಗಿ ಮುಸಲ್ಮಾನರೂ ಈ ಬಿಜೆಪಿ ಮುಖ್ಯಮಂತ್ರಿಯನ್ನು ಇಷ್ಟಪಡುತ್ತಿದ್ದರು ಮತ್ತು ಅವರ ಪರವಾಗಿ ಮತ ಚಲಾಯಿಸುತ್ತಿದ್ದುದೂ ಉಂಟು. ಅದೊಂದು ಕಾಲವಿತ್ತು. ಮುಖ್ಯಮಂತ್ರಿ ಶಿವರಾಜ್ ಸರ್ಕಾರಿ ನಿವಾಸದಲ್ಲಿ ಕ್ರಿಸ್ಮಸ್ ಆಚರಿಸಲಾಗುತ್ತಿತ್ತು. ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪಕ್ಷದ ಏಕೈಕ ಮಹಿಳಾ ಮುಸಲ್ಮಾನ ಅಭ್ಯರ್ಥಿ ಫಾತಿಮಾ ಸಿದ್ದೀಖಿ ನಾಮಪತ್ರ ಸಲ್ಲಿಸಲು ತೆರಳಿದಾಗ ಖುದ್ದು ಮುಖ್ಯಮಂತ್ರಿಯೇ ಆಕೆಯ ಜೊತೆಗೆ ತೆರಳಿದ್ದರು.

ಮಧ್ಯಪ್ರದೇಶ ವಿಧಾನಸಭಾ ಚುನಾವಣೆ ಕೇವಲ ಒಂದೂವರೆ ವರ್ಷ ದೂರದಲ್ಲಿದೆ. ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ಮೂಲಕ ತಮ್ಮ ಕುರ್ಚಿಯನ್ನೂ ಭದ್ರಪಡಿಸಿಕೊಳ್ಳಬೇಕಿದೆ ಶಿವರಾಜಸಿಂಗ್. ಉತ್ತರಪ್ರದೇಶದಲ್ಲಿ ಯೋಗಿಯವರ ಕಟ್ಟರ್ ಹಿಂದುತ್ವ ಫಲ ನೀಡಿದೆ ಎಂಬುದು ಅವರ ಗಟ್ಟಿ ನಂಬಿಕೆ. ಅದೇ ವರ್ಚಸ್ಸನ್ನು ಆಲಿಂಗಿಸಿ ಧರಿಸಿದ್ದಾರೆ. ಬುಲ್ಡೋಜರ್ ರೂಪಕವನ್ನು ಯೋಗಿಯವರಿಂದ ಎರವಲು ಪಡೆದಿದ್ದಾರೆ.

ಜ್ಯೋತಿರಾದಿತ್ಯ ಸಿಂಧ್ಯ ಅವರಂತಹ ಕಾಂಗ್ರೆಸ್ಸಿಗರ ನೆರವಿನಿಂದಲೇ ಕಾಂಗ್ರೆಸ್ ಸರ್ಕಾರವನ್ನು ಕೆಡವಿ ಪುನಃ ಬಿಜೆಪಿಯನ್ನು ಅಧಿಕಾರಕ್ಕೆ ತಂದರು ಅಮಿತ್ ಶಾ. 2018ರಲ್ಲಿ ಸೋತ ಶಿವರಾಜ್ ಅವರಿಗೆ
ಮುಖ್ಯಮಂತ್ರಿಯಾಗಿ ಮತ್ತೊಂದು ಅವಕಾಶ ಸಿಕ್ಕಿತ್ತು. ಒಂದು ಕಾಲಕ್ಕೆ ನರೇಂದ್ರ ಮೋದಿ ಅವರಿಗೆ ಪೈಪೋಟಿ ಒಡ್ಡಿದ್ದ ಕಾರಣಕ್ಕೆ ಶಾ-ಮೋದಿ ಅವರ ಸರ್ವಶಕ್ತ ಜೋಡಿ ಶಿವರಾಜರನ್ನು ದೂರವೇ ಇರಿಸಿದೆ. 2023ರ ಡಿಸೆಂಬರ್ ಚುನಾವಣೆಯಲ್ಲಿ ತಮ್ಮ ಅಧಿಕಾರವನ್ನು ಕಳೆದುಕೊಳ್ಳಲು ಒಲ್ಲರು ಶಿವರಾಜ್. ಕಳೆದ ಮಾರ್ಚ್ 23ರಂದು ಎರಡು ವರ್ಷಗಳ ಆಡಳಿತಾವಧಿ ಪೂರೈಸಿದರು. ಬೆಂಬಲಿಗರು ಅವರನ್ನು ಬುಲ್ಡೋಜರ್ ಮಾಮಾ ಎಂದು ಕರೆದು ಸನ್ಮಾನಿಸಿದರು. ಈ ಬಿರುದಿನ ಭಿತ್ತಿಪತ್ರಗಳು ರಾಜ್ಯದ ತುಂಬೆಲ್ಲ ರಾರಾಜಿಸಿದವು.

ರಾಮೇಶ್ವರ ಶರ್ಮಾ ಎಂಬ ಬಿಜೆಪಿ ಶಾಸಕರೊಬ್ಬರು ತಮ್ಮ ಸರ್ಕಾರಿ ಬಂಗಲೆಯ ಮುಂದೆ ಸಾಲುಸಾಲಾಗಿ ಬುಲ್ಡೋಜರುಗಳನ್ನು ನಿಲ್ಲಿಸಿದರು. ನಮ್ಮ ಹೆಣ್ಣುಮಕ್ಕಳ ಮೇಲೆ ಕಣ್ಣು ಹಾಕುವವರನ್ನು ಹೊಸಕಿ ಹಾಕುವುದು ಮಾಮಾನ ಬುಲ್ಡೋಜರ್ ಎಂಬ ಅರ್ಥದ ದೊಡ್ಡ ಬಿತ್ತಿಪತ್ರವನ್ನು ಬರೆಯಿಸಿ ನಿಲ್ಲಿಸಿದರು.

ಈ ವಿದ್ಯಮಾನಕ್ಕೆ ತುಸು ಮುನ್ನ ಶಿವಪುರ, ಸಿಯೋನಿ ಹಾಗೂ ಶಾದೋಲ್ ಜಿಲ್ಲಾಧಿಕಾರಿಗಳು ತಮ್ಮ ಜಿಲ್ಲೆಗಳ ಮೂವರು ಅತ್ಯಾಚಾರ ಆರೋಪಿಗಳ ಮನೆಗಳ ಮೇಲೆ ಬುಲ್ಡೋಜರ್ ಹರಿಸಿ ಕೆಡವಿದ್ದರು.

ತಮ್ಮನ್ನು ಬುಲ್ಡೋಜರ್ ಮಾಮಾ ಎಂದು ಕರೆದ ಶರ್ಮಾ ಅವರಿಗೆ ಧನ್ಯವಾದ ಹೇಳಿದರು ಶಿವರಾಜ್. ’ಎಲ್ಲ ಪಾತಕಿಗಳು ಕೊಚ್ಚಿ ಹೋಗುವತನಕ ನಿಲ್ಲದು ಮಾಮಾನ ಬುಲ್ಡೋಜರ್. ಸಮಾಜವಿರೋಧಿ ಶಕ್ತಿಗಳನ್ನು ಸುಮ್ಮನೆ ಬಿಡುವುದಿಲ್ಲ ನಾವು’ ಎಂಬುದಾಗಿ ಟ್ವೀಟ್ ಮಾಡಿದರು.

ಇತ್ತೀಚೆಗೆ ರಾಮನವಮಿ ಮೆರವಣಿಗೆಯ ಮೇಲೆ ಕಲ್ಲು ತೂರಿದ ಅಲ್ಪಸಂಖ್ಯಾತ ಆಪಾದಿತರ ಅಂಗಡಿಗಳು- ಮನೆಗಳ ಮೇಲೆ ಬುಲ್ಡೋಜರುಗಳನ್ನು ಹರಿಸಿ ಕೆಡವಿಸಿದ್ದಾರೆ. ಈ ಮನೆಗಳಲ್ಲಿ ವಾಸವಿದ್ದವರೇ ಕಲ್ಲು ತೂರಿದ ನಿಜ ಅಪರಾಧಿಗಳೆಂಬುದು ಇನ್ನು ಸಾಬೀತಾಗಿಲ್ಲ. ಕಾಯಿದೆ ಕಾನೂನುಗಳನ್ನು ಎತ್ತಿ ಹಿಡಿದು ಆಡಳಿತ ಮಾಡಬೇಕಿರುವ ಸರ್ಕಾರವೇ ಕಾನೂನು ಪ್ರಕ್ರಿಯೆಯನ್ನು ಗಾಳಿಗೆ ತೂರಿ ನ್ಯಾಯಾಂಗದ ಪಾತ್ರವನ್ನೂ ತಾನೇ ವಹಿಸಿರುವುದು ಸಂವಿಧಾನಬಾಹಿರ ನಡೆ. ಕಾನೂನಿನ ಆಡಳಿತಕ್ಕೆ ಮಾರಕವೇ ವಿನಾ ತಾರಕ ಅಲ್ಲ.

ಮೂರನೆಯ ದರ್ಜೆಯ ಪ್ರಜೆಗಳಂತೆ ಬಹುಸಂಖ್ಯಾತರಿಗೆ ಅಡಿಯಾಳುಗಳಾಗಿ ಬಾಳದೆ ಸಮಾನರೆಂದು ತಲೆಯೆತ್ತಿದರೆ ನಿಮ್ಮ ನೆರಳು, ಬದುಕು-ಬಾಳುವೆ, ಅನ್ನದ ದಾರಿಗಳನ್ನು ಹಾಳುಗೆಡವುತ್ತೇವೆ ಎಂಬ ನಿಚ್ಚಳ ಸಂದೇಶವನ್ನು ಅಲ್ಪಸಂಖ್ಯಾತರಿಗೆ ದಿನನಿತ್ಯ ಹತ್ತು ಹಲವು ಬಗೆಗಳಲ್ಲಿ ರವಾನಿಸಲಾಗುತ್ತಿದೆ.

ಅಲ್ಪಸಂಖ್ಯಾತರ ನಡೆ ನುಡಿ ಉಡುಪು, ಉಣಿಸು ತಿನಿಸು, ಆರಾಧನೆ ಎಲ್ಲವನ್ನೂ ಖಳ-ಖೂಳಗೊಳಿಸಿ ಮುಸಲ್ಮಾನರ ಜನಾಂಗೀಯ ಹತ್ಯೆಯತ್ತ ಹೆಜ್ಜೆಯಿಟ್ಟಿದೆ ಭಾರತದ ರಾಜ್ಯಾಡಳಿತ ಕ್ರಮ. ನರೇಂದ್ರ ಮೋದಿ-ಅಮಿತ್ ಶಾ- ಸಂಘಪರಿವಾರ ಈ ಕ್ರಮದ ರೂವಾರಿಗಳು.

ವಾಸ್ತವವಾಗಿ ಬುಲ್ಡೋಜರುಗಳು ಹರಿದು ಕದಲಿರುವುದು ಭಾರತದ ಬಹುತ್ವದ ಅಡಿಪಾಯವೇ ವಿನಾ ಅಲ್ಪಸಂಖ್ಯಾತರ ಮನೆ ಮನಗಳು ಮಾತ್ರವೇ ಅಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಬಹುಜನ ಭಾರತ; ಪ್ರಾಚೀನ ಕಲಾಕೃತಿಗಳು-ಕೊಳ್ಳೆಯೇಕೆ ನಿಂತಿಲ್ಲ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....