Homeಬಹುಜನ ಭಾರತಬಹುಜನ ಭಾರತ: ಬಾಬಾಸಾಹೇಬರು ಮನುಸ್ಮೃತಿಯನ್ನು ಸುಟ್ಟಿದ್ದು ಸುಳ್ಳೇನು?

ಬಹುಜನ ಭಾರತ: ಬಾಬಾಸಾಹೇಬರು ಮನುಸ್ಮೃತಿಯನ್ನು ಸುಟ್ಟಿದ್ದು ಸುಳ್ಳೇನು?

ಅಸ್ಪೃಶ್ಯತೆಯು ಮೊದಲು ಅಸ್ಪೃಶ್ಯರನ್ನು ಸರ್ವನಾಶ ಮಾಡಿದೆ. ನಂತರ ಹಿಂದೂ ಸವರ್ಣೀಯರನ್ನು ಸರ್ವನಾಶ ಮಾಡಿದೆ. ಅಂತಿಮವಾಗಿ ಅದು ಇಡೀ ದೇಶವನ್ನೇ ನಾಶ ಮಾಡಿದೆ...

- Advertisement -
- Advertisement -

ಚವಡರ್ ಕೆರೆಯ ನೀರನ್ನು ಮುಟ್ಟುವ ಮಹಾಡ್ ಸತ್ಯಾಗ್ರಹದ ಸಂದರ್ಭದಲ್ಲಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸುಟ್ಟದ್ದು ಇತಿಹಾಸದ ಅಳಿಸಲಾಗದ ಘಟನೆ.

ಶೂದ್ರ-ಚಾಂಡಾಲ-ಮಹಿಳೆಯರನ್ನು ಅಮಾನವೀಯವಾಗಿ ಕಂಡು ಅವರ ಮೇಲೆ ಅಮಾನುಷ ಕಟ್ಟುಕಟ್ಟಳೆಗಳ ವಿಧಿಸಿರುವ ಕೃತಿ ಮನುಸ್ಮೃತಿ. ಕೌನ್ ಬನೇಗಾ ಕರೋಡಪತಿ ಎಂಬ ಶೀರ್ಷಿಕೆಯ ಜನಪ್ರಿಯ ಟಿವಿ ಕಾರ್ಯಕ್ರಮವೊಂದರಲ್ಲಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು 1927ರ ಡಿಸೆಂಬರ್ 25ರಂದು ಸುಟ್ಟು ಹಾಕಿದ ಗ್ರಂಥ ಯಾವುದು ಎಂಬ ಪ್ರಶ್ನೆಯನ್ನು ಕೆಲ ದಿನಗಳ ಹಿಂದೆ ಕೇಳಲಾಗುತ್ತದೆ. ಈ ಪ್ರಶ್ನೆ ಕೇಳುವ ಮೂಲಕ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಲಾಗಿದೆ ಎಂದು ಕಾರ್ಯಕ್ರಮದ ನಿರೂಪಕ ಅಮಿತಾಭ್ ಬಚ್ಚನ್ ಅವರ ಮೇಲೆ ಎಫ್.ಐ.ಆರ್. ದಾಖಲಿಸಲಾಗಿದೆ.

ಹಾಗಿದ್ದರೆ ನೂರಾರು ವರ್ಷಗಳಿಂದ ಈ ದೇಶದ ತಳಸಮುದಾಯಗಳ ಕೋಟ್ಯಂತರ ಜನರನ್ನು ಪಶುಪ್ರಾಣಿಗಳಿಗಿಂತಲೂ ಕಡೆಯಾಗಿ ನಡೆಸಿಕೊಂಡು ಬರಲಾಗಿದೆ. ತಲೆಮಾರುಗಳಿಂದ ಅವರಲ್ಲಿ ಹೆಪ್ಪುಗಟ್ಟಿರುವ ನೋವು ಅವಮಾನದ ವಿಷಯವೇನು, ಅವುಗಳ ಕುರಿತು ಯಾರ ಮೇಲೆ ಎಫ್.ಐ.ಆರ್. ಹಾಕಬೇಕು ಎಂಬ ಪ್ರಶ್ನೆ ಕೇಳಿದರೆ ಉತ್ತರ ಹೇಳುವವರು ಯಾರು? ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸುಟ್ಟದ್ದು ವಾಸ್ತವ ಅಲ್ಲವೇ?

ಇದನ್ನೂ ಓದಿ: ಮನುಸ್ಮೃತಿ ಸುಟ್ಟಿದ್ದು ಏಕೆಂದು ವಿವರಿಸಿದ ಅಮಿತಾಬ್ ಬಚ್ಚನ್ ವಿರುದ್ಧ FIR!

ಇತ್ತೀಚಿನ ವರ್ಷಗಳಲ್ಲಿ ಅಂಬೇಡ್ಕರ್ ಅವರನ್ನು ಹಿಂದು ಸಮಾಜದ ವೈದ್ಯರೆಂದೂ, ಸುಧಾರಕರೆಂದೂ ಬಣ್ಣಿಸುವ ಕೃತಿಗಳನ್ನು ಹೊರತರಲಾಗಿದೆ. ‘ವಿದೇಶ ಸಂಚಾರದಲ್ಲೂ ಹಿಂದುತ್ವದ ತಿರುಳು ಮೌಲ್ಯಗಳಿಗೆ ಬದ್ಧರಾಗಿಯೇ ಉಳಿದ ಅವರು ಮದಿರೆ-ಮಾಂಸವನ್ನು ಸೇವಿಸಲಿಲ್ಲ, ಭಗವದ್ಗೀತೆಯನ್ನು ಅವರು ಒಪ್ಪಿಕೊಂಡಿದ್ದರು. ಮನುಸ್ಮೃತಿಯನ್ನು ಸುಟ್ಟರೂ ಆನಂತರ ಮೂಲ ತತ್ವಗಳಲ್ಲಿ ತಮ್ಮ ವಿಶ್ವಾಸವನ್ನು ಪ್ರಕಟಿಸಿದರು’ ಎಂದೆಲ್ಲ ಹೇಳಲಾಗಿದೆ.

2016ರಲ್ಲಿ ಅಂಬೇಡ್ಕರ್ ಅವರ 125ನೆಯ ಜಯಂತಿ ಸಂದರ್ಭದಲ್ಲಿ ಸಂವಿಧಾನ ಶಿಲ್ಪಿಯನ್ನು “ಅಖೈರು ಏಕೀಕರಣಕಾರ” (Ultimate Unifier) ಎಂದು ಹಾಡಿ ಹೊಗಳಿ, ‘ಆರ್ಗನೈಸರ್’ ಪತ್ರಿಕೆ ಹಲವು ಲೇಖನಗಳನ್ನು ಪ್ರಕಟಿಸುತ್ತದೆ. ‘ಅವರ ಲೋಕದೃಷ್ಟಿ ಮತ್ತು ಕ್ರಿಯೆಗಳು ಬ್ರಹ್ಮಸಮಾಜ, ಆರ್ಯಸಮಾಜ, ಪ್ರಾರ್ಥನಾ ಸಮಾಜವನ್ನು ಹೋಲುತ್ತಿದ್ದವು, ಶ್ರಮಿಕರ ಹಕ್ಕುಗಳನ್ನು ಬೆಂಬಲಿಸಿದವರು, ಬ್ರಾಹ್ಮಣ್ಯದ ವಿರೋಧಿಯೇ ವಿನಾ ಬ್ರಾಹ್ಮಣರ ವಿರೋಧಿಯಲ್ಲ, ಕಾಲಾತೀತ ನಾಯಕ’ ಎಂದೆಲ್ಲ ಈ ಲೇಖನಗಳಲ್ಲಿ ಅವರನ್ನು ಕೊಂಡಾಡಲಾಯಿತು.

ಹಿಂದೂ ಧರ್ಮದ ಜೀವವಿರೋಧದ ಅಂತರಾಳವನ್ನು ಮತ್ತು ಅದರ ಜಾತಿವ್ಯವಸ್ಥೆಯ ಕ್ರೌರ್ಯವನ್ನು ತಮ್ಮ ಕಡೆಯ ಉಸಿರಿನ ತನಕ ಜಾಲಾಡಿದರು ಬಾಬಾ ಸಾಹೇಬರು. ಬೆಕ್ಕುಗಳು ನಾಯಿಗಳು ಅಸ್ಪೃಶ್ಯರ ಎಂಜಲು ತಿನ್ನುತ್ತವೆ. ಮಕ್ಕಳ ಮಲವನ್ನೂ ತಿನ್ನುತ್ತವೆ. ಇದೇ ನಾಯಿ ಬೆಕ್ಕುಗಳು ಸ್ಪೃಶ್ಯರ ಮನೆಯನ್ನು ಪ್ರವೇಶಿಸಬಹುದು. ಹಾಗೆ ಪ್ರವೇಶಿಸಿದರೆ ಮೈಲಿಗೆಯಿಲ್ಲ. ಈ ಪ್ರಾಣಿಗಳನ್ನು ಸ್ಪೃಶ್ಯರು ಮುಟ್ಟುತ್ತಾರೆ, ಅಪ್ಪಿ ಮುದ್ದಾಡುತ್ತಾರೆ. ಅವು ಉಣ್ಣುವ ತಟ್ಟೆಗೆ ಬಾಯಿ ಹಾಕಿದರೂ ಅವರಿಗೆ ತಕರಾರಿಲ್ಲ. ಯಾವುದೋ ಚಾಕರಿಗೆಂದು ಮನೆಯ ಹೊರಗೆ ನಿಲ್ಲುವ ಅಸ್ಪೃಶ್ಯನನ್ನು ಕಂಡ ಸವರ್ಣೀಯ ಗದರುತ್ತಾನೆ- ದೂರ ನಿಲ್ಲು, ಮಗುವಿನ ಮಲವನ್ನು ಬಾಚಿ ಎಸೆಯುವ ಬೋಕಿ ಬಿಲ್ಲೆಯನ್ನು ಅಲ್ಲಿ ಇಡಲಾಗಿದೆ. ಅದನ್ನೂ ಮುಟ್ಟಿ ಮೈಲಿಗೆ ಮಾಡುತ್ತೀಯೇನು? ಎಂಬ ಹೃದಯವಿದ್ರಾವಕ ಸಾಲುಗಳನ್ನು ಬಾಬಾಸಾಹೇಬರು ಮೂಕನಾಯಕದ 1920ರ ಆಗಸ್ಟ್ ಸಂಚಿಕೆಯ ಸಂಪಾದಕೀಯದಲ್ಲಿ ಬರೆದಿದ್ದಾರೆ.

ಅಸ್ಪೃಶ್ಯತೆಯು ಮೊದಲು ಅಸ್ಪೃಶ್ಯರನ್ನು ಸರ್ವನಾಶ ಮಾಡಿದೆ. ನಂತರ ಹಿಂದೂ ಸವರ್ಣೀಯರನ್ನು ಸರ್ವನಾಶ ಮಾಡಿದೆ. ಅಂತಿಮವಾಗಿ ಅದು ಇಡೀ ದೇಶವನ್ನೇ ನಾಶ ಮಾಡಿದೆ… ಹಿಂದೂ ಧರ್ಮದಲ್ಲಿ ನಿಮ್ನ ವರ್ಗಗಳಿಗೆ ಗೌರವ, ಸಮಾನತೆ, ನ್ಯಾಯ ಸಿಗದೆ ಹೋದರೆ ಇವುಗಳು ಎಲ್ಲಿ ಸಿಗುತ್ತವೆಯೇ ಅಲ್ಲಿಗೆ ಅವರು ಹೋಗುವುದು ಹೇಗೆ ತಾನೆ ತಪ್ಪಾಗುತ್ತದೆ ಎಂಬ ಅಂಬೇಡ್ಕರ್ ಪ್ರಶ್ನೆಗೆ ಸಂಬಂಧಪಟ್ಟವರಿಂದ ಸಮಜಾಯಿಷಿ ಈಗಲೂ ದೊರೆತಿಲ್ಲ.

ಪ್ರಗತಿಪರ ಹಿಂದು ಸಂಹಿತೆ ವಿಧೇಯಕಗಳನ್ನು (Hindu Code Bill) ಬಲಪಂಥೀಯ ಒತ್ತಡದ ಕಾರಣ ವಿಳಂಬಗೊಳಿಸಲಾಗುತ್ತಿದೆ ಎಂದು ಪ್ರತಿಭಟಿಸಿ ಬಾಬಾ ಸಾಹೇಬರು 1951ರಲ್ಲಿ ನೆಹರೂ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡುತ್ತಾರೆ. ಬಲಪಂಥೀಯ ಶಕ್ತಿಗಳು ಮತ್ತು ಕಾಂಗ್ರೆಸ್ಸಿನ ಪ್ರಬಲ ವರ್ಗವೊಂದು ಈ ಸುಧಾರಣೆಗಳನ್ನು ವಿರೋಧಿಸಿರುತ್ತದೆ. ಸ್ವಾತಂತ್ರ್ಯೋತ್ತರ ಭಾರತದ 70 ವರ್ಷಗಳಲ್ಲಿ ಬಾಬಾ ಸಾಹೇಬರ ಕುರಿತು ಕಟ್ಟರ್‌ವಾದಿ ಬಲಪಂಥೀಯ ಶಕ್ತಿಗಳು ತಮ್ಮ ನಿಲುವನ್ನು ಹೇಗೆಲ್ಲ ಬದಲಿಸುತ್ತ ಬಂದಿದೆ ಎಂಬುದನ್ನು ಇತಿಹಾಸಕಾರ ರಾಮಚಂದ್ರ ಗುಹಾ ಪುರಾವೆ ಸಹಿತ ನಿಚ್ಚಳವಾಗಿ ದಾಖಲಿಸಿದ್ದಾರೆ.

ಒಂದೆಡೆ ಅಂಬೇಡ್ಕರ್ ವಿಚಾರಗಳನ್ನು ಕಡೆಗಣಿಸಿ ಮತ್ತೊಂದೆಡೆ ಅವರ ಹೆಸರನ್ನು ತಲೆ ಮೇಲೆ ಹೊತ್ತು ಮೆರೆಸುತ್ತಿದ್ದೇವೆಂಬ ಇಬ್ಬಗೆಯ ಆಚರಣೆಯ ಅರ್ಥವೇನು ಎಂಬುದನ್ನು ಕಂಡುಕೊಳ್ಳಬೇಕಿದೆ.


ಇದನ್ನೂ ಓದಿ: ಹಿಂದೂಗಳ ಕಣ್ಣಿಗೆ ದಲಿತರು ಮನುಷ್ಯರಂತೆ ಕಾಣುವುದೆಂದು? – ಡಿ.ಉಮಾಪತಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...