Homeಬಹುಜನ ಭಾರತಬಹುಜನ ಭಾರತ: ಬಾಬಾಸಾಹೇಬರು ಮನುಸ್ಮೃತಿಯನ್ನು ಸುಟ್ಟಿದ್ದು ಸುಳ್ಳೇನು?

ಬಹುಜನ ಭಾರತ: ಬಾಬಾಸಾಹೇಬರು ಮನುಸ್ಮೃತಿಯನ್ನು ಸುಟ್ಟಿದ್ದು ಸುಳ್ಳೇನು?

ಅಸ್ಪೃಶ್ಯತೆಯು ಮೊದಲು ಅಸ್ಪೃಶ್ಯರನ್ನು ಸರ್ವನಾಶ ಮಾಡಿದೆ. ನಂತರ ಹಿಂದೂ ಸವರ್ಣೀಯರನ್ನು ಸರ್ವನಾಶ ಮಾಡಿದೆ. ಅಂತಿಮವಾಗಿ ಅದು ಇಡೀ ದೇಶವನ್ನೇ ನಾಶ ಮಾಡಿದೆ...

- Advertisement -
- Advertisement -

ಚವಡರ್ ಕೆರೆಯ ನೀರನ್ನು ಮುಟ್ಟುವ ಮಹಾಡ್ ಸತ್ಯಾಗ್ರಹದ ಸಂದರ್ಭದಲ್ಲಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸುಟ್ಟದ್ದು ಇತಿಹಾಸದ ಅಳಿಸಲಾಗದ ಘಟನೆ.

ಶೂದ್ರ-ಚಾಂಡಾಲ-ಮಹಿಳೆಯರನ್ನು ಅಮಾನವೀಯವಾಗಿ ಕಂಡು ಅವರ ಮೇಲೆ ಅಮಾನುಷ ಕಟ್ಟುಕಟ್ಟಳೆಗಳ ವಿಧಿಸಿರುವ ಕೃತಿ ಮನುಸ್ಮೃತಿ. ಕೌನ್ ಬನೇಗಾ ಕರೋಡಪತಿ ಎಂಬ ಶೀರ್ಷಿಕೆಯ ಜನಪ್ರಿಯ ಟಿವಿ ಕಾರ್ಯಕ್ರಮವೊಂದರಲ್ಲಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು 1927ರ ಡಿಸೆಂಬರ್ 25ರಂದು ಸುಟ್ಟು ಹಾಕಿದ ಗ್ರಂಥ ಯಾವುದು ಎಂಬ ಪ್ರಶ್ನೆಯನ್ನು ಕೆಲ ದಿನಗಳ ಹಿಂದೆ ಕೇಳಲಾಗುತ್ತದೆ. ಈ ಪ್ರಶ್ನೆ ಕೇಳುವ ಮೂಲಕ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಲಾಗಿದೆ ಎಂದು ಕಾರ್ಯಕ್ರಮದ ನಿರೂಪಕ ಅಮಿತಾಭ್ ಬಚ್ಚನ್ ಅವರ ಮೇಲೆ ಎಫ್.ಐ.ಆರ್. ದಾಖಲಿಸಲಾಗಿದೆ.

ಹಾಗಿದ್ದರೆ ನೂರಾರು ವರ್ಷಗಳಿಂದ ಈ ದೇಶದ ತಳಸಮುದಾಯಗಳ ಕೋಟ್ಯಂತರ ಜನರನ್ನು ಪಶುಪ್ರಾಣಿಗಳಿಗಿಂತಲೂ ಕಡೆಯಾಗಿ ನಡೆಸಿಕೊಂಡು ಬರಲಾಗಿದೆ. ತಲೆಮಾರುಗಳಿಂದ ಅವರಲ್ಲಿ ಹೆಪ್ಪುಗಟ್ಟಿರುವ ನೋವು ಅವಮಾನದ ವಿಷಯವೇನು, ಅವುಗಳ ಕುರಿತು ಯಾರ ಮೇಲೆ ಎಫ್.ಐ.ಆರ್. ಹಾಕಬೇಕು ಎಂಬ ಪ್ರಶ್ನೆ ಕೇಳಿದರೆ ಉತ್ತರ ಹೇಳುವವರು ಯಾರು? ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸುಟ್ಟದ್ದು ವಾಸ್ತವ ಅಲ್ಲವೇ?

ಇದನ್ನೂ ಓದಿ: ಮನುಸ್ಮೃತಿ ಸುಟ್ಟಿದ್ದು ಏಕೆಂದು ವಿವರಿಸಿದ ಅಮಿತಾಬ್ ಬಚ್ಚನ್ ವಿರುದ್ಧ FIR!

ಇತ್ತೀಚಿನ ವರ್ಷಗಳಲ್ಲಿ ಅಂಬೇಡ್ಕರ್ ಅವರನ್ನು ಹಿಂದು ಸಮಾಜದ ವೈದ್ಯರೆಂದೂ, ಸುಧಾರಕರೆಂದೂ ಬಣ್ಣಿಸುವ ಕೃತಿಗಳನ್ನು ಹೊರತರಲಾಗಿದೆ. ‘ವಿದೇಶ ಸಂಚಾರದಲ್ಲೂ ಹಿಂದುತ್ವದ ತಿರುಳು ಮೌಲ್ಯಗಳಿಗೆ ಬದ್ಧರಾಗಿಯೇ ಉಳಿದ ಅವರು ಮದಿರೆ-ಮಾಂಸವನ್ನು ಸೇವಿಸಲಿಲ್ಲ, ಭಗವದ್ಗೀತೆಯನ್ನು ಅವರು ಒಪ್ಪಿಕೊಂಡಿದ್ದರು. ಮನುಸ್ಮೃತಿಯನ್ನು ಸುಟ್ಟರೂ ಆನಂತರ ಮೂಲ ತತ್ವಗಳಲ್ಲಿ ತಮ್ಮ ವಿಶ್ವಾಸವನ್ನು ಪ್ರಕಟಿಸಿದರು’ ಎಂದೆಲ್ಲ ಹೇಳಲಾಗಿದೆ.

2016ರಲ್ಲಿ ಅಂಬೇಡ್ಕರ್ ಅವರ 125ನೆಯ ಜಯಂತಿ ಸಂದರ್ಭದಲ್ಲಿ ಸಂವಿಧಾನ ಶಿಲ್ಪಿಯನ್ನು “ಅಖೈರು ಏಕೀಕರಣಕಾರ” (Ultimate Unifier) ಎಂದು ಹಾಡಿ ಹೊಗಳಿ, ‘ಆರ್ಗನೈಸರ್’ ಪತ್ರಿಕೆ ಹಲವು ಲೇಖನಗಳನ್ನು ಪ್ರಕಟಿಸುತ್ತದೆ. ‘ಅವರ ಲೋಕದೃಷ್ಟಿ ಮತ್ತು ಕ್ರಿಯೆಗಳು ಬ್ರಹ್ಮಸಮಾಜ, ಆರ್ಯಸಮಾಜ, ಪ್ರಾರ್ಥನಾ ಸಮಾಜವನ್ನು ಹೋಲುತ್ತಿದ್ದವು, ಶ್ರಮಿಕರ ಹಕ್ಕುಗಳನ್ನು ಬೆಂಬಲಿಸಿದವರು, ಬ್ರಾಹ್ಮಣ್ಯದ ವಿರೋಧಿಯೇ ವಿನಾ ಬ್ರಾಹ್ಮಣರ ವಿರೋಧಿಯಲ್ಲ, ಕಾಲಾತೀತ ನಾಯಕ’ ಎಂದೆಲ್ಲ ಈ ಲೇಖನಗಳಲ್ಲಿ ಅವರನ್ನು ಕೊಂಡಾಡಲಾಯಿತು.

ಹಿಂದೂ ಧರ್ಮದ ಜೀವವಿರೋಧದ ಅಂತರಾಳವನ್ನು ಮತ್ತು ಅದರ ಜಾತಿವ್ಯವಸ್ಥೆಯ ಕ್ರೌರ್ಯವನ್ನು ತಮ್ಮ ಕಡೆಯ ಉಸಿರಿನ ತನಕ ಜಾಲಾಡಿದರು ಬಾಬಾ ಸಾಹೇಬರು. ಬೆಕ್ಕುಗಳು ನಾಯಿಗಳು ಅಸ್ಪೃಶ್ಯರ ಎಂಜಲು ತಿನ್ನುತ್ತವೆ. ಮಕ್ಕಳ ಮಲವನ್ನೂ ತಿನ್ನುತ್ತವೆ. ಇದೇ ನಾಯಿ ಬೆಕ್ಕುಗಳು ಸ್ಪೃಶ್ಯರ ಮನೆಯನ್ನು ಪ್ರವೇಶಿಸಬಹುದು. ಹಾಗೆ ಪ್ರವೇಶಿಸಿದರೆ ಮೈಲಿಗೆಯಿಲ್ಲ. ಈ ಪ್ರಾಣಿಗಳನ್ನು ಸ್ಪೃಶ್ಯರು ಮುಟ್ಟುತ್ತಾರೆ, ಅಪ್ಪಿ ಮುದ್ದಾಡುತ್ತಾರೆ. ಅವು ಉಣ್ಣುವ ತಟ್ಟೆಗೆ ಬಾಯಿ ಹಾಕಿದರೂ ಅವರಿಗೆ ತಕರಾರಿಲ್ಲ. ಯಾವುದೋ ಚಾಕರಿಗೆಂದು ಮನೆಯ ಹೊರಗೆ ನಿಲ್ಲುವ ಅಸ್ಪೃಶ್ಯನನ್ನು ಕಂಡ ಸವರ್ಣೀಯ ಗದರುತ್ತಾನೆ- ದೂರ ನಿಲ್ಲು, ಮಗುವಿನ ಮಲವನ್ನು ಬಾಚಿ ಎಸೆಯುವ ಬೋಕಿ ಬಿಲ್ಲೆಯನ್ನು ಅಲ್ಲಿ ಇಡಲಾಗಿದೆ. ಅದನ್ನೂ ಮುಟ್ಟಿ ಮೈಲಿಗೆ ಮಾಡುತ್ತೀಯೇನು? ಎಂಬ ಹೃದಯವಿದ್ರಾವಕ ಸಾಲುಗಳನ್ನು ಬಾಬಾಸಾಹೇಬರು ಮೂಕನಾಯಕದ 1920ರ ಆಗಸ್ಟ್ ಸಂಚಿಕೆಯ ಸಂಪಾದಕೀಯದಲ್ಲಿ ಬರೆದಿದ್ದಾರೆ.

ಅಸ್ಪೃಶ್ಯತೆಯು ಮೊದಲು ಅಸ್ಪೃಶ್ಯರನ್ನು ಸರ್ವನಾಶ ಮಾಡಿದೆ. ನಂತರ ಹಿಂದೂ ಸವರ್ಣೀಯರನ್ನು ಸರ್ವನಾಶ ಮಾಡಿದೆ. ಅಂತಿಮವಾಗಿ ಅದು ಇಡೀ ದೇಶವನ್ನೇ ನಾಶ ಮಾಡಿದೆ… ಹಿಂದೂ ಧರ್ಮದಲ್ಲಿ ನಿಮ್ನ ವರ್ಗಗಳಿಗೆ ಗೌರವ, ಸಮಾನತೆ, ನ್ಯಾಯ ಸಿಗದೆ ಹೋದರೆ ಇವುಗಳು ಎಲ್ಲಿ ಸಿಗುತ್ತವೆಯೇ ಅಲ್ಲಿಗೆ ಅವರು ಹೋಗುವುದು ಹೇಗೆ ತಾನೆ ತಪ್ಪಾಗುತ್ತದೆ ಎಂಬ ಅಂಬೇಡ್ಕರ್ ಪ್ರಶ್ನೆಗೆ ಸಂಬಂಧಪಟ್ಟವರಿಂದ ಸಮಜಾಯಿಷಿ ಈಗಲೂ ದೊರೆತಿಲ್ಲ.

ಪ್ರಗತಿಪರ ಹಿಂದು ಸಂಹಿತೆ ವಿಧೇಯಕಗಳನ್ನು (Hindu Code Bill) ಬಲಪಂಥೀಯ ಒತ್ತಡದ ಕಾರಣ ವಿಳಂಬಗೊಳಿಸಲಾಗುತ್ತಿದೆ ಎಂದು ಪ್ರತಿಭಟಿಸಿ ಬಾಬಾ ಸಾಹೇಬರು 1951ರಲ್ಲಿ ನೆಹರೂ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡುತ್ತಾರೆ. ಬಲಪಂಥೀಯ ಶಕ್ತಿಗಳು ಮತ್ತು ಕಾಂಗ್ರೆಸ್ಸಿನ ಪ್ರಬಲ ವರ್ಗವೊಂದು ಈ ಸುಧಾರಣೆಗಳನ್ನು ವಿರೋಧಿಸಿರುತ್ತದೆ. ಸ್ವಾತಂತ್ರ್ಯೋತ್ತರ ಭಾರತದ 70 ವರ್ಷಗಳಲ್ಲಿ ಬಾಬಾ ಸಾಹೇಬರ ಕುರಿತು ಕಟ್ಟರ್‌ವಾದಿ ಬಲಪಂಥೀಯ ಶಕ್ತಿಗಳು ತಮ್ಮ ನಿಲುವನ್ನು ಹೇಗೆಲ್ಲ ಬದಲಿಸುತ್ತ ಬಂದಿದೆ ಎಂಬುದನ್ನು ಇತಿಹಾಸಕಾರ ರಾಮಚಂದ್ರ ಗುಹಾ ಪುರಾವೆ ಸಹಿತ ನಿಚ್ಚಳವಾಗಿ ದಾಖಲಿಸಿದ್ದಾರೆ.

ಒಂದೆಡೆ ಅಂಬೇಡ್ಕರ್ ವಿಚಾರಗಳನ್ನು ಕಡೆಗಣಿಸಿ ಮತ್ತೊಂದೆಡೆ ಅವರ ಹೆಸರನ್ನು ತಲೆ ಮೇಲೆ ಹೊತ್ತು ಮೆರೆಸುತ್ತಿದ್ದೇವೆಂಬ ಇಬ್ಬಗೆಯ ಆಚರಣೆಯ ಅರ್ಥವೇನು ಎಂಬುದನ್ನು ಕಂಡುಕೊಳ್ಳಬೇಕಿದೆ.


ಇದನ್ನೂ ಓದಿ: ಹಿಂದೂಗಳ ಕಣ್ಣಿಗೆ ದಲಿತರು ಮನುಷ್ಯರಂತೆ ಕಾಣುವುದೆಂದು? – ಡಿ.ಉಮಾಪತಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...