Homeಬಹುಜನ ಭಾರತಬಹುಜನ ಭಾರತ: ಬಾಬಾಸಾಹೇಬರು ಮನುಸ್ಮೃತಿಯನ್ನು ಸುಟ್ಟಿದ್ದು ಸುಳ್ಳೇನು?

ಬಹುಜನ ಭಾರತ: ಬಾಬಾಸಾಹೇಬರು ಮನುಸ್ಮೃತಿಯನ್ನು ಸುಟ್ಟಿದ್ದು ಸುಳ್ಳೇನು?

ಅಸ್ಪೃಶ್ಯತೆಯು ಮೊದಲು ಅಸ್ಪೃಶ್ಯರನ್ನು ಸರ್ವನಾಶ ಮಾಡಿದೆ. ನಂತರ ಹಿಂದೂ ಸವರ್ಣೀಯರನ್ನು ಸರ್ವನಾಶ ಮಾಡಿದೆ. ಅಂತಿಮವಾಗಿ ಅದು ಇಡೀ ದೇಶವನ್ನೇ ನಾಶ ಮಾಡಿದೆ...

- Advertisement -
- Advertisement -

ಚವಡರ್ ಕೆರೆಯ ನೀರನ್ನು ಮುಟ್ಟುವ ಮಹಾಡ್ ಸತ್ಯಾಗ್ರಹದ ಸಂದರ್ಭದಲ್ಲಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸುಟ್ಟದ್ದು ಇತಿಹಾಸದ ಅಳಿಸಲಾಗದ ಘಟನೆ.

ಶೂದ್ರ-ಚಾಂಡಾಲ-ಮಹಿಳೆಯರನ್ನು ಅಮಾನವೀಯವಾಗಿ ಕಂಡು ಅವರ ಮೇಲೆ ಅಮಾನುಷ ಕಟ್ಟುಕಟ್ಟಳೆಗಳ ವಿಧಿಸಿರುವ ಕೃತಿ ಮನುಸ್ಮೃತಿ. ಕೌನ್ ಬನೇಗಾ ಕರೋಡಪತಿ ಎಂಬ ಶೀರ್ಷಿಕೆಯ ಜನಪ್ರಿಯ ಟಿವಿ ಕಾರ್ಯಕ್ರಮವೊಂದರಲ್ಲಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು 1927ರ ಡಿಸೆಂಬರ್ 25ರಂದು ಸುಟ್ಟು ಹಾಕಿದ ಗ್ರಂಥ ಯಾವುದು ಎಂಬ ಪ್ರಶ್ನೆಯನ್ನು ಕೆಲ ದಿನಗಳ ಹಿಂದೆ ಕೇಳಲಾಗುತ್ತದೆ. ಈ ಪ್ರಶ್ನೆ ಕೇಳುವ ಮೂಲಕ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಲಾಗಿದೆ ಎಂದು ಕಾರ್ಯಕ್ರಮದ ನಿರೂಪಕ ಅಮಿತಾಭ್ ಬಚ್ಚನ್ ಅವರ ಮೇಲೆ ಎಫ್.ಐ.ಆರ್. ದಾಖಲಿಸಲಾಗಿದೆ.

ಹಾಗಿದ್ದರೆ ನೂರಾರು ವರ್ಷಗಳಿಂದ ಈ ದೇಶದ ತಳಸಮುದಾಯಗಳ ಕೋಟ್ಯಂತರ ಜನರನ್ನು ಪಶುಪ್ರಾಣಿಗಳಿಗಿಂತಲೂ ಕಡೆಯಾಗಿ ನಡೆಸಿಕೊಂಡು ಬರಲಾಗಿದೆ. ತಲೆಮಾರುಗಳಿಂದ ಅವರಲ್ಲಿ ಹೆಪ್ಪುಗಟ್ಟಿರುವ ನೋವು ಅವಮಾನದ ವಿಷಯವೇನು, ಅವುಗಳ ಕುರಿತು ಯಾರ ಮೇಲೆ ಎಫ್.ಐ.ಆರ್. ಹಾಕಬೇಕು ಎಂಬ ಪ್ರಶ್ನೆ ಕೇಳಿದರೆ ಉತ್ತರ ಹೇಳುವವರು ಯಾರು? ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸುಟ್ಟದ್ದು ವಾಸ್ತವ ಅಲ್ಲವೇ?

ಇದನ್ನೂ ಓದಿ: ಮನುಸ್ಮೃತಿ ಸುಟ್ಟಿದ್ದು ಏಕೆಂದು ವಿವರಿಸಿದ ಅಮಿತಾಬ್ ಬಚ್ಚನ್ ವಿರುದ್ಧ FIR!

ಇತ್ತೀಚಿನ ವರ್ಷಗಳಲ್ಲಿ ಅಂಬೇಡ್ಕರ್ ಅವರನ್ನು ಹಿಂದು ಸಮಾಜದ ವೈದ್ಯರೆಂದೂ, ಸುಧಾರಕರೆಂದೂ ಬಣ್ಣಿಸುವ ಕೃತಿಗಳನ್ನು ಹೊರತರಲಾಗಿದೆ. ‘ವಿದೇಶ ಸಂಚಾರದಲ್ಲೂ ಹಿಂದುತ್ವದ ತಿರುಳು ಮೌಲ್ಯಗಳಿಗೆ ಬದ್ಧರಾಗಿಯೇ ಉಳಿದ ಅವರು ಮದಿರೆ-ಮಾಂಸವನ್ನು ಸೇವಿಸಲಿಲ್ಲ, ಭಗವದ್ಗೀತೆಯನ್ನು ಅವರು ಒಪ್ಪಿಕೊಂಡಿದ್ದರು. ಮನುಸ್ಮೃತಿಯನ್ನು ಸುಟ್ಟರೂ ಆನಂತರ ಮೂಲ ತತ್ವಗಳಲ್ಲಿ ತಮ್ಮ ವಿಶ್ವಾಸವನ್ನು ಪ್ರಕಟಿಸಿದರು’ ಎಂದೆಲ್ಲ ಹೇಳಲಾಗಿದೆ.

2016ರಲ್ಲಿ ಅಂಬೇಡ್ಕರ್ ಅವರ 125ನೆಯ ಜಯಂತಿ ಸಂದರ್ಭದಲ್ಲಿ ಸಂವಿಧಾನ ಶಿಲ್ಪಿಯನ್ನು “ಅಖೈರು ಏಕೀಕರಣಕಾರ” (Ultimate Unifier) ಎಂದು ಹಾಡಿ ಹೊಗಳಿ, ‘ಆರ್ಗನೈಸರ್’ ಪತ್ರಿಕೆ ಹಲವು ಲೇಖನಗಳನ್ನು ಪ್ರಕಟಿಸುತ್ತದೆ. ‘ಅವರ ಲೋಕದೃಷ್ಟಿ ಮತ್ತು ಕ್ರಿಯೆಗಳು ಬ್ರಹ್ಮಸಮಾಜ, ಆರ್ಯಸಮಾಜ, ಪ್ರಾರ್ಥನಾ ಸಮಾಜವನ್ನು ಹೋಲುತ್ತಿದ್ದವು, ಶ್ರಮಿಕರ ಹಕ್ಕುಗಳನ್ನು ಬೆಂಬಲಿಸಿದವರು, ಬ್ರಾಹ್ಮಣ್ಯದ ವಿರೋಧಿಯೇ ವಿನಾ ಬ್ರಾಹ್ಮಣರ ವಿರೋಧಿಯಲ್ಲ, ಕಾಲಾತೀತ ನಾಯಕ’ ಎಂದೆಲ್ಲ ಈ ಲೇಖನಗಳಲ್ಲಿ ಅವರನ್ನು ಕೊಂಡಾಡಲಾಯಿತು.

ಹಿಂದೂ ಧರ್ಮದ ಜೀವವಿರೋಧದ ಅಂತರಾಳವನ್ನು ಮತ್ತು ಅದರ ಜಾತಿವ್ಯವಸ್ಥೆಯ ಕ್ರೌರ್ಯವನ್ನು ತಮ್ಮ ಕಡೆಯ ಉಸಿರಿನ ತನಕ ಜಾಲಾಡಿದರು ಬಾಬಾ ಸಾಹೇಬರು. ಬೆಕ್ಕುಗಳು ನಾಯಿಗಳು ಅಸ್ಪೃಶ್ಯರ ಎಂಜಲು ತಿನ್ನುತ್ತವೆ. ಮಕ್ಕಳ ಮಲವನ್ನೂ ತಿನ್ನುತ್ತವೆ. ಇದೇ ನಾಯಿ ಬೆಕ್ಕುಗಳು ಸ್ಪೃಶ್ಯರ ಮನೆಯನ್ನು ಪ್ರವೇಶಿಸಬಹುದು. ಹಾಗೆ ಪ್ರವೇಶಿಸಿದರೆ ಮೈಲಿಗೆಯಿಲ್ಲ. ಈ ಪ್ರಾಣಿಗಳನ್ನು ಸ್ಪೃಶ್ಯರು ಮುಟ್ಟುತ್ತಾರೆ, ಅಪ್ಪಿ ಮುದ್ದಾಡುತ್ತಾರೆ. ಅವು ಉಣ್ಣುವ ತಟ್ಟೆಗೆ ಬಾಯಿ ಹಾಕಿದರೂ ಅವರಿಗೆ ತಕರಾರಿಲ್ಲ. ಯಾವುದೋ ಚಾಕರಿಗೆಂದು ಮನೆಯ ಹೊರಗೆ ನಿಲ್ಲುವ ಅಸ್ಪೃಶ್ಯನನ್ನು ಕಂಡ ಸವರ್ಣೀಯ ಗದರುತ್ತಾನೆ- ದೂರ ನಿಲ್ಲು, ಮಗುವಿನ ಮಲವನ್ನು ಬಾಚಿ ಎಸೆಯುವ ಬೋಕಿ ಬಿಲ್ಲೆಯನ್ನು ಅಲ್ಲಿ ಇಡಲಾಗಿದೆ. ಅದನ್ನೂ ಮುಟ್ಟಿ ಮೈಲಿಗೆ ಮಾಡುತ್ತೀಯೇನು? ಎಂಬ ಹೃದಯವಿದ್ರಾವಕ ಸಾಲುಗಳನ್ನು ಬಾಬಾಸಾಹೇಬರು ಮೂಕನಾಯಕದ 1920ರ ಆಗಸ್ಟ್ ಸಂಚಿಕೆಯ ಸಂಪಾದಕೀಯದಲ್ಲಿ ಬರೆದಿದ್ದಾರೆ.

ಅಸ್ಪೃಶ್ಯತೆಯು ಮೊದಲು ಅಸ್ಪೃಶ್ಯರನ್ನು ಸರ್ವನಾಶ ಮಾಡಿದೆ. ನಂತರ ಹಿಂದೂ ಸವರ್ಣೀಯರನ್ನು ಸರ್ವನಾಶ ಮಾಡಿದೆ. ಅಂತಿಮವಾಗಿ ಅದು ಇಡೀ ದೇಶವನ್ನೇ ನಾಶ ಮಾಡಿದೆ… ಹಿಂದೂ ಧರ್ಮದಲ್ಲಿ ನಿಮ್ನ ವರ್ಗಗಳಿಗೆ ಗೌರವ, ಸಮಾನತೆ, ನ್ಯಾಯ ಸಿಗದೆ ಹೋದರೆ ಇವುಗಳು ಎಲ್ಲಿ ಸಿಗುತ್ತವೆಯೇ ಅಲ್ಲಿಗೆ ಅವರು ಹೋಗುವುದು ಹೇಗೆ ತಾನೆ ತಪ್ಪಾಗುತ್ತದೆ ಎಂಬ ಅಂಬೇಡ್ಕರ್ ಪ್ರಶ್ನೆಗೆ ಸಂಬಂಧಪಟ್ಟವರಿಂದ ಸಮಜಾಯಿಷಿ ಈಗಲೂ ದೊರೆತಿಲ್ಲ.

ಪ್ರಗತಿಪರ ಹಿಂದು ಸಂಹಿತೆ ವಿಧೇಯಕಗಳನ್ನು (Hindu Code Bill) ಬಲಪಂಥೀಯ ಒತ್ತಡದ ಕಾರಣ ವಿಳಂಬಗೊಳಿಸಲಾಗುತ್ತಿದೆ ಎಂದು ಪ್ರತಿಭಟಿಸಿ ಬಾಬಾ ಸಾಹೇಬರು 1951ರಲ್ಲಿ ನೆಹರೂ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡುತ್ತಾರೆ. ಬಲಪಂಥೀಯ ಶಕ್ತಿಗಳು ಮತ್ತು ಕಾಂಗ್ರೆಸ್ಸಿನ ಪ್ರಬಲ ವರ್ಗವೊಂದು ಈ ಸುಧಾರಣೆಗಳನ್ನು ವಿರೋಧಿಸಿರುತ್ತದೆ. ಸ್ವಾತಂತ್ರ್ಯೋತ್ತರ ಭಾರತದ 70 ವರ್ಷಗಳಲ್ಲಿ ಬಾಬಾ ಸಾಹೇಬರ ಕುರಿತು ಕಟ್ಟರ್‌ವಾದಿ ಬಲಪಂಥೀಯ ಶಕ್ತಿಗಳು ತಮ್ಮ ನಿಲುವನ್ನು ಹೇಗೆಲ್ಲ ಬದಲಿಸುತ್ತ ಬಂದಿದೆ ಎಂಬುದನ್ನು ಇತಿಹಾಸಕಾರ ರಾಮಚಂದ್ರ ಗುಹಾ ಪುರಾವೆ ಸಹಿತ ನಿಚ್ಚಳವಾಗಿ ದಾಖಲಿಸಿದ್ದಾರೆ.

ಒಂದೆಡೆ ಅಂಬೇಡ್ಕರ್ ವಿಚಾರಗಳನ್ನು ಕಡೆಗಣಿಸಿ ಮತ್ತೊಂದೆಡೆ ಅವರ ಹೆಸರನ್ನು ತಲೆ ಮೇಲೆ ಹೊತ್ತು ಮೆರೆಸುತ್ತಿದ್ದೇವೆಂಬ ಇಬ್ಬಗೆಯ ಆಚರಣೆಯ ಅರ್ಥವೇನು ಎಂಬುದನ್ನು ಕಂಡುಕೊಳ್ಳಬೇಕಿದೆ.


ಇದನ್ನೂ ಓದಿ: ಹಿಂದೂಗಳ ಕಣ್ಣಿಗೆ ದಲಿತರು ಮನುಷ್ಯರಂತೆ ಕಾಣುವುದೆಂದು? – ಡಿ.ಉಮಾಪತಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...