Homeಬಹುಜನ ಭಾರತಬಹುಜನ ಭಾರತ: ಬಾಬಾಸಾಹೇಬರು ಮನುಸ್ಮೃತಿಯನ್ನು ಸುಟ್ಟಿದ್ದು ಸುಳ್ಳೇನು?

ಬಹುಜನ ಭಾರತ: ಬಾಬಾಸಾಹೇಬರು ಮನುಸ್ಮೃತಿಯನ್ನು ಸುಟ್ಟಿದ್ದು ಸುಳ್ಳೇನು?

ಅಸ್ಪೃಶ್ಯತೆಯು ಮೊದಲು ಅಸ್ಪೃಶ್ಯರನ್ನು ಸರ್ವನಾಶ ಮಾಡಿದೆ. ನಂತರ ಹಿಂದೂ ಸವರ್ಣೀಯರನ್ನು ಸರ್ವನಾಶ ಮಾಡಿದೆ. ಅಂತಿಮವಾಗಿ ಅದು ಇಡೀ ದೇಶವನ್ನೇ ನಾಶ ಮಾಡಿದೆ...

- Advertisement -
- Advertisement -

ಚವಡರ್ ಕೆರೆಯ ನೀರನ್ನು ಮುಟ್ಟುವ ಮಹಾಡ್ ಸತ್ಯಾಗ್ರಹದ ಸಂದರ್ಭದಲ್ಲಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸುಟ್ಟದ್ದು ಇತಿಹಾಸದ ಅಳಿಸಲಾಗದ ಘಟನೆ.

ಶೂದ್ರ-ಚಾಂಡಾಲ-ಮಹಿಳೆಯರನ್ನು ಅಮಾನವೀಯವಾಗಿ ಕಂಡು ಅವರ ಮೇಲೆ ಅಮಾನುಷ ಕಟ್ಟುಕಟ್ಟಳೆಗಳ ವಿಧಿಸಿರುವ ಕೃತಿ ಮನುಸ್ಮೃತಿ. ಕೌನ್ ಬನೇಗಾ ಕರೋಡಪತಿ ಎಂಬ ಶೀರ್ಷಿಕೆಯ ಜನಪ್ರಿಯ ಟಿವಿ ಕಾರ್ಯಕ್ರಮವೊಂದರಲ್ಲಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು 1927ರ ಡಿಸೆಂಬರ್ 25ರಂದು ಸುಟ್ಟು ಹಾಕಿದ ಗ್ರಂಥ ಯಾವುದು ಎಂಬ ಪ್ರಶ್ನೆಯನ್ನು ಕೆಲ ದಿನಗಳ ಹಿಂದೆ ಕೇಳಲಾಗುತ್ತದೆ. ಈ ಪ್ರಶ್ನೆ ಕೇಳುವ ಮೂಲಕ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಲಾಗಿದೆ ಎಂದು ಕಾರ್ಯಕ್ರಮದ ನಿರೂಪಕ ಅಮಿತಾಭ್ ಬಚ್ಚನ್ ಅವರ ಮೇಲೆ ಎಫ್.ಐ.ಆರ್. ದಾಖಲಿಸಲಾಗಿದೆ.

ಹಾಗಿದ್ದರೆ ನೂರಾರು ವರ್ಷಗಳಿಂದ ಈ ದೇಶದ ತಳಸಮುದಾಯಗಳ ಕೋಟ್ಯಂತರ ಜನರನ್ನು ಪಶುಪ್ರಾಣಿಗಳಿಗಿಂತಲೂ ಕಡೆಯಾಗಿ ನಡೆಸಿಕೊಂಡು ಬರಲಾಗಿದೆ. ತಲೆಮಾರುಗಳಿಂದ ಅವರಲ್ಲಿ ಹೆಪ್ಪುಗಟ್ಟಿರುವ ನೋವು ಅವಮಾನದ ವಿಷಯವೇನು, ಅವುಗಳ ಕುರಿತು ಯಾರ ಮೇಲೆ ಎಫ್.ಐ.ಆರ್. ಹಾಕಬೇಕು ಎಂಬ ಪ್ರಶ್ನೆ ಕೇಳಿದರೆ ಉತ್ತರ ಹೇಳುವವರು ಯಾರು? ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸುಟ್ಟದ್ದು ವಾಸ್ತವ ಅಲ್ಲವೇ?

ಇದನ್ನೂ ಓದಿ: ಮನುಸ್ಮೃತಿ ಸುಟ್ಟಿದ್ದು ಏಕೆಂದು ವಿವರಿಸಿದ ಅಮಿತಾಬ್ ಬಚ್ಚನ್ ವಿರುದ್ಧ FIR!

ಇತ್ತೀಚಿನ ವರ್ಷಗಳಲ್ಲಿ ಅಂಬೇಡ್ಕರ್ ಅವರನ್ನು ಹಿಂದು ಸಮಾಜದ ವೈದ್ಯರೆಂದೂ, ಸುಧಾರಕರೆಂದೂ ಬಣ್ಣಿಸುವ ಕೃತಿಗಳನ್ನು ಹೊರತರಲಾಗಿದೆ. ‘ವಿದೇಶ ಸಂಚಾರದಲ್ಲೂ ಹಿಂದುತ್ವದ ತಿರುಳು ಮೌಲ್ಯಗಳಿಗೆ ಬದ್ಧರಾಗಿಯೇ ಉಳಿದ ಅವರು ಮದಿರೆ-ಮಾಂಸವನ್ನು ಸೇವಿಸಲಿಲ್ಲ, ಭಗವದ್ಗೀತೆಯನ್ನು ಅವರು ಒಪ್ಪಿಕೊಂಡಿದ್ದರು. ಮನುಸ್ಮೃತಿಯನ್ನು ಸುಟ್ಟರೂ ಆನಂತರ ಮೂಲ ತತ್ವಗಳಲ್ಲಿ ತಮ್ಮ ವಿಶ್ವಾಸವನ್ನು ಪ್ರಕಟಿಸಿದರು’ ಎಂದೆಲ್ಲ ಹೇಳಲಾಗಿದೆ.

2016ರಲ್ಲಿ ಅಂಬೇಡ್ಕರ್ ಅವರ 125ನೆಯ ಜಯಂತಿ ಸಂದರ್ಭದಲ್ಲಿ ಸಂವಿಧಾನ ಶಿಲ್ಪಿಯನ್ನು “ಅಖೈರು ಏಕೀಕರಣಕಾರ” (Ultimate Unifier) ಎಂದು ಹಾಡಿ ಹೊಗಳಿ, ‘ಆರ್ಗನೈಸರ್’ ಪತ್ರಿಕೆ ಹಲವು ಲೇಖನಗಳನ್ನು ಪ್ರಕಟಿಸುತ್ತದೆ. ‘ಅವರ ಲೋಕದೃಷ್ಟಿ ಮತ್ತು ಕ್ರಿಯೆಗಳು ಬ್ರಹ್ಮಸಮಾಜ, ಆರ್ಯಸಮಾಜ, ಪ್ರಾರ್ಥನಾ ಸಮಾಜವನ್ನು ಹೋಲುತ್ತಿದ್ದವು, ಶ್ರಮಿಕರ ಹಕ್ಕುಗಳನ್ನು ಬೆಂಬಲಿಸಿದವರು, ಬ್ರಾಹ್ಮಣ್ಯದ ವಿರೋಧಿಯೇ ವಿನಾ ಬ್ರಾಹ್ಮಣರ ವಿರೋಧಿಯಲ್ಲ, ಕಾಲಾತೀತ ನಾಯಕ’ ಎಂದೆಲ್ಲ ಈ ಲೇಖನಗಳಲ್ಲಿ ಅವರನ್ನು ಕೊಂಡಾಡಲಾಯಿತು.

ಹಿಂದೂ ಧರ್ಮದ ಜೀವವಿರೋಧದ ಅಂತರಾಳವನ್ನು ಮತ್ತು ಅದರ ಜಾತಿವ್ಯವಸ್ಥೆಯ ಕ್ರೌರ್ಯವನ್ನು ತಮ್ಮ ಕಡೆಯ ಉಸಿರಿನ ತನಕ ಜಾಲಾಡಿದರು ಬಾಬಾ ಸಾಹೇಬರು. ಬೆಕ್ಕುಗಳು ನಾಯಿಗಳು ಅಸ್ಪೃಶ್ಯರ ಎಂಜಲು ತಿನ್ನುತ್ತವೆ. ಮಕ್ಕಳ ಮಲವನ್ನೂ ತಿನ್ನುತ್ತವೆ. ಇದೇ ನಾಯಿ ಬೆಕ್ಕುಗಳು ಸ್ಪೃಶ್ಯರ ಮನೆಯನ್ನು ಪ್ರವೇಶಿಸಬಹುದು. ಹಾಗೆ ಪ್ರವೇಶಿಸಿದರೆ ಮೈಲಿಗೆಯಿಲ್ಲ. ಈ ಪ್ರಾಣಿಗಳನ್ನು ಸ್ಪೃಶ್ಯರು ಮುಟ್ಟುತ್ತಾರೆ, ಅಪ್ಪಿ ಮುದ್ದಾಡುತ್ತಾರೆ. ಅವು ಉಣ್ಣುವ ತಟ್ಟೆಗೆ ಬಾಯಿ ಹಾಕಿದರೂ ಅವರಿಗೆ ತಕರಾರಿಲ್ಲ. ಯಾವುದೋ ಚಾಕರಿಗೆಂದು ಮನೆಯ ಹೊರಗೆ ನಿಲ್ಲುವ ಅಸ್ಪೃಶ್ಯನನ್ನು ಕಂಡ ಸವರ್ಣೀಯ ಗದರುತ್ತಾನೆ- ದೂರ ನಿಲ್ಲು, ಮಗುವಿನ ಮಲವನ್ನು ಬಾಚಿ ಎಸೆಯುವ ಬೋಕಿ ಬಿಲ್ಲೆಯನ್ನು ಅಲ್ಲಿ ಇಡಲಾಗಿದೆ. ಅದನ್ನೂ ಮುಟ್ಟಿ ಮೈಲಿಗೆ ಮಾಡುತ್ತೀಯೇನು? ಎಂಬ ಹೃದಯವಿದ್ರಾವಕ ಸಾಲುಗಳನ್ನು ಬಾಬಾಸಾಹೇಬರು ಮೂಕನಾಯಕದ 1920ರ ಆಗಸ್ಟ್ ಸಂಚಿಕೆಯ ಸಂಪಾದಕೀಯದಲ್ಲಿ ಬರೆದಿದ್ದಾರೆ.

ಅಸ್ಪೃಶ್ಯತೆಯು ಮೊದಲು ಅಸ್ಪೃಶ್ಯರನ್ನು ಸರ್ವನಾಶ ಮಾಡಿದೆ. ನಂತರ ಹಿಂದೂ ಸವರ್ಣೀಯರನ್ನು ಸರ್ವನಾಶ ಮಾಡಿದೆ. ಅಂತಿಮವಾಗಿ ಅದು ಇಡೀ ದೇಶವನ್ನೇ ನಾಶ ಮಾಡಿದೆ… ಹಿಂದೂ ಧರ್ಮದಲ್ಲಿ ನಿಮ್ನ ವರ್ಗಗಳಿಗೆ ಗೌರವ, ಸಮಾನತೆ, ನ್ಯಾಯ ಸಿಗದೆ ಹೋದರೆ ಇವುಗಳು ಎಲ್ಲಿ ಸಿಗುತ್ತವೆಯೇ ಅಲ್ಲಿಗೆ ಅವರು ಹೋಗುವುದು ಹೇಗೆ ತಾನೆ ತಪ್ಪಾಗುತ್ತದೆ ಎಂಬ ಅಂಬೇಡ್ಕರ್ ಪ್ರಶ್ನೆಗೆ ಸಂಬಂಧಪಟ್ಟವರಿಂದ ಸಮಜಾಯಿಷಿ ಈಗಲೂ ದೊರೆತಿಲ್ಲ.

ಪ್ರಗತಿಪರ ಹಿಂದು ಸಂಹಿತೆ ವಿಧೇಯಕಗಳನ್ನು (Hindu Code Bill) ಬಲಪಂಥೀಯ ಒತ್ತಡದ ಕಾರಣ ವಿಳಂಬಗೊಳಿಸಲಾಗುತ್ತಿದೆ ಎಂದು ಪ್ರತಿಭಟಿಸಿ ಬಾಬಾ ಸಾಹೇಬರು 1951ರಲ್ಲಿ ನೆಹರೂ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡುತ್ತಾರೆ. ಬಲಪಂಥೀಯ ಶಕ್ತಿಗಳು ಮತ್ತು ಕಾಂಗ್ರೆಸ್ಸಿನ ಪ್ರಬಲ ವರ್ಗವೊಂದು ಈ ಸುಧಾರಣೆಗಳನ್ನು ವಿರೋಧಿಸಿರುತ್ತದೆ. ಸ್ವಾತಂತ್ರ್ಯೋತ್ತರ ಭಾರತದ 70 ವರ್ಷಗಳಲ್ಲಿ ಬಾಬಾ ಸಾಹೇಬರ ಕುರಿತು ಕಟ್ಟರ್‌ವಾದಿ ಬಲಪಂಥೀಯ ಶಕ್ತಿಗಳು ತಮ್ಮ ನಿಲುವನ್ನು ಹೇಗೆಲ್ಲ ಬದಲಿಸುತ್ತ ಬಂದಿದೆ ಎಂಬುದನ್ನು ಇತಿಹಾಸಕಾರ ರಾಮಚಂದ್ರ ಗುಹಾ ಪುರಾವೆ ಸಹಿತ ನಿಚ್ಚಳವಾಗಿ ದಾಖಲಿಸಿದ್ದಾರೆ.

ಒಂದೆಡೆ ಅಂಬೇಡ್ಕರ್ ವಿಚಾರಗಳನ್ನು ಕಡೆಗಣಿಸಿ ಮತ್ತೊಂದೆಡೆ ಅವರ ಹೆಸರನ್ನು ತಲೆ ಮೇಲೆ ಹೊತ್ತು ಮೆರೆಸುತ್ತಿದ್ದೇವೆಂಬ ಇಬ್ಬಗೆಯ ಆಚರಣೆಯ ಅರ್ಥವೇನು ಎಂಬುದನ್ನು ಕಂಡುಕೊಳ್ಳಬೇಕಿದೆ.


ಇದನ್ನೂ ಓದಿ: ಹಿಂದೂಗಳ ಕಣ್ಣಿಗೆ ದಲಿತರು ಮನುಷ್ಯರಂತೆ ಕಾಣುವುದೆಂದು? – ಡಿ.ಉಮಾಪತಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...