Homeಬಹುಜನ ಭಾರತಬಹುಜನ ಭಾರತ: ಬಾಬಾಸಾಹೇಬರು ಮನುಸ್ಮೃತಿಯನ್ನು ಸುಟ್ಟಿದ್ದು ಸುಳ್ಳೇನು?

ಬಹುಜನ ಭಾರತ: ಬಾಬಾಸಾಹೇಬರು ಮನುಸ್ಮೃತಿಯನ್ನು ಸುಟ್ಟಿದ್ದು ಸುಳ್ಳೇನು?

ಅಸ್ಪೃಶ್ಯತೆಯು ಮೊದಲು ಅಸ್ಪೃಶ್ಯರನ್ನು ಸರ್ವನಾಶ ಮಾಡಿದೆ. ನಂತರ ಹಿಂದೂ ಸವರ್ಣೀಯರನ್ನು ಸರ್ವನಾಶ ಮಾಡಿದೆ. ಅಂತಿಮವಾಗಿ ಅದು ಇಡೀ ದೇಶವನ್ನೇ ನಾಶ ಮಾಡಿದೆ...

- Advertisement -
- Advertisement -

ಚವಡರ್ ಕೆರೆಯ ನೀರನ್ನು ಮುಟ್ಟುವ ಮಹಾಡ್ ಸತ್ಯಾಗ್ರಹದ ಸಂದರ್ಭದಲ್ಲಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸುಟ್ಟದ್ದು ಇತಿಹಾಸದ ಅಳಿಸಲಾಗದ ಘಟನೆ.

ಶೂದ್ರ-ಚಾಂಡಾಲ-ಮಹಿಳೆಯರನ್ನು ಅಮಾನವೀಯವಾಗಿ ಕಂಡು ಅವರ ಮೇಲೆ ಅಮಾನುಷ ಕಟ್ಟುಕಟ್ಟಳೆಗಳ ವಿಧಿಸಿರುವ ಕೃತಿ ಮನುಸ್ಮೃತಿ. ಕೌನ್ ಬನೇಗಾ ಕರೋಡಪತಿ ಎಂಬ ಶೀರ್ಷಿಕೆಯ ಜನಪ್ರಿಯ ಟಿವಿ ಕಾರ್ಯಕ್ರಮವೊಂದರಲ್ಲಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು 1927ರ ಡಿಸೆಂಬರ್ 25ರಂದು ಸುಟ್ಟು ಹಾಕಿದ ಗ್ರಂಥ ಯಾವುದು ಎಂಬ ಪ್ರಶ್ನೆಯನ್ನು ಕೆಲ ದಿನಗಳ ಹಿಂದೆ ಕೇಳಲಾಗುತ್ತದೆ. ಈ ಪ್ರಶ್ನೆ ಕೇಳುವ ಮೂಲಕ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಲಾಗಿದೆ ಎಂದು ಕಾರ್ಯಕ್ರಮದ ನಿರೂಪಕ ಅಮಿತಾಭ್ ಬಚ್ಚನ್ ಅವರ ಮೇಲೆ ಎಫ್.ಐ.ಆರ್. ದಾಖಲಿಸಲಾಗಿದೆ.

ಹಾಗಿದ್ದರೆ ನೂರಾರು ವರ್ಷಗಳಿಂದ ಈ ದೇಶದ ತಳಸಮುದಾಯಗಳ ಕೋಟ್ಯಂತರ ಜನರನ್ನು ಪಶುಪ್ರಾಣಿಗಳಿಗಿಂತಲೂ ಕಡೆಯಾಗಿ ನಡೆಸಿಕೊಂಡು ಬರಲಾಗಿದೆ. ತಲೆಮಾರುಗಳಿಂದ ಅವರಲ್ಲಿ ಹೆಪ್ಪುಗಟ್ಟಿರುವ ನೋವು ಅವಮಾನದ ವಿಷಯವೇನು, ಅವುಗಳ ಕುರಿತು ಯಾರ ಮೇಲೆ ಎಫ್.ಐ.ಆರ್. ಹಾಕಬೇಕು ಎಂಬ ಪ್ರಶ್ನೆ ಕೇಳಿದರೆ ಉತ್ತರ ಹೇಳುವವರು ಯಾರು? ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸುಟ್ಟದ್ದು ವಾಸ್ತವ ಅಲ್ಲವೇ?

ಇದನ್ನೂ ಓದಿ: ಮನುಸ್ಮೃತಿ ಸುಟ್ಟಿದ್ದು ಏಕೆಂದು ವಿವರಿಸಿದ ಅಮಿತಾಬ್ ಬಚ್ಚನ್ ವಿರುದ್ಧ FIR!

ಇತ್ತೀಚಿನ ವರ್ಷಗಳಲ್ಲಿ ಅಂಬೇಡ್ಕರ್ ಅವರನ್ನು ಹಿಂದು ಸಮಾಜದ ವೈದ್ಯರೆಂದೂ, ಸುಧಾರಕರೆಂದೂ ಬಣ್ಣಿಸುವ ಕೃತಿಗಳನ್ನು ಹೊರತರಲಾಗಿದೆ. ‘ವಿದೇಶ ಸಂಚಾರದಲ್ಲೂ ಹಿಂದುತ್ವದ ತಿರುಳು ಮೌಲ್ಯಗಳಿಗೆ ಬದ್ಧರಾಗಿಯೇ ಉಳಿದ ಅವರು ಮದಿರೆ-ಮಾಂಸವನ್ನು ಸೇವಿಸಲಿಲ್ಲ, ಭಗವದ್ಗೀತೆಯನ್ನು ಅವರು ಒಪ್ಪಿಕೊಂಡಿದ್ದರು. ಮನುಸ್ಮೃತಿಯನ್ನು ಸುಟ್ಟರೂ ಆನಂತರ ಮೂಲ ತತ್ವಗಳಲ್ಲಿ ತಮ್ಮ ವಿಶ್ವಾಸವನ್ನು ಪ್ರಕಟಿಸಿದರು’ ಎಂದೆಲ್ಲ ಹೇಳಲಾಗಿದೆ.

2016ರಲ್ಲಿ ಅಂಬೇಡ್ಕರ್ ಅವರ 125ನೆಯ ಜಯಂತಿ ಸಂದರ್ಭದಲ್ಲಿ ಸಂವಿಧಾನ ಶಿಲ್ಪಿಯನ್ನು “ಅಖೈರು ಏಕೀಕರಣಕಾರ” (Ultimate Unifier) ಎಂದು ಹಾಡಿ ಹೊಗಳಿ, ‘ಆರ್ಗನೈಸರ್’ ಪತ್ರಿಕೆ ಹಲವು ಲೇಖನಗಳನ್ನು ಪ್ರಕಟಿಸುತ್ತದೆ. ‘ಅವರ ಲೋಕದೃಷ್ಟಿ ಮತ್ತು ಕ್ರಿಯೆಗಳು ಬ್ರಹ್ಮಸಮಾಜ, ಆರ್ಯಸಮಾಜ, ಪ್ರಾರ್ಥನಾ ಸಮಾಜವನ್ನು ಹೋಲುತ್ತಿದ್ದವು, ಶ್ರಮಿಕರ ಹಕ್ಕುಗಳನ್ನು ಬೆಂಬಲಿಸಿದವರು, ಬ್ರಾಹ್ಮಣ್ಯದ ವಿರೋಧಿಯೇ ವಿನಾ ಬ್ರಾಹ್ಮಣರ ವಿರೋಧಿಯಲ್ಲ, ಕಾಲಾತೀತ ನಾಯಕ’ ಎಂದೆಲ್ಲ ಈ ಲೇಖನಗಳಲ್ಲಿ ಅವರನ್ನು ಕೊಂಡಾಡಲಾಯಿತು.

ಹಿಂದೂ ಧರ್ಮದ ಜೀವವಿರೋಧದ ಅಂತರಾಳವನ್ನು ಮತ್ತು ಅದರ ಜಾತಿವ್ಯವಸ್ಥೆಯ ಕ್ರೌರ್ಯವನ್ನು ತಮ್ಮ ಕಡೆಯ ಉಸಿರಿನ ತನಕ ಜಾಲಾಡಿದರು ಬಾಬಾ ಸಾಹೇಬರು. ಬೆಕ್ಕುಗಳು ನಾಯಿಗಳು ಅಸ್ಪೃಶ್ಯರ ಎಂಜಲು ತಿನ್ನುತ್ತವೆ. ಮಕ್ಕಳ ಮಲವನ್ನೂ ತಿನ್ನುತ್ತವೆ. ಇದೇ ನಾಯಿ ಬೆಕ್ಕುಗಳು ಸ್ಪೃಶ್ಯರ ಮನೆಯನ್ನು ಪ್ರವೇಶಿಸಬಹುದು. ಹಾಗೆ ಪ್ರವೇಶಿಸಿದರೆ ಮೈಲಿಗೆಯಿಲ್ಲ. ಈ ಪ್ರಾಣಿಗಳನ್ನು ಸ್ಪೃಶ್ಯರು ಮುಟ್ಟುತ್ತಾರೆ, ಅಪ್ಪಿ ಮುದ್ದಾಡುತ್ತಾರೆ. ಅವು ಉಣ್ಣುವ ತಟ್ಟೆಗೆ ಬಾಯಿ ಹಾಕಿದರೂ ಅವರಿಗೆ ತಕರಾರಿಲ್ಲ. ಯಾವುದೋ ಚಾಕರಿಗೆಂದು ಮನೆಯ ಹೊರಗೆ ನಿಲ್ಲುವ ಅಸ್ಪೃಶ್ಯನನ್ನು ಕಂಡ ಸವರ್ಣೀಯ ಗದರುತ್ತಾನೆ- ದೂರ ನಿಲ್ಲು, ಮಗುವಿನ ಮಲವನ್ನು ಬಾಚಿ ಎಸೆಯುವ ಬೋಕಿ ಬಿಲ್ಲೆಯನ್ನು ಅಲ್ಲಿ ಇಡಲಾಗಿದೆ. ಅದನ್ನೂ ಮುಟ್ಟಿ ಮೈಲಿಗೆ ಮಾಡುತ್ತೀಯೇನು? ಎಂಬ ಹೃದಯವಿದ್ರಾವಕ ಸಾಲುಗಳನ್ನು ಬಾಬಾಸಾಹೇಬರು ಮೂಕನಾಯಕದ 1920ರ ಆಗಸ್ಟ್ ಸಂಚಿಕೆಯ ಸಂಪಾದಕೀಯದಲ್ಲಿ ಬರೆದಿದ್ದಾರೆ.

ಅಸ್ಪೃಶ್ಯತೆಯು ಮೊದಲು ಅಸ್ಪೃಶ್ಯರನ್ನು ಸರ್ವನಾಶ ಮಾಡಿದೆ. ನಂತರ ಹಿಂದೂ ಸವರ್ಣೀಯರನ್ನು ಸರ್ವನಾಶ ಮಾಡಿದೆ. ಅಂತಿಮವಾಗಿ ಅದು ಇಡೀ ದೇಶವನ್ನೇ ನಾಶ ಮಾಡಿದೆ… ಹಿಂದೂ ಧರ್ಮದಲ್ಲಿ ನಿಮ್ನ ವರ್ಗಗಳಿಗೆ ಗೌರವ, ಸಮಾನತೆ, ನ್ಯಾಯ ಸಿಗದೆ ಹೋದರೆ ಇವುಗಳು ಎಲ್ಲಿ ಸಿಗುತ್ತವೆಯೇ ಅಲ್ಲಿಗೆ ಅವರು ಹೋಗುವುದು ಹೇಗೆ ತಾನೆ ತಪ್ಪಾಗುತ್ತದೆ ಎಂಬ ಅಂಬೇಡ್ಕರ್ ಪ್ರಶ್ನೆಗೆ ಸಂಬಂಧಪಟ್ಟವರಿಂದ ಸಮಜಾಯಿಷಿ ಈಗಲೂ ದೊರೆತಿಲ್ಲ.

ಪ್ರಗತಿಪರ ಹಿಂದು ಸಂಹಿತೆ ವಿಧೇಯಕಗಳನ್ನು (Hindu Code Bill) ಬಲಪಂಥೀಯ ಒತ್ತಡದ ಕಾರಣ ವಿಳಂಬಗೊಳಿಸಲಾಗುತ್ತಿದೆ ಎಂದು ಪ್ರತಿಭಟಿಸಿ ಬಾಬಾ ಸಾಹೇಬರು 1951ರಲ್ಲಿ ನೆಹರೂ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡುತ್ತಾರೆ. ಬಲಪಂಥೀಯ ಶಕ್ತಿಗಳು ಮತ್ತು ಕಾಂಗ್ರೆಸ್ಸಿನ ಪ್ರಬಲ ವರ್ಗವೊಂದು ಈ ಸುಧಾರಣೆಗಳನ್ನು ವಿರೋಧಿಸಿರುತ್ತದೆ. ಸ್ವಾತಂತ್ರ್ಯೋತ್ತರ ಭಾರತದ 70 ವರ್ಷಗಳಲ್ಲಿ ಬಾಬಾ ಸಾಹೇಬರ ಕುರಿತು ಕಟ್ಟರ್‌ವಾದಿ ಬಲಪಂಥೀಯ ಶಕ್ತಿಗಳು ತಮ್ಮ ನಿಲುವನ್ನು ಹೇಗೆಲ್ಲ ಬದಲಿಸುತ್ತ ಬಂದಿದೆ ಎಂಬುದನ್ನು ಇತಿಹಾಸಕಾರ ರಾಮಚಂದ್ರ ಗುಹಾ ಪುರಾವೆ ಸಹಿತ ನಿಚ್ಚಳವಾಗಿ ದಾಖಲಿಸಿದ್ದಾರೆ.

ಒಂದೆಡೆ ಅಂಬೇಡ್ಕರ್ ವಿಚಾರಗಳನ್ನು ಕಡೆಗಣಿಸಿ ಮತ್ತೊಂದೆಡೆ ಅವರ ಹೆಸರನ್ನು ತಲೆ ಮೇಲೆ ಹೊತ್ತು ಮೆರೆಸುತ್ತಿದ್ದೇವೆಂಬ ಇಬ್ಬಗೆಯ ಆಚರಣೆಯ ಅರ್ಥವೇನು ಎಂಬುದನ್ನು ಕಂಡುಕೊಳ್ಳಬೇಕಿದೆ.


ಇದನ್ನೂ ಓದಿ: ಹಿಂದೂಗಳ ಕಣ್ಣಿಗೆ ದಲಿತರು ಮನುಷ್ಯರಂತೆ ಕಾಣುವುದೆಂದು? – ಡಿ.ಉಮಾಪತಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...