Homeಬಹುಜನ ಭಾರತಬಹುಜನ ಭಾರತ: ಬಾಬಾಸಾಹೇಬರು ಮನುಸ್ಮೃತಿಯನ್ನು ಸುಟ್ಟಿದ್ದು ಸುಳ್ಳೇನು?

ಬಹುಜನ ಭಾರತ: ಬಾಬಾಸಾಹೇಬರು ಮನುಸ್ಮೃತಿಯನ್ನು ಸುಟ್ಟಿದ್ದು ಸುಳ್ಳೇನು?

ಅಸ್ಪೃಶ್ಯತೆಯು ಮೊದಲು ಅಸ್ಪೃಶ್ಯರನ್ನು ಸರ್ವನಾಶ ಮಾಡಿದೆ. ನಂತರ ಹಿಂದೂ ಸವರ್ಣೀಯರನ್ನು ಸರ್ವನಾಶ ಮಾಡಿದೆ. ಅಂತಿಮವಾಗಿ ಅದು ಇಡೀ ದೇಶವನ್ನೇ ನಾಶ ಮಾಡಿದೆ...

- Advertisement -
- Advertisement -

ಚವಡರ್ ಕೆರೆಯ ನೀರನ್ನು ಮುಟ್ಟುವ ಮಹಾಡ್ ಸತ್ಯಾಗ್ರಹದ ಸಂದರ್ಭದಲ್ಲಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸುಟ್ಟದ್ದು ಇತಿಹಾಸದ ಅಳಿಸಲಾಗದ ಘಟನೆ.

ಶೂದ್ರ-ಚಾಂಡಾಲ-ಮಹಿಳೆಯರನ್ನು ಅಮಾನವೀಯವಾಗಿ ಕಂಡು ಅವರ ಮೇಲೆ ಅಮಾನುಷ ಕಟ್ಟುಕಟ್ಟಳೆಗಳ ವಿಧಿಸಿರುವ ಕೃತಿ ಮನುಸ್ಮೃತಿ. ಕೌನ್ ಬನೇಗಾ ಕರೋಡಪತಿ ಎಂಬ ಶೀರ್ಷಿಕೆಯ ಜನಪ್ರಿಯ ಟಿವಿ ಕಾರ್ಯಕ್ರಮವೊಂದರಲ್ಲಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು 1927ರ ಡಿಸೆಂಬರ್ 25ರಂದು ಸುಟ್ಟು ಹಾಕಿದ ಗ್ರಂಥ ಯಾವುದು ಎಂಬ ಪ್ರಶ್ನೆಯನ್ನು ಕೆಲ ದಿನಗಳ ಹಿಂದೆ ಕೇಳಲಾಗುತ್ತದೆ. ಈ ಪ್ರಶ್ನೆ ಕೇಳುವ ಮೂಲಕ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಲಾಗಿದೆ ಎಂದು ಕಾರ್ಯಕ್ರಮದ ನಿರೂಪಕ ಅಮಿತಾಭ್ ಬಚ್ಚನ್ ಅವರ ಮೇಲೆ ಎಫ್.ಐ.ಆರ್. ದಾಖಲಿಸಲಾಗಿದೆ.

ಹಾಗಿದ್ದರೆ ನೂರಾರು ವರ್ಷಗಳಿಂದ ಈ ದೇಶದ ತಳಸಮುದಾಯಗಳ ಕೋಟ್ಯಂತರ ಜನರನ್ನು ಪಶುಪ್ರಾಣಿಗಳಿಗಿಂತಲೂ ಕಡೆಯಾಗಿ ನಡೆಸಿಕೊಂಡು ಬರಲಾಗಿದೆ. ತಲೆಮಾರುಗಳಿಂದ ಅವರಲ್ಲಿ ಹೆಪ್ಪುಗಟ್ಟಿರುವ ನೋವು ಅವಮಾನದ ವಿಷಯವೇನು, ಅವುಗಳ ಕುರಿತು ಯಾರ ಮೇಲೆ ಎಫ್.ಐ.ಆರ್. ಹಾಕಬೇಕು ಎಂಬ ಪ್ರಶ್ನೆ ಕೇಳಿದರೆ ಉತ್ತರ ಹೇಳುವವರು ಯಾರು? ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸುಟ್ಟದ್ದು ವಾಸ್ತವ ಅಲ್ಲವೇ?

ಇದನ್ನೂ ಓದಿ: ಮನುಸ್ಮೃತಿ ಸುಟ್ಟಿದ್ದು ಏಕೆಂದು ವಿವರಿಸಿದ ಅಮಿತಾಬ್ ಬಚ್ಚನ್ ವಿರುದ್ಧ FIR!

ಇತ್ತೀಚಿನ ವರ್ಷಗಳಲ್ಲಿ ಅಂಬೇಡ್ಕರ್ ಅವರನ್ನು ಹಿಂದು ಸಮಾಜದ ವೈದ್ಯರೆಂದೂ, ಸುಧಾರಕರೆಂದೂ ಬಣ್ಣಿಸುವ ಕೃತಿಗಳನ್ನು ಹೊರತರಲಾಗಿದೆ. ‘ವಿದೇಶ ಸಂಚಾರದಲ್ಲೂ ಹಿಂದುತ್ವದ ತಿರುಳು ಮೌಲ್ಯಗಳಿಗೆ ಬದ್ಧರಾಗಿಯೇ ಉಳಿದ ಅವರು ಮದಿರೆ-ಮಾಂಸವನ್ನು ಸೇವಿಸಲಿಲ್ಲ, ಭಗವದ್ಗೀತೆಯನ್ನು ಅವರು ಒಪ್ಪಿಕೊಂಡಿದ್ದರು. ಮನುಸ್ಮೃತಿಯನ್ನು ಸುಟ್ಟರೂ ಆನಂತರ ಮೂಲ ತತ್ವಗಳಲ್ಲಿ ತಮ್ಮ ವಿಶ್ವಾಸವನ್ನು ಪ್ರಕಟಿಸಿದರು’ ಎಂದೆಲ್ಲ ಹೇಳಲಾಗಿದೆ.

2016ರಲ್ಲಿ ಅಂಬೇಡ್ಕರ್ ಅವರ 125ನೆಯ ಜಯಂತಿ ಸಂದರ್ಭದಲ್ಲಿ ಸಂವಿಧಾನ ಶಿಲ್ಪಿಯನ್ನು “ಅಖೈರು ಏಕೀಕರಣಕಾರ” (Ultimate Unifier) ಎಂದು ಹಾಡಿ ಹೊಗಳಿ, ‘ಆರ್ಗನೈಸರ್’ ಪತ್ರಿಕೆ ಹಲವು ಲೇಖನಗಳನ್ನು ಪ್ರಕಟಿಸುತ್ತದೆ. ‘ಅವರ ಲೋಕದೃಷ್ಟಿ ಮತ್ತು ಕ್ರಿಯೆಗಳು ಬ್ರಹ್ಮಸಮಾಜ, ಆರ್ಯಸಮಾಜ, ಪ್ರಾರ್ಥನಾ ಸಮಾಜವನ್ನು ಹೋಲುತ್ತಿದ್ದವು, ಶ್ರಮಿಕರ ಹಕ್ಕುಗಳನ್ನು ಬೆಂಬಲಿಸಿದವರು, ಬ್ರಾಹ್ಮಣ್ಯದ ವಿರೋಧಿಯೇ ವಿನಾ ಬ್ರಾಹ್ಮಣರ ವಿರೋಧಿಯಲ್ಲ, ಕಾಲಾತೀತ ನಾಯಕ’ ಎಂದೆಲ್ಲ ಈ ಲೇಖನಗಳಲ್ಲಿ ಅವರನ್ನು ಕೊಂಡಾಡಲಾಯಿತು.

ಹಿಂದೂ ಧರ್ಮದ ಜೀವವಿರೋಧದ ಅಂತರಾಳವನ್ನು ಮತ್ತು ಅದರ ಜಾತಿವ್ಯವಸ್ಥೆಯ ಕ್ರೌರ್ಯವನ್ನು ತಮ್ಮ ಕಡೆಯ ಉಸಿರಿನ ತನಕ ಜಾಲಾಡಿದರು ಬಾಬಾ ಸಾಹೇಬರು. ಬೆಕ್ಕುಗಳು ನಾಯಿಗಳು ಅಸ್ಪೃಶ್ಯರ ಎಂಜಲು ತಿನ್ನುತ್ತವೆ. ಮಕ್ಕಳ ಮಲವನ್ನೂ ತಿನ್ನುತ್ತವೆ. ಇದೇ ನಾಯಿ ಬೆಕ್ಕುಗಳು ಸ್ಪೃಶ್ಯರ ಮನೆಯನ್ನು ಪ್ರವೇಶಿಸಬಹುದು. ಹಾಗೆ ಪ್ರವೇಶಿಸಿದರೆ ಮೈಲಿಗೆಯಿಲ್ಲ. ಈ ಪ್ರಾಣಿಗಳನ್ನು ಸ್ಪೃಶ್ಯರು ಮುಟ್ಟುತ್ತಾರೆ, ಅಪ್ಪಿ ಮುದ್ದಾಡುತ್ತಾರೆ. ಅವು ಉಣ್ಣುವ ತಟ್ಟೆಗೆ ಬಾಯಿ ಹಾಕಿದರೂ ಅವರಿಗೆ ತಕರಾರಿಲ್ಲ. ಯಾವುದೋ ಚಾಕರಿಗೆಂದು ಮನೆಯ ಹೊರಗೆ ನಿಲ್ಲುವ ಅಸ್ಪೃಶ್ಯನನ್ನು ಕಂಡ ಸವರ್ಣೀಯ ಗದರುತ್ತಾನೆ- ದೂರ ನಿಲ್ಲು, ಮಗುವಿನ ಮಲವನ್ನು ಬಾಚಿ ಎಸೆಯುವ ಬೋಕಿ ಬಿಲ್ಲೆಯನ್ನು ಅಲ್ಲಿ ಇಡಲಾಗಿದೆ. ಅದನ್ನೂ ಮುಟ್ಟಿ ಮೈಲಿಗೆ ಮಾಡುತ್ತೀಯೇನು? ಎಂಬ ಹೃದಯವಿದ್ರಾವಕ ಸಾಲುಗಳನ್ನು ಬಾಬಾಸಾಹೇಬರು ಮೂಕನಾಯಕದ 1920ರ ಆಗಸ್ಟ್ ಸಂಚಿಕೆಯ ಸಂಪಾದಕೀಯದಲ್ಲಿ ಬರೆದಿದ್ದಾರೆ.

ಅಸ್ಪೃಶ್ಯತೆಯು ಮೊದಲು ಅಸ್ಪೃಶ್ಯರನ್ನು ಸರ್ವನಾಶ ಮಾಡಿದೆ. ನಂತರ ಹಿಂದೂ ಸವರ್ಣೀಯರನ್ನು ಸರ್ವನಾಶ ಮಾಡಿದೆ. ಅಂತಿಮವಾಗಿ ಅದು ಇಡೀ ದೇಶವನ್ನೇ ನಾಶ ಮಾಡಿದೆ… ಹಿಂದೂ ಧರ್ಮದಲ್ಲಿ ನಿಮ್ನ ವರ್ಗಗಳಿಗೆ ಗೌರವ, ಸಮಾನತೆ, ನ್ಯಾಯ ಸಿಗದೆ ಹೋದರೆ ಇವುಗಳು ಎಲ್ಲಿ ಸಿಗುತ್ತವೆಯೇ ಅಲ್ಲಿಗೆ ಅವರು ಹೋಗುವುದು ಹೇಗೆ ತಾನೆ ತಪ್ಪಾಗುತ್ತದೆ ಎಂಬ ಅಂಬೇಡ್ಕರ್ ಪ್ರಶ್ನೆಗೆ ಸಂಬಂಧಪಟ್ಟವರಿಂದ ಸಮಜಾಯಿಷಿ ಈಗಲೂ ದೊರೆತಿಲ್ಲ.

ಪ್ರಗತಿಪರ ಹಿಂದು ಸಂಹಿತೆ ವಿಧೇಯಕಗಳನ್ನು (Hindu Code Bill) ಬಲಪಂಥೀಯ ಒತ್ತಡದ ಕಾರಣ ವಿಳಂಬಗೊಳಿಸಲಾಗುತ್ತಿದೆ ಎಂದು ಪ್ರತಿಭಟಿಸಿ ಬಾಬಾ ಸಾಹೇಬರು 1951ರಲ್ಲಿ ನೆಹರೂ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡುತ್ತಾರೆ. ಬಲಪಂಥೀಯ ಶಕ್ತಿಗಳು ಮತ್ತು ಕಾಂಗ್ರೆಸ್ಸಿನ ಪ್ರಬಲ ವರ್ಗವೊಂದು ಈ ಸುಧಾರಣೆಗಳನ್ನು ವಿರೋಧಿಸಿರುತ್ತದೆ. ಸ್ವಾತಂತ್ರ್ಯೋತ್ತರ ಭಾರತದ 70 ವರ್ಷಗಳಲ್ಲಿ ಬಾಬಾ ಸಾಹೇಬರ ಕುರಿತು ಕಟ್ಟರ್‌ವಾದಿ ಬಲಪಂಥೀಯ ಶಕ್ತಿಗಳು ತಮ್ಮ ನಿಲುವನ್ನು ಹೇಗೆಲ್ಲ ಬದಲಿಸುತ್ತ ಬಂದಿದೆ ಎಂಬುದನ್ನು ಇತಿಹಾಸಕಾರ ರಾಮಚಂದ್ರ ಗುಹಾ ಪುರಾವೆ ಸಹಿತ ನಿಚ್ಚಳವಾಗಿ ದಾಖಲಿಸಿದ್ದಾರೆ.

ಒಂದೆಡೆ ಅಂಬೇಡ್ಕರ್ ವಿಚಾರಗಳನ್ನು ಕಡೆಗಣಿಸಿ ಮತ್ತೊಂದೆಡೆ ಅವರ ಹೆಸರನ್ನು ತಲೆ ಮೇಲೆ ಹೊತ್ತು ಮೆರೆಸುತ್ತಿದ್ದೇವೆಂಬ ಇಬ್ಬಗೆಯ ಆಚರಣೆಯ ಅರ್ಥವೇನು ಎಂಬುದನ್ನು ಕಂಡುಕೊಳ್ಳಬೇಕಿದೆ.


ಇದನ್ನೂ ಓದಿ: ಹಿಂದೂಗಳ ಕಣ್ಣಿಗೆ ದಲಿತರು ಮನುಷ್ಯರಂತೆ ಕಾಣುವುದೆಂದು? – ಡಿ.ಉಮಾಪತಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....