Homeಮುಖಪುಟಬಾಬಾ ಸಾಹೇಬರ ಪರಿನಿಬ್ಬಾಣ ಜಗತ್ತಿನ ಕವಲುದಾರಿಗೊಂದು ಕೈಮರದಂತೆ ಕಾಣಿಸುತ್ತಿದೆ

ಬಾಬಾ ಸಾಹೇಬರ ಪರಿನಿಬ್ಬಾಣ ಜಗತ್ತಿನ ಕವಲುದಾರಿಗೊಂದು ಕೈಮರದಂತೆ ಕಾಣಿಸುತ್ತಿದೆ

- Advertisement -
- Advertisement -

ಬುದ್ಧನ ತತ್ವಗಳು, ಬಸವ- ಅಲ್ಲಮರ ಚಿಂತನೆಗಳು, ಬಾಬಾ ಸಾಹೇಬರ ವಿಚಾರಗಳು , ನಮ್ಮ ಸಂವಿಧಾನದ ದಿಕ್ಸೂಚಿಗಳು ಹಾಗೂ ಕಳೆದ 75 ವರ್ಷಗಳಿಂದ ಸ್ಕ್ಯಾಂಡಿನೇವಿಯನ್ ದೇಶಗಳು ಒಂದು ಮಟ್ಟಿಗೆ ಸಾಧಿಸಿದ ಆಧುನಿಕ‌ ಮಾನವೀಯ‌- ವೈಜ್ಞಾನಿಕ ಸಂರಚನೆಗಳು ಇಷ್ಟು ಸಾಕು ಜಗತ್ತು ಮತ್ತು ಅದರೊಳಗಣ ಭಾರತ ಜೀವಂತವಾಗಿ ಇನ್ನಷ್ಟು ವರ್ಷಗಳ ಕಾಲ ಬದುಕಲು.

ಆದರೆ;

ಸರ್ವಾಧಿಕಾರಿ ಫ್ಯಾಸಿಸ್ಟ್ ವ್ಯವಸ್ಥೆಗಳು ಮನುಷ್ಯರು ಬದುಕಬಹುದಾದ ಅವಕಾಶಗಳನ್ನೆ ನಾಶ ಮಾಡುತ್ತಿವೆ.
ಪ್ರಭುತ್ವವಷ್ಟೆ ಫ್ಯಾಸಿಸಮ್ಮನ್ನು ಹುಟ್ಟಿ ಹಾಕುವುದಿಲ್ಲ ಎಂಬ ಅಂಬರ್ಟೊ‌ ಎಕೊನ ಚಿಂತನೆಗಳನ್ನು ಸಹಾನುಭೂತಿಯಿಂದ ನೋಡಬೇಕಾಗಿದೆ.
ಪ್ರಭುತ್ವ ಎನ್ನುವುದಕ್ಕಿಂತ
ವ್ಯವಸ್ಥೆ ಎನ್ನುವುದು ಹೆಚ್ಚು ಸೂಕ್ತ. ಮಧ್ಯಮ ವರ್ಗದ ಗುಮಾನಿಯ,ಆತಂಕದ , ಫೋಬಿಯಾಕಾರಕವಾದ ಮನೋಭಾವವು ತನಗೆ ಬೇಕಾದ ಪ್ರಭುತ್ವವನ್ನು ನಿರ್ಮಾಣ ಮಾಡಿಕೊಳ್ಳುವುದನ್ನು ನೋಡುತ್ತಿದ್ದೇವೆ. ಮಧ್ಯಮ ವರ್ಗವು ಹುಡುಕೀ ಹುಡುಕಿ ಫ್ಯಾಸಿಸ್ಟ್ ನಾಯಕರನ್ನು ಬೆಳೆಸುತ್ತಿದೆ.

ಹಾಗೆ ಸೃಷ್ಟಿಯಾದ ಈ‌ ನಾಯಕರು ಜೀವ ಶತ್ರುಗಳಾಗಿ ಬೆಳೆಯುತ್ತಿದ್ದಾರೆ. ಅಮೆರಿಕದಲ್ಲಿ ಫ್ಯಾಂಗ್ಸ್ ( Face book, Alphabet, Netflix, Google) ಕಂಪೆನಿಗಳು ಅಲ್ಲಿ ಫ್ಯಾಸಿಸಂ ಬೆಳೆಯಲು ಕಾರಣವಾಗುತ್ತಿವೆ‌. ಜಗತ್ತಿನ ಪ್ರಮುಖ ದೇಶಗಳಲ್ಲಿ ಈ ರೀತಿಯ ಬೃಹತ್ ಬಂಡವಾಳಿಗ ಕುಳಗಳು ಹಾಗೂ ಇವುಗಳಿಗೆ ಪೂರಕವಾಗಿ ದುಡಿಯುವವರು ಜನರಲ್ಲಿ ಫ್ಯಾಸಿಸ್ಟ್ ಮನಸ್ಥಿತಿಗೆ ಬೇಕಾದ Consentನ್ನು ಉತ್ಪಾದಿಸುತ್ತಿದ್ದಾರೆ.

ಇದರ ಅಪಾಯಗಳ ಕುರಿತು ಜನರಿಗೆ ತಿಳಿ ಹೇಳಬೇಕಾದ ಚಳುವಳಿಗಳು ಹಾಗೂ ಚಿಂತಕರು ಸೋತು ಹೋದಂತೆ ಕಾಣಿಸುತ್ತಿದ್ದಾರೆ. ಸಮಾಜಗಳು ಗದ್ದಲಗಳ ಗ್ರಾಹಕರಾಗಿ ಸ್ಮಾರ್ಟ್ ಫೋನುಗಳಲ್ಲಿ ಮುಳುಗಿವೆ.

ಆದರೂ ಕವಿಯುತ್ತಿರುವ ಕಗ್ಗತ್ತಲಿಗೆ ದಿಕ್ಕೆಡಲೇಬೇಕು.‌ ಹಾಗೆ ದಿಕ್ಕೆಟ್ಟ. ಕ್ಷಣ. ಬುದ್ಧ, ಜೀಸಸ್, ಪೈಗಂಬರ್, ಬಸವ- ಅಲ್ಲಮ, ಅಂಬೇಡ್ಕರ್, ನಾರಾಯಣಗುರು, ಗಾಂಧಿ ಬೇಕಾಗುತ್ತಾರೆ.

ಆದರೆ ಇತ್ತೀಚೆಗೆ ಎಲಾನ್ ಮಸ್ಕ್ ಮೂರನೇ ಮಹಾಯುದ್ಧ ಹತ್ತಿರದಲ್ಲೆ ಇದೆ ಎಂದಾಗ ಎದೆ ಧಸಕ್ಕೆಂದಿದ್ದಂತೂ ನಿಜ.

ಬಾಬಾ ಸಾಹೇಬರ ಪರಿನಿಬ್ಬಾಣ ಜಗತ್ತಿನ ಕವಲುದಾರಿಗೊಂದು ಕೈಮರದಂತೆ ಕಾಣಿಸುತ್ತಿದೆ.

ಡಾ. ನೆಲ್ಕುಂಟೆ ವೆಂಕಟೇಶಯ್ಯ,

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...