Homeಮುಖಪುಟಬಾಬಾ ಸಾಹೇಬರ ಪರಿನಿಬ್ಬಾಣ ಜಗತ್ತಿನ ಕವಲುದಾರಿಗೊಂದು ಕೈಮರದಂತೆ ಕಾಣಿಸುತ್ತಿದೆ

ಬಾಬಾ ಸಾಹೇಬರ ಪರಿನಿಬ್ಬಾಣ ಜಗತ್ತಿನ ಕವಲುದಾರಿಗೊಂದು ಕೈಮರದಂತೆ ಕಾಣಿಸುತ್ತಿದೆ

- Advertisement -
- Advertisement -

ಬುದ್ಧನ ತತ್ವಗಳು, ಬಸವ- ಅಲ್ಲಮರ ಚಿಂತನೆಗಳು, ಬಾಬಾ ಸಾಹೇಬರ ವಿಚಾರಗಳು , ನಮ್ಮ ಸಂವಿಧಾನದ ದಿಕ್ಸೂಚಿಗಳು ಹಾಗೂ ಕಳೆದ 75 ವರ್ಷಗಳಿಂದ ಸ್ಕ್ಯಾಂಡಿನೇವಿಯನ್ ದೇಶಗಳು ಒಂದು ಮಟ್ಟಿಗೆ ಸಾಧಿಸಿದ ಆಧುನಿಕ‌ ಮಾನವೀಯ‌- ವೈಜ್ಞಾನಿಕ ಸಂರಚನೆಗಳು ಇಷ್ಟು ಸಾಕು ಜಗತ್ತು ಮತ್ತು ಅದರೊಳಗಣ ಭಾರತ ಜೀವಂತವಾಗಿ ಇನ್ನಷ್ಟು ವರ್ಷಗಳ ಕಾಲ ಬದುಕಲು.

ಆದರೆ;

ಸರ್ವಾಧಿಕಾರಿ ಫ್ಯಾಸಿಸ್ಟ್ ವ್ಯವಸ್ಥೆಗಳು ಮನುಷ್ಯರು ಬದುಕಬಹುದಾದ ಅವಕಾಶಗಳನ್ನೆ ನಾಶ ಮಾಡುತ್ತಿವೆ.
ಪ್ರಭುತ್ವವಷ್ಟೆ ಫ್ಯಾಸಿಸಮ್ಮನ್ನು ಹುಟ್ಟಿ ಹಾಕುವುದಿಲ್ಲ ಎಂಬ ಅಂಬರ್ಟೊ‌ ಎಕೊನ ಚಿಂತನೆಗಳನ್ನು ಸಹಾನುಭೂತಿಯಿಂದ ನೋಡಬೇಕಾಗಿದೆ.
ಪ್ರಭುತ್ವ ಎನ್ನುವುದಕ್ಕಿಂತ
ವ್ಯವಸ್ಥೆ ಎನ್ನುವುದು ಹೆಚ್ಚು ಸೂಕ್ತ. ಮಧ್ಯಮ ವರ್ಗದ ಗುಮಾನಿಯ,ಆತಂಕದ , ಫೋಬಿಯಾಕಾರಕವಾದ ಮನೋಭಾವವು ತನಗೆ ಬೇಕಾದ ಪ್ರಭುತ್ವವನ್ನು ನಿರ್ಮಾಣ ಮಾಡಿಕೊಳ್ಳುವುದನ್ನು ನೋಡುತ್ತಿದ್ದೇವೆ. ಮಧ್ಯಮ ವರ್ಗವು ಹುಡುಕೀ ಹುಡುಕಿ ಫ್ಯಾಸಿಸ್ಟ್ ನಾಯಕರನ್ನು ಬೆಳೆಸುತ್ತಿದೆ.

ಹಾಗೆ ಸೃಷ್ಟಿಯಾದ ಈ‌ ನಾಯಕರು ಜೀವ ಶತ್ರುಗಳಾಗಿ ಬೆಳೆಯುತ್ತಿದ್ದಾರೆ. ಅಮೆರಿಕದಲ್ಲಿ ಫ್ಯಾಂಗ್ಸ್ ( Face book, Alphabet, Netflix, Google) ಕಂಪೆನಿಗಳು ಅಲ್ಲಿ ಫ್ಯಾಸಿಸಂ ಬೆಳೆಯಲು ಕಾರಣವಾಗುತ್ತಿವೆ‌. ಜಗತ್ತಿನ ಪ್ರಮುಖ ದೇಶಗಳಲ್ಲಿ ಈ ರೀತಿಯ ಬೃಹತ್ ಬಂಡವಾಳಿಗ ಕುಳಗಳು ಹಾಗೂ ಇವುಗಳಿಗೆ ಪೂರಕವಾಗಿ ದುಡಿಯುವವರು ಜನರಲ್ಲಿ ಫ್ಯಾಸಿಸ್ಟ್ ಮನಸ್ಥಿತಿಗೆ ಬೇಕಾದ Consentನ್ನು ಉತ್ಪಾದಿಸುತ್ತಿದ್ದಾರೆ.

ಇದರ ಅಪಾಯಗಳ ಕುರಿತು ಜನರಿಗೆ ತಿಳಿ ಹೇಳಬೇಕಾದ ಚಳುವಳಿಗಳು ಹಾಗೂ ಚಿಂತಕರು ಸೋತು ಹೋದಂತೆ ಕಾಣಿಸುತ್ತಿದ್ದಾರೆ. ಸಮಾಜಗಳು ಗದ್ದಲಗಳ ಗ್ರಾಹಕರಾಗಿ ಸ್ಮಾರ್ಟ್ ಫೋನುಗಳಲ್ಲಿ ಮುಳುಗಿವೆ.

ಆದರೂ ಕವಿಯುತ್ತಿರುವ ಕಗ್ಗತ್ತಲಿಗೆ ದಿಕ್ಕೆಡಲೇಬೇಕು.‌ ಹಾಗೆ ದಿಕ್ಕೆಟ್ಟ. ಕ್ಷಣ. ಬುದ್ಧ, ಜೀಸಸ್, ಪೈಗಂಬರ್, ಬಸವ- ಅಲ್ಲಮ, ಅಂಬೇಡ್ಕರ್, ನಾರಾಯಣಗುರು, ಗಾಂಧಿ ಬೇಕಾಗುತ್ತಾರೆ.

ಆದರೆ ಇತ್ತೀಚೆಗೆ ಎಲಾನ್ ಮಸ್ಕ್ ಮೂರನೇ ಮಹಾಯುದ್ಧ ಹತ್ತಿರದಲ್ಲೆ ಇದೆ ಎಂದಾಗ ಎದೆ ಧಸಕ್ಕೆಂದಿದ್ದಂತೂ ನಿಜ.

ಬಾಬಾ ಸಾಹೇಬರ ಪರಿನಿಬ್ಬಾಣ ಜಗತ್ತಿನ ಕವಲುದಾರಿಗೊಂದು ಕೈಮರದಂತೆ ಕಾಣಿಸುತ್ತಿದೆ.

ಡಾ. ನೆಲ್ಕುಂಟೆ ವೆಂಕಟೇಶಯ್ಯ,

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳಿಗೆ ಭಗವದ್ಗೀತೆ ಬೋಧಿಸುವಂತೆ ಪತ್ರ ಬರೆದ ‘ಜಾತ್ಯತೀತ ಜನತಾದಳ’ ನಾಯಕ ಕುಮಾರಸ್ವಾಮಿ

ಭಗವದ್ಗೀತೆಯನ್ನು 'ಪವಿತ್ರ ಗ್ರಂಥ' ಎಂದಿರುವ ಜಾತ್ಯತೀತ ಜನತಾದಳ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ. ಕುಮಾರಸ್ವಾಮಿ, ವಿದ್ಯಾರ್ಥಿಗಳಿಗೆ ಪಠ್ಯದಲ್ಲಿ ಭಗವದ್ಗೀತೆ ಬೋಧಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಕೇಂದ್ರ ಶಿಕ್ಷಣ...

‘ಲವ್ ಜಿಹಾದ್’ ಕಾರ್ಯಕ್ರಮಗಳನ್ನು ತೆಗೆದು ಹಾಕಲು ಐದು ಚಾನೆಲ್‌ಗಳಿಗೆ ಎನ್‌ಬಿಡಿಎಸ್‌ಎ ಆದೇಶ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯ (ಎನ್‌ಸಿಆರ್‌ಟಿ) ಪಠ್ಯಪುಸ್ತಕವನ್ನು 'ಲವ್ ಜಿಹಾದ್' ಪಿತೂರಿಯೊಂದಿಗೆ ಜೋಡಿಸುವ ಎಂಟು ಕಾರ್ಯಕ್ರಮಗಳನ್ನು ತೆಗೆದುಹಾಕುವಂತೆ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರವು (ಎನ್‌ಬಿಡಿಎಸ್‌ಎ) ಮಂಗಳವಾರ (ಡಿಸೆಂಬರ್...

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಪ್ರಪ್ರಥಮ ‘ಫಿಫಾ ಶಾಂತಿ’ ಪ್ರಶಸ್ತಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರಿಗೆ ಹೊಸ ಫಿಫಾ ಶಾಂತಿ ಪ್ರಶಸ್ತಿಯನ್ನು ಶುಕ್ರವಾರ ನೀಡಲಾಯಿತು. ನೊಬೆಲ್ ಶಾಂತಿ ಪ್ರಶಸ್ತಿಗಾಗಿ ಬಹಿರಂಗವಾಗಿ ಆಸೆ ವ್ಯಕ್ತಪಡಿಸಿದ್ದ ಅವರಿಗೆ, ಹೊಸದಾಗಿ ರಚಿಸಲಾದ ಫಿಫಾ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಟ್ರಂಪ್...

ಮಧ್ಯಪ್ರದೇಶ| ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಬಿಟ್ಟ ಚಿರತೆ ಮರಿ ಸಾವು

ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಕಾಡಿಗೆ ಬಿಟ್ಟ ಒಂದು ದಿನದ ನಂತರ ಚಿರತೆ ಮರಿ ಸಾವನ್ನಪ್ಪಿದೆ ಎಂದು ಅರಣ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಗುರುವಾರ ಅಂತರರಾಷ್ಟ್ರೀಯ ಚಿರತೆ ದಿನದ...

ಕೆಂಪು ಕೋಟೆ ಸ್ಫೋಟಕ್ಕೆ ಜಮಾತೆ-ಇ-ಇಸ್ಲಾಮ್ ಗುಂಪನ್ನು ಸಂಪರ್ಕಿಸುವ ಹೇಳಿಕೆ: ಬಿಜೆಪಿ ನಾಯಕನಿಗೆ ಲೀಗಲ್‌ ನೋಟಿಸ್

ಜಮಾತೆ-ಇ-ಇಸ್ಲಾಮಿ ಹಿಂದ್ (ಜೆಐಎಚ್) ಕೇರಳವು, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್, ಮನೋರಮಾ ನ್ಯೂಸ್ ಸಂಪಾದಕ, ಕಾರ್ಯಕ್ರಮಕ್ಕೆ ಸಂಬಂಧಿಸಿದ ಸಂದರ್ಶಕರಿಗೆ ಕಾನೂನು ನೋಟಿಸ್ ಜಾರಿ ಮಾಡಿದೆ. ಸಂಸ್ಥೆಯನ್ನು ಕೆಂಪು ಕೋಟೆ ಬಾಂಬ್...

ಅತ್ಯಾಚಾರ ಆರೋಪ : ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನಕ್ಕೆ ಹೈಕೋರ್ಟ್ ತಡೆ

ಮಹಿಳೆ ಮೇಲೆ ಅತ್ಯಾಚಾರ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ ಆರೋಪ ಪ್ರಕರಣದಲ್ಲಿ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಡಿಸೆಂಬರ್ 15ರವರೆಗೆ ಬಂಧಿಸದಂತೆ ಕೇರಳ ಹೈಕೋರ್ಟ್ ಶನಿವಾರ (ಡಿಸೆಂಬರ್ 6) ಪೊಲೀಸರಿಗೆ ನಿರ್ಬಂಧ ವಿಧಿಸಿದೆ. ನಿರೀಕ್ಷಣಾ...

ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪಾದಯಾತ್ರೆ; ಸಿದ್ದರಾಮನಹುಂಡಿಯಲ್ಲಿ ಹೋರಾಟಗಾರರ ಬಂಧನ

ಪರಿಶಿಷ್ಟ ಜಾತಿ (ಎಸ್‌ಸಿ) ಸಮಗ್ರ ಒಳಮೀಸಲಾತಿ ಜಾರಿಗೆ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಆಗ್ರಹಿಸಿ, 'ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ'ಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ವಗ್ರಾಮವಾದ ಸಿದ್ದರಾಮನಹುಂಡಿಯಿಂದ ಮೈಸೂರಿನವರೆಗೆ...

ಇಂಡಿಗೋ ಏರ್‌ಲೈನ್ಸ್‌ ಕಾರ್ಯಾಚರಣೆ ಅಸ್ತವ್ಯಸ್ತ; ತನಿಖೆಗೆ ಆದೇಶಿಸಿದ ಕೇಂದ್ರ ಸರ್ಕಾರ

ಇಂಡಿಗೋದ ದೊಡ್ಡ ಪ್ರಮಾಣದ ವಿಮಾನ ರದ್ದತಿಯಿಂದ ಉಂಟಾದ ಬೃಹತ್ ಅಡಚಣೆಯ ಬಗ್ಗೆ ಕೇಂದ್ರ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಶುಕ್ರವಾರ ಘೋಷಿಸಿದೆ. ಸಾವಿರಾರು ಪ್ರಯಾಣಿಕರು ದೇಶಾದ್ಯಂತ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ಗರ್ಭಿಣಿ ಮಹಿಳೆ, ಮಗನನ್ನು ವಾಪಸ್ ಕರೆ ತಂದ ಅಧಿಕಾರಿಗಳು

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶಕ್ಕೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ಗರ್ಭಿಣಿ ಮಹಿಳೆ ಮತ್ತು ಅವರ ಎಂಟು ವರ್ಷದ ಮಗನನ್ನು ಶುಕ್ರವಾರ (ಡಿಸೆಂಬರ್ 5) ಭಾರತಕ್ಕೆ ಮರಳಿ ಕರೆತರಲಾಗಿದೆ. ಸುನಾಲಿ ಖಾತೂನ್ ಎಂಬ ಮಹಿಳೆ...

‘ಜೈ ಶ್ರೀ ರಾಮ್’ ಹೇಳಲು ನಿರಾಕರಿಸಿದ ಮುಸ್ಲಿಂ ಚಾಲಕನಿಗೆ ಕಿರುಕುಳ; ಬಿಜೆಪಿ ಕಾರ್ಯಕರ್ತನ ಬಂಧನ

ಉತ್ತರ ಪ್ರದೇಶದ ಆಗ್ರಾದ 57 ವರ್ಷದ ಮುಸ್ಲಿಂ ಟ್ಯಾಕ್ಸಿ ಚಾಲಕನೊಬ್ಬ ಜೈ ಶ್ರೀರಾಮ್ ಎಂದು ಹೇಳಲು ನಿರಾಕರಿಸಿದ್ದಕ್ಕಾಗಿ ಕಿರುಕುಳ ನೀಡಿ ಹಲ್ಲೆ ನಡೆಸಿದ ಒಂದು ವಾರದ ನಂತರ, ಪ್ರಮುಖ ಆರೋಪಿ ರೋಹಿತ್ ಠಾಕೂರ್‌ನನ್ನು...