Homeಮುಖಪುಟಬಾಬಾ ಸಾಹೇಬರ ಪರಿನಿಬ್ಬಾಣ ಜಗತ್ತಿನ ಕವಲುದಾರಿಗೊಂದು ಕೈಮರದಂತೆ ಕಾಣಿಸುತ್ತಿದೆ

ಬಾಬಾ ಸಾಹೇಬರ ಪರಿನಿಬ್ಬಾಣ ಜಗತ್ತಿನ ಕವಲುದಾರಿಗೊಂದು ಕೈಮರದಂತೆ ಕಾಣಿಸುತ್ತಿದೆ

- Advertisement -
- Advertisement -

ಬುದ್ಧನ ತತ್ವಗಳು, ಬಸವ- ಅಲ್ಲಮರ ಚಿಂತನೆಗಳು, ಬಾಬಾ ಸಾಹೇಬರ ವಿಚಾರಗಳು , ನಮ್ಮ ಸಂವಿಧಾನದ ದಿಕ್ಸೂಚಿಗಳು ಹಾಗೂ ಕಳೆದ 75 ವರ್ಷಗಳಿಂದ ಸ್ಕ್ಯಾಂಡಿನೇವಿಯನ್ ದೇಶಗಳು ಒಂದು ಮಟ್ಟಿಗೆ ಸಾಧಿಸಿದ ಆಧುನಿಕ‌ ಮಾನವೀಯ‌- ವೈಜ್ಞಾನಿಕ ಸಂರಚನೆಗಳು ಇಷ್ಟು ಸಾಕು ಜಗತ್ತು ಮತ್ತು ಅದರೊಳಗಣ ಭಾರತ ಜೀವಂತವಾಗಿ ಇನ್ನಷ್ಟು ವರ್ಷಗಳ ಕಾಲ ಬದುಕಲು.

ಆದರೆ;

ಸರ್ವಾಧಿಕಾರಿ ಫ್ಯಾಸಿಸ್ಟ್ ವ್ಯವಸ್ಥೆಗಳು ಮನುಷ್ಯರು ಬದುಕಬಹುದಾದ ಅವಕಾಶಗಳನ್ನೆ ನಾಶ ಮಾಡುತ್ತಿವೆ.
ಪ್ರಭುತ್ವವಷ್ಟೆ ಫ್ಯಾಸಿಸಮ್ಮನ್ನು ಹುಟ್ಟಿ ಹಾಕುವುದಿಲ್ಲ ಎಂಬ ಅಂಬರ್ಟೊ‌ ಎಕೊನ ಚಿಂತನೆಗಳನ್ನು ಸಹಾನುಭೂತಿಯಿಂದ ನೋಡಬೇಕಾಗಿದೆ.
ಪ್ರಭುತ್ವ ಎನ್ನುವುದಕ್ಕಿಂತ
ವ್ಯವಸ್ಥೆ ಎನ್ನುವುದು ಹೆಚ್ಚು ಸೂಕ್ತ. ಮಧ್ಯಮ ವರ್ಗದ ಗುಮಾನಿಯ,ಆತಂಕದ , ಫೋಬಿಯಾಕಾರಕವಾದ ಮನೋಭಾವವು ತನಗೆ ಬೇಕಾದ ಪ್ರಭುತ್ವವನ್ನು ನಿರ್ಮಾಣ ಮಾಡಿಕೊಳ್ಳುವುದನ್ನು ನೋಡುತ್ತಿದ್ದೇವೆ. ಮಧ್ಯಮ ವರ್ಗವು ಹುಡುಕೀ ಹುಡುಕಿ ಫ್ಯಾಸಿಸ್ಟ್ ನಾಯಕರನ್ನು ಬೆಳೆಸುತ್ತಿದೆ.

ಹಾಗೆ ಸೃಷ್ಟಿಯಾದ ಈ‌ ನಾಯಕರು ಜೀವ ಶತ್ರುಗಳಾಗಿ ಬೆಳೆಯುತ್ತಿದ್ದಾರೆ. ಅಮೆರಿಕದಲ್ಲಿ ಫ್ಯಾಂಗ್ಸ್ ( Face book, Alphabet, Netflix, Google) ಕಂಪೆನಿಗಳು ಅಲ್ಲಿ ಫ್ಯಾಸಿಸಂ ಬೆಳೆಯಲು ಕಾರಣವಾಗುತ್ತಿವೆ‌. ಜಗತ್ತಿನ ಪ್ರಮುಖ ದೇಶಗಳಲ್ಲಿ ಈ ರೀತಿಯ ಬೃಹತ್ ಬಂಡವಾಳಿಗ ಕುಳಗಳು ಹಾಗೂ ಇವುಗಳಿಗೆ ಪೂರಕವಾಗಿ ದುಡಿಯುವವರು ಜನರಲ್ಲಿ ಫ್ಯಾಸಿಸ್ಟ್ ಮನಸ್ಥಿತಿಗೆ ಬೇಕಾದ Consentನ್ನು ಉತ್ಪಾದಿಸುತ್ತಿದ್ದಾರೆ.

ಇದರ ಅಪಾಯಗಳ ಕುರಿತು ಜನರಿಗೆ ತಿಳಿ ಹೇಳಬೇಕಾದ ಚಳುವಳಿಗಳು ಹಾಗೂ ಚಿಂತಕರು ಸೋತು ಹೋದಂತೆ ಕಾಣಿಸುತ್ತಿದ್ದಾರೆ. ಸಮಾಜಗಳು ಗದ್ದಲಗಳ ಗ್ರಾಹಕರಾಗಿ ಸ್ಮಾರ್ಟ್ ಫೋನುಗಳಲ್ಲಿ ಮುಳುಗಿವೆ.

ಆದರೂ ಕವಿಯುತ್ತಿರುವ ಕಗ್ಗತ್ತಲಿಗೆ ದಿಕ್ಕೆಡಲೇಬೇಕು.‌ ಹಾಗೆ ದಿಕ್ಕೆಟ್ಟ. ಕ್ಷಣ. ಬುದ್ಧ, ಜೀಸಸ್, ಪೈಗಂಬರ್, ಬಸವ- ಅಲ್ಲಮ, ಅಂಬೇಡ್ಕರ್, ನಾರಾಯಣಗುರು, ಗಾಂಧಿ ಬೇಕಾಗುತ್ತಾರೆ.

ಆದರೆ ಇತ್ತೀಚೆಗೆ ಎಲಾನ್ ಮಸ್ಕ್ ಮೂರನೇ ಮಹಾಯುದ್ಧ ಹತ್ತಿರದಲ್ಲೆ ಇದೆ ಎಂದಾಗ ಎದೆ ಧಸಕ್ಕೆಂದಿದ್ದಂತೂ ನಿಜ.

ಬಾಬಾ ಸಾಹೇಬರ ಪರಿನಿಬ್ಬಾಣ ಜಗತ್ತಿನ ಕವಲುದಾರಿಗೊಂದು ಕೈಮರದಂತೆ ಕಾಣಿಸುತ್ತಿದೆ.

ಡಾ. ನೆಲ್ಕುಂಟೆ ವೆಂಕಟೇಶಯ್ಯ,

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...