Homeಮುಖಪುಟಬಾಬರಿ ಮಸೀದಿ ಪ್ರಕರಣದಲ್ಲಿ ಗಲ್ಲಿಗೇರಿಸಲಿ, ಜಾಮೀನು ಪಡೆಯುವುದಿಲ್ಲ- ಉಮಾ ಭಾರತಿ

ಬಾಬರಿ ಮಸೀದಿ ಪ್ರಕರಣದಲ್ಲಿ ಗಲ್ಲಿಗೇರಿಸಲಿ, ಜಾಮೀನು ಪಡೆಯುವುದಿಲ್ಲ- ಉಮಾ ಭಾರತಿ

ಉಮಾ ಭಾರತಿ ಜೆ.ಪಿ.ನಡ್ಡಾಗೆ ಪತ್ರ ಬರೆದಿದ್ದು, ಯಾವುದೇ ಕಾರಣಕ್ಕೂ ನಾನು ಜಾಮೀನು ಕೋರುವುದಿಲ್ಲ. ತಪ್ಪಿತಸ್ಥರೆಂದು ಸಾಬೀತಾದರೇ ಗಲ್ಲಿಗೇರಿಸಲಿ ನಾನು ಸಿದ್ಧ ಎಂದಿದ್ದಾರೆ.

- Advertisement -
- Advertisement -

ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಲಖನೌದ ವಿಶೇಷ ಸಿಬಿಐ ನ್ಯಾಯಾಲಯ ನಾಳೆ (ಸೆ.30) ತೀರ್ಪು ಪ್ರಕಟಿಸಲಿದೆ. ನ್ಯಾಯಾಧೀಶ ಎಸ್.ಕೆ.ಯಾದವ್ ವಿಚಾರಣೆ ನಡೆಸಲಿದ್ದು, ತೀರ್ಪಿನ ವಿಚಾರಣೆಗಾಗಿ ಪ್ರಕರಣದ 32 ಆರೋಪಿಗಳನ್ನು ಆ ದಿನ ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯ ನಿರ್ದೇಶಿಸಿತ್ತು.

ನಾಳೆ ತೀರ್ಪು ಬರುವ ಹಿನ್ನೆಲೆ ಬಿಜೆಪಿ ನಾಯಕಿ, ಪ್ರಕರಣದ ಪ್ರಮುಖ ಆರೋಪಿಯಾಗಿರುವ ಉಮಾ ಭಾರತಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾಗೆ ಪತ್ರ ಬರೆದಿದ್ದಾರೆ. ಯಾವುದೇ ಕಾರಣಕ್ಕೂ ನಾನು ಜಾಮೀನು ಕೋರುವುದಿಲ್ಲ. ತಪ್ಪಿತಸ್ಥರೆಂದು ಸಾಬೀತಾದರೇ ಗಲ್ಲಿಗೇರಿಸಲಿ ನಾನು ಸಿದ್ಧ ಎಂದಿದ್ದಾರೆ.

ಸೆಪ್ಟೆಂಬರ್ 26 ರಂದು ಬರೆದಿರುವ ಪತ್ರದಲ್ಲಿ “ಸೆಪ್ಟೆಂಬರ್ 30 ರಂದು ಅಯೋಧ್ಯೆಯ ತೀರ್ಪು ಏನೆಂದು ನನಗೆ ತಿಳಿದಿಲ್ಲ. ಆದರೆ ನಾನು ಜಾಮೀನು ಪಡೆಯುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಯೋಧ್ಯೆ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ: ಉಮಾಭಾರತಿ

“ಅಯೋಧ್ಯೆ ಚಳವಳಿಯಲ್ಲಿ ಭಾಗವಹಿಸಿದ್ದಕ್ಕೆ ನನಗೆ ಹೆಮ್ಮೆ ಇದೆ. ಅಯೋಧ್ಯೆ ಚಳವಳಿಯ ಭಾಗವಾಗಿದ್ದಕ್ಕಾಗಿ  ಗಲ್ಲಿಗೇರುವ ಪರಿಸ್ಥಿತಿ ಬಂದರು, ಅದು ನನಗೆ ಸ್ವೀಕಾರಾರ್ಹ ಎಂದು ನಾನು ಯಾವಾಗಲೂ ಹೇಳಿದ್ದೇನೆ” ಎಂದು  ಬರೆದಿದ್ದಾರೆ. “ತೀರ್ಪು ಏನು ಎಂದು ನನಗೆ ತಿಳಿದಿಲ್ಲ, ಆದರೆ ನಾನು ಜಾಮೀನು ತೆಗೆದುಕೊಳ್ಳುವುದಿಲ್ಲ. ಜಾಮೀನು ತೆಗೆದುಕೊಳ್ಳುವುದರಿಂದ ನಾನು ಚಳವಳಿಯಲ್ಲಿ ಭಾಗವಹಿಸಿದ್ದ ಘನತೆಗೆ ಕಳಂಕ ತರುತ್ತದೆ ಎಂದಿದ್ದಾರೆ. ಇಂತಹ ಸಂದರ್ಭಗಳಲ್ಲಿ, ನೀವು ನನ್ನನ್ನು ಹೊಸ ತಂಡದಲ್ಲಿ ಇರಿಸಿಕೊಳ್ಳಲು ಬಯಸುತ್ತೀರೋ ಇಲ್ಲವೋ, ಅದನ್ನು ನೀವು ಪರಿಗಣಿಸಬೇಕು” ಎಂದಿದ್ದಾರೆ.

ಪತ್ರವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೊಸ ಬಿಜೆಪಿ ಪದಾಧಿಕಾರಿಗಳನ್ನು ಘೋಷಿಸಿದ ದಿನದಂದು ಬರೆಯಲಾಗಿದೆ. ಅಂದೇ ಉಮಾ ಭಾರತಿಯನ್ನು ಪಕ್ಷದ ಉಪಾಧ್ಯಕ್ಷ ಸ್ಥಾನದಿಂದ ಕೈಬಿಡಲಾಗಿತ್ತು. ಆದರೆ ಪಕ್ಷದ ಸಾಂಸ್ಥಿಕ ಪುರ್ನರಚನೆ ಮುಂಚಿತವಾಗಿಯೇ ಈ ಪತ್ರವನ್ನು ಬರೆಯಲಾಗಿದೆ ಎಂದು ಉಮಾ ಭಾರತಿಯವರ ಖಾಸಗಿ ಕಾರ್ಯದರ್ಶಿ ವಿಷ್ಣುಗುಪ್ತ ವೈದ್ಯ ಹೇಳಿದ್ದಾರೆ.

ಉಮಾಭಾರತಿ ಪ್ರಧಾನಿ ನರೇಂದ್ರ ಮೋದಿಯವರ ಮೊದಲ ಸಂಪುಟ ಸಭೆಯಲ್ಲಿ ಕೇಂದ್ರ ಮಂತ್ರಿಯಾಗಿದ್ದರು. ಆದರೆ 2019ರ ಲೋಕಸಭಾ ಚುನಾವಣೆಯಿಂದ ದೂರ ಉಳಿದಿದ್ದರು.

ಇದನ್ನೂ ಓದಿ: ರಾಮ ಮಂದಿರದ ’ಭೂಮಿ ಪೂಜೆ’ಗೆ ಬಾಬರಿ ಮಸೀದಿ ಧ್ವಂಸಗೊಳಿಸಿದವರನ್ನು ಆಹ್ವಾನಿಸಿ: ದುಬೆ

ನಾಳೆ ಪ್ರಕರಣದ ತೀರ್ಪು ಹೊರಬೀಳಲಿದ್ದು, ಆರೋಪಿಗಳಾದ ಬಿಜೆಪಿಯ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ, ಮತ್ತು ರಾಜಸ್ಥಾನದ ಮಾಜಿ ಗವರ್ನರ್ ಕಲ್ಯಾಣ್ ಸಿಂಗ್, ಬಿಜೆಪಿ ಮುಖಂಡ ಎಂ.ಎಂ.ಜೋಶಿ, ಉಮಾ ಭಾರತಿ ಮತ್ತು ವಿನಯ್ ಕಟಿಯಾರ್ ಸೇರಿದಂತೆ 32 ಆರೋಪಿಗಳು ವಿಚಾರಣೆಯಂದು ನ್ಯಾಯಾಲಯದಲ್ಲಿರುವಂತೆ ತಿಳಿಸಲಾಗಿತ್ತು.

ಆದರೆ ಕೆಲವು ಹಿರಿಯ ರಾಜಕೀಯ ಮುಖಂಡರು, ಕೆಲವರ ವೈಯಕ್ತಿಕ ಕಾರಣದಿಂದ ಖುದ್ದು ಹಾಜರಾತಿಯಿಂದ ವಿನಾಯಿತಿ ಪಡೆಯಬಹುದು ಎಂದು ತಿಳಿದು ಬಂದಿದೆ.

ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕರಾದ ಎಲ್.ಕೆ. ಆಡ್ವಾಣಿ ಮತ್ತು ಮುರಳಿ ಮನೋಹರ ಜೋಶಿ ಸೇರಿದಂತೆ 32 ಆರೋಪಿಗಳಲ್ಲಿ ಕೆಲವರು, ತಮ್ಮ ವಯಸ್ಸು ಮತ್ತು ಕೊರೊನಾ ರೋಗವನ್ನು ಮುಂದಿಟ್ಟು ವಿಡಿಯೊ ಕಾನ್ಫರೆನ್ಸ್ ಮೂಲಕ ಹಾಜರಾಗಲು ನ್ಯಾಯಾಲಯವನ್ನು ಕೋರಬಹುದು ಎಂದು ಆರೋಪಿಗಳ ಪರ ವಕೀಲ ಕೆ.ಕೆ. ಮಿಶ್ರಾ ತಿಳಿಸಿದ್ದಾರೆ.

ಕೇಂದ್ರದ ಮಾಜಿ ಸಚಿವೆ ಉಮಾ ಭಾರತಿ ಅವರಿಗೆ ಸೋಮವಾರ ಕೊರೊನಾ ಸೋಂಕು ತಗುಲಿರುವುದಾಗಿ ಟ್ವೀಟ್ ಮಾಡಿದ್ದಾರೆ. ಏಮ್ಸ್ ವೈದ್ಯರು ಅನುಮತಿ ನೀಡಿದರೆ ಮಾತ್ರ ನಾಡಿದ್ದು ನಾನು ಲಖನೌದ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಹಾಜರಾಗುತ್ತೇನೆ ಎಂದಿದ್ದರು.

ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಕೂಡ ಘಾಜಿಯಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿನ ಚಿಕಿತ್ಸೆ ಪಡೆಯುತ್ತಿದ್ದಾರೆ.


ಇದನ್ನೂ ಓದಿ: ಬಾಬರಿ ಮಸೀದಿ ಧ್ವಂಸ ಪ್ರಕರಣ: ಸೆ.30ಕ್ಕೆ ಸಿಬಿಐ ವಿಶೇಷ ಕೋರ್ಟ್ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....