Homeಮುಖಪುಟಬಾಬರಿ ಮಸೀದಿ ಪ್ರಕರಣದಲ್ಲಿ ಗಲ್ಲಿಗೇರಿಸಲಿ, ಜಾಮೀನು ಪಡೆಯುವುದಿಲ್ಲ- ಉಮಾ ಭಾರತಿ

ಬಾಬರಿ ಮಸೀದಿ ಪ್ರಕರಣದಲ್ಲಿ ಗಲ್ಲಿಗೇರಿಸಲಿ, ಜಾಮೀನು ಪಡೆಯುವುದಿಲ್ಲ- ಉಮಾ ಭಾರತಿ

ಉಮಾ ಭಾರತಿ ಜೆ.ಪಿ.ನಡ್ಡಾಗೆ ಪತ್ರ ಬರೆದಿದ್ದು, ಯಾವುದೇ ಕಾರಣಕ್ಕೂ ನಾನು ಜಾಮೀನು ಕೋರುವುದಿಲ್ಲ. ತಪ್ಪಿತಸ್ಥರೆಂದು ಸಾಬೀತಾದರೇ ಗಲ್ಲಿಗೇರಿಸಲಿ ನಾನು ಸಿದ್ಧ ಎಂದಿದ್ದಾರೆ.

- Advertisement -
- Advertisement -

ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಲಖನೌದ ವಿಶೇಷ ಸಿಬಿಐ ನ್ಯಾಯಾಲಯ ನಾಳೆ (ಸೆ.30) ತೀರ್ಪು ಪ್ರಕಟಿಸಲಿದೆ. ನ್ಯಾಯಾಧೀಶ ಎಸ್.ಕೆ.ಯಾದವ್ ವಿಚಾರಣೆ ನಡೆಸಲಿದ್ದು, ತೀರ್ಪಿನ ವಿಚಾರಣೆಗಾಗಿ ಪ್ರಕರಣದ 32 ಆರೋಪಿಗಳನ್ನು ಆ ದಿನ ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯ ನಿರ್ದೇಶಿಸಿತ್ತು.

ನಾಳೆ ತೀರ್ಪು ಬರುವ ಹಿನ್ನೆಲೆ ಬಿಜೆಪಿ ನಾಯಕಿ, ಪ್ರಕರಣದ ಪ್ರಮುಖ ಆರೋಪಿಯಾಗಿರುವ ಉಮಾ ಭಾರತಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾಗೆ ಪತ್ರ ಬರೆದಿದ್ದಾರೆ. ಯಾವುದೇ ಕಾರಣಕ್ಕೂ ನಾನು ಜಾಮೀನು ಕೋರುವುದಿಲ್ಲ. ತಪ್ಪಿತಸ್ಥರೆಂದು ಸಾಬೀತಾದರೇ ಗಲ್ಲಿಗೇರಿಸಲಿ ನಾನು ಸಿದ್ಧ ಎಂದಿದ್ದಾರೆ.

ಸೆಪ್ಟೆಂಬರ್ 26 ರಂದು ಬರೆದಿರುವ ಪತ್ರದಲ್ಲಿ “ಸೆಪ್ಟೆಂಬರ್ 30 ರಂದು ಅಯೋಧ್ಯೆಯ ತೀರ್ಪು ಏನೆಂದು ನನಗೆ ತಿಳಿದಿಲ್ಲ. ಆದರೆ ನಾನು ಜಾಮೀನು ಪಡೆಯುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಯೋಧ್ಯೆ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ: ಉಮಾಭಾರತಿ

“ಅಯೋಧ್ಯೆ ಚಳವಳಿಯಲ್ಲಿ ಭಾಗವಹಿಸಿದ್ದಕ್ಕೆ ನನಗೆ ಹೆಮ್ಮೆ ಇದೆ. ಅಯೋಧ್ಯೆ ಚಳವಳಿಯ ಭಾಗವಾಗಿದ್ದಕ್ಕಾಗಿ  ಗಲ್ಲಿಗೇರುವ ಪರಿಸ್ಥಿತಿ ಬಂದರು, ಅದು ನನಗೆ ಸ್ವೀಕಾರಾರ್ಹ ಎಂದು ನಾನು ಯಾವಾಗಲೂ ಹೇಳಿದ್ದೇನೆ” ಎಂದು  ಬರೆದಿದ್ದಾರೆ. “ತೀರ್ಪು ಏನು ಎಂದು ನನಗೆ ತಿಳಿದಿಲ್ಲ, ಆದರೆ ನಾನು ಜಾಮೀನು ತೆಗೆದುಕೊಳ್ಳುವುದಿಲ್ಲ. ಜಾಮೀನು ತೆಗೆದುಕೊಳ್ಳುವುದರಿಂದ ನಾನು ಚಳವಳಿಯಲ್ಲಿ ಭಾಗವಹಿಸಿದ್ದ ಘನತೆಗೆ ಕಳಂಕ ತರುತ್ತದೆ ಎಂದಿದ್ದಾರೆ. ಇಂತಹ ಸಂದರ್ಭಗಳಲ್ಲಿ, ನೀವು ನನ್ನನ್ನು ಹೊಸ ತಂಡದಲ್ಲಿ ಇರಿಸಿಕೊಳ್ಳಲು ಬಯಸುತ್ತೀರೋ ಇಲ್ಲವೋ, ಅದನ್ನು ನೀವು ಪರಿಗಣಿಸಬೇಕು” ಎಂದಿದ್ದಾರೆ.

ಪತ್ರವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೊಸ ಬಿಜೆಪಿ ಪದಾಧಿಕಾರಿಗಳನ್ನು ಘೋಷಿಸಿದ ದಿನದಂದು ಬರೆಯಲಾಗಿದೆ. ಅಂದೇ ಉಮಾ ಭಾರತಿಯನ್ನು ಪಕ್ಷದ ಉಪಾಧ್ಯಕ್ಷ ಸ್ಥಾನದಿಂದ ಕೈಬಿಡಲಾಗಿತ್ತು. ಆದರೆ ಪಕ್ಷದ ಸಾಂಸ್ಥಿಕ ಪುರ್ನರಚನೆ ಮುಂಚಿತವಾಗಿಯೇ ಈ ಪತ್ರವನ್ನು ಬರೆಯಲಾಗಿದೆ ಎಂದು ಉಮಾ ಭಾರತಿಯವರ ಖಾಸಗಿ ಕಾರ್ಯದರ್ಶಿ ವಿಷ್ಣುಗುಪ್ತ ವೈದ್ಯ ಹೇಳಿದ್ದಾರೆ.

ಉಮಾಭಾರತಿ ಪ್ರಧಾನಿ ನರೇಂದ್ರ ಮೋದಿಯವರ ಮೊದಲ ಸಂಪುಟ ಸಭೆಯಲ್ಲಿ ಕೇಂದ್ರ ಮಂತ್ರಿಯಾಗಿದ್ದರು. ಆದರೆ 2019ರ ಲೋಕಸಭಾ ಚುನಾವಣೆಯಿಂದ ದೂರ ಉಳಿದಿದ್ದರು.

ಇದನ್ನೂ ಓದಿ: ರಾಮ ಮಂದಿರದ ’ಭೂಮಿ ಪೂಜೆ’ಗೆ ಬಾಬರಿ ಮಸೀದಿ ಧ್ವಂಸಗೊಳಿಸಿದವರನ್ನು ಆಹ್ವಾನಿಸಿ: ದುಬೆ

ನಾಳೆ ಪ್ರಕರಣದ ತೀರ್ಪು ಹೊರಬೀಳಲಿದ್ದು, ಆರೋಪಿಗಳಾದ ಬಿಜೆಪಿಯ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ, ಮತ್ತು ರಾಜಸ್ಥಾನದ ಮಾಜಿ ಗವರ್ನರ್ ಕಲ್ಯಾಣ್ ಸಿಂಗ್, ಬಿಜೆಪಿ ಮುಖಂಡ ಎಂ.ಎಂ.ಜೋಶಿ, ಉಮಾ ಭಾರತಿ ಮತ್ತು ವಿನಯ್ ಕಟಿಯಾರ್ ಸೇರಿದಂತೆ 32 ಆರೋಪಿಗಳು ವಿಚಾರಣೆಯಂದು ನ್ಯಾಯಾಲಯದಲ್ಲಿರುವಂತೆ ತಿಳಿಸಲಾಗಿತ್ತು.

ಆದರೆ ಕೆಲವು ಹಿರಿಯ ರಾಜಕೀಯ ಮುಖಂಡರು, ಕೆಲವರ ವೈಯಕ್ತಿಕ ಕಾರಣದಿಂದ ಖುದ್ದು ಹಾಜರಾತಿಯಿಂದ ವಿನಾಯಿತಿ ಪಡೆಯಬಹುದು ಎಂದು ತಿಳಿದು ಬಂದಿದೆ.

ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕರಾದ ಎಲ್.ಕೆ. ಆಡ್ವಾಣಿ ಮತ್ತು ಮುರಳಿ ಮನೋಹರ ಜೋಶಿ ಸೇರಿದಂತೆ 32 ಆರೋಪಿಗಳಲ್ಲಿ ಕೆಲವರು, ತಮ್ಮ ವಯಸ್ಸು ಮತ್ತು ಕೊರೊನಾ ರೋಗವನ್ನು ಮುಂದಿಟ್ಟು ವಿಡಿಯೊ ಕಾನ್ಫರೆನ್ಸ್ ಮೂಲಕ ಹಾಜರಾಗಲು ನ್ಯಾಯಾಲಯವನ್ನು ಕೋರಬಹುದು ಎಂದು ಆರೋಪಿಗಳ ಪರ ವಕೀಲ ಕೆ.ಕೆ. ಮಿಶ್ರಾ ತಿಳಿಸಿದ್ದಾರೆ.

ಕೇಂದ್ರದ ಮಾಜಿ ಸಚಿವೆ ಉಮಾ ಭಾರತಿ ಅವರಿಗೆ ಸೋಮವಾರ ಕೊರೊನಾ ಸೋಂಕು ತಗುಲಿರುವುದಾಗಿ ಟ್ವೀಟ್ ಮಾಡಿದ್ದಾರೆ. ಏಮ್ಸ್ ವೈದ್ಯರು ಅನುಮತಿ ನೀಡಿದರೆ ಮಾತ್ರ ನಾಡಿದ್ದು ನಾನು ಲಖನೌದ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಹಾಜರಾಗುತ್ತೇನೆ ಎಂದಿದ್ದರು.

ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಕೂಡ ಘಾಜಿಯಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿನ ಚಿಕಿತ್ಸೆ ಪಡೆಯುತ್ತಿದ್ದಾರೆ.


ಇದನ್ನೂ ಓದಿ: ಬಾಬರಿ ಮಸೀದಿ ಧ್ವಂಸ ಪ್ರಕರಣ: ಸೆ.30ಕ್ಕೆ ಸಿಬಿಐ ವಿಶೇಷ ಕೋರ್ಟ್ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...