Homeಮುಖಪುಟಬಾಬರಿ ಮಸೀದಿ ಪ್ರಕರಣದಲ್ಲಿ ಗಲ್ಲಿಗೇರಿಸಲಿ, ಜಾಮೀನು ಪಡೆಯುವುದಿಲ್ಲ- ಉಮಾ ಭಾರತಿ

ಬಾಬರಿ ಮಸೀದಿ ಪ್ರಕರಣದಲ್ಲಿ ಗಲ್ಲಿಗೇರಿಸಲಿ, ಜಾಮೀನು ಪಡೆಯುವುದಿಲ್ಲ- ಉಮಾ ಭಾರತಿ

ಉಮಾ ಭಾರತಿ ಜೆ.ಪಿ.ನಡ್ಡಾಗೆ ಪತ್ರ ಬರೆದಿದ್ದು, ಯಾವುದೇ ಕಾರಣಕ್ಕೂ ನಾನು ಜಾಮೀನು ಕೋರುವುದಿಲ್ಲ. ತಪ್ಪಿತಸ್ಥರೆಂದು ಸಾಬೀತಾದರೇ ಗಲ್ಲಿಗೇರಿಸಲಿ ನಾನು ಸಿದ್ಧ ಎಂದಿದ್ದಾರೆ.

- Advertisement -
- Advertisement -

ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಲಖನೌದ ವಿಶೇಷ ಸಿಬಿಐ ನ್ಯಾಯಾಲಯ ನಾಳೆ (ಸೆ.30) ತೀರ್ಪು ಪ್ರಕಟಿಸಲಿದೆ. ನ್ಯಾಯಾಧೀಶ ಎಸ್.ಕೆ.ಯಾದವ್ ವಿಚಾರಣೆ ನಡೆಸಲಿದ್ದು, ತೀರ್ಪಿನ ವಿಚಾರಣೆಗಾಗಿ ಪ್ರಕರಣದ 32 ಆರೋಪಿಗಳನ್ನು ಆ ದಿನ ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯ ನಿರ್ದೇಶಿಸಿತ್ತು.

ನಾಳೆ ತೀರ್ಪು ಬರುವ ಹಿನ್ನೆಲೆ ಬಿಜೆಪಿ ನಾಯಕಿ, ಪ್ರಕರಣದ ಪ್ರಮುಖ ಆರೋಪಿಯಾಗಿರುವ ಉಮಾ ಭಾರತಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾಗೆ ಪತ್ರ ಬರೆದಿದ್ದಾರೆ. ಯಾವುದೇ ಕಾರಣಕ್ಕೂ ನಾನು ಜಾಮೀನು ಕೋರುವುದಿಲ್ಲ. ತಪ್ಪಿತಸ್ಥರೆಂದು ಸಾಬೀತಾದರೇ ಗಲ್ಲಿಗೇರಿಸಲಿ ನಾನು ಸಿದ್ಧ ಎಂದಿದ್ದಾರೆ.

ಸೆಪ್ಟೆಂಬರ್ 26 ರಂದು ಬರೆದಿರುವ ಪತ್ರದಲ್ಲಿ “ಸೆಪ್ಟೆಂಬರ್ 30 ರಂದು ಅಯೋಧ್ಯೆಯ ತೀರ್ಪು ಏನೆಂದು ನನಗೆ ತಿಳಿದಿಲ್ಲ. ಆದರೆ ನಾನು ಜಾಮೀನು ಪಡೆಯುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಯೋಧ್ಯೆ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ: ಉಮಾಭಾರತಿ

“ಅಯೋಧ್ಯೆ ಚಳವಳಿಯಲ್ಲಿ ಭಾಗವಹಿಸಿದ್ದಕ್ಕೆ ನನಗೆ ಹೆಮ್ಮೆ ಇದೆ. ಅಯೋಧ್ಯೆ ಚಳವಳಿಯ ಭಾಗವಾಗಿದ್ದಕ್ಕಾಗಿ  ಗಲ್ಲಿಗೇರುವ ಪರಿಸ್ಥಿತಿ ಬಂದರು, ಅದು ನನಗೆ ಸ್ವೀಕಾರಾರ್ಹ ಎಂದು ನಾನು ಯಾವಾಗಲೂ ಹೇಳಿದ್ದೇನೆ” ಎಂದು  ಬರೆದಿದ್ದಾರೆ. “ತೀರ್ಪು ಏನು ಎಂದು ನನಗೆ ತಿಳಿದಿಲ್ಲ, ಆದರೆ ನಾನು ಜಾಮೀನು ತೆಗೆದುಕೊಳ್ಳುವುದಿಲ್ಲ. ಜಾಮೀನು ತೆಗೆದುಕೊಳ್ಳುವುದರಿಂದ ನಾನು ಚಳವಳಿಯಲ್ಲಿ ಭಾಗವಹಿಸಿದ್ದ ಘನತೆಗೆ ಕಳಂಕ ತರುತ್ತದೆ ಎಂದಿದ್ದಾರೆ. ಇಂತಹ ಸಂದರ್ಭಗಳಲ್ಲಿ, ನೀವು ನನ್ನನ್ನು ಹೊಸ ತಂಡದಲ್ಲಿ ಇರಿಸಿಕೊಳ್ಳಲು ಬಯಸುತ್ತೀರೋ ಇಲ್ಲವೋ, ಅದನ್ನು ನೀವು ಪರಿಗಣಿಸಬೇಕು” ಎಂದಿದ್ದಾರೆ.

ಪತ್ರವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೊಸ ಬಿಜೆಪಿ ಪದಾಧಿಕಾರಿಗಳನ್ನು ಘೋಷಿಸಿದ ದಿನದಂದು ಬರೆಯಲಾಗಿದೆ. ಅಂದೇ ಉಮಾ ಭಾರತಿಯನ್ನು ಪಕ್ಷದ ಉಪಾಧ್ಯಕ್ಷ ಸ್ಥಾನದಿಂದ ಕೈಬಿಡಲಾಗಿತ್ತು. ಆದರೆ ಪಕ್ಷದ ಸಾಂಸ್ಥಿಕ ಪುರ್ನರಚನೆ ಮುಂಚಿತವಾಗಿಯೇ ಈ ಪತ್ರವನ್ನು ಬರೆಯಲಾಗಿದೆ ಎಂದು ಉಮಾ ಭಾರತಿಯವರ ಖಾಸಗಿ ಕಾರ್ಯದರ್ಶಿ ವಿಷ್ಣುಗುಪ್ತ ವೈದ್ಯ ಹೇಳಿದ್ದಾರೆ.

ಉಮಾಭಾರತಿ ಪ್ರಧಾನಿ ನರೇಂದ್ರ ಮೋದಿಯವರ ಮೊದಲ ಸಂಪುಟ ಸಭೆಯಲ್ಲಿ ಕೇಂದ್ರ ಮಂತ್ರಿಯಾಗಿದ್ದರು. ಆದರೆ 2019ರ ಲೋಕಸಭಾ ಚುನಾವಣೆಯಿಂದ ದೂರ ಉಳಿದಿದ್ದರು.

ಇದನ್ನೂ ಓದಿ: ರಾಮ ಮಂದಿರದ ’ಭೂಮಿ ಪೂಜೆ’ಗೆ ಬಾಬರಿ ಮಸೀದಿ ಧ್ವಂಸಗೊಳಿಸಿದವರನ್ನು ಆಹ್ವಾನಿಸಿ: ದುಬೆ

ನಾಳೆ ಪ್ರಕರಣದ ತೀರ್ಪು ಹೊರಬೀಳಲಿದ್ದು, ಆರೋಪಿಗಳಾದ ಬಿಜೆಪಿಯ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ, ಮತ್ತು ರಾಜಸ್ಥಾನದ ಮಾಜಿ ಗವರ್ನರ್ ಕಲ್ಯಾಣ್ ಸಿಂಗ್, ಬಿಜೆಪಿ ಮುಖಂಡ ಎಂ.ಎಂ.ಜೋಶಿ, ಉಮಾ ಭಾರತಿ ಮತ್ತು ವಿನಯ್ ಕಟಿಯಾರ್ ಸೇರಿದಂತೆ 32 ಆರೋಪಿಗಳು ವಿಚಾರಣೆಯಂದು ನ್ಯಾಯಾಲಯದಲ್ಲಿರುವಂತೆ ತಿಳಿಸಲಾಗಿತ್ತು.

ಆದರೆ ಕೆಲವು ಹಿರಿಯ ರಾಜಕೀಯ ಮುಖಂಡರು, ಕೆಲವರ ವೈಯಕ್ತಿಕ ಕಾರಣದಿಂದ ಖುದ್ದು ಹಾಜರಾತಿಯಿಂದ ವಿನಾಯಿತಿ ಪಡೆಯಬಹುದು ಎಂದು ತಿಳಿದು ಬಂದಿದೆ.

ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕರಾದ ಎಲ್.ಕೆ. ಆಡ್ವಾಣಿ ಮತ್ತು ಮುರಳಿ ಮನೋಹರ ಜೋಶಿ ಸೇರಿದಂತೆ 32 ಆರೋಪಿಗಳಲ್ಲಿ ಕೆಲವರು, ತಮ್ಮ ವಯಸ್ಸು ಮತ್ತು ಕೊರೊನಾ ರೋಗವನ್ನು ಮುಂದಿಟ್ಟು ವಿಡಿಯೊ ಕಾನ್ಫರೆನ್ಸ್ ಮೂಲಕ ಹಾಜರಾಗಲು ನ್ಯಾಯಾಲಯವನ್ನು ಕೋರಬಹುದು ಎಂದು ಆರೋಪಿಗಳ ಪರ ವಕೀಲ ಕೆ.ಕೆ. ಮಿಶ್ರಾ ತಿಳಿಸಿದ್ದಾರೆ.

ಕೇಂದ್ರದ ಮಾಜಿ ಸಚಿವೆ ಉಮಾ ಭಾರತಿ ಅವರಿಗೆ ಸೋಮವಾರ ಕೊರೊನಾ ಸೋಂಕು ತಗುಲಿರುವುದಾಗಿ ಟ್ವೀಟ್ ಮಾಡಿದ್ದಾರೆ. ಏಮ್ಸ್ ವೈದ್ಯರು ಅನುಮತಿ ನೀಡಿದರೆ ಮಾತ್ರ ನಾಡಿದ್ದು ನಾನು ಲಖನೌದ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಹಾಜರಾಗುತ್ತೇನೆ ಎಂದಿದ್ದರು.

ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಕೂಡ ಘಾಜಿಯಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿನ ಚಿಕಿತ್ಸೆ ಪಡೆಯುತ್ತಿದ್ದಾರೆ.


ಇದನ್ನೂ ಓದಿ: ಬಾಬರಿ ಮಸೀದಿ ಧ್ವಂಸ ಪ್ರಕರಣ: ಸೆ.30ಕ್ಕೆ ಸಿಬಿಐ ವಿಶೇಷ ಕೋರ್ಟ್ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...