Homeಮುಖಪುಟಬಾಬರಿ ಮಸೀದಿ ದ್ವಂಸ ತೀರ್ಪು ಪ್ರಕಟಿಸಿದ ನ್ಯಾಯಾಲಯ: ಆರೋಪಿಗಳು ದೋಷಮುಕ್ತ

ಬಾಬರಿ ಮಸೀದಿ ದ್ವಂಸ ತೀರ್ಪು ಪ್ರಕಟಿಸಿದ ನ್ಯಾಯಾಲಯ: ಆರೋಪಿಗಳು ದೋಷಮುಕ್ತ

ಈ ಆರೋಪಿಗಳ ಮೇಲೆ 1992 ರ ಡಿಸೆಂಬರ್‌ನಲ್ಲಿ 15 ನೇ ಶತಮಾನದ ಬಾಬರಿ ಮಸೀದಿಯನ್ನು ಧ್ವಂಸಗೊಳಿಸಲು ಕಾರಣವಾದ ಪಿತೂರಿಯ ಆರೋಪ ಇದೆ. ಈ ಪ್ರಕರಣದಲ್ಲಿ ದೇಶಾದ್ಯಂತ ಗಲಭೆಗಳು ಸಂಭವಿಸಿ ಸುಮಾರು 3,000 ಜನರು ಸಾವನ್ನಪ್ಪಿದರು.

- Advertisement -
- Advertisement -

28 ವರ್ಷಗಳ ಹಳೆಯ ಬಾಬರಿ ಮಸೀದಿ ದ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ಇಂದು ಅಂತಿಮ ತೀರ್ಪನ್ನು ಪ್ರಕಟಿಸಿದ್ದು, ನ್ಯಾಯಾಧೀಶ ಎಸ್.ಕೆ.ಯಾದವ್ ವಿಚಾರಣೆ ನಡೆಸಿ, ತೀರ್ಪು ನೀಡಿದ್ದು, ಬಿಜೆಪಿ ಮತ್ತು ವಿಶ್ವಹಿಂದೂ ಪರಿಷತ್‌ನ ಸದಸ್ಯರು ದೋಷಮುಕ್ತರು ಎಂದು ನ್ಯಾಯಾಲಯ ಹೇಳಿದೆ.

ಪ್ರಕರಣದ 32 ಆರೋಪಿಗಳೂ ದೋಷಮುಕ್ತರು ಎಂದಿರುವ ನ್ಯಾಯಾಲಯ, “ಈ ದ್ವಂಸ ಪೂರ್ವನಿರ್ಧರಿತವಲ್ಲ” ಎಂದು ತೀರ್ಪು ನೀಡಿದೆ.

2 ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯವು ಇಂದು ತೀರ್ಮಾನ ತೆಗೆದುಕೊಂಡಿದೆ. ಮೊದಲನೆಯದ್ದು, 197/1992, ಮಸೀದಿಯನ್ನು ಕೆಡವಿದ್ದ ಅನಾಮಧೇಯ ಕರಸೇವಕರ ವಿರುದ್ಧ ಮತ್ತು ಎರಡನೆಯದು, 198/1992, ಮಸೀದಿ ಕೆಡವುವಿಕೆಗೆ ಪ್ರಚೋದನೆ ನೀಡಿದ್ದಕ್ಕಾಗಿ 8 ಜನ ಬಿಜೆಪಿ ಮುಖಂಡರ (ಎಲ್.ಕೆ.ಅಡ್ವಾಣಿ, ಎಂ.ಎಂ.ಜೋಶಿ, ಉಮಾ ಭಾರತಿ, ಕಲ್ಯಾಣ್ ಸಿಂಗ್, ವಿನಯ್ ಕಟಿಯಾರ್, ಸಾಕ್ಷಿ ಮಹಾರಾಜ್, ಲಲ್ಲು ಸಿಂಗ್, ಬಿಬಿ ಶರಣ್ ಸಿಂಗ್) ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

ಪ್ರಕರಣದ ಆರೋಪಿಗಳಾದ ಬಿಜೆಪಿಯ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ, ಮತ್ತು ರಾಜಸ್ಥಾನದ ಮಾಜಿ ಗವರ್ನರ್ ಕಲ್ಯಾಣ್ ಸಿಂಗ್, ಬಿಜೆಪಿ ಮುಖಂಡ ಎಂ.ಎಂ.ಜೋಶಿ, ಉಮಾ ಭಾರತಿ ಮತ್ತು ವಿನಯ್ ಕಟಿಯಾರ್ ಸೇರಿದಂತೆ 32 ಆರೋಪಿಗಳು ವಿಚಾರಣೆಯಂದು ನ್ಯಾಯಾಲಯದಲ್ಲಿರುವಂತೆ ತಿಳಿಸಲಾಗಿತ್ತು.

ಆದರೆ, ವಯಸ್ಸಿನ ಕಾರಣಕ್ಕೆ ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಕಲ್ಯಾಣ್ ಸಿಂಗ್, ಮಹಾಂತ್ ಗೋಪಾಲ ದಾಸ್ ಮತ್ತು ಉಮಾ ಭಾರತಿಗೆ ಕೊರೊನಾ ಸೋಂಕು ದೃಢಪಟ್ಟಿದ್ದರಿಂದ ವಿಚಾರಣೆಗೆ ನೇರವಾಗಿ ಹಾಜರಾಗಿರಲಿಲ್ಲ. ಸತೀಶ್ ಪ್ರಧಾನ್ ಸೇರಿದಂತೆ ಈ 6 ಜನ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು. ಉಳಿದ 26 ಆರೋಪಿಗಳು ನೇರವಾಗಿ ಹಾಜರಿದ್ದರು.

ಇದನ್ನೂ ಓದಿ: ಅಯೋಧ್ಯೆ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ: ಉಮಾಭಾರತಿ

ಈ ಆರೋಪಿಗಳ ಮೇಲೆ 1992 ರ ಡಿಸೆಂಬರ್‌ನಲ್ಲಿ 15 ನೇ ಶತಮಾನದ ಬಾಬರಿ ಮಸೀದಿಯನ್ನು ಧ್ವಂಸಗೊಳಿಸಲು ಕಾರಣವಾದ ಪಿತೂರಿಯ ಆರೋಪ ಇದೆ. ಈ ಪ್ರಕರಣದಲ್ಲಿ ದೇಶಾದ್ಯಂತ ಗಲಭೆಗಳು ಸಂಭವಿಸಿ ಸುಮಾರು 3,000 ಜನರು ಸಾವನ್ನಪ್ಪಿದರು.

ಏಪ್ರಿಲ್ 2017 ರಲ್ಲಿ, ಉನ್ನತ ನ್ಯಾಯಾಲಯವು, ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಎರಡು ವರ್ಷಗಳಲ್ಲಿ ಮಸೀದಿ ದ್ವಂಸ ಪ್ರಕರಣದ ವಿಚಾರಣೆಯನ್ನು ನಡೆಸಿ ಪೂರ್ಣಗೊಳಿಸಲು ಕೇಳಿಕೊಂಡಿತ್ತು. ಅದರ ನಂತರ ಹಲವು ಬಾರಿ ಗಡುವು ವಿಸ್ತರಿಸಲಾಗಿತ್ತು. ಮತ್ತೆ ವಿಶೇಷ ನ್ಯಾಯಾಧೀಶ ಎಸ್.ಕೆ. ಯಾದವ್ ಹೆಚ್ಚಿನ ಸಮಯವನ್ನು ಕೇಳಿದಾಗ, ಸೆಪ್ಟೆಂಬರ್ 30 ರೊಳಗೆ ತನ್ನ ತೀರ್ಪನ್ನು ನೀಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

ಇದನ್ನೂ ಓದಿ: ರಾಮ ಮಂದಿರದ ’ಭೂಮಿ ಪೂಜೆ’ಗೆ ಬಾಬರಿ ಮಸೀದಿ ಧ್ವಂಸಗೊಳಿಸಿದವರನ್ನು ಆಹ್ವಾನಿಸಿ: ದುಬೆ

ಕಳೆದ ನವೆಂಬರ್‌ನಲ್ಲಿ ಸುಪ್ರೀಂಕೋರ್ಟ್ ರಾಮ್ ಜನ್ಮಭೂಮಿ ಪ್ರಕರಣದ ತೀಪೂ ನೀಡಿದ್ದು, ದೇವಾಲಯ ನಿರ್ಮಿಸಲು ಆದೇಶಿಸಿತ್ತು. ‌ಈಗಾಗಲೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯಗಳು ಆರಂಭವಾಗಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ನಡೆದ ಭೂಮಿಪೂಜೆ ಸಮಾರಂಭದಲ್ಲಿ ಭಾಗವಹಿಸಿದ್ದರು.

ಇಂದು ತೀರ್ಪು ಬರುವ ಹಿನ್ನೆಲೆ ಬಿಜೆಪಿ ನಾಯಕಿ, ಪ್ರಕರಣದ ಪ್ರಮುಖ ಆರೋಪಿಯಾಗಿರುವ ಉಮಾ ಭಾರತಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾಗೆ ಸೆಪ್ಟೆಂಬರ್ 26 ರಂದು ಪತ್ರ ಬರೆದಿದ್ದಾರೆ. ಯಾವುದೇ ಕಾರಣಕ್ಕೂ ನಾನು ಜಾಮೀನು ಕೋರುವುದಿಲ್ಲ. ತಪ್ಪಿತಸ್ಥರೆಂದು ಸಾಬೀತಾದರೆ ಗಲ್ಲಿಗೇರಲೂ ನಾನು ಸಿದ್ಧ ಎಂದಿದ್ದರು.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಅಯೋಧ್ಯೆಯ ಮಸೀದಿ ಜಾಗದಲ್ಲಿ ಬಾಬ್ರಿ ಆಸ್ಪತ್ರೆ ಸ್ಥಾಪನೆ? ಈ ಸುದ್ದಿ ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...