Homeಮುಖಪುಟಬಾಬರಿ ಮಸೀದಿ ದ್ವಂಸ ತೀರ್ಪು ಪ್ರಕಟಿಸಿದ ನ್ಯಾಯಾಲಯ: ಆರೋಪಿಗಳು ದೋಷಮುಕ್ತ

ಬಾಬರಿ ಮಸೀದಿ ದ್ವಂಸ ತೀರ್ಪು ಪ್ರಕಟಿಸಿದ ನ್ಯಾಯಾಲಯ: ಆರೋಪಿಗಳು ದೋಷಮುಕ್ತ

ಈ ಆರೋಪಿಗಳ ಮೇಲೆ 1992 ರ ಡಿಸೆಂಬರ್‌ನಲ್ಲಿ 15 ನೇ ಶತಮಾನದ ಬಾಬರಿ ಮಸೀದಿಯನ್ನು ಧ್ವಂಸಗೊಳಿಸಲು ಕಾರಣವಾದ ಪಿತೂರಿಯ ಆರೋಪ ಇದೆ. ಈ ಪ್ರಕರಣದಲ್ಲಿ ದೇಶಾದ್ಯಂತ ಗಲಭೆಗಳು ಸಂಭವಿಸಿ ಸುಮಾರು 3,000 ಜನರು ಸಾವನ್ನಪ್ಪಿದರು.

- Advertisement -
- Advertisement -

28 ವರ್ಷಗಳ ಹಳೆಯ ಬಾಬರಿ ಮಸೀದಿ ದ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ಇಂದು ಅಂತಿಮ ತೀರ್ಪನ್ನು ಪ್ರಕಟಿಸಿದ್ದು, ನ್ಯಾಯಾಧೀಶ ಎಸ್.ಕೆ.ಯಾದವ್ ವಿಚಾರಣೆ ನಡೆಸಿ, ತೀರ್ಪು ನೀಡಿದ್ದು, ಬಿಜೆಪಿ ಮತ್ತು ವಿಶ್ವಹಿಂದೂ ಪರಿಷತ್‌ನ ಸದಸ್ಯರು ದೋಷಮುಕ್ತರು ಎಂದು ನ್ಯಾಯಾಲಯ ಹೇಳಿದೆ.

ಪ್ರಕರಣದ 32 ಆರೋಪಿಗಳೂ ದೋಷಮುಕ್ತರು ಎಂದಿರುವ ನ್ಯಾಯಾಲಯ, “ಈ ದ್ವಂಸ ಪೂರ್ವನಿರ್ಧರಿತವಲ್ಲ” ಎಂದು ತೀರ್ಪು ನೀಡಿದೆ.

2 ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯವು ಇಂದು ತೀರ್ಮಾನ ತೆಗೆದುಕೊಂಡಿದೆ. ಮೊದಲನೆಯದ್ದು, 197/1992, ಮಸೀದಿಯನ್ನು ಕೆಡವಿದ್ದ ಅನಾಮಧೇಯ ಕರಸೇವಕರ ವಿರುದ್ಧ ಮತ್ತು ಎರಡನೆಯದು, 198/1992, ಮಸೀದಿ ಕೆಡವುವಿಕೆಗೆ ಪ್ರಚೋದನೆ ನೀಡಿದ್ದಕ್ಕಾಗಿ 8 ಜನ ಬಿಜೆಪಿ ಮುಖಂಡರ (ಎಲ್.ಕೆ.ಅಡ್ವಾಣಿ, ಎಂ.ಎಂ.ಜೋಶಿ, ಉಮಾ ಭಾರತಿ, ಕಲ್ಯಾಣ್ ಸಿಂಗ್, ವಿನಯ್ ಕಟಿಯಾರ್, ಸಾಕ್ಷಿ ಮಹಾರಾಜ್, ಲಲ್ಲು ಸಿಂಗ್, ಬಿಬಿ ಶರಣ್ ಸಿಂಗ್) ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

ಪ್ರಕರಣದ ಆರೋಪಿಗಳಾದ ಬಿಜೆಪಿಯ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ, ಮತ್ತು ರಾಜಸ್ಥಾನದ ಮಾಜಿ ಗವರ್ನರ್ ಕಲ್ಯಾಣ್ ಸಿಂಗ್, ಬಿಜೆಪಿ ಮುಖಂಡ ಎಂ.ಎಂ.ಜೋಶಿ, ಉಮಾ ಭಾರತಿ ಮತ್ತು ವಿನಯ್ ಕಟಿಯಾರ್ ಸೇರಿದಂತೆ 32 ಆರೋಪಿಗಳು ವಿಚಾರಣೆಯಂದು ನ್ಯಾಯಾಲಯದಲ್ಲಿರುವಂತೆ ತಿಳಿಸಲಾಗಿತ್ತು.

ಆದರೆ, ವಯಸ್ಸಿನ ಕಾರಣಕ್ಕೆ ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಕಲ್ಯಾಣ್ ಸಿಂಗ್, ಮಹಾಂತ್ ಗೋಪಾಲ ದಾಸ್ ಮತ್ತು ಉಮಾ ಭಾರತಿಗೆ ಕೊರೊನಾ ಸೋಂಕು ದೃಢಪಟ್ಟಿದ್ದರಿಂದ ವಿಚಾರಣೆಗೆ ನೇರವಾಗಿ ಹಾಜರಾಗಿರಲಿಲ್ಲ. ಸತೀಶ್ ಪ್ರಧಾನ್ ಸೇರಿದಂತೆ ಈ 6 ಜನ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು. ಉಳಿದ 26 ಆರೋಪಿಗಳು ನೇರವಾಗಿ ಹಾಜರಿದ್ದರು.

ಇದನ್ನೂ ಓದಿ: ಅಯೋಧ್ಯೆ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ: ಉಮಾಭಾರತಿ

ಈ ಆರೋಪಿಗಳ ಮೇಲೆ 1992 ರ ಡಿಸೆಂಬರ್‌ನಲ್ಲಿ 15 ನೇ ಶತಮಾನದ ಬಾಬರಿ ಮಸೀದಿಯನ್ನು ಧ್ವಂಸಗೊಳಿಸಲು ಕಾರಣವಾದ ಪಿತೂರಿಯ ಆರೋಪ ಇದೆ. ಈ ಪ್ರಕರಣದಲ್ಲಿ ದೇಶಾದ್ಯಂತ ಗಲಭೆಗಳು ಸಂಭವಿಸಿ ಸುಮಾರು 3,000 ಜನರು ಸಾವನ್ನಪ್ಪಿದರು.

ಏಪ್ರಿಲ್ 2017 ರಲ್ಲಿ, ಉನ್ನತ ನ್ಯಾಯಾಲಯವು, ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಎರಡು ವರ್ಷಗಳಲ್ಲಿ ಮಸೀದಿ ದ್ವಂಸ ಪ್ರಕರಣದ ವಿಚಾರಣೆಯನ್ನು ನಡೆಸಿ ಪೂರ್ಣಗೊಳಿಸಲು ಕೇಳಿಕೊಂಡಿತ್ತು. ಅದರ ನಂತರ ಹಲವು ಬಾರಿ ಗಡುವು ವಿಸ್ತರಿಸಲಾಗಿತ್ತು. ಮತ್ತೆ ವಿಶೇಷ ನ್ಯಾಯಾಧೀಶ ಎಸ್.ಕೆ. ಯಾದವ್ ಹೆಚ್ಚಿನ ಸಮಯವನ್ನು ಕೇಳಿದಾಗ, ಸೆಪ್ಟೆಂಬರ್ 30 ರೊಳಗೆ ತನ್ನ ತೀರ್ಪನ್ನು ನೀಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

ಇದನ್ನೂ ಓದಿ: ರಾಮ ಮಂದಿರದ ’ಭೂಮಿ ಪೂಜೆ’ಗೆ ಬಾಬರಿ ಮಸೀದಿ ಧ್ವಂಸಗೊಳಿಸಿದವರನ್ನು ಆಹ್ವಾನಿಸಿ: ದುಬೆ

ಕಳೆದ ನವೆಂಬರ್‌ನಲ್ಲಿ ಸುಪ್ರೀಂಕೋರ್ಟ್ ರಾಮ್ ಜನ್ಮಭೂಮಿ ಪ್ರಕರಣದ ತೀಪೂ ನೀಡಿದ್ದು, ದೇವಾಲಯ ನಿರ್ಮಿಸಲು ಆದೇಶಿಸಿತ್ತು. ‌ಈಗಾಗಲೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯಗಳು ಆರಂಭವಾಗಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ನಡೆದ ಭೂಮಿಪೂಜೆ ಸಮಾರಂಭದಲ್ಲಿ ಭಾಗವಹಿಸಿದ್ದರು.

ಇಂದು ತೀರ್ಪು ಬರುವ ಹಿನ್ನೆಲೆ ಬಿಜೆಪಿ ನಾಯಕಿ, ಪ್ರಕರಣದ ಪ್ರಮುಖ ಆರೋಪಿಯಾಗಿರುವ ಉಮಾ ಭಾರತಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾಗೆ ಸೆಪ್ಟೆಂಬರ್ 26 ರಂದು ಪತ್ರ ಬರೆದಿದ್ದಾರೆ. ಯಾವುದೇ ಕಾರಣಕ್ಕೂ ನಾನು ಜಾಮೀನು ಕೋರುವುದಿಲ್ಲ. ತಪ್ಪಿತಸ್ಥರೆಂದು ಸಾಬೀತಾದರೆ ಗಲ್ಲಿಗೇರಲೂ ನಾನು ಸಿದ್ಧ ಎಂದಿದ್ದರು.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಅಯೋಧ್ಯೆಯ ಮಸೀದಿ ಜಾಗದಲ್ಲಿ ಬಾಬ್ರಿ ಆಸ್ಪತ್ರೆ ಸ್ಥಾಪನೆ? ಈ ಸುದ್ದಿ ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...