Homeಮುಖಪುಟಬಾಬರಿ ಮಸೀದಿ ಧ್ವಂಸ: ತೀರ್ಪು ನೀಡಿದ ನ್ಯಾಯಾಧೀಶರಿಗೆ ಭದ್ರತೆ ನಿರಾಕರಿಸಿದ ಸುಪ್ರೀಂ!

ಬಾಬರಿ ಮಸೀದಿ ಧ್ವಂಸ: ತೀರ್ಪು ನೀಡಿದ ನ್ಯಾಯಾಧೀಶರಿಗೆ ಭದ್ರತೆ ನಿರಾಕರಿಸಿದ ಸುಪ್ರೀಂ!

ಬಿಜೆಪಿ ಮತ್ತು ವಿಶ್ವಹಿಂದೂ ಪರಿಷತ್‌ನ ಸದಸ್ಯರು ದೋಷಮುಕ್ತರು ಎಂದು 32 ಆರೋಪಿಗಳ ಮೆಲಿನ ಪ್ರಕರಣವನ್ನು ಖಲಾಸೆಗೊಳಿಸಿ ಸೆಪ್ಟಂಬರ್ 30 ರಂದು ತೀರ್ಪು ನೀಡಿದ್ದರು

- Advertisement -
- Advertisement -

ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ತೀರ್ಪು ನೀಡಿದ್ದ ಲಖನೌ ವಿಶೇಷ ನ್ಯಾಯಾಲಯದ ಮಾಜಿ ನ್ಯಾಯಾಧೀಶ ಸುರೇಂದ್ರ ಕುಮಾರ್ ಯಾದವ್ ಅವರಿಗೆ ಭದ್ರತೆ ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಧ್ವಂಸ ಪ್ರಕರಣದಲ್ಲಿ ಬಿಜೆಪಿ ಮತ್ತು ವಿಶ್ವಹಿಂದೂ ಪರಿಷತ್‌ನ ಸದಸ್ಯರು ದೋಷಮುಕ್ತರು ಎಂದು 32 ಆರೋಪಿಗಳ ಮೆಲಿನ ಪ್ರಕರಣವನ್ನು ಖಲಾಸೆಗೊಳಿಸಿ ಸೆಪ್ಟಂಬರ್ 30 ರಂದು ತೀರ್ಪು ನೀಡಿದ್ದರು. ಪ್ರಕರಣದ 32 ಆರೋಪಿಗಳೂ ದೋಷಮುಕ್ತರು ಎಂದಿರುವ ನ್ಯಾಯಾಲಯ, “ಈ ದ್ವಂಸ ಪೂರ್ವನಿರ್ಧರಿತವಲ್ಲ” ಎಂದು ತೀರ್ಪು ನೀಡಿತ್ತು.

ಪ್ರಕರಣದ ಸೂಕ್ಷ್ಮತೆಯ ಆಧಾರದ ಮೇಲೆ ಎಸ್‌.ಕೆ.ಯಾದವ್ ತಮ್ಮ ವೈಯಕ್ತಿಕ ಭದ್ರತೆಯನ್ನು ವಿಸ್ತರಿಸಲು ಕೋರಿದ್ದರು. ಇಂದು ಬೆಳಿಗ್ಗೆ ಉನ್ನತ ನ್ಯಾಯಾಲಯವು, “ಸೆಪ್ಟೆಂಬರ್ 30 ರ ಪತ್ರವನ್ನು ಅವಲೋಕಿಸಿದ ನಂತರ, ಭದ್ರತೆ ಮುಂದುವರಿಸುವುದು ಅಗತ್ಯವೆಂದು ನಾವು ಪರಿಗಣಿಸುವುದಿಲ್ಲ” ಎಂದು ಹೇಳಿದೆ.

ಇದನ್ನೂ ಓದಿ: ಡಿಸೆಂಬರ್‌ ಚಳಿಯ ಒಂದು ದಿನ ಬಾಬರಿ ಮಸೀದಿ ಸ್ವಯಂ ಸ್ಫೋಟಗೊಂಡಿತು: ತೀರ್ಪು ವಿರುದ್ದ ಟ್ವಿಟ್ಟರ್‌‌ನಲ್ಲಿ ಆಕ್ರೋಶ

ವಿಶೇಷ ನ್ಯಾಯಾಲಯವು 2 ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ತೀರ್ಮಾನ ತೆಗೆದುಕೊಂಡಿತ್ತು. ಮೊದಲನೆಯದ್ದು, 197/1992, ಮಸೀದಿಯನ್ನು ಕೆಡವಿದ್ದ ಅನಾಮಧೇಯ ಕರಸೇವಕರ ವಿರುದ್ಧ ಮತ್ತು ಎರಡನೆಯದು, 198/1992, ಮಸೀದಿ ಕೆಡವುವಿಕೆಗೆ ಪ್ರಚೋದನೆ ನೀಡಿದ್ದಕ್ಕಾಗಿ 8 ಜನ ಬಿಜೆಪಿ ಮುಖಂಡರ (ಎಲ್.ಕೆ.ಅಡ್ವಾಣಿ, ಎಂ.ಎಂ.ಜೋಶಿ, ಉಮಾ ಭಾರತಿ, ಕಲ್ಯಾಣ್ ಸಿಂಗ್, ವಿನಯ್ ಕಟಿಯಾರ್, ಸಾಕ್ಷಿ ಮಹಾರಾಜ್, ಲಲ್ಲು ಸಿಂಗ್, ಬಿಬಿ ಶರಣ್ ಸಿಂಗ್) ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

ಈ ಆರೋಪಿಗಳ ಮೇಲೆ 1992 ರ ಡಿಸೆಂಬರ್‌ನಲ್ಲಿ 15 ನೇ ಶತಮಾನದ ಬಾಬರಿ ಮಸೀದಿಯನ್ನು ಧ್ವಂಸಗೊಳಿಸಲು ಕಾರಣವಾದ ಪಿತೂರಿಯ ಆರೋಪ ಇದೆ. ಈ ಪ್ರಕರಣದಲ್ಲಿ ದೇಶಾದ್ಯಂತ ಗಲಭೆಗಳು ಸಂಭವಿಸಿ ಸುಮಾರು 3,000 ಜನರು ಸಾವನ್ನಪ್ಪಿದ್ದರು.

ಏಪ್ರಿಲ್ 2017 ರಲ್ಲಿ, ಉನ್ನತ ನ್ಯಾಯಾಲಯವು, ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಎರಡು ವರ್ಷಗಳಲ್ಲಿ ಮಸೀದಿ ದ್ವಂಸ ಪ್ರಕರಣದ ವಿಚಾರಣೆಯನ್ನು ನಡೆಸಿ ಪೂರ್ಣಗೊಳಿಸಲು ಕೇಳಿಕೊಂಡಿತ್ತು. ಅದರ ನಂತರ ಹಲವು ಬಾರಿ ಗಡುವು ವಿಸ್ತರಿಸಲಾಗಿತ್ತು. ಮತ್ತೆ ವಿಶೇಷ ನ್ಯಾಯಾಧೀಶ ಎಸ್.ಕೆ. ಯಾದವ್ ಹೆಚ್ಚಿನ ಸಮಯವನ್ನು ಕೇಳಿದಾಗ, ಸೆಪ್ಟೆಂಬರ್ 30 ರೊಳಗೆ ತನ್ನ ತೀರ್ಪನ್ನು ನೀಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

ಸೆಪ್ಟಂಬರ್ 30ರಂದು ತೀರ್ಪು ಹೊರಬಿದ್ದ ನಂತರ ದೇಶದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.


ಇದನ್ನೂ ಓದಿ: ಬಾಬ್ರಿ ಮಸೀದಿ ಕೆಡವುದರ ಹಿಂದೆ ಯಾರ ಸಂಚು ಇಲ್ಲ ಎಂಬ ತೀರ್ಮಾನಕ್ಕೆ ನ್ಯಾಯಾಧೀಶರು ಕೊಟ್ಟ10 ಕಾರಣಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...