Homeಮುಖಪುಟಬಾಬರಿ ಮಸೀದಿ ಧ್ವಂಸ ದಿನ: ರಾಮ್‌ ಕೆ ನಾಮ್ | ರಾಮನ ಹೆಸರಿನಲ್ಲಿ | In...

ಬಾಬರಿ ಮಸೀದಿ ಧ್ವಂಸ ದಿನ: ರಾಮ್‌ ಕೆ ನಾಮ್ | ರಾಮನ ಹೆಸರಿನಲ್ಲಿ | In the name of God | ಸಾಕ್ಷ್ಯಚಿತ್ರ ನೋಡಿ

ದೇಶದ ಕೋಮು ಸೌಹಾರ್ದವನ್ನು ಒಡೆಯಲು ಬಿಜೆಪಿ ಬೆಂಬಲಿತ ಸಂಘಟನೆಗಳು ಏನೆಲ್ಲಾ ಮಾಡಿತ್ತು ಎಂಬುವುದನ್ನು ಈ ಸಾಕ್ಷ್ಯಚಿತ್ರ ಶೋಧಿಸುತ್ತದೆ ಮತ್ತು ಅದನ್ನು ಹಿಂದಿ, ಬಂಗಾಳಿ ಮತ್ತು ಮಲಯಾಳಂ ಭಾಷೆಯಲ್ಲಿ ನೀವು ವೀಕ್ಷಿಸಬಹುದಾಗಿದೆ.

- Advertisement -
- Advertisement -

ಬಾಬರಿ ಮಸೀದಿ ಒಡೆದು ಇಂದಿಗೆ 29 ವರ್ಷಗಳಾಯಿತು. ಐತಿಹಾಸಿಕ ಮಸೀದಿ ಒಡೆಯುವುದರೊಂದಿಗೆ ದೇಶದ ಕೋಮು ಸೌಹಾರ್ದತೆಯನ್ನು ಕೂಡಾ ಒಡೆಯಲಾಯಿತು. ಮಸೀದಿ ಒಡೆದ ನಂತರ ದೇಶದಾದ್ಯಂತ ನಡೆದ ಕೋಮು ಗಲಭೆಯಲ್ಲಿ ಸುಮಾರು 2000 ಜನರು ಮೃತರಾದರು. ಇದೀಗ ಮಸೀದಿ ಒಡೆದ ಸ್ಥಳದಲ್ಲಿ ಬೇರೆಯೆ ಕಟ್ಟಡವನ್ನು ನಿರ್ಮಿಸಲಾಗುತ್ತಿದೆ.

ಬಾಬರಿ ಮಸೀದಿ ಒಡೆಯಲು ಬೇಕಾಗಿ ಬಿಜೆಪಿ ಬೆಂಬಲಿತ ದುಷ್ಕರ್ಮಿಗಳ ಗುಂಪು ಏನೆಲ್ಲಾ ನಡೆಸಿತು ಎಂದು ಹಿರಿಯ ಚಲನಚಿತ್ರ ನಿರ್ಮಾಪಕ ಆನಂದ್ ಪಟವರ್ಧನ್‌ 1992 ರಲ್ಲಿ ‘ರಾಮ್‌ ಕೆ ನಾಮ್’(ರಾಮನ ಹೆಸರಿನಲ್ಲಿ) ಎಂಬ ಸಾಕ್ಷ್ಯಚಿತ್ರವನ್ನು ನಿರ್ಮಿಸಿದ್ದಾರೆ.

ಅಯೋಧ್ಯೆಯ ಬಾಬರಿ ಮಸೀದಿಯ ಸ್ಥಳದಲ್ಲಿ ರಾಮ ಮಂದಿರವನ್ನು ನಿರ್ಮಿಸಲು ಬಲಪಂಥೀಯ ಬಿಜೆಪಿ ಬೆಂಬಲಿತ ಸಂಘಟನೆಯಾದ ವಿಎಚ್‌ಪಿ ನಡೆಸಿದ ಅಭಿಯಾನ ಮತ್ತು ಅದು ಪ್ರಚೋದಿಸಿದ ಕೋಮು ಹಿಂಸಾಚಾರವನ್ನು ಈ ಚಲನಚಿತ್ರವು ಪರಿಶೋಧಿಸುತ್ತದೆ. ರಾಮ್ ಕೆ ನಾಮ್ (ಇಂಗ್ಲಿಷ್: ಇನ್ ದಿ ನೇಮ್ ಆಫ್ ಗಾಡ್) ಭಾರತೀಯ ಚಲನಚಿತ್ರದಲ್ಲಿ ಒಂದು ಪ್ರಮುಖ ಮೈಲಿಗಲ್ಲಿನ ಚಿತ್ರವಾಗಿದೆ. ರಾಮ್ ಕೆ ನಾಮ್ ಬಿಡುಗಡೆಯಾದ ಒಂದೆರಡು ತಿಂಗಳ ನಂತರ, ವಿಎಚ್‌ಪಿ ಮತ್ತು ಇತರ ಆರೆಸ್ಸೆಸ್‌ ಮತ್ತು ಬಿಜೆಪಿ ಬೆಂಬಲಿತ ಗುಂಪುಗಳ ಕಾರ್ಯಕರ್ತರು 1992 ರಲ್ಲಿ ಬಾಬರಿ ಮಸೀದಿಯನ್ನು ಕೆಡವಿದರು.

ಈ ಚಿತ್ರವು ಆನಂದ್‌ ಪಟವರ್ಧನ್‌ಗೆ ವ್ಯಾಪಕ ಮನ್ನಣೆಯನ್ನು ತಂದುಕೊಟ್ಟಿತು ಮತ್ತು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆಯಿತು. ಈ ಪ್ರಸಿದ್ದ ಸಾಕ್ಷ್ಯಚಿತ್ರವನ್ನು ನಾನುಗೌರಿ.ಕಾಂ ಓದುಗರಿಗಾಗಿ ಇಲ್ಲಿ ನೀಡುತ್ತಿದ್ದೇವೆ. ಹಿಂದಿ, ಬಂಗಾಳಿ ಮತ್ತು ಮಲಯಾಳಂ ಭಾಷೆಯಲ್ಲಿ ನೀವು ಅದನ್ನು ವೀಕ್ಷಿಸಬಹುದಾಗಿದೆ.

ಹಿಂದಿ ಭಾಷೆಯಲ್ಲಿ ‘ರಾಮ್‌ ಕೆ ನಾಮ್‌’ ಚಿತ್ರ, ಇಂಗ್ಲಿಷ್‌ ಸಬ್‌ಟೈಟಲ್‌ನೊಂದಿಗೆ.

ಮಲಯಾಳಂ ಭಾಷೆಯಲ್ಲಿ ‘ರಾಮ್‌ ಕೆ ನಾಮ್‌’ ಚಿತ್ರ, ಮಳಯಾಳಂ ಸಬ್‌ಟೈಟಲ್‌ನೊಂದಿಗೆ. (ಈ ಮಲಯಾಳಂ ಆವೃತ್ತಿಯನ್ನು 2010 ರಲ್ಲಿ ದುರಂತ ಅಪಘಾತದಲ್ಲಿ ನಿಧನರಾದ ಖ್ಯಾತ ಚಲನಚಿತ್ರ ನಿರ್ಮಾಪಕ ಮತ್ತು ಹೋರಾಟಗಾರ ಸಿ.ಶರತ್ಚಂದ್ರನ್ ಅವರು ಮಾಡಿದ್ದಾರೆ)

ಬಂಗಾಳಿ ಭಾಷೆಯಲ್ಲಿ ‘ರಾಮ್‌ ಕೆ ನಾಮ್‌’ ಚಿತ್ರ, ಬಂಗಾಳಿ ಸಬ್‌ಟೈಟಲ್‌ನೊಂದಿಗೆ. (ಈ ಆವೃತ್ತಿಯನ್ನು ಕೊಂಕಣ್‌ ಸೇನ್‌ ಅವರು ಮಾಡಿದ್ದಾರೆ. ಸಬ್‌ಟೈಟಲ್‌ಗಳು ಕೆಲವು ದೋಷಗಳನ್ನು ಹೊಂದಿವೆ.)

ಹಿಂದಿ ಭಾಷೆಯಲ್ಲಿ ಇಂಗ್ಲಿಷ್‌ ಸಬ್‌ಟೈಟಲ್‌ನೊಂದಿಗೆ(ಸ್ಟಾಂಡ್‌ ಅಪ್‌ ಹಾಸ್ಯನಟ ಕುನಾಲ್‌ ಕಮ್ರಾ ಅವರ ಯೂಟ್ಯೂಬ್ ಚಾನೆಲ್‌ನಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...