Homeಮುಖಪುಟಬಾಬರಿ ಮಸೀದಿ ಧ್ವಂಸ ದಿನ: ರಾಮ್‌ ಕೆ ನಾಮ್ | ರಾಮನ ಹೆಸರಿನಲ್ಲಿ | In...

ಬಾಬರಿ ಮಸೀದಿ ಧ್ವಂಸ ದಿನ: ರಾಮ್‌ ಕೆ ನಾಮ್ | ರಾಮನ ಹೆಸರಿನಲ್ಲಿ | In the name of God | ಸಾಕ್ಷ್ಯಚಿತ್ರ ನೋಡಿ

ದೇಶದ ಕೋಮು ಸೌಹಾರ್ದವನ್ನು ಒಡೆಯಲು ಬಿಜೆಪಿ ಬೆಂಬಲಿತ ಸಂಘಟನೆಗಳು ಏನೆಲ್ಲಾ ಮಾಡಿತ್ತು ಎಂಬುವುದನ್ನು ಈ ಸಾಕ್ಷ್ಯಚಿತ್ರ ಶೋಧಿಸುತ್ತದೆ ಮತ್ತು ಅದನ್ನು ಹಿಂದಿ, ಬಂಗಾಳಿ ಮತ್ತು ಮಲಯಾಳಂ ಭಾಷೆಯಲ್ಲಿ ನೀವು ವೀಕ್ಷಿಸಬಹುದಾಗಿದೆ.

- Advertisement -
- Advertisement -

ಬಾಬರಿ ಮಸೀದಿ ಒಡೆದು ಇಂದಿಗೆ 29 ವರ್ಷಗಳಾಯಿತು. ಐತಿಹಾಸಿಕ ಮಸೀದಿ ಒಡೆಯುವುದರೊಂದಿಗೆ ದೇಶದ ಕೋಮು ಸೌಹಾರ್ದತೆಯನ್ನು ಕೂಡಾ ಒಡೆಯಲಾಯಿತು. ಮಸೀದಿ ಒಡೆದ ನಂತರ ದೇಶದಾದ್ಯಂತ ನಡೆದ ಕೋಮು ಗಲಭೆಯಲ್ಲಿ ಸುಮಾರು 2000 ಜನರು ಮೃತರಾದರು. ಇದೀಗ ಮಸೀದಿ ಒಡೆದ ಸ್ಥಳದಲ್ಲಿ ಬೇರೆಯೆ ಕಟ್ಟಡವನ್ನು ನಿರ್ಮಿಸಲಾಗುತ್ತಿದೆ.

ಬಾಬರಿ ಮಸೀದಿ ಒಡೆಯಲು ಬೇಕಾಗಿ ಬಿಜೆಪಿ ಬೆಂಬಲಿತ ದುಷ್ಕರ್ಮಿಗಳ ಗುಂಪು ಏನೆಲ್ಲಾ ನಡೆಸಿತು ಎಂದು ಹಿರಿಯ ಚಲನಚಿತ್ರ ನಿರ್ಮಾಪಕ ಆನಂದ್ ಪಟವರ್ಧನ್‌ 1992 ರಲ್ಲಿ ‘ರಾಮ್‌ ಕೆ ನಾಮ್’(ರಾಮನ ಹೆಸರಿನಲ್ಲಿ) ಎಂಬ ಸಾಕ್ಷ್ಯಚಿತ್ರವನ್ನು ನಿರ್ಮಿಸಿದ್ದಾರೆ.

ಅಯೋಧ್ಯೆಯ ಬಾಬರಿ ಮಸೀದಿಯ ಸ್ಥಳದಲ್ಲಿ ರಾಮ ಮಂದಿರವನ್ನು ನಿರ್ಮಿಸಲು ಬಲಪಂಥೀಯ ಬಿಜೆಪಿ ಬೆಂಬಲಿತ ಸಂಘಟನೆಯಾದ ವಿಎಚ್‌ಪಿ ನಡೆಸಿದ ಅಭಿಯಾನ ಮತ್ತು ಅದು ಪ್ರಚೋದಿಸಿದ ಕೋಮು ಹಿಂಸಾಚಾರವನ್ನು ಈ ಚಲನಚಿತ್ರವು ಪರಿಶೋಧಿಸುತ್ತದೆ. ರಾಮ್ ಕೆ ನಾಮ್ (ಇಂಗ್ಲಿಷ್: ಇನ್ ದಿ ನೇಮ್ ಆಫ್ ಗಾಡ್) ಭಾರತೀಯ ಚಲನಚಿತ್ರದಲ್ಲಿ ಒಂದು ಪ್ರಮುಖ ಮೈಲಿಗಲ್ಲಿನ ಚಿತ್ರವಾಗಿದೆ. ರಾಮ್ ಕೆ ನಾಮ್ ಬಿಡುಗಡೆಯಾದ ಒಂದೆರಡು ತಿಂಗಳ ನಂತರ, ವಿಎಚ್‌ಪಿ ಮತ್ತು ಇತರ ಆರೆಸ್ಸೆಸ್‌ ಮತ್ತು ಬಿಜೆಪಿ ಬೆಂಬಲಿತ ಗುಂಪುಗಳ ಕಾರ್ಯಕರ್ತರು 1992 ರಲ್ಲಿ ಬಾಬರಿ ಮಸೀದಿಯನ್ನು ಕೆಡವಿದರು.

ಈ ಚಿತ್ರವು ಆನಂದ್‌ ಪಟವರ್ಧನ್‌ಗೆ ವ್ಯಾಪಕ ಮನ್ನಣೆಯನ್ನು ತಂದುಕೊಟ್ಟಿತು ಮತ್ತು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆಯಿತು. ಈ ಪ್ರಸಿದ್ದ ಸಾಕ್ಷ್ಯಚಿತ್ರವನ್ನು ನಾನುಗೌರಿ.ಕಾಂ ಓದುಗರಿಗಾಗಿ ಇಲ್ಲಿ ನೀಡುತ್ತಿದ್ದೇವೆ. ಹಿಂದಿ, ಬಂಗಾಳಿ ಮತ್ತು ಮಲಯಾಳಂ ಭಾಷೆಯಲ್ಲಿ ನೀವು ಅದನ್ನು ವೀಕ್ಷಿಸಬಹುದಾಗಿದೆ.

ಹಿಂದಿ ಭಾಷೆಯಲ್ಲಿ ‘ರಾಮ್‌ ಕೆ ನಾಮ್‌’ ಚಿತ್ರ, ಇಂಗ್ಲಿಷ್‌ ಸಬ್‌ಟೈಟಲ್‌ನೊಂದಿಗೆ.

ಮಲಯಾಳಂ ಭಾಷೆಯಲ್ಲಿ ‘ರಾಮ್‌ ಕೆ ನಾಮ್‌’ ಚಿತ್ರ, ಮಳಯಾಳಂ ಸಬ್‌ಟೈಟಲ್‌ನೊಂದಿಗೆ. (ಈ ಮಲಯಾಳಂ ಆವೃತ್ತಿಯನ್ನು 2010 ರಲ್ಲಿ ದುರಂತ ಅಪಘಾತದಲ್ಲಿ ನಿಧನರಾದ ಖ್ಯಾತ ಚಲನಚಿತ್ರ ನಿರ್ಮಾಪಕ ಮತ್ತು ಹೋರಾಟಗಾರ ಸಿ.ಶರತ್ಚಂದ್ರನ್ ಅವರು ಮಾಡಿದ್ದಾರೆ)

ಬಂಗಾಳಿ ಭಾಷೆಯಲ್ಲಿ ‘ರಾಮ್‌ ಕೆ ನಾಮ್‌’ ಚಿತ್ರ, ಬಂಗಾಳಿ ಸಬ್‌ಟೈಟಲ್‌ನೊಂದಿಗೆ. (ಈ ಆವೃತ್ತಿಯನ್ನು ಕೊಂಕಣ್‌ ಸೇನ್‌ ಅವರು ಮಾಡಿದ್ದಾರೆ. ಸಬ್‌ಟೈಟಲ್‌ಗಳು ಕೆಲವು ದೋಷಗಳನ್ನು ಹೊಂದಿವೆ.)

ಹಿಂದಿ ಭಾಷೆಯಲ್ಲಿ ಇಂಗ್ಲಿಷ್‌ ಸಬ್‌ಟೈಟಲ್‌ನೊಂದಿಗೆ(ಸ್ಟಾಂಡ್‌ ಅಪ್‌ ಹಾಸ್ಯನಟ ಕುನಾಲ್‌ ಕಮ್ರಾ ಅವರ ಯೂಟ್ಯೂಬ್ ಚಾನೆಲ್‌ನಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...