Homeಮುಖಪುಟಬಾಬ್ರಿ ಮಸೀದಿಯನ್ನು ವ್ಯವಸ್ಥಿತವಾಗಿ ಮುಸ್ಲಿಮರಿಂದ ಕಿತ್ತುಕೊಳ್ಳಲಾಗಿದೆ: ಓವೈಸಿ

ಬಾಬ್ರಿ ಮಸೀದಿಯನ್ನು ವ್ಯವಸ್ಥಿತವಾಗಿ ಮುಸ್ಲಿಮರಿಂದ ಕಿತ್ತುಕೊಳ್ಳಲಾಗಿದೆ: ಓವೈಸಿ

- Advertisement -
- Advertisement -

ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಅಧ್ಯಕ್ಷ ಅಸಾದುದ್ದೀನ್ ಓವೈಸಿ ಶನಿವಾರ ಮತ್ತೊಮ್ಮೆ ರಾಮ ಜನ್ಮಭೂಮಿ ದೇಗುಲದಲ್ಲಿ ರಾಮನ ಪ್ರಾಣ ಪ್ರತಿಷ್ಠೆಯಯನ್ನು ಪ್ರಶ್ನಿಸಿದ್ದು, 500 ವರ್ಷಗಳಿಂದ ನಮಾಝ್ ಮಾಡುತ್ತಿದ್ದ ಬಾಬ್ರಿ ಮಸೀದಿಯನ್ನು ವ್ಯವಸ್ಥಿತವಾಗಿ ಭಾರತೀಯ ಮುಸ್ಲಿಮರಿಂದ ಕಿತ್ತುಕೊಳ್ಳಲಾಗಿದೆ ಎಂದು ಪ್ರತಿಪಾದಿಸಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಓವೈಸಿ, ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ರಚನೆಯ ಸಮಯದಲ್ಲಿ ಅಯೋಧ್ಯೆಯಲ್ಲಿ ದೇವಾಲಯ ಅಸ್ತಿತ್ವದಲ್ಲಿರಲಿಲ್ಲ. 1992 ರಲ್ಲಿ ಮಸೀದಿಯನ್ನು ಕೆಡವದಿದ್ದರೆ, ಮುಸ್ಲಿಮರು ಇಂದಿನ ಪರಿಸ್ಥಿತಿಯನ್ನು ನೋಡಬೇಕಾಗಿರಲಿಲ್ಲ ಎಂದಿದ್ದಾರೆ.

“500 ವರ್ಷಗಳಿಂದ ಬಾಬ್ರಿ ಮಸೀದಿಯಲ್ಲಿ ಮುಸ್ಲಿಮರು ನಮಾಝ್ ಮಾಡಿದ್ದರು. ಕಾಂಗ್ರೆಸ್‌ನ ಜಿಬಿ ಪಂತ್ ಉತ್ತರ ಪ್ರದೇಶದ ಸಿಎಂ ಆಗಿದ್ದಾಗ ಮಸೀದಿಯೊಳಗೆ ವಿಗ್ರಹಗಳನ್ನು ಇರಿಸಲಾಗಿತ್ತು. ಆ ಸಮಯದಲ್ಲಿ ನಾಯರ್ ಅಯೋಧ್ಯೆಯ ಕಲೆಕ್ಟರ್ ಆಗಿದ್ದರು. ಅವರು ಮಸೀದಿಯನ್ನು ಮುಚ್ಚಿ ಪೂಜೆ ಮಾಡಲು ಅನುವು ಮಾಡಿ ಕೊಟ್ಟಿದ್ದರು. ವಿಹೆಚ್‌ಪಿ ರಚನೆಯಾದಾಗ ಅಲ್ಲಿ ರಾಮ ಮಂದಿರ ಇರಲಿಲ್ಲ” ಎಂದು ಒವೈಸಿ ಹೇಳಿದ್ದಾರೆ.

“ಮಹಾತ್ಮ ಗಾಂಧಿಯವರು ರಾಮ ಮಂದಿರದ ಬಗ್ಗೆ ಎಂದಿಗೂ ಪ್ರಸ್ತಾಪಿಸಿರಲಿಲ್ಲ. ಆದರೆ, ಬಹಳ ವ್ಯವಸ್ಥಿತವಾಗಿ ಭಾರತೀಯ ಮುಸ್ಲಿಮರಿಂದ ಬಾಬ್ರಿ ಮಸೀದಿಯನ್ನು ಕಿತ್ತುಕೊಳ್ಳಲಾಯಿತು. ಮಾಜಿ ಸಿಎಂ ಜಿಬಿ ಪಂತ್ ಅವರು ಅಂದೇ ಮಸೀದಿಯಿಂದ ವಿಗ್ರಹಗಳನ್ನು ತೆಗೆದು ಹಾಕಿದ್ದರೆ ಮತ್ತು 1992ರಲ್ಲಿ ಮಸೀದಿಯನ್ನು ಕೆಡವದಿದ್ದರೆ ನಾವು ಇಂದಿನ ಪರಿಸ್ಥಿತಿಯನ್ನು ನೋಡಬೇಕಾಗಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆ ಮಂದಿರದಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠೆ ಸಮಾರಂಭದ ಬಗ್ಗೆ ವಿರೋಧ ಪಕ್ಷಗಳು, ಅದರಲ್ಲೂ ವಿಶೇಷವಾಗಿ ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಅದರ ನಾಯಕ ಅರವಿಂದ್ ಕೇಜ್ರಿವಾಲ್ ಅವರ ನಿಲುವಿನ ಬಗ್ಗೆ ಕಿಡಿಕಾರಿದ ಓವೈಸಿ “ಈ ನಾಯಕರು ಬಹುಸಂಖ್ಯಾತ ಸಮುದಾಯವನ್ನು ಸಂತೋಷಪಡಿಸುವಲ್ಲಿ ನಿರತರಾಗಿದ್ದಾರೆ. ಅವರಿಗೆ ಅಲ್ಪಸಂಖ್ಯಾತರ ಬಗ್ಗೆ ಮಾತನಾಡಲು ಆಗುತ್ತಿಲ್ಲ ಎಂದಿದ್ದಾರೆ.

“ಇಂಡಿಯಾ ಮೈತ್ರಿಕೂಟದಲ್ಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ನಾವು ಪ್ರತಿ ಮಂಗಳವಾರ ಸುಂದರ್‌ಕಾಂಡ್ ಪಾಥ್ ಮತ್ತು ಹನುಮಾನ್ ಚಾಲೀಸಾವನ್ನು ಆಯೋಜಿಸುತ್ತೇವೆ ಎಂದು ಹೇಳಿದ್ದಾರೆ. ಯಾರೂ ಈ ಬಗ್ಗೆ ಏನನ್ನೂ ಮಾತನಾಡುವುದಿಲ್ಲ, ಏಕೆಂದರೆ ಅವರೆಲ್ಲರೂ ಬಹುಸಂಖ್ಯಾತ ಸಮುದಾಯದ ಮತಗಳನ್ನು ಗುರಿಯಾಗಿಸಿಕೊಂಡು ಕಾರ್ಯನಿರತರಾಗಿದ್ದಾರೆ ಎಂದು ಓವೈಸಿ ಅಸಮಧಾನ ವ್ಯಕ್ತಪಡಿಸಿದ್ದಾರೆ.

“ಆರೆಸ್ಸೆಸ್‌ನ ಛೋಟಾ ರೀಚಾರ್ಜ್ ದೆಹಲಿಯ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿ ತಿಂಗಳ ಮೊದಲ ಮಂಗಳವಾರದಂದು ಸುಂದರ್‌ಕಾಂಡ್ ಪಥವನ್ನು ಆಯೋಜಿಸಲು ನಿರ್ಧರಿಸಿದೆ. ಜನವರಿ 22 ರಂದು ರಾಮ ಮಂದಿರದ ಉದ್ಘಾಟನೆ ಪ್ರಯುಕ್ತ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಎಎಪಿ ವಿರುದ್ದ ಓವೈಸಿ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ‘ಬಾಬರ್‌ ರಸ್ತೆ’ ನಾಮಫಲಕದ ಮೇಲೆ ‘ಅಯೋಧ್ಯ ಮಾರ್ಗ’ ಪೋಸ್ಟರ್ ಅಂಟಿಸಿದ ಹಿಂದೂ ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...