Homeಮುಖಪುಟಬಾಬ್ರಿ ಮಸೀದಿಯನ್ನು ವ್ಯವಸ್ಥಿತವಾಗಿ ಮುಸ್ಲಿಮರಿಂದ ಕಿತ್ತುಕೊಳ್ಳಲಾಗಿದೆ: ಓವೈಸಿ

ಬಾಬ್ರಿ ಮಸೀದಿಯನ್ನು ವ್ಯವಸ್ಥಿತವಾಗಿ ಮುಸ್ಲಿಮರಿಂದ ಕಿತ್ತುಕೊಳ್ಳಲಾಗಿದೆ: ಓವೈಸಿ

- Advertisement -
- Advertisement -

ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಅಧ್ಯಕ್ಷ ಅಸಾದುದ್ದೀನ್ ಓವೈಸಿ ಶನಿವಾರ ಮತ್ತೊಮ್ಮೆ ರಾಮ ಜನ್ಮಭೂಮಿ ದೇಗುಲದಲ್ಲಿ ರಾಮನ ಪ್ರಾಣ ಪ್ರತಿಷ್ಠೆಯಯನ್ನು ಪ್ರಶ್ನಿಸಿದ್ದು, 500 ವರ್ಷಗಳಿಂದ ನಮಾಝ್ ಮಾಡುತ್ತಿದ್ದ ಬಾಬ್ರಿ ಮಸೀದಿಯನ್ನು ವ್ಯವಸ್ಥಿತವಾಗಿ ಭಾರತೀಯ ಮುಸ್ಲಿಮರಿಂದ ಕಿತ್ತುಕೊಳ್ಳಲಾಗಿದೆ ಎಂದು ಪ್ರತಿಪಾದಿಸಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಓವೈಸಿ, ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ರಚನೆಯ ಸಮಯದಲ್ಲಿ ಅಯೋಧ್ಯೆಯಲ್ಲಿ ದೇವಾಲಯ ಅಸ್ತಿತ್ವದಲ್ಲಿರಲಿಲ್ಲ. 1992 ರಲ್ಲಿ ಮಸೀದಿಯನ್ನು ಕೆಡವದಿದ್ದರೆ, ಮುಸ್ಲಿಮರು ಇಂದಿನ ಪರಿಸ್ಥಿತಿಯನ್ನು ನೋಡಬೇಕಾಗಿರಲಿಲ್ಲ ಎಂದಿದ್ದಾರೆ.

“500 ವರ್ಷಗಳಿಂದ ಬಾಬ್ರಿ ಮಸೀದಿಯಲ್ಲಿ ಮುಸ್ಲಿಮರು ನಮಾಝ್ ಮಾಡಿದ್ದರು. ಕಾಂಗ್ರೆಸ್‌ನ ಜಿಬಿ ಪಂತ್ ಉತ್ತರ ಪ್ರದೇಶದ ಸಿಎಂ ಆಗಿದ್ದಾಗ ಮಸೀದಿಯೊಳಗೆ ವಿಗ್ರಹಗಳನ್ನು ಇರಿಸಲಾಗಿತ್ತು. ಆ ಸಮಯದಲ್ಲಿ ನಾಯರ್ ಅಯೋಧ್ಯೆಯ ಕಲೆಕ್ಟರ್ ಆಗಿದ್ದರು. ಅವರು ಮಸೀದಿಯನ್ನು ಮುಚ್ಚಿ ಪೂಜೆ ಮಾಡಲು ಅನುವು ಮಾಡಿ ಕೊಟ್ಟಿದ್ದರು. ವಿಹೆಚ್‌ಪಿ ರಚನೆಯಾದಾಗ ಅಲ್ಲಿ ರಾಮ ಮಂದಿರ ಇರಲಿಲ್ಲ” ಎಂದು ಒವೈಸಿ ಹೇಳಿದ್ದಾರೆ.

“ಮಹಾತ್ಮ ಗಾಂಧಿಯವರು ರಾಮ ಮಂದಿರದ ಬಗ್ಗೆ ಎಂದಿಗೂ ಪ್ರಸ್ತಾಪಿಸಿರಲಿಲ್ಲ. ಆದರೆ, ಬಹಳ ವ್ಯವಸ್ಥಿತವಾಗಿ ಭಾರತೀಯ ಮುಸ್ಲಿಮರಿಂದ ಬಾಬ್ರಿ ಮಸೀದಿಯನ್ನು ಕಿತ್ತುಕೊಳ್ಳಲಾಯಿತು. ಮಾಜಿ ಸಿಎಂ ಜಿಬಿ ಪಂತ್ ಅವರು ಅಂದೇ ಮಸೀದಿಯಿಂದ ವಿಗ್ರಹಗಳನ್ನು ತೆಗೆದು ಹಾಕಿದ್ದರೆ ಮತ್ತು 1992ರಲ್ಲಿ ಮಸೀದಿಯನ್ನು ಕೆಡವದಿದ್ದರೆ ನಾವು ಇಂದಿನ ಪರಿಸ್ಥಿತಿಯನ್ನು ನೋಡಬೇಕಾಗಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆ ಮಂದಿರದಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠೆ ಸಮಾರಂಭದ ಬಗ್ಗೆ ವಿರೋಧ ಪಕ್ಷಗಳು, ಅದರಲ್ಲೂ ವಿಶೇಷವಾಗಿ ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಅದರ ನಾಯಕ ಅರವಿಂದ್ ಕೇಜ್ರಿವಾಲ್ ಅವರ ನಿಲುವಿನ ಬಗ್ಗೆ ಕಿಡಿಕಾರಿದ ಓವೈಸಿ “ಈ ನಾಯಕರು ಬಹುಸಂಖ್ಯಾತ ಸಮುದಾಯವನ್ನು ಸಂತೋಷಪಡಿಸುವಲ್ಲಿ ನಿರತರಾಗಿದ್ದಾರೆ. ಅವರಿಗೆ ಅಲ್ಪಸಂಖ್ಯಾತರ ಬಗ್ಗೆ ಮಾತನಾಡಲು ಆಗುತ್ತಿಲ್ಲ ಎಂದಿದ್ದಾರೆ.

“ಇಂಡಿಯಾ ಮೈತ್ರಿಕೂಟದಲ್ಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ನಾವು ಪ್ರತಿ ಮಂಗಳವಾರ ಸುಂದರ್‌ಕಾಂಡ್ ಪಾಥ್ ಮತ್ತು ಹನುಮಾನ್ ಚಾಲೀಸಾವನ್ನು ಆಯೋಜಿಸುತ್ತೇವೆ ಎಂದು ಹೇಳಿದ್ದಾರೆ. ಯಾರೂ ಈ ಬಗ್ಗೆ ಏನನ್ನೂ ಮಾತನಾಡುವುದಿಲ್ಲ, ಏಕೆಂದರೆ ಅವರೆಲ್ಲರೂ ಬಹುಸಂಖ್ಯಾತ ಸಮುದಾಯದ ಮತಗಳನ್ನು ಗುರಿಯಾಗಿಸಿಕೊಂಡು ಕಾರ್ಯನಿರತರಾಗಿದ್ದಾರೆ ಎಂದು ಓವೈಸಿ ಅಸಮಧಾನ ವ್ಯಕ್ತಪಡಿಸಿದ್ದಾರೆ.

“ಆರೆಸ್ಸೆಸ್‌ನ ಛೋಟಾ ರೀಚಾರ್ಜ್ ದೆಹಲಿಯ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿ ತಿಂಗಳ ಮೊದಲ ಮಂಗಳವಾರದಂದು ಸುಂದರ್‌ಕಾಂಡ್ ಪಥವನ್ನು ಆಯೋಜಿಸಲು ನಿರ್ಧರಿಸಿದೆ. ಜನವರಿ 22 ರಂದು ರಾಮ ಮಂದಿರದ ಉದ್ಘಾಟನೆ ಪ್ರಯುಕ್ತ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಎಎಪಿ ವಿರುದ್ದ ಓವೈಸಿ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ‘ಬಾಬರ್‌ ರಸ್ತೆ’ ನಾಮಫಲಕದ ಮೇಲೆ ‘ಅಯೋಧ್ಯ ಮಾರ್ಗ’ ಪೋಸ್ಟರ್ ಅಂಟಿಸಿದ ಹಿಂದೂ ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...