Homeಮುಖಪುಟಬಾಬ್ರಿ ಮಸೀದಿಯನ್ನು ವ್ಯವಸ್ಥಿತವಾಗಿ ಮುಸ್ಲಿಮರಿಂದ ಕಿತ್ತುಕೊಳ್ಳಲಾಗಿದೆ: ಓವೈಸಿ

ಬಾಬ್ರಿ ಮಸೀದಿಯನ್ನು ವ್ಯವಸ್ಥಿತವಾಗಿ ಮುಸ್ಲಿಮರಿಂದ ಕಿತ್ತುಕೊಳ್ಳಲಾಗಿದೆ: ಓವೈಸಿ

- Advertisement -
- Advertisement -

ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಅಧ್ಯಕ್ಷ ಅಸಾದುದ್ದೀನ್ ಓವೈಸಿ ಶನಿವಾರ ಮತ್ತೊಮ್ಮೆ ರಾಮ ಜನ್ಮಭೂಮಿ ದೇಗುಲದಲ್ಲಿ ರಾಮನ ಪ್ರಾಣ ಪ್ರತಿಷ್ಠೆಯಯನ್ನು ಪ್ರಶ್ನಿಸಿದ್ದು, 500 ವರ್ಷಗಳಿಂದ ನಮಾಝ್ ಮಾಡುತ್ತಿದ್ದ ಬಾಬ್ರಿ ಮಸೀದಿಯನ್ನು ವ್ಯವಸ್ಥಿತವಾಗಿ ಭಾರತೀಯ ಮುಸ್ಲಿಮರಿಂದ ಕಿತ್ತುಕೊಳ್ಳಲಾಗಿದೆ ಎಂದು ಪ್ರತಿಪಾದಿಸಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಓವೈಸಿ, ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ರಚನೆಯ ಸಮಯದಲ್ಲಿ ಅಯೋಧ್ಯೆಯಲ್ಲಿ ದೇವಾಲಯ ಅಸ್ತಿತ್ವದಲ್ಲಿರಲಿಲ್ಲ. 1992 ರಲ್ಲಿ ಮಸೀದಿಯನ್ನು ಕೆಡವದಿದ್ದರೆ, ಮುಸ್ಲಿಮರು ಇಂದಿನ ಪರಿಸ್ಥಿತಿಯನ್ನು ನೋಡಬೇಕಾಗಿರಲಿಲ್ಲ ಎಂದಿದ್ದಾರೆ.

“500 ವರ್ಷಗಳಿಂದ ಬಾಬ್ರಿ ಮಸೀದಿಯಲ್ಲಿ ಮುಸ್ಲಿಮರು ನಮಾಝ್ ಮಾಡಿದ್ದರು. ಕಾಂಗ್ರೆಸ್‌ನ ಜಿಬಿ ಪಂತ್ ಉತ್ತರ ಪ್ರದೇಶದ ಸಿಎಂ ಆಗಿದ್ದಾಗ ಮಸೀದಿಯೊಳಗೆ ವಿಗ್ರಹಗಳನ್ನು ಇರಿಸಲಾಗಿತ್ತು. ಆ ಸಮಯದಲ್ಲಿ ನಾಯರ್ ಅಯೋಧ್ಯೆಯ ಕಲೆಕ್ಟರ್ ಆಗಿದ್ದರು. ಅವರು ಮಸೀದಿಯನ್ನು ಮುಚ್ಚಿ ಪೂಜೆ ಮಾಡಲು ಅನುವು ಮಾಡಿ ಕೊಟ್ಟಿದ್ದರು. ವಿಹೆಚ್‌ಪಿ ರಚನೆಯಾದಾಗ ಅಲ್ಲಿ ರಾಮ ಮಂದಿರ ಇರಲಿಲ್ಲ” ಎಂದು ಒವೈಸಿ ಹೇಳಿದ್ದಾರೆ.

“ಮಹಾತ್ಮ ಗಾಂಧಿಯವರು ರಾಮ ಮಂದಿರದ ಬಗ್ಗೆ ಎಂದಿಗೂ ಪ್ರಸ್ತಾಪಿಸಿರಲಿಲ್ಲ. ಆದರೆ, ಬಹಳ ವ್ಯವಸ್ಥಿತವಾಗಿ ಭಾರತೀಯ ಮುಸ್ಲಿಮರಿಂದ ಬಾಬ್ರಿ ಮಸೀದಿಯನ್ನು ಕಿತ್ತುಕೊಳ್ಳಲಾಯಿತು. ಮಾಜಿ ಸಿಎಂ ಜಿಬಿ ಪಂತ್ ಅವರು ಅಂದೇ ಮಸೀದಿಯಿಂದ ವಿಗ್ರಹಗಳನ್ನು ತೆಗೆದು ಹಾಕಿದ್ದರೆ ಮತ್ತು 1992ರಲ್ಲಿ ಮಸೀದಿಯನ್ನು ಕೆಡವದಿದ್ದರೆ ನಾವು ಇಂದಿನ ಪರಿಸ್ಥಿತಿಯನ್ನು ನೋಡಬೇಕಾಗಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆ ಮಂದಿರದಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠೆ ಸಮಾರಂಭದ ಬಗ್ಗೆ ವಿರೋಧ ಪಕ್ಷಗಳು, ಅದರಲ್ಲೂ ವಿಶೇಷವಾಗಿ ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಅದರ ನಾಯಕ ಅರವಿಂದ್ ಕೇಜ್ರಿವಾಲ್ ಅವರ ನಿಲುವಿನ ಬಗ್ಗೆ ಕಿಡಿಕಾರಿದ ಓವೈಸಿ “ಈ ನಾಯಕರು ಬಹುಸಂಖ್ಯಾತ ಸಮುದಾಯವನ್ನು ಸಂತೋಷಪಡಿಸುವಲ್ಲಿ ನಿರತರಾಗಿದ್ದಾರೆ. ಅವರಿಗೆ ಅಲ್ಪಸಂಖ್ಯಾತರ ಬಗ್ಗೆ ಮಾತನಾಡಲು ಆಗುತ್ತಿಲ್ಲ ಎಂದಿದ್ದಾರೆ.

“ಇಂಡಿಯಾ ಮೈತ್ರಿಕೂಟದಲ್ಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ನಾವು ಪ್ರತಿ ಮಂಗಳವಾರ ಸುಂದರ್‌ಕಾಂಡ್ ಪಾಥ್ ಮತ್ತು ಹನುಮಾನ್ ಚಾಲೀಸಾವನ್ನು ಆಯೋಜಿಸುತ್ತೇವೆ ಎಂದು ಹೇಳಿದ್ದಾರೆ. ಯಾರೂ ಈ ಬಗ್ಗೆ ಏನನ್ನೂ ಮಾತನಾಡುವುದಿಲ್ಲ, ಏಕೆಂದರೆ ಅವರೆಲ್ಲರೂ ಬಹುಸಂಖ್ಯಾತ ಸಮುದಾಯದ ಮತಗಳನ್ನು ಗುರಿಯಾಗಿಸಿಕೊಂಡು ಕಾರ್ಯನಿರತರಾಗಿದ್ದಾರೆ ಎಂದು ಓವೈಸಿ ಅಸಮಧಾನ ವ್ಯಕ್ತಪಡಿಸಿದ್ದಾರೆ.

“ಆರೆಸ್ಸೆಸ್‌ನ ಛೋಟಾ ರೀಚಾರ್ಜ್ ದೆಹಲಿಯ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿ ತಿಂಗಳ ಮೊದಲ ಮಂಗಳವಾರದಂದು ಸುಂದರ್‌ಕಾಂಡ್ ಪಥವನ್ನು ಆಯೋಜಿಸಲು ನಿರ್ಧರಿಸಿದೆ. ಜನವರಿ 22 ರಂದು ರಾಮ ಮಂದಿರದ ಉದ್ಘಾಟನೆ ಪ್ರಯುಕ್ತ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಎಎಪಿ ವಿರುದ್ದ ಓವೈಸಿ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ‘ಬಾಬರ್‌ ರಸ್ತೆ’ ನಾಮಫಲಕದ ಮೇಲೆ ‘ಅಯೋಧ್ಯ ಮಾರ್ಗ’ ಪೋಸ್ಟರ್ ಅಂಟಿಸಿದ ಹಿಂದೂ ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...