Homeಮುಖಪುಟಡಿಸೆಂಬರ್‌ ಚಳಿಯ ಒಂದು ದಿನ ಬಾಬರಿ ಮಸೀದಿ ಸ್ವಯಂ ಸ್ಫೋಟಗೊಂಡಿತು: ತೀರ್ಪು ವಿರುದ್ದ ಟ್ವಿಟ್ಟರ್‌‌ನಲ್ಲಿ ಆಕ್ರೋಶ

ಡಿಸೆಂಬರ್‌ ಚಳಿಯ ಒಂದು ದಿನ ಬಾಬರಿ ಮಸೀದಿ ಸ್ವಯಂ ಸ್ಫೋಟಗೊಂಡಿತು: ತೀರ್ಪು ವಿರುದ್ದ ಟ್ವಿಟ್ಟರ್‌‌ನಲ್ಲಿ ಆಕ್ರೋಶ

’ಹಾಗಾದರೆ ಬಾಬರಿಯನ್ನು ಯಾರು ಧ್ವಂಸ ಮಾಡಿಲ್ಲ?’ #NoOneDemolishedBabriMasjid ಎಂದು ಟ್ವಿಟ್ಟರ್‌‌ನಲ್ಲಿ ಪ್ರಶ್ನೆಗಳ ಸುರಿಮಳೆ ಪ್ರಾರಂಭವಾಗಿದೆ.

- Advertisement -
- Advertisement -

28 ವರ್ಷದ ಹಿಂದೆ ನಡೆದ ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಹೊರಬಿದ್ದಿದ್ದು, ನ್ಯಾಯಾಲಯವು ಮಸೀದಿಯ ಧ್ವಂಸವು ಪೂರ್ವನಿರ್ಧರಿತ ಅಲ್ಲವೆಂದು ಹೇಳಿ ಎಲ್ಲಾ ಆರೋಪಿಗಳನ್ನು ದೋಷ ಮುಕ್ತಗೊಳಿಸಿದೆ. ಆದರೆ ಸಾಮಾಜಿಕ ಜಾಲತಾಣದಲ್ಲಿ “ಹಾಗಾದರೆ ಬಾಬರಿಯನ್ನು ಯಾರು ಧ್ವಂಸ ಮಾಡಿಲ್ಲ?” (#NoOneDemolishedBabriMasjid) ಎಂದು ಪ್ರಶ್ನೆಗಳ ಸುರಿಮಳೆ ಪ್ರಾರಂಭವಾಗಿದೆ.

ಅಷ್ಟೇ ಅಲ್ಲದೆ ತೀರ್ಪಿನ ಬಗ್ಗೆ ಹಲವಾರು ಜನರು ಇನ್ನಷ್ಟು ಪ್ರಶ್ನೆಗಳನ್ನು ಎತ್ತಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಸಿಪಿಐಎಂ ಪಾಲಿಟ್ ಬ್ಯೂರೊ ಸದಸ್ಯ ಸೀತಾರಾಮ್ ಯಚೂರಿ, “ಇದು ಸಂಪೂರ್ಣ ನ್ಯಾಯದ ಅಣಕವಾಗಿದೆ. ಬಾಬರಿ ಮಸೀದಿಯನ್ನು ಕೆಡವಲು ಕ್ರಿಮಿನಲ್ ಪಿತೂರಿ ನಡೆಸಿರುವ ಆರೋಪಿಗಳನ್ನು ದೋಷ ಮುಕ್ತಗೊಳಿಸಲಾಗಿದೆ. ಅದು ತಾನಾಗಿಯೆ ಬಿದ್ದು ಹೋಗಿದೆಯೆ? ಅಂದಿನ ಸುಪ್ರೀಂ ಕೋರ್ಟ್‌ನ ಮುಖ್ಯನ್ಯಾಯಾಧೀಶರ ನೇತೃತ್ವದ ಸಂವಿಧಾನ ಪೀಠವು ಮಸೀದಿಯ ಧ್ವಂಸವೂ ಕಾನೂನಿನ ಉಲ್ಲಂಘನೆಯಾಗಿದೆ ಎಂದು ಹೇಳಿದೆ. ಆದರೆ ಈಗ ಈ ತೀರ್ಪು!. ನಾಚಿಕೆಗೇಡು” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬಾಬರಿ ಮಸೀದಿ ದ್ವಂಸ ತೀರ್ಪು ಪ್ರಕಟಿಸಿದ ನ್ಯಾಯಾಲಯ: ಆರೋಪಿಗಳು ದೋಷಮುಕ್ತ

ಚಿಂತಕ ಶಿವಸುಂದರ್‌, “ಓ ನ್ಯಾಯಾಲಯವೇ, ನಿಮ್ಮ ದೊರೆಗಳು ಒಪ್ಪದವರ ಭಾಷಣಗಳ
ಪದದ ಪಕ್ಕ ಇರದ ಕಾಮಾ, ಫುಲ್ ಸ್ಟಾಪುಗಳನ್ನೇ, ಭಯೋತ್ಪಾದಕ ದೇಶದ್ರೋಹಿ ಸಂಚಿಗೆ ಪರಮ ಸಾಕ್ಷಿ
ಎಂದು ಪರಿಗಣಿಸುವ ನಿಮಗೆ, ವರ್ಷಾನುಗಟ್ಟಲೇ ನಡೆದ ರಕ್ತ ಸಿಕ್ತ ರಾಮರಥಯಾತ್ರೆ ಸಂಚೆಂದು ಕಾಣುವುದಿಲ್ಲವೇಕೆ?” ಎಂದು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೆ,

  • ಪ್ರಾಸಿಕ್ಯೂಷನ್ ಒದಗಿಸಿದ 350 ಕ್ಕೂ ಹೆಚ್ಚು ಪುರಾವೆಗಳನ್ನು ಒಪ್ಪದ ನ್ಯಾಯಾಲಯ
  • ಅಡ್ವಾನಿ ಮತ್ತಿತರರ ಪ್ರಚೋದನಕಾರಿ ಭಾಷಣಗಳ ವಿಡಿಯೋ ನಕಲಿ ಎಂದು ತಿರಸ್ಕರಿಸಿದ ನ್ಯಾಯಾಲಯ
  • ಲಿಬರ್ಹಾನ್ ಕಮಿಷನ್ ಕೊಟ್ಟ ವರದಿಯನ್ನು ಕಣ್ಣೆತ್ತಿಯೂ ನೋಡದ ನ್ಯಾಯಾಲಯ

“ತಮ್ಮ ಪರವಾಗಿ ಆರೋಪಿಗಳು ಒಂದು ಸಾಕ್ಷಿಯನ್ನೂ ಹಾಜರು ಪಡಿಸದಿದ್ದರೂ, ಈ ಸತ್ಪುರುಷರು ಅಲ್ಲಿ ’ಮಸೀದೀಯನ್ನು ರಕ್ಷಿಸುವ ಪ್ರಯತ್ನ ಮಾಡುತ್ತಿದ್ದರು’ ಎಂದು ಕಂಡುಹಿಡಿದು ಬಿಡುಗಡೆ ಮಾಡಿದೆ ಹಾಗೂ ಮಸೀದಿಯನ್ನು ಅಲ್ಲಿದ್ದ ಯಾವ ಮನುಷ್ಯರೂ ನಾಶ ಮಾಡಿಲ್ಲವಾದ್ದರಿಂದ ಅದು “Act Of God” ಎಂದು ಪರೋಕ್ಷವಾಗಿ ಸೂಚಿಸಿದೆ. ಬಾಬ್ರಿ ಮಸೀದಿ ನಾಶ ಮಾಡಿದ್ದನ್ನು act of god ಎಂದು ಘೋಷಿಸಿದೆ” ಎಂದು ವ್ಯಂಗ್ಯವಾಡಿದ್ದಾರೆ.

ಬಿಬಿಸಿ ಪತ್ರಕರ್ತ ಸೌತಿಕ್ ಬಿಸ್ವಾಸ್, “28 ವರ್ಷಗಳು, 850 ಸಾಕ್ಷಿಗಳು, 7,000 ಕ್ಕೂ ಹೆಚ್ಚು ದಾಖಲೆಗಳು, ಜೊತೆಗೆ 100 ವರದಿಗಳು, ಘಟನೆಯ ಛಾಯಾಚಿತ್ರಗಳು ಮತ್ತು ವಿಡಿಯೋ ಟೇಪ್‌ಗಳು, 49 ಆರೋಪಿಗಳು, ಹಲವಾರು ನ್ಯಾಯಾಲಯಗಳು. ಆದರೆ ಯಾವುದೇ ಶಿಕ್ಷೆಯಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ದಿ ವೈರ್‌ ಪತ್ರಕರ್ತೆ ಅರ್ಫಾ ಖಾನುಂ ಶೇರ್‌ವಾನಿ, “ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ಹಾಗಾದರೆ ಬಾಬರಿ ಮಸೀದಿಯನ್ನು ನೆಲಸಮ ಮಾಡಿದವರು ಯಾರು? ನಂತರದ ಗಲಭೆಯಲ್ಲಿ 1800 ಜನರನ್ನು ಕೊಂದವರು ಯಾರು? ಭಾರತದ ಆತ್ಮದ ಮೇಲೆ ಮಾಡಿದ ಅಪರಾಧಗಳಿಗೆ ಹೊಣೆ ಯಾರು?” ಎಂದು ಪ್ರಶ್ನಿಸಿದ್ದಾರೆ.

SFI ಪ್ರಧಾನ ಕಾರ್ಯದರ್ಶಿ ಮಯುಕ್ ಬಿಸ್ವಾಸ್, “ಆ ದಿನ … ಅವರು ಸಂತೋಷದಿಂದ ಮುಳುಗಿದ್ದರು, ಇಂದು ಸಹ. ಈ ಮಧ್ಯೆ, ನನ್ನ ದೇಶದ ಚೈತನ್ಯವನ್ನು ಮಾತ್ರ ಸೋಲಿಸಲಾಗಿದೆ!” ಎಂದು ಅಡ್ವಾನಿ ಸೇರಿದಂತೆ ಹಲವಾರು ಜನರು ಖುಷಿಯಿಂದ ಇರುವ ಫೋಟೋವೊಂದನ್ನು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಹಿಂದುತ್ವದ ಬೆಳವಣಿಗೆ: ಮೇಲ್ಜಾತಿಗಳ ಧ್ರುವೀಕರಣದ ಬಂಡಾಯವೇ? – ಜಾನ್ ಡ್ರೀಜ್ ವಿಶೇಷ ಲೇಖನ

ಪತ್ರಕರ್ತ ಸಾಹಿಲ್ ಮುರುಳಿ ಮೇಂಗಾನಿ, “ಎಲ್.ಕೆ.ಅಡ್ವಾಣಿ ಸೇರಿದಂತೆ ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ಆದರೆ ’ಎಲ್ಲೆಲ್ಲಿ ಕಳೆ ಇದಿಯೋ ಅದನ್ನೆಲ್ಲಾ ತೆಗೆದು ಹಾಕುತ್ತೇವೆ’ ಎಂದು ಕಾಶಿ ಮತ್ತು ಮಥುರಾ ಬಗ್ಗೆ ‘ಆಚಾರ್ಯ’ ಧರ್ಮೇಂದ್ರ ಹೇಳುತ್ತಾರೆ. ಧರ್ಮೇಂದ್ರ ಬಾಬರಿ ಧ್ವಂಸ ಪ್ರಕರಣದಲ್ಲಿ ಖುಲಾಸೆಗೊಂಡ 32 ಆರೋಪಿಗಳಲ್ಲಿ ಒಬ್ಬ. ಅವರನ್ನು ಖುಲಾಸೆಗೊಳಿಸಿದ ನ್ಯಾಯಾಲಯದ ಹೊರಗೆ ಅವರು ಈ ಹೇಳಿಕೆ ನೀಡಿದ್ದಾರೆ. ನ್ಯಾಯಾಲಯವು ಟ್ವೀಟ್‌ ಬಗ್ಗೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿತು. ಆದರೆ ಇದನ್ನು ಅಲ್ಲ?” ಎಂದು ಟ್ವೀಟ್ ಮಾಡಿದ್ದಾರೆ.

ಬರಹಗಾರ ಸಂಶೋಧಕ ಸಂಜುಕ್ತ ಬಸು, “ಡಿಸೆಂಬರ್‌ ತಿಂಗಳ ಚಳಿಯ ಒಂದು ದಿನ ಬಾಬರಿ ಮಸೀದಿ ಸ್ವಯಂ ಸ್ಫೋಟಗೊಂಡಿತು” ಎಂದು ಬರೆದಿದ್ದಾರೆ.

ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್, “ಬಾಬರಿ ಮಸೀದಿ ಧ್ವಂಸ ಪ್ರಕರಣದ 2,000 ಪುಟಗಳ ತೀರ್ಪು ಎಲ್ಲ ತಪ್ಪಿತಸ್ಥರನ್ನು ದೋಷಮುಕ್ತಗೊಳಿಸಿದೆ! ಭಾರತೀಯ ಸಂವಿಧಾನಕ್ಕೆ ಶ್ರದ್ದಾಂಜಲಿ” ಎಂದು ಟ್ವೀಟ್ ಮಾಡಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಗೌರವ್ ಅವರು ಮಾಜಿ ಪ್ರಧಾನಿ ವಾಜಪೇಯಿ ಮಾತನಾಡುವ ವಿಡಿಯೋ ಒಂದನ್ನು ಹಾಕಿ “ಈ ಭಾಷಣವು ಬಾಬರಿ ಮಸೀದಿಯನ್ನು ಧ್ವಂಸಗೊಳಿಸುವ ಮೊದಲು ಸಂಜೆ ವಾಜಪೇಯಿ ಮಾಡಿದ್ದಾಗಿದ್ದು, ಅದರಲ್ಲಿ ಆರೆಸ್ಸೆಸ್ ಗೂಂಡಾಗಳಿಗೆ ಮಸೀದಿಯನ್ನು ಕೆಡವಬೇಕೆಂದು ಸೂಚಿಸಿ, ’ಪ್ರದೇಶವನ್ನು ನೆಲಸಮ ಮಾಡಬೇಕು’ ಎಂದಿದ್ದರು. ಕಾನೂನಿನ ಕಣ್ಣು ಕುರುಡು ಎಂದು ಹೇಳಲಾಗುತ್ತದೆ, ಆದರೆ ಅದಕ್ಕೆ ಕಣ್ಣು ಕಾಣುವುದಿಲ್ಲ ಹಾಗೂ ಕಿವಿಯೂ ಕೇಳುವುದಿಲ್ಲ ಎಂದು ನನಗೆ ತಿಳಿದಿರಲಿಲ್ಲ!” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಸುಪ್ರೀಮ್ ಕೋರ್ಟಿನ ನೇರ ಆದೇಶವನ್ನು ಜಾರಿಗೊಳಿಸುವಲ್ಲಿ ಭಾರತ ಸೋತಿದೆ.

ವಿಡಿಯೋ ನೋಡಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...