Homeಮುಖಪುಟಡಿಸೆಂಬರ್‌ ಚಳಿಯ ಒಂದು ದಿನ ಬಾಬರಿ ಮಸೀದಿ ಸ್ವಯಂ ಸ್ಫೋಟಗೊಂಡಿತು: ತೀರ್ಪು ವಿರುದ್ದ ಟ್ವಿಟ್ಟರ್‌‌ನಲ್ಲಿ ಆಕ್ರೋಶ

ಡಿಸೆಂಬರ್‌ ಚಳಿಯ ಒಂದು ದಿನ ಬಾಬರಿ ಮಸೀದಿ ಸ್ವಯಂ ಸ್ಫೋಟಗೊಂಡಿತು: ತೀರ್ಪು ವಿರುದ್ದ ಟ್ವಿಟ್ಟರ್‌‌ನಲ್ಲಿ ಆಕ್ರೋಶ

’ಹಾಗಾದರೆ ಬಾಬರಿಯನ್ನು ಯಾರು ಧ್ವಂಸ ಮಾಡಿಲ್ಲ?’ #NoOneDemolishedBabriMasjid ಎಂದು ಟ್ವಿಟ್ಟರ್‌‌ನಲ್ಲಿ ಪ್ರಶ್ನೆಗಳ ಸುರಿಮಳೆ ಪ್ರಾರಂಭವಾಗಿದೆ.

- Advertisement -
- Advertisement -

28 ವರ್ಷದ ಹಿಂದೆ ನಡೆದ ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಹೊರಬಿದ್ದಿದ್ದು, ನ್ಯಾಯಾಲಯವು ಮಸೀದಿಯ ಧ್ವಂಸವು ಪೂರ್ವನಿರ್ಧರಿತ ಅಲ್ಲವೆಂದು ಹೇಳಿ ಎಲ್ಲಾ ಆರೋಪಿಗಳನ್ನು ದೋಷ ಮುಕ್ತಗೊಳಿಸಿದೆ. ಆದರೆ ಸಾಮಾಜಿಕ ಜಾಲತಾಣದಲ್ಲಿ “ಹಾಗಾದರೆ ಬಾಬರಿಯನ್ನು ಯಾರು ಧ್ವಂಸ ಮಾಡಿಲ್ಲ?” (#NoOneDemolishedBabriMasjid) ಎಂದು ಪ್ರಶ್ನೆಗಳ ಸುರಿಮಳೆ ಪ್ರಾರಂಭವಾಗಿದೆ.

ಅಷ್ಟೇ ಅಲ್ಲದೆ ತೀರ್ಪಿನ ಬಗ್ಗೆ ಹಲವಾರು ಜನರು ಇನ್ನಷ್ಟು ಪ್ರಶ್ನೆಗಳನ್ನು ಎತ್ತಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಸಿಪಿಐಎಂ ಪಾಲಿಟ್ ಬ್ಯೂರೊ ಸದಸ್ಯ ಸೀತಾರಾಮ್ ಯಚೂರಿ, “ಇದು ಸಂಪೂರ್ಣ ನ್ಯಾಯದ ಅಣಕವಾಗಿದೆ. ಬಾಬರಿ ಮಸೀದಿಯನ್ನು ಕೆಡವಲು ಕ್ರಿಮಿನಲ್ ಪಿತೂರಿ ನಡೆಸಿರುವ ಆರೋಪಿಗಳನ್ನು ದೋಷ ಮುಕ್ತಗೊಳಿಸಲಾಗಿದೆ. ಅದು ತಾನಾಗಿಯೆ ಬಿದ್ದು ಹೋಗಿದೆಯೆ? ಅಂದಿನ ಸುಪ್ರೀಂ ಕೋರ್ಟ್‌ನ ಮುಖ್ಯನ್ಯಾಯಾಧೀಶರ ನೇತೃತ್ವದ ಸಂವಿಧಾನ ಪೀಠವು ಮಸೀದಿಯ ಧ್ವಂಸವೂ ಕಾನೂನಿನ ಉಲ್ಲಂಘನೆಯಾಗಿದೆ ಎಂದು ಹೇಳಿದೆ. ಆದರೆ ಈಗ ಈ ತೀರ್ಪು!. ನಾಚಿಕೆಗೇಡು” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬಾಬರಿ ಮಸೀದಿ ದ್ವಂಸ ತೀರ್ಪು ಪ್ರಕಟಿಸಿದ ನ್ಯಾಯಾಲಯ: ಆರೋಪಿಗಳು ದೋಷಮುಕ್ತ

ಚಿಂತಕ ಶಿವಸುಂದರ್‌, “ಓ ನ್ಯಾಯಾಲಯವೇ, ನಿಮ್ಮ ದೊರೆಗಳು ಒಪ್ಪದವರ ಭಾಷಣಗಳ
ಪದದ ಪಕ್ಕ ಇರದ ಕಾಮಾ, ಫುಲ್ ಸ್ಟಾಪುಗಳನ್ನೇ, ಭಯೋತ್ಪಾದಕ ದೇಶದ್ರೋಹಿ ಸಂಚಿಗೆ ಪರಮ ಸಾಕ್ಷಿ
ಎಂದು ಪರಿಗಣಿಸುವ ನಿಮಗೆ, ವರ್ಷಾನುಗಟ್ಟಲೇ ನಡೆದ ರಕ್ತ ಸಿಕ್ತ ರಾಮರಥಯಾತ್ರೆ ಸಂಚೆಂದು ಕಾಣುವುದಿಲ್ಲವೇಕೆ?” ಎಂದು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೆ,

  • ಪ್ರಾಸಿಕ್ಯೂಷನ್ ಒದಗಿಸಿದ 350 ಕ್ಕೂ ಹೆಚ್ಚು ಪುರಾವೆಗಳನ್ನು ಒಪ್ಪದ ನ್ಯಾಯಾಲಯ
  • ಅಡ್ವಾನಿ ಮತ್ತಿತರರ ಪ್ರಚೋದನಕಾರಿ ಭಾಷಣಗಳ ವಿಡಿಯೋ ನಕಲಿ ಎಂದು ತಿರಸ್ಕರಿಸಿದ ನ್ಯಾಯಾಲಯ
  • ಲಿಬರ್ಹಾನ್ ಕಮಿಷನ್ ಕೊಟ್ಟ ವರದಿಯನ್ನು ಕಣ್ಣೆತ್ತಿಯೂ ನೋಡದ ನ್ಯಾಯಾಲಯ

“ತಮ್ಮ ಪರವಾಗಿ ಆರೋಪಿಗಳು ಒಂದು ಸಾಕ್ಷಿಯನ್ನೂ ಹಾಜರು ಪಡಿಸದಿದ್ದರೂ, ಈ ಸತ್ಪುರುಷರು ಅಲ್ಲಿ ’ಮಸೀದೀಯನ್ನು ರಕ್ಷಿಸುವ ಪ್ರಯತ್ನ ಮಾಡುತ್ತಿದ್ದರು’ ಎಂದು ಕಂಡುಹಿಡಿದು ಬಿಡುಗಡೆ ಮಾಡಿದೆ ಹಾಗೂ ಮಸೀದಿಯನ್ನು ಅಲ್ಲಿದ್ದ ಯಾವ ಮನುಷ್ಯರೂ ನಾಶ ಮಾಡಿಲ್ಲವಾದ್ದರಿಂದ ಅದು “Act Of God” ಎಂದು ಪರೋಕ್ಷವಾಗಿ ಸೂಚಿಸಿದೆ. ಬಾಬ್ರಿ ಮಸೀದಿ ನಾಶ ಮಾಡಿದ್ದನ್ನು act of god ಎಂದು ಘೋಷಿಸಿದೆ” ಎಂದು ವ್ಯಂಗ್ಯವಾಡಿದ್ದಾರೆ.

ಬಿಬಿಸಿ ಪತ್ರಕರ್ತ ಸೌತಿಕ್ ಬಿಸ್ವಾಸ್, “28 ವರ್ಷಗಳು, 850 ಸಾಕ್ಷಿಗಳು, 7,000 ಕ್ಕೂ ಹೆಚ್ಚು ದಾಖಲೆಗಳು, ಜೊತೆಗೆ 100 ವರದಿಗಳು, ಘಟನೆಯ ಛಾಯಾಚಿತ್ರಗಳು ಮತ್ತು ವಿಡಿಯೋ ಟೇಪ್‌ಗಳು, 49 ಆರೋಪಿಗಳು, ಹಲವಾರು ನ್ಯಾಯಾಲಯಗಳು. ಆದರೆ ಯಾವುದೇ ಶಿಕ್ಷೆಯಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ದಿ ವೈರ್‌ ಪತ್ರಕರ್ತೆ ಅರ್ಫಾ ಖಾನುಂ ಶೇರ್‌ವಾನಿ, “ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ಹಾಗಾದರೆ ಬಾಬರಿ ಮಸೀದಿಯನ್ನು ನೆಲಸಮ ಮಾಡಿದವರು ಯಾರು? ನಂತರದ ಗಲಭೆಯಲ್ಲಿ 1800 ಜನರನ್ನು ಕೊಂದವರು ಯಾರು? ಭಾರತದ ಆತ್ಮದ ಮೇಲೆ ಮಾಡಿದ ಅಪರಾಧಗಳಿಗೆ ಹೊಣೆ ಯಾರು?” ಎಂದು ಪ್ರಶ್ನಿಸಿದ್ದಾರೆ.

SFI ಪ್ರಧಾನ ಕಾರ್ಯದರ್ಶಿ ಮಯುಕ್ ಬಿಸ್ವಾಸ್, “ಆ ದಿನ … ಅವರು ಸಂತೋಷದಿಂದ ಮುಳುಗಿದ್ದರು, ಇಂದು ಸಹ. ಈ ಮಧ್ಯೆ, ನನ್ನ ದೇಶದ ಚೈತನ್ಯವನ್ನು ಮಾತ್ರ ಸೋಲಿಸಲಾಗಿದೆ!” ಎಂದು ಅಡ್ವಾನಿ ಸೇರಿದಂತೆ ಹಲವಾರು ಜನರು ಖುಷಿಯಿಂದ ಇರುವ ಫೋಟೋವೊಂದನ್ನು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಹಿಂದುತ್ವದ ಬೆಳವಣಿಗೆ: ಮೇಲ್ಜಾತಿಗಳ ಧ್ರುವೀಕರಣದ ಬಂಡಾಯವೇ? – ಜಾನ್ ಡ್ರೀಜ್ ವಿಶೇಷ ಲೇಖನ

ಪತ್ರಕರ್ತ ಸಾಹಿಲ್ ಮುರುಳಿ ಮೇಂಗಾನಿ, “ಎಲ್.ಕೆ.ಅಡ್ವಾಣಿ ಸೇರಿದಂತೆ ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ಆದರೆ ’ಎಲ್ಲೆಲ್ಲಿ ಕಳೆ ಇದಿಯೋ ಅದನ್ನೆಲ್ಲಾ ತೆಗೆದು ಹಾಕುತ್ತೇವೆ’ ಎಂದು ಕಾಶಿ ಮತ್ತು ಮಥುರಾ ಬಗ್ಗೆ ‘ಆಚಾರ್ಯ’ ಧರ್ಮೇಂದ್ರ ಹೇಳುತ್ತಾರೆ. ಧರ್ಮೇಂದ್ರ ಬಾಬರಿ ಧ್ವಂಸ ಪ್ರಕರಣದಲ್ಲಿ ಖುಲಾಸೆಗೊಂಡ 32 ಆರೋಪಿಗಳಲ್ಲಿ ಒಬ್ಬ. ಅವರನ್ನು ಖುಲಾಸೆಗೊಳಿಸಿದ ನ್ಯಾಯಾಲಯದ ಹೊರಗೆ ಅವರು ಈ ಹೇಳಿಕೆ ನೀಡಿದ್ದಾರೆ. ನ್ಯಾಯಾಲಯವು ಟ್ವೀಟ್‌ ಬಗ್ಗೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿತು. ಆದರೆ ಇದನ್ನು ಅಲ್ಲ?” ಎಂದು ಟ್ವೀಟ್ ಮಾಡಿದ್ದಾರೆ.

ಬರಹಗಾರ ಸಂಶೋಧಕ ಸಂಜುಕ್ತ ಬಸು, “ಡಿಸೆಂಬರ್‌ ತಿಂಗಳ ಚಳಿಯ ಒಂದು ದಿನ ಬಾಬರಿ ಮಸೀದಿ ಸ್ವಯಂ ಸ್ಫೋಟಗೊಂಡಿತು” ಎಂದು ಬರೆದಿದ್ದಾರೆ.

ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್, “ಬಾಬರಿ ಮಸೀದಿ ಧ್ವಂಸ ಪ್ರಕರಣದ 2,000 ಪುಟಗಳ ತೀರ್ಪು ಎಲ್ಲ ತಪ್ಪಿತಸ್ಥರನ್ನು ದೋಷಮುಕ್ತಗೊಳಿಸಿದೆ! ಭಾರತೀಯ ಸಂವಿಧಾನಕ್ಕೆ ಶ್ರದ್ದಾಂಜಲಿ” ಎಂದು ಟ್ವೀಟ್ ಮಾಡಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಗೌರವ್ ಅವರು ಮಾಜಿ ಪ್ರಧಾನಿ ವಾಜಪೇಯಿ ಮಾತನಾಡುವ ವಿಡಿಯೋ ಒಂದನ್ನು ಹಾಕಿ “ಈ ಭಾಷಣವು ಬಾಬರಿ ಮಸೀದಿಯನ್ನು ಧ್ವಂಸಗೊಳಿಸುವ ಮೊದಲು ಸಂಜೆ ವಾಜಪೇಯಿ ಮಾಡಿದ್ದಾಗಿದ್ದು, ಅದರಲ್ಲಿ ಆರೆಸ್ಸೆಸ್ ಗೂಂಡಾಗಳಿಗೆ ಮಸೀದಿಯನ್ನು ಕೆಡವಬೇಕೆಂದು ಸೂಚಿಸಿ, ’ಪ್ರದೇಶವನ್ನು ನೆಲಸಮ ಮಾಡಬೇಕು’ ಎಂದಿದ್ದರು. ಕಾನೂನಿನ ಕಣ್ಣು ಕುರುಡು ಎಂದು ಹೇಳಲಾಗುತ್ತದೆ, ಆದರೆ ಅದಕ್ಕೆ ಕಣ್ಣು ಕಾಣುವುದಿಲ್ಲ ಹಾಗೂ ಕಿವಿಯೂ ಕೇಳುವುದಿಲ್ಲ ಎಂದು ನನಗೆ ತಿಳಿದಿರಲಿಲ್ಲ!” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಸುಪ್ರೀಮ್ ಕೋರ್ಟಿನ ನೇರ ಆದೇಶವನ್ನು ಜಾರಿಗೊಳಿಸುವಲ್ಲಿ ಭಾರತ ಸೋತಿದೆ.

ವಿಡಿಯೋ ನೋಡಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...

ಮುಂಬೈ: 2 ದಿನಗಳಿಂದ ಹೊತ್ತಿ ಉರಿಯುತ್ತಿರುವ ಪೊವೈ ಬೆಟ್ಟಗಳು: ನಿವಾಸಿಗಳಿಂದ ಅಧಿಕಾರಿಗಳ ನಿಷ್ಕ್ರಿಯತೆಯ ಆರೋಪ 

ಮುಂಬೈನ ಪೊವೈ ಬೆಟ್ಟಗಳ ಪ್ರದೇಶದಲ್ಲಿ ಸಂಭವಿಸಿದ ಬೆಂಕಿ ಕಳೆದ ಎರಡು ದಿನಗಳಿಂದ ಉರಿಯುತ್ತಿದೆ ಎಂದು ವರದಿಯಾಗಿದೆ. ನಿವಾಸಿಗಳು ಬೆಂಕಿಯ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಮತ್ತು ನಾಗರಿಕ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆಯು ಸಿಕ್ಕಿಲ್ಲ...

‘ದಲಿತ ಕ್ರೈಸ್ತ’ರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು: ಮಾನವ ಹಕ್ಕುಗಳ ಕಾರ್ಯಕರ್ತ ವಿನ್ಸೆಂಟ್ ಕಥಿರ್

"ದಲಿತ ಕ್ರೈಸ್ತರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು, ಇದರಿಂದಾಗಿ ಜಾತಿ ಹಿಂಸಾಚಾರದ ಬಲಿಪಶುಗಳು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಪ್ರಕಾರ ಸರ್ಕಾರದಿಂದ ಪರಿಹಾರವನ್ನು ಪಡೆಯಬಹುದು" ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಹಾಗೂ...

ಪಶ್ಚಿಮ ಏಷ್ಯಾ ಬಿಕ್ಕಟ್ಟು : ಇರಾನ್ ವಿದೇಶಾಂಗ ಸಚಿವರ ಜೊತೆ ಜೈಶಂಕರ್ ಚರ್ಚೆ

ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರೊಂದಿಗೆ ಮಂಗಳವಾರ (ಮಾ.10) ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಈ ವೇಳೆ ಪಶ್ಚಿಮ ಏಷ್ಯಾದ ಬೆಳವಣಿಗೆಗಳು...