Homeಮುಖಪುಟಡಿಸೆಂಬರ್‌ ಚಳಿಯ ಒಂದು ದಿನ ಬಾಬರಿ ಮಸೀದಿ ಸ್ವಯಂ ಸ್ಫೋಟಗೊಂಡಿತು: ತೀರ್ಪು ವಿರುದ್ದ ಟ್ವಿಟ್ಟರ್‌‌ನಲ್ಲಿ ಆಕ್ರೋಶ

ಡಿಸೆಂಬರ್‌ ಚಳಿಯ ಒಂದು ದಿನ ಬಾಬರಿ ಮಸೀದಿ ಸ್ವಯಂ ಸ್ಫೋಟಗೊಂಡಿತು: ತೀರ್ಪು ವಿರುದ್ದ ಟ್ವಿಟ್ಟರ್‌‌ನಲ್ಲಿ ಆಕ್ರೋಶ

’ಹಾಗಾದರೆ ಬಾಬರಿಯನ್ನು ಯಾರು ಧ್ವಂಸ ಮಾಡಿಲ್ಲ?’ #NoOneDemolishedBabriMasjid ಎಂದು ಟ್ವಿಟ್ಟರ್‌‌ನಲ್ಲಿ ಪ್ರಶ್ನೆಗಳ ಸುರಿಮಳೆ ಪ್ರಾರಂಭವಾಗಿದೆ.

- Advertisement -
- Advertisement -

28 ವರ್ಷದ ಹಿಂದೆ ನಡೆದ ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಹೊರಬಿದ್ದಿದ್ದು, ನ್ಯಾಯಾಲಯವು ಮಸೀದಿಯ ಧ್ವಂಸವು ಪೂರ್ವನಿರ್ಧರಿತ ಅಲ್ಲವೆಂದು ಹೇಳಿ ಎಲ್ಲಾ ಆರೋಪಿಗಳನ್ನು ದೋಷ ಮುಕ್ತಗೊಳಿಸಿದೆ. ಆದರೆ ಸಾಮಾಜಿಕ ಜಾಲತಾಣದಲ್ಲಿ “ಹಾಗಾದರೆ ಬಾಬರಿಯನ್ನು ಯಾರು ಧ್ವಂಸ ಮಾಡಿಲ್ಲ?” (#NoOneDemolishedBabriMasjid) ಎಂದು ಪ್ರಶ್ನೆಗಳ ಸುರಿಮಳೆ ಪ್ರಾರಂಭವಾಗಿದೆ.

ಅಷ್ಟೇ ಅಲ್ಲದೆ ತೀರ್ಪಿನ ಬಗ್ಗೆ ಹಲವಾರು ಜನರು ಇನ್ನಷ್ಟು ಪ್ರಶ್ನೆಗಳನ್ನು ಎತ್ತಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಸಿಪಿಐಎಂ ಪಾಲಿಟ್ ಬ್ಯೂರೊ ಸದಸ್ಯ ಸೀತಾರಾಮ್ ಯಚೂರಿ, “ಇದು ಸಂಪೂರ್ಣ ನ್ಯಾಯದ ಅಣಕವಾಗಿದೆ. ಬಾಬರಿ ಮಸೀದಿಯನ್ನು ಕೆಡವಲು ಕ್ರಿಮಿನಲ್ ಪಿತೂರಿ ನಡೆಸಿರುವ ಆರೋಪಿಗಳನ್ನು ದೋಷ ಮುಕ್ತಗೊಳಿಸಲಾಗಿದೆ. ಅದು ತಾನಾಗಿಯೆ ಬಿದ್ದು ಹೋಗಿದೆಯೆ? ಅಂದಿನ ಸುಪ್ರೀಂ ಕೋರ್ಟ್‌ನ ಮುಖ್ಯನ್ಯಾಯಾಧೀಶರ ನೇತೃತ್ವದ ಸಂವಿಧಾನ ಪೀಠವು ಮಸೀದಿಯ ಧ್ವಂಸವೂ ಕಾನೂನಿನ ಉಲ್ಲಂಘನೆಯಾಗಿದೆ ಎಂದು ಹೇಳಿದೆ. ಆದರೆ ಈಗ ಈ ತೀರ್ಪು!. ನಾಚಿಕೆಗೇಡು” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬಾಬರಿ ಮಸೀದಿ ದ್ವಂಸ ತೀರ್ಪು ಪ್ರಕಟಿಸಿದ ನ್ಯಾಯಾಲಯ: ಆರೋಪಿಗಳು ದೋಷಮುಕ್ತ

ಚಿಂತಕ ಶಿವಸುಂದರ್‌, “ಓ ನ್ಯಾಯಾಲಯವೇ, ನಿಮ್ಮ ದೊರೆಗಳು ಒಪ್ಪದವರ ಭಾಷಣಗಳ
ಪದದ ಪಕ್ಕ ಇರದ ಕಾಮಾ, ಫುಲ್ ಸ್ಟಾಪುಗಳನ್ನೇ, ಭಯೋತ್ಪಾದಕ ದೇಶದ್ರೋಹಿ ಸಂಚಿಗೆ ಪರಮ ಸಾಕ್ಷಿ
ಎಂದು ಪರಿಗಣಿಸುವ ನಿಮಗೆ, ವರ್ಷಾನುಗಟ್ಟಲೇ ನಡೆದ ರಕ್ತ ಸಿಕ್ತ ರಾಮರಥಯಾತ್ರೆ ಸಂಚೆಂದು ಕಾಣುವುದಿಲ್ಲವೇಕೆ?” ಎಂದು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೆ,

  • ಪ್ರಾಸಿಕ್ಯೂಷನ್ ಒದಗಿಸಿದ 350 ಕ್ಕೂ ಹೆಚ್ಚು ಪುರಾವೆಗಳನ್ನು ಒಪ್ಪದ ನ್ಯಾಯಾಲಯ
  • ಅಡ್ವಾನಿ ಮತ್ತಿತರರ ಪ್ರಚೋದನಕಾರಿ ಭಾಷಣಗಳ ವಿಡಿಯೋ ನಕಲಿ ಎಂದು ತಿರಸ್ಕರಿಸಿದ ನ್ಯಾಯಾಲಯ
  • ಲಿಬರ್ಹಾನ್ ಕಮಿಷನ್ ಕೊಟ್ಟ ವರದಿಯನ್ನು ಕಣ್ಣೆತ್ತಿಯೂ ನೋಡದ ನ್ಯಾಯಾಲಯ

“ತಮ್ಮ ಪರವಾಗಿ ಆರೋಪಿಗಳು ಒಂದು ಸಾಕ್ಷಿಯನ್ನೂ ಹಾಜರು ಪಡಿಸದಿದ್ದರೂ, ಈ ಸತ್ಪುರುಷರು ಅಲ್ಲಿ ’ಮಸೀದೀಯನ್ನು ರಕ್ಷಿಸುವ ಪ್ರಯತ್ನ ಮಾಡುತ್ತಿದ್ದರು’ ಎಂದು ಕಂಡುಹಿಡಿದು ಬಿಡುಗಡೆ ಮಾಡಿದೆ ಹಾಗೂ ಮಸೀದಿಯನ್ನು ಅಲ್ಲಿದ್ದ ಯಾವ ಮನುಷ್ಯರೂ ನಾಶ ಮಾಡಿಲ್ಲವಾದ್ದರಿಂದ ಅದು “Act Of God” ಎಂದು ಪರೋಕ್ಷವಾಗಿ ಸೂಚಿಸಿದೆ. ಬಾಬ್ರಿ ಮಸೀದಿ ನಾಶ ಮಾಡಿದ್ದನ್ನು act of god ಎಂದು ಘೋಷಿಸಿದೆ” ಎಂದು ವ್ಯಂಗ್ಯವಾಡಿದ್ದಾರೆ.

ಬಿಬಿಸಿ ಪತ್ರಕರ್ತ ಸೌತಿಕ್ ಬಿಸ್ವಾಸ್, “28 ವರ್ಷಗಳು, 850 ಸಾಕ್ಷಿಗಳು, 7,000 ಕ್ಕೂ ಹೆಚ್ಚು ದಾಖಲೆಗಳು, ಜೊತೆಗೆ 100 ವರದಿಗಳು, ಘಟನೆಯ ಛಾಯಾಚಿತ್ರಗಳು ಮತ್ತು ವಿಡಿಯೋ ಟೇಪ್‌ಗಳು, 49 ಆರೋಪಿಗಳು, ಹಲವಾರು ನ್ಯಾಯಾಲಯಗಳು. ಆದರೆ ಯಾವುದೇ ಶಿಕ್ಷೆಯಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ದಿ ವೈರ್‌ ಪತ್ರಕರ್ತೆ ಅರ್ಫಾ ಖಾನುಂ ಶೇರ್‌ವಾನಿ, “ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ಹಾಗಾದರೆ ಬಾಬರಿ ಮಸೀದಿಯನ್ನು ನೆಲಸಮ ಮಾಡಿದವರು ಯಾರು? ನಂತರದ ಗಲಭೆಯಲ್ಲಿ 1800 ಜನರನ್ನು ಕೊಂದವರು ಯಾರು? ಭಾರತದ ಆತ್ಮದ ಮೇಲೆ ಮಾಡಿದ ಅಪರಾಧಗಳಿಗೆ ಹೊಣೆ ಯಾರು?” ಎಂದು ಪ್ರಶ್ನಿಸಿದ್ದಾರೆ.

SFI ಪ್ರಧಾನ ಕಾರ್ಯದರ್ಶಿ ಮಯುಕ್ ಬಿಸ್ವಾಸ್, “ಆ ದಿನ … ಅವರು ಸಂತೋಷದಿಂದ ಮುಳುಗಿದ್ದರು, ಇಂದು ಸಹ. ಈ ಮಧ್ಯೆ, ನನ್ನ ದೇಶದ ಚೈತನ್ಯವನ್ನು ಮಾತ್ರ ಸೋಲಿಸಲಾಗಿದೆ!” ಎಂದು ಅಡ್ವಾನಿ ಸೇರಿದಂತೆ ಹಲವಾರು ಜನರು ಖುಷಿಯಿಂದ ಇರುವ ಫೋಟೋವೊಂದನ್ನು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಹಿಂದುತ್ವದ ಬೆಳವಣಿಗೆ: ಮೇಲ್ಜಾತಿಗಳ ಧ್ರುವೀಕರಣದ ಬಂಡಾಯವೇ? – ಜಾನ್ ಡ್ರೀಜ್ ವಿಶೇಷ ಲೇಖನ

ಪತ್ರಕರ್ತ ಸಾಹಿಲ್ ಮುರುಳಿ ಮೇಂಗಾನಿ, “ಎಲ್.ಕೆ.ಅಡ್ವಾಣಿ ಸೇರಿದಂತೆ ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ಆದರೆ ’ಎಲ್ಲೆಲ್ಲಿ ಕಳೆ ಇದಿಯೋ ಅದನ್ನೆಲ್ಲಾ ತೆಗೆದು ಹಾಕುತ್ತೇವೆ’ ಎಂದು ಕಾಶಿ ಮತ್ತು ಮಥುರಾ ಬಗ್ಗೆ ‘ಆಚಾರ್ಯ’ ಧರ್ಮೇಂದ್ರ ಹೇಳುತ್ತಾರೆ. ಧರ್ಮೇಂದ್ರ ಬಾಬರಿ ಧ್ವಂಸ ಪ್ರಕರಣದಲ್ಲಿ ಖುಲಾಸೆಗೊಂಡ 32 ಆರೋಪಿಗಳಲ್ಲಿ ಒಬ್ಬ. ಅವರನ್ನು ಖುಲಾಸೆಗೊಳಿಸಿದ ನ್ಯಾಯಾಲಯದ ಹೊರಗೆ ಅವರು ಈ ಹೇಳಿಕೆ ನೀಡಿದ್ದಾರೆ. ನ್ಯಾಯಾಲಯವು ಟ್ವೀಟ್‌ ಬಗ್ಗೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿತು. ಆದರೆ ಇದನ್ನು ಅಲ್ಲ?” ಎಂದು ಟ್ವೀಟ್ ಮಾಡಿದ್ದಾರೆ.

ಬರಹಗಾರ ಸಂಶೋಧಕ ಸಂಜುಕ್ತ ಬಸು, “ಡಿಸೆಂಬರ್‌ ತಿಂಗಳ ಚಳಿಯ ಒಂದು ದಿನ ಬಾಬರಿ ಮಸೀದಿ ಸ್ವಯಂ ಸ್ಫೋಟಗೊಂಡಿತು” ಎಂದು ಬರೆದಿದ್ದಾರೆ.

ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್, “ಬಾಬರಿ ಮಸೀದಿ ಧ್ವಂಸ ಪ್ರಕರಣದ 2,000 ಪುಟಗಳ ತೀರ್ಪು ಎಲ್ಲ ತಪ್ಪಿತಸ್ಥರನ್ನು ದೋಷಮುಕ್ತಗೊಳಿಸಿದೆ! ಭಾರತೀಯ ಸಂವಿಧಾನಕ್ಕೆ ಶ್ರದ್ದಾಂಜಲಿ” ಎಂದು ಟ್ವೀಟ್ ಮಾಡಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಗೌರವ್ ಅವರು ಮಾಜಿ ಪ್ರಧಾನಿ ವಾಜಪೇಯಿ ಮಾತನಾಡುವ ವಿಡಿಯೋ ಒಂದನ್ನು ಹಾಕಿ “ಈ ಭಾಷಣವು ಬಾಬರಿ ಮಸೀದಿಯನ್ನು ಧ್ವಂಸಗೊಳಿಸುವ ಮೊದಲು ಸಂಜೆ ವಾಜಪೇಯಿ ಮಾಡಿದ್ದಾಗಿದ್ದು, ಅದರಲ್ಲಿ ಆರೆಸ್ಸೆಸ್ ಗೂಂಡಾಗಳಿಗೆ ಮಸೀದಿಯನ್ನು ಕೆಡವಬೇಕೆಂದು ಸೂಚಿಸಿ, ’ಪ್ರದೇಶವನ್ನು ನೆಲಸಮ ಮಾಡಬೇಕು’ ಎಂದಿದ್ದರು. ಕಾನೂನಿನ ಕಣ್ಣು ಕುರುಡು ಎಂದು ಹೇಳಲಾಗುತ್ತದೆ, ಆದರೆ ಅದಕ್ಕೆ ಕಣ್ಣು ಕಾಣುವುದಿಲ್ಲ ಹಾಗೂ ಕಿವಿಯೂ ಕೇಳುವುದಿಲ್ಲ ಎಂದು ನನಗೆ ತಿಳಿದಿರಲಿಲ್ಲ!” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಸುಪ್ರೀಮ್ ಕೋರ್ಟಿನ ನೇರ ಆದೇಶವನ್ನು ಜಾರಿಗೊಳಿಸುವಲ್ಲಿ ಭಾರತ ಸೋತಿದೆ.

ವಿಡಿಯೋ ನೋಡಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...