Homeಮುಖಪುಟಡಿಸೆಂಬರ್‌ ಚಳಿಯ ಒಂದು ದಿನ ಬಾಬರಿ ಮಸೀದಿ ಸ್ವಯಂ ಸ್ಫೋಟಗೊಂಡಿತು: ತೀರ್ಪು ವಿರುದ್ದ ಟ್ವಿಟ್ಟರ್‌‌ನಲ್ಲಿ ಆಕ್ರೋಶ

ಡಿಸೆಂಬರ್‌ ಚಳಿಯ ಒಂದು ದಿನ ಬಾಬರಿ ಮಸೀದಿ ಸ್ವಯಂ ಸ್ಫೋಟಗೊಂಡಿತು: ತೀರ್ಪು ವಿರುದ್ದ ಟ್ವಿಟ್ಟರ್‌‌ನಲ್ಲಿ ಆಕ್ರೋಶ

’ಹಾಗಾದರೆ ಬಾಬರಿಯನ್ನು ಯಾರು ಧ್ವಂಸ ಮಾಡಿಲ್ಲ?’ #NoOneDemolishedBabriMasjid ಎಂದು ಟ್ವಿಟ್ಟರ್‌‌ನಲ್ಲಿ ಪ್ರಶ್ನೆಗಳ ಸುರಿಮಳೆ ಪ್ರಾರಂಭವಾಗಿದೆ.

- Advertisement -
- Advertisement -

28 ವರ್ಷದ ಹಿಂದೆ ನಡೆದ ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಹೊರಬಿದ್ದಿದ್ದು, ನ್ಯಾಯಾಲಯವು ಮಸೀದಿಯ ಧ್ವಂಸವು ಪೂರ್ವನಿರ್ಧರಿತ ಅಲ್ಲವೆಂದು ಹೇಳಿ ಎಲ್ಲಾ ಆರೋಪಿಗಳನ್ನು ದೋಷ ಮುಕ್ತಗೊಳಿಸಿದೆ. ಆದರೆ ಸಾಮಾಜಿಕ ಜಾಲತಾಣದಲ್ಲಿ “ಹಾಗಾದರೆ ಬಾಬರಿಯನ್ನು ಯಾರು ಧ್ವಂಸ ಮಾಡಿಲ್ಲ?” (#NoOneDemolishedBabriMasjid) ಎಂದು ಪ್ರಶ್ನೆಗಳ ಸುರಿಮಳೆ ಪ್ರಾರಂಭವಾಗಿದೆ.

ಅಷ್ಟೇ ಅಲ್ಲದೆ ತೀರ್ಪಿನ ಬಗ್ಗೆ ಹಲವಾರು ಜನರು ಇನ್ನಷ್ಟು ಪ್ರಶ್ನೆಗಳನ್ನು ಎತ್ತಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಸಿಪಿಐಎಂ ಪಾಲಿಟ್ ಬ್ಯೂರೊ ಸದಸ್ಯ ಸೀತಾರಾಮ್ ಯಚೂರಿ, “ಇದು ಸಂಪೂರ್ಣ ನ್ಯಾಯದ ಅಣಕವಾಗಿದೆ. ಬಾಬರಿ ಮಸೀದಿಯನ್ನು ಕೆಡವಲು ಕ್ರಿಮಿನಲ್ ಪಿತೂರಿ ನಡೆಸಿರುವ ಆರೋಪಿಗಳನ್ನು ದೋಷ ಮುಕ್ತಗೊಳಿಸಲಾಗಿದೆ. ಅದು ತಾನಾಗಿಯೆ ಬಿದ್ದು ಹೋಗಿದೆಯೆ? ಅಂದಿನ ಸುಪ್ರೀಂ ಕೋರ್ಟ್‌ನ ಮುಖ್ಯನ್ಯಾಯಾಧೀಶರ ನೇತೃತ್ವದ ಸಂವಿಧಾನ ಪೀಠವು ಮಸೀದಿಯ ಧ್ವಂಸವೂ ಕಾನೂನಿನ ಉಲ್ಲಂಘನೆಯಾಗಿದೆ ಎಂದು ಹೇಳಿದೆ. ಆದರೆ ಈಗ ಈ ತೀರ್ಪು!. ನಾಚಿಕೆಗೇಡು” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬಾಬರಿ ಮಸೀದಿ ದ್ವಂಸ ತೀರ್ಪು ಪ್ರಕಟಿಸಿದ ನ್ಯಾಯಾಲಯ: ಆರೋಪಿಗಳು ದೋಷಮುಕ್ತ

ಚಿಂತಕ ಶಿವಸುಂದರ್‌, “ಓ ನ್ಯಾಯಾಲಯವೇ, ನಿಮ್ಮ ದೊರೆಗಳು ಒಪ್ಪದವರ ಭಾಷಣಗಳ
ಪದದ ಪಕ್ಕ ಇರದ ಕಾಮಾ, ಫುಲ್ ಸ್ಟಾಪುಗಳನ್ನೇ, ಭಯೋತ್ಪಾದಕ ದೇಶದ್ರೋಹಿ ಸಂಚಿಗೆ ಪರಮ ಸಾಕ್ಷಿ
ಎಂದು ಪರಿಗಣಿಸುವ ನಿಮಗೆ, ವರ್ಷಾನುಗಟ್ಟಲೇ ನಡೆದ ರಕ್ತ ಸಿಕ್ತ ರಾಮರಥಯಾತ್ರೆ ಸಂಚೆಂದು ಕಾಣುವುದಿಲ್ಲವೇಕೆ?” ಎಂದು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೆ,

  • ಪ್ರಾಸಿಕ್ಯೂಷನ್ ಒದಗಿಸಿದ 350 ಕ್ಕೂ ಹೆಚ್ಚು ಪುರಾವೆಗಳನ್ನು ಒಪ್ಪದ ನ್ಯಾಯಾಲಯ
  • ಅಡ್ವಾನಿ ಮತ್ತಿತರರ ಪ್ರಚೋದನಕಾರಿ ಭಾಷಣಗಳ ವಿಡಿಯೋ ನಕಲಿ ಎಂದು ತಿರಸ್ಕರಿಸಿದ ನ್ಯಾಯಾಲಯ
  • ಲಿಬರ್ಹಾನ್ ಕಮಿಷನ್ ಕೊಟ್ಟ ವರದಿಯನ್ನು ಕಣ್ಣೆತ್ತಿಯೂ ನೋಡದ ನ್ಯಾಯಾಲಯ

“ತಮ್ಮ ಪರವಾಗಿ ಆರೋಪಿಗಳು ಒಂದು ಸಾಕ್ಷಿಯನ್ನೂ ಹಾಜರು ಪಡಿಸದಿದ್ದರೂ, ಈ ಸತ್ಪುರುಷರು ಅಲ್ಲಿ ’ಮಸೀದೀಯನ್ನು ರಕ್ಷಿಸುವ ಪ್ರಯತ್ನ ಮಾಡುತ್ತಿದ್ದರು’ ಎಂದು ಕಂಡುಹಿಡಿದು ಬಿಡುಗಡೆ ಮಾಡಿದೆ ಹಾಗೂ ಮಸೀದಿಯನ್ನು ಅಲ್ಲಿದ್ದ ಯಾವ ಮನುಷ್ಯರೂ ನಾಶ ಮಾಡಿಲ್ಲವಾದ್ದರಿಂದ ಅದು “Act Of God” ಎಂದು ಪರೋಕ್ಷವಾಗಿ ಸೂಚಿಸಿದೆ. ಬಾಬ್ರಿ ಮಸೀದಿ ನಾಶ ಮಾಡಿದ್ದನ್ನು act of god ಎಂದು ಘೋಷಿಸಿದೆ” ಎಂದು ವ್ಯಂಗ್ಯವಾಡಿದ್ದಾರೆ.

ಬಿಬಿಸಿ ಪತ್ರಕರ್ತ ಸೌತಿಕ್ ಬಿಸ್ವಾಸ್, “28 ವರ್ಷಗಳು, 850 ಸಾಕ್ಷಿಗಳು, 7,000 ಕ್ಕೂ ಹೆಚ್ಚು ದಾಖಲೆಗಳು, ಜೊತೆಗೆ 100 ವರದಿಗಳು, ಘಟನೆಯ ಛಾಯಾಚಿತ್ರಗಳು ಮತ್ತು ವಿಡಿಯೋ ಟೇಪ್‌ಗಳು, 49 ಆರೋಪಿಗಳು, ಹಲವಾರು ನ್ಯಾಯಾಲಯಗಳು. ಆದರೆ ಯಾವುದೇ ಶಿಕ್ಷೆಯಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ದಿ ವೈರ್‌ ಪತ್ರಕರ್ತೆ ಅರ್ಫಾ ಖಾನುಂ ಶೇರ್‌ವಾನಿ, “ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ಹಾಗಾದರೆ ಬಾಬರಿ ಮಸೀದಿಯನ್ನು ನೆಲಸಮ ಮಾಡಿದವರು ಯಾರು? ನಂತರದ ಗಲಭೆಯಲ್ಲಿ 1800 ಜನರನ್ನು ಕೊಂದವರು ಯಾರು? ಭಾರತದ ಆತ್ಮದ ಮೇಲೆ ಮಾಡಿದ ಅಪರಾಧಗಳಿಗೆ ಹೊಣೆ ಯಾರು?” ಎಂದು ಪ್ರಶ್ನಿಸಿದ್ದಾರೆ.

SFI ಪ್ರಧಾನ ಕಾರ್ಯದರ್ಶಿ ಮಯುಕ್ ಬಿಸ್ವಾಸ್, “ಆ ದಿನ … ಅವರು ಸಂತೋಷದಿಂದ ಮುಳುಗಿದ್ದರು, ಇಂದು ಸಹ. ಈ ಮಧ್ಯೆ, ನನ್ನ ದೇಶದ ಚೈತನ್ಯವನ್ನು ಮಾತ್ರ ಸೋಲಿಸಲಾಗಿದೆ!” ಎಂದು ಅಡ್ವಾನಿ ಸೇರಿದಂತೆ ಹಲವಾರು ಜನರು ಖುಷಿಯಿಂದ ಇರುವ ಫೋಟೋವೊಂದನ್ನು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಹಿಂದುತ್ವದ ಬೆಳವಣಿಗೆ: ಮೇಲ್ಜಾತಿಗಳ ಧ್ರುವೀಕರಣದ ಬಂಡಾಯವೇ? – ಜಾನ್ ಡ್ರೀಜ್ ವಿಶೇಷ ಲೇಖನ

ಪತ್ರಕರ್ತ ಸಾಹಿಲ್ ಮುರುಳಿ ಮೇಂಗಾನಿ, “ಎಲ್.ಕೆ.ಅಡ್ವಾಣಿ ಸೇರಿದಂತೆ ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ಆದರೆ ’ಎಲ್ಲೆಲ್ಲಿ ಕಳೆ ಇದಿಯೋ ಅದನ್ನೆಲ್ಲಾ ತೆಗೆದು ಹಾಕುತ್ತೇವೆ’ ಎಂದು ಕಾಶಿ ಮತ್ತು ಮಥುರಾ ಬಗ್ಗೆ ‘ಆಚಾರ್ಯ’ ಧರ್ಮೇಂದ್ರ ಹೇಳುತ್ತಾರೆ. ಧರ್ಮೇಂದ್ರ ಬಾಬರಿ ಧ್ವಂಸ ಪ್ರಕರಣದಲ್ಲಿ ಖುಲಾಸೆಗೊಂಡ 32 ಆರೋಪಿಗಳಲ್ಲಿ ಒಬ್ಬ. ಅವರನ್ನು ಖುಲಾಸೆಗೊಳಿಸಿದ ನ್ಯಾಯಾಲಯದ ಹೊರಗೆ ಅವರು ಈ ಹೇಳಿಕೆ ನೀಡಿದ್ದಾರೆ. ನ್ಯಾಯಾಲಯವು ಟ್ವೀಟ್‌ ಬಗ್ಗೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿತು. ಆದರೆ ಇದನ್ನು ಅಲ್ಲ?” ಎಂದು ಟ್ವೀಟ್ ಮಾಡಿದ್ದಾರೆ.

ಬರಹಗಾರ ಸಂಶೋಧಕ ಸಂಜುಕ್ತ ಬಸು, “ಡಿಸೆಂಬರ್‌ ತಿಂಗಳ ಚಳಿಯ ಒಂದು ದಿನ ಬಾಬರಿ ಮಸೀದಿ ಸ್ವಯಂ ಸ್ಫೋಟಗೊಂಡಿತು” ಎಂದು ಬರೆದಿದ್ದಾರೆ.

ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್, “ಬಾಬರಿ ಮಸೀದಿ ಧ್ವಂಸ ಪ್ರಕರಣದ 2,000 ಪುಟಗಳ ತೀರ್ಪು ಎಲ್ಲ ತಪ್ಪಿತಸ್ಥರನ್ನು ದೋಷಮುಕ್ತಗೊಳಿಸಿದೆ! ಭಾರತೀಯ ಸಂವಿಧಾನಕ್ಕೆ ಶ್ರದ್ದಾಂಜಲಿ” ಎಂದು ಟ್ವೀಟ್ ಮಾಡಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಗೌರವ್ ಅವರು ಮಾಜಿ ಪ್ರಧಾನಿ ವಾಜಪೇಯಿ ಮಾತನಾಡುವ ವಿಡಿಯೋ ಒಂದನ್ನು ಹಾಕಿ “ಈ ಭಾಷಣವು ಬಾಬರಿ ಮಸೀದಿಯನ್ನು ಧ್ವಂಸಗೊಳಿಸುವ ಮೊದಲು ಸಂಜೆ ವಾಜಪೇಯಿ ಮಾಡಿದ್ದಾಗಿದ್ದು, ಅದರಲ್ಲಿ ಆರೆಸ್ಸೆಸ್ ಗೂಂಡಾಗಳಿಗೆ ಮಸೀದಿಯನ್ನು ಕೆಡವಬೇಕೆಂದು ಸೂಚಿಸಿ, ’ಪ್ರದೇಶವನ್ನು ನೆಲಸಮ ಮಾಡಬೇಕು’ ಎಂದಿದ್ದರು. ಕಾನೂನಿನ ಕಣ್ಣು ಕುರುಡು ಎಂದು ಹೇಳಲಾಗುತ್ತದೆ, ಆದರೆ ಅದಕ್ಕೆ ಕಣ್ಣು ಕಾಣುವುದಿಲ್ಲ ಹಾಗೂ ಕಿವಿಯೂ ಕೇಳುವುದಿಲ್ಲ ಎಂದು ನನಗೆ ತಿಳಿದಿರಲಿಲ್ಲ!” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಸುಪ್ರೀಮ್ ಕೋರ್ಟಿನ ನೇರ ಆದೇಶವನ್ನು ಜಾರಿಗೊಳಿಸುವಲ್ಲಿ ಭಾರತ ಸೋತಿದೆ.

ವಿಡಿಯೋ ನೋಡಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...