Homeಮುಖಪುಟಡಿಸೆಂಬರ್‌ ಚಳಿಯ ಒಂದು ದಿನ ಬಾಬರಿ ಮಸೀದಿ ಸ್ವಯಂ ಸ್ಫೋಟಗೊಂಡಿತು: ತೀರ್ಪು ವಿರುದ್ದ ಟ್ವಿಟ್ಟರ್‌‌ನಲ್ಲಿ ಆಕ್ರೋಶ

ಡಿಸೆಂಬರ್‌ ಚಳಿಯ ಒಂದು ದಿನ ಬಾಬರಿ ಮಸೀದಿ ಸ್ವಯಂ ಸ್ಫೋಟಗೊಂಡಿತು: ತೀರ್ಪು ವಿರುದ್ದ ಟ್ವಿಟ್ಟರ್‌‌ನಲ್ಲಿ ಆಕ್ರೋಶ

’ಹಾಗಾದರೆ ಬಾಬರಿಯನ್ನು ಯಾರು ಧ್ವಂಸ ಮಾಡಿಲ್ಲ?’ #NoOneDemolishedBabriMasjid ಎಂದು ಟ್ವಿಟ್ಟರ್‌‌ನಲ್ಲಿ ಪ್ರಶ್ನೆಗಳ ಸುರಿಮಳೆ ಪ್ರಾರಂಭವಾಗಿದೆ.

- Advertisement -
- Advertisement -

28 ವರ್ಷದ ಹಿಂದೆ ನಡೆದ ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಹೊರಬಿದ್ದಿದ್ದು, ನ್ಯಾಯಾಲಯವು ಮಸೀದಿಯ ಧ್ವಂಸವು ಪೂರ್ವನಿರ್ಧರಿತ ಅಲ್ಲವೆಂದು ಹೇಳಿ ಎಲ್ಲಾ ಆರೋಪಿಗಳನ್ನು ದೋಷ ಮುಕ್ತಗೊಳಿಸಿದೆ. ಆದರೆ ಸಾಮಾಜಿಕ ಜಾಲತಾಣದಲ್ಲಿ “ಹಾಗಾದರೆ ಬಾಬರಿಯನ್ನು ಯಾರು ಧ್ವಂಸ ಮಾಡಿಲ್ಲ?” (#NoOneDemolishedBabriMasjid) ಎಂದು ಪ್ರಶ್ನೆಗಳ ಸುರಿಮಳೆ ಪ್ರಾರಂಭವಾಗಿದೆ.

ಅಷ್ಟೇ ಅಲ್ಲದೆ ತೀರ್ಪಿನ ಬಗ್ಗೆ ಹಲವಾರು ಜನರು ಇನ್ನಷ್ಟು ಪ್ರಶ್ನೆಗಳನ್ನು ಎತ್ತಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಸಿಪಿಐಎಂ ಪಾಲಿಟ್ ಬ್ಯೂರೊ ಸದಸ್ಯ ಸೀತಾರಾಮ್ ಯಚೂರಿ, “ಇದು ಸಂಪೂರ್ಣ ನ್ಯಾಯದ ಅಣಕವಾಗಿದೆ. ಬಾಬರಿ ಮಸೀದಿಯನ್ನು ಕೆಡವಲು ಕ್ರಿಮಿನಲ್ ಪಿತೂರಿ ನಡೆಸಿರುವ ಆರೋಪಿಗಳನ್ನು ದೋಷ ಮುಕ್ತಗೊಳಿಸಲಾಗಿದೆ. ಅದು ತಾನಾಗಿಯೆ ಬಿದ್ದು ಹೋಗಿದೆಯೆ? ಅಂದಿನ ಸುಪ್ರೀಂ ಕೋರ್ಟ್‌ನ ಮುಖ್ಯನ್ಯಾಯಾಧೀಶರ ನೇತೃತ್ವದ ಸಂವಿಧಾನ ಪೀಠವು ಮಸೀದಿಯ ಧ್ವಂಸವೂ ಕಾನೂನಿನ ಉಲ್ಲಂಘನೆಯಾಗಿದೆ ಎಂದು ಹೇಳಿದೆ. ಆದರೆ ಈಗ ಈ ತೀರ್ಪು!. ನಾಚಿಕೆಗೇಡು” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬಾಬರಿ ಮಸೀದಿ ದ್ವಂಸ ತೀರ್ಪು ಪ್ರಕಟಿಸಿದ ನ್ಯಾಯಾಲಯ: ಆರೋಪಿಗಳು ದೋಷಮುಕ್ತ

ಚಿಂತಕ ಶಿವಸುಂದರ್‌, “ಓ ನ್ಯಾಯಾಲಯವೇ, ನಿಮ್ಮ ದೊರೆಗಳು ಒಪ್ಪದವರ ಭಾಷಣಗಳ
ಪದದ ಪಕ್ಕ ಇರದ ಕಾಮಾ, ಫುಲ್ ಸ್ಟಾಪುಗಳನ್ನೇ, ಭಯೋತ್ಪಾದಕ ದೇಶದ್ರೋಹಿ ಸಂಚಿಗೆ ಪರಮ ಸಾಕ್ಷಿ
ಎಂದು ಪರಿಗಣಿಸುವ ನಿಮಗೆ, ವರ್ಷಾನುಗಟ್ಟಲೇ ನಡೆದ ರಕ್ತ ಸಿಕ್ತ ರಾಮರಥಯಾತ್ರೆ ಸಂಚೆಂದು ಕಾಣುವುದಿಲ್ಲವೇಕೆ?” ಎಂದು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೆ,

  • ಪ್ರಾಸಿಕ್ಯೂಷನ್ ಒದಗಿಸಿದ 350 ಕ್ಕೂ ಹೆಚ್ಚು ಪುರಾವೆಗಳನ್ನು ಒಪ್ಪದ ನ್ಯಾಯಾಲಯ
  • ಅಡ್ವಾನಿ ಮತ್ತಿತರರ ಪ್ರಚೋದನಕಾರಿ ಭಾಷಣಗಳ ವಿಡಿಯೋ ನಕಲಿ ಎಂದು ತಿರಸ್ಕರಿಸಿದ ನ್ಯಾಯಾಲಯ
  • ಲಿಬರ್ಹಾನ್ ಕಮಿಷನ್ ಕೊಟ್ಟ ವರದಿಯನ್ನು ಕಣ್ಣೆತ್ತಿಯೂ ನೋಡದ ನ್ಯಾಯಾಲಯ

“ತಮ್ಮ ಪರವಾಗಿ ಆರೋಪಿಗಳು ಒಂದು ಸಾಕ್ಷಿಯನ್ನೂ ಹಾಜರು ಪಡಿಸದಿದ್ದರೂ, ಈ ಸತ್ಪುರುಷರು ಅಲ್ಲಿ ’ಮಸೀದೀಯನ್ನು ರಕ್ಷಿಸುವ ಪ್ರಯತ್ನ ಮಾಡುತ್ತಿದ್ದರು’ ಎಂದು ಕಂಡುಹಿಡಿದು ಬಿಡುಗಡೆ ಮಾಡಿದೆ ಹಾಗೂ ಮಸೀದಿಯನ್ನು ಅಲ್ಲಿದ್ದ ಯಾವ ಮನುಷ್ಯರೂ ನಾಶ ಮಾಡಿಲ್ಲವಾದ್ದರಿಂದ ಅದು “Act Of God” ಎಂದು ಪರೋಕ್ಷವಾಗಿ ಸೂಚಿಸಿದೆ. ಬಾಬ್ರಿ ಮಸೀದಿ ನಾಶ ಮಾಡಿದ್ದನ್ನು act of god ಎಂದು ಘೋಷಿಸಿದೆ” ಎಂದು ವ್ಯಂಗ್ಯವಾಡಿದ್ದಾರೆ.

ಬಿಬಿಸಿ ಪತ್ರಕರ್ತ ಸೌತಿಕ್ ಬಿಸ್ವಾಸ್, “28 ವರ್ಷಗಳು, 850 ಸಾಕ್ಷಿಗಳು, 7,000 ಕ್ಕೂ ಹೆಚ್ಚು ದಾಖಲೆಗಳು, ಜೊತೆಗೆ 100 ವರದಿಗಳು, ಘಟನೆಯ ಛಾಯಾಚಿತ್ರಗಳು ಮತ್ತು ವಿಡಿಯೋ ಟೇಪ್‌ಗಳು, 49 ಆರೋಪಿಗಳು, ಹಲವಾರು ನ್ಯಾಯಾಲಯಗಳು. ಆದರೆ ಯಾವುದೇ ಶಿಕ್ಷೆಯಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ದಿ ವೈರ್‌ ಪತ್ರಕರ್ತೆ ಅರ್ಫಾ ಖಾನುಂ ಶೇರ್‌ವಾನಿ, “ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ಹಾಗಾದರೆ ಬಾಬರಿ ಮಸೀದಿಯನ್ನು ನೆಲಸಮ ಮಾಡಿದವರು ಯಾರು? ನಂತರದ ಗಲಭೆಯಲ್ಲಿ 1800 ಜನರನ್ನು ಕೊಂದವರು ಯಾರು? ಭಾರತದ ಆತ್ಮದ ಮೇಲೆ ಮಾಡಿದ ಅಪರಾಧಗಳಿಗೆ ಹೊಣೆ ಯಾರು?” ಎಂದು ಪ್ರಶ್ನಿಸಿದ್ದಾರೆ.

SFI ಪ್ರಧಾನ ಕಾರ್ಯದರ್ಶಿ ಮಯುಕ್ ಬಿಸ್ವಾಸ್, “ಆ ದಿನ … ಅವರು ಸಂತೋಷದಿಂದ ಮುಳುಗಿದ್ದರು, ಇಂದು ಸಹ. ಈ ಮಧ್ಯೆ, ನನ್ನ ದೇಶದ ಚೈತನ್ಯವನ್ನು ಮಾತ್ರ ಸೋಲಿಸಲಾಗಿದೆ!” ಎಂದು ಅಡ್ವಾನಿ ಸೇರಿದಂತೆ ಹಲವಾರು ಜನರು ಖುಷಿಯಿಂದ ಇರುವ ಫೋಟೋವೊಂದನ್ನು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಹಿಂದುತ್ವದ ಬೆಳವಣಿಗೆ: ಮೇಲ್ಜಾತಿಗಳ ಧ್ರುವೀಕರಣದ ಬಂಡಾಯವೇ? – ಜಾನ್ ಡ್ರೀಜ್ ವಿಶೇಷ ಲೇಖನ

ಪತ್ರಕರ್ತ ಸಾಹಿಲ್ ಮುರುಳಿ ಮೇಂಗಾನಿ, “ಎಲ್.ಕೆ.ಅಡ್ವಾಣಿ ಸೇರಿದಂತೆ ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ಆದರೆ ’ಎಲ್ಲೆಲ್ಲಿ ಕಳೆ ಇದಿಯೋ ಅದನ್ನೆಲ್ಲಾ ತೆಗೆದು ಹಾಕುತ್ತೇವೆ’ ಎಂದು ಕಾಶಿ ಮತ್ತು ಮಥುರಾ ಬಗ್ಗೆ ‘ಆಚಾರ್ಯ’ ಧರ್ಮೇಂದ್ರ ಹೇಳುತ್ತಾರೆ. ಧರ್ಮೇಂದ್ರ ಬಾಬರಿ ಧ್ವಂಸ ಪ್ರಕರಣದಲ್ಲಿ ಖುಲಾಸೆಗೊಂಡ 32 ಆರೋಪಿಗಳಲ್ಲಿ ಒಬ್ಬ. ಅವರನ್ನು ಖುಲಾಸೆಗೊಳಿಸಿದ ನ್ಯಾಯಾಲಯದ ಹೊರಗೆ ಅವರು ಈ ಹೇಳಿಕೆ ನೀಡಿದ್ದಾರೆ. ನ್ಯಾಯಾಲಯವು ಟ್ವೀಟ್‌ ಬಗ್ಗೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿತು. ಆದರೆ ಇದನ್ನು ಅಲ್ಲ?” ಎಂದು ಟ್ವೀಟ್ ಮಾಡಿದ್ದಾರೆ.

ಬರಹಗಾರ ಸಂಶೋಧಕ ಸಂಜುಕ್ತ ಬಸು, “ಡಿಸೆಂಬರ್‌ ತಿಂಗಳ ಚಳಿಯ ಒಂದು ದಿನ ಬಾಬರಿ ಮಸೀದಿ ಸ್ವಯಂ ಸ್ಫೋಟಗೊಂಡಿತು” ಎಂದು ಬರೆದಿದ್ದಾರೆ.

ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್, “ಬಾಬರಿ ಮಸೀದಿ ಧ್ವಂಸ ಪ್ರಕರಣದ 2,000 ಪುಟಗಳ ತೀರ್ಪು ಎಲ್ಲ ತಪ್ಪಿತಸ್ಥರನ್ನು ದೋಷಮುಕ್ತಗೊಳಿಸಿದೆ! ಭಾರತೀಯ ಸಂವಿಧಾನಕ್ಕೆ ಶ್ರದ್ದಾಂಜಲಿ” ಎಂದು ಟ್ವೀಟ್ ಮಾಡಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಗೌರವ್ ಅವರು ಮಾಜಿ ಪ್ರಧಾನಿ ವಾಜಪೇಯಿ ಮಾತನಾಡುವ ವಿಡಿಯೋ ಒಂದನ್ನು ಹಾಕಿ “ಈ ಭಾಷಣವು ಬಾಬರಿ ಮಸೀದಿಯನ್ನು ಧ್ವಂಸಗೊಳಿಸುವ ಮೊದಲು ಸಂಜೆ ವಾಜಪೇಯಿ ಮಾಡಿದ್ದಾಗಿದ್ದು, ಅದರಲ್ಲಿ ಆರೆಸ್ಸೆಸ್ ಗೂಂಡಾಗಳಿಗೆ ಮಸೀದಿಯನ್ನು ಕೆಡವಬೇಕೆಂದು ಸೂಚಿಸಿ, ’ಪ್ರದೇಶವನ್ನು ನೆಲಸಮ ಮಾಡಬೇಕು’ ಎಂದಿದ್ದರು. ಕಾನೂನಿನ ಕಣ್ಣು ಕುರುಡು ಎಂದು ಹೇಳಲಾಗುತ್ತದೆ, ಆದರೆ ಅದಕ್ಕೆ ಕಣ್ಣು ಕಾಣುವುದಿಲ್ಲ ಹಾಗೂ ಕಿವಿಯೂ ಕೇಳುವುದಿಲ್ಲ ಎಂದು ನನಗೆ ತಿಳಿದಿರಲಿಲ್ಲ!” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಸುಪ್ರೀಮ್ ಕೋರ್ಟಿನ ನೇರ ಆದೇಶವನ್ನು ಜಾರಿಗೊಳಿಸುವಲ್ಲಿ ಭಾರತ ಸೋತಿದೆ.

ವಿಡಿಯೋ ನೋಡಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...