Homeಮುಖಪುಟಡಿಸೆಂಬರ್‌ ಚಳಿಯ ಒಂದು ದಿನ ಬಾಬರಿ ಮಸೀದಿ ಸ್ವಯಂ ಸ್ಫೋಟಗೊಂಡಿತು: ತೀರ್ಪು ವಿರುದ್ದ ಟ್ವಿಟ್ಟರ್‌‌ನಲ್ಲಿ ಆಕ್ರೋಶ

ಡಿಸೆಂಬರ್‌ ಚಳಿಯ ಒಂದು ದಿನ ಬಾಬರಿ ಮಸೀದಿ ಸ್ವಯಂ ಸ್ಫೋಟಗೊಂಡಿತು: ತೀರ್ಪು ವಿರುದ್ದ ಟ್ವಿಟ್ಟರ್‌‌ನಲ್ಲಿ ಆಕ್ರೋಶ

’ಹಾಗಾದರೆ ಬಾಬರಿಯನ್ನು ಯಾರು ಧ್ವಂಸ ಮಾಡಿಲ್ಲ?’ #NoOneDemolishedBabriMasjid ಎಂದು ಟ್ವಿಟ್ಟರ್‌‌ನಲ್ಲಿ ಪ್ರಶ್ನೆಗಳ ಸುರಿಮಳೆ ಪ್ರಾರಂಭವಾಗಿದೆ.

- Advertisement -
- Advertisement -

28 ವರ್ಷದ ಹಿಂದೆ ನಡೆದ ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಹೊರಬಿದ್ದಿದ್ದು, ನ್ಯಾಯಾಲಯವು ಮಸೀದಿಯ ಧ್ವಂಸವು ಪೂರ್ವನಿರ್ಧರಿತ ಅಲ್ಲವೆಂದು ಹೇಳಿ ಎಲ್ಲಾ ಆರೋಪಿಗಳನ್ನು ದೋಷ ಮುಕ್ತಗೊಳಿಸಿದೆ. ಆದರೆ ಸಾಮಾಜಿಕ ಜಾಲತಾಣದಲ್ಲಿ “ಹಾಗಾದರೆ ಬಾಬರಿಯನ್ನು ಯಾರು ಧ್ವಂಸ ಮಾಡಿಲ್ಲ?” (#NoOneDemolishedBabriMasjid) ಎಂದು ಪ್ರಶ್ನೆಗಳ ಸುರಿಮಳೆ ಪ್ರಾರಂಭವಾಗಿದೆ.

ಅಷ್ಟೇ ಅಲ್ಲದೆ ತೀರ್ಪಿನ ಬಗ್ಗೆ ಹಲವಾರು ಜನರು ಇನ್ನಷ್ಟು ಪ್ರಶ್ನೆಗಳನ್ನು ಎತ್ತಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಸಿಪಿಐಎಂ ಪಾಲಿಟ್ ಬ್ಯೂರೊ ಸದಸ್ಯ ಸೀತಾರಾಮ್ ಯಚೂರಿ, “ಇದು ಸಂಪೂರ್ಣ ನ್ಯಾಯದ ಅಣಕವಾಗಿದೆ. ಬಾಬರಿ ಮಸೀದಿಯನ್ನು ಕೆಡವಲು ಕ್ರಿಮಿನಲ್ ಪಿತೂರಿ ನಡೆಸಿರುವ ಆರೋಪಿಗಳನ್ನು ದೋಷ ಮುಕ್ತಗೊಳಿಸಲಾಗಿದೆ. ಅದು ತಾನಾಗಿಯೆ ಬಿದ್ದು ಹೋಗಿದೆಯೆ? ಅಂದಿನ ಸುಪ್ರೀಂ ಕೋರ್ಟ್‌ನ ಮುಖ್ಯನ್ಯಾಯಾಧೀಶರ ನೇತೃತ್ವದ ಸಂವಿಧಾನ ಪೀಠವು ಮಸೀದಿಯ ಧ್ವಂಸವೂ ಕಾನೂನಿನ ಉಲ್ಲಂಘನೆಯಾಗಿದೆ ಎಂದು ಹೇಳಿದೆ. ಆದರೆ ಈಗ ಈ ತೀರ್ಪು!. ನಾಚಿಕೆಗೇಡು” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬಾಬರಿ ಮಸೀದಿ ದ್ವಂಸ ತೀರ್ಪು ಪ್ರಕಟಿಸಿದ ನ್ಯಾಯಾಲಯ: ಆರೋಪಿಗಳು ದೋಷಮುಕ್ತ

ಚಿಂತಕ ಶಿವಸುಂದರ್‌, “ಓ ನ್ಯಾಯಾಲಯವೇ, ನಿಮ್ಮ ದೊರೆಗಳು ಒಪ್ಪದವರ ಭಾಷಣಗಳ
ಪದದ ಪಕ್ಕ ಇರದ ಕಾಮಾ, ಫುಲ್ ಸ್ಟಾಪುಗಳನ್ನೇ, ಭಯೋತ್ಪಾದಕ ದೇಶದ್ರೋಹಿ ಸಂಚಿಗೆ ಪರಮ ಸಾಕ್ಷಿ
ಎಂದು ಪರಿಗಣಿಸುವ ನಿಮಗೆ, ವರ್ಷಾನುಗಟ್ಟಲೇ ನಡೆದ ರಕ್ತ ಸಿಕ್ತ ರಾಮರಥಯಾತ್ರೆ ಸಂಚೆಂದು ಕಾಣುವುದಿಲ್ಲವೇಕೆ?” ಎಂದು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೆ,

  • ಪ್ರಾಸಿಕ್ಯೂಷನ್ ಒದಗಿಸಿದ 350 ಕ್ಕೂ ಹೆಚ್ಚು ಪುರಾವೆಗಳನ್ನು ಒಪ್ಪದ ನ್ಯಾಯಾಲಯ
  • ಅಡ್ವಾನಿ ಮತ್ತಿತರರ ಪ್ರಚೋದನಕಾರಿ ಭಾಷಣಗಳ ವಿಡಿಯೋ ನಕಲಿ ಎಂದು ತಿರಸ್ಕರಿಸಿದ ನ್ಯಾಯಾಲಯ
  • ಲಿಬರ್ಹಾನ್ ಕಮಿಷನ್ ಕೊಟ್ಟ ವರದಿಯನ್ನು ಕಣ್ಣೆತ್ತಿಯೂ ನೋಡದ ನ್ಯಾಯಾಲಯ

“ತಮ್ಮ ಪರವಾಗಿ ಆರೋಪಿಗಳು ಒಂದು ಸಾಕ್ಷಿಯನ್ನೂ ಹಾಜರು ಪಡಿಸದಿದ್ದರೂ, ಈ ಸತ್ಪುರುಷರು ಅಲ್ಲಿ ’ಮಸೀದೀಯನ್ನು ರಕ್ಷಿಸುವ ಪ್ರಯತ್ನ ಮಾಡುತ್ತಿದ್ದರು’ ಎಂದು ಕಂಡುಹಿಡಿದು ಬಿಡುಗಡೆ ಮಾಡಿದೆ ಹಾಗೂ ಮಸೀದಿಯನ್ನು ಅಲ್ಲಿದ್ದ ಯಾವ ಮನುಷ್ಯರೂ ನಾಶ ಮಾಡಿಲ್ಲವಾದ್ದರಿಂದ ಅದು “Act Of God” ಎಂದು ಪರೋಕ್ಷವಾಗಿ ಸೂಚಿಸಿದೆ. ಬಾಬ್ರಿ ಮಸೀದಿ ನಾಶ ಮಾಡಿದ್ದನ್ನು act of god ಎಂದು ಘೋಷಿಸಿದೆ” ಎಂದು ವ್ಯಂಗ್ಯವಾಡಿದ್ದಾರೆ.

ಬಿಬಿಸಿ ಪತ್ರಕರ್ತ ಸೌತಿಕ್ ಬಿಸ್ವಾಸ್, “28 ವರ್ಷಗಳು, 850 ಸಾಕ್ಷಿಗಳು, 7,000 ಕ್ಕೂ ಹೆಚ್ಚು ದಾಖಲೆಗಳು, ಜೊತೆಗೆ 100 ವರದಿಗಳು, ಘಟನೆಯ ಛಾಯಾಚಿತ್ರಗಳು ಮತ್ತು ವಿಡಿಯೋ ಟೇಪ್‌ಗಳು, 49 ಆರೋಪಿಗಳು, ಹಲವಾರು ನ್ಯಾಯಾಲಯಗಳು. ಆದರೆ ಯಾವುದೇ ಶಿಕ್ಷೆಯಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ದಿ ವೈರ್‌ ಪತ್ರಕರ್ತೆ ಅರ್ಫಾ ಖಾನುಂ ಶೇರ್‌ವಾನಿ, “ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ಹಾಗಾದರೆ ಬಾಬರಿ ಮಸೀದಿಯನ್ನು ನೆಲಸಮ ಮಾಡಿದವರು ಯಾರು? ನಂತರದ ಗಲಭೆಯಲ್ಲಿ 1800 ಜನರನ್ನು ಕೊಂದವರು ಯಾರು? ಭಾರತದ ಆತ್ಮದ ಮೇಲೆ ಮಾಡಿದ ಅಪರಾಧಗಳಿಗೆ ಹೊಣೆ ಯಾರು?” ಎಂದು ಪ್ರಶ್ನಿಸಿದ್ದಾರೆ.

SFI ಪ್ರಧಾನ ಕಾರ್ಯದರ್ಶಿ ಮಯುಕ್ ಬಿಸ್ವಾಸ್, “ಆ ದಿನ … ಅವರು ಸಂತೋಷದಿಂದ ಮುಳುಗಿದ್ದರು, ಇಂದು ಸಹ. ಈ ಮಧ್ಯೆ, ನನ್ನ ದೇಶದ ಚೈತನ್ಯವನ್ನು ಮಾತ್ರ ಸೋಲಿಸಲಾಗಿದೆ!” ಎಂದು ಅಡ್ವಾನಿ ಸೇರಿದಂತೆ ಹಲವಾರು ಜನರು ಖುಷಿಯಿಂದ ಇರುವ ಫೋಟೋವೊಂದನ್ನು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಹಿಂದುತ್ವದ ಬೆಳವಣಿಗೆ: ಮೇಲ್ಜಾತಿಗಳ ಧ್ರುವೀಕರಣದ ಬಂಡಾಯವೇ? – ಜಾನ್ ಡ್ರೀಜ್ ವಿಶೇಷ ಲೇಖನ

ಪತ್ರಕರ್ತ ಸಾಹಿಲ್ ಮುರುಳಿ ಮೇಂಗಾನಿ, “ಎಲ್.ಕೆ.ಅಡ್ವಾಣಿ ಸೇರಿದಂತೆ ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ಆದರೆ ’ಎಲ್ಲೆಲ್ಲಿ ಕಳೆ ಇದಿಯೋ ಅದನ್ನೆಲ್ಲಾ ತೆಗೆದು ಹಾಕುತ್ತೇವೆ’ ಎಂದು ಕಾಶಿ ಮತ್ತು ಮಥುರಾ ಬಗ್ಗೆ ‘ಆಚಾರ್ಯ’ ಧರ್ಮೇಂದ್ರ ಹೇಳುತ್ತಾರೆ. ಧರ್ಮೇಂದ್ರ ಬಾಬರಿ ಧ್ವಂಸ ಪ್ರಕರಣದಲ್ಲಿ ಖುಲಾಸೆಗೊಂಡ 32 ಆರೋಪಿಗಳಲ್ಲಿ ಒಬ್ಬ. ಅವರನ್ನು ಖುಲಾಸೆಗೊಳಿಸಿದ ನ್ಯಾಯಾಲಯದ ಹೊರಗೆ ಅವರು ಈ ಹೇಳಿಕೆ ನೀಡಿದ್ದಾರೆ. ನ್ಯಾಯಾಲಯವು ಟ್ವೀಟ್‌ ಬಗ್ಗೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿತು. ಆದರೆ ಇದನ್ನು ಅಲ್ಲ?” ಎಂದು ಟ್ವೀಟ್ ಮಾಡಿದ್ದಾರೆ.

ಬರಹಗಾರ ಸಂಶೋಧಕ ಸಂಜುಕ್ತ ಬಸು, “ಡಿಸೆಂಬರ್‌ ತಿಂಗಳ ಚಳಿಯ ಒಂದು ದಿನ ಬಾಬರಿ ಮಸೀದಿ ಸ್ವಯಂ ಸ್ಫೋಟಗೊಂಡಿತು” ಎಂದು ಬರೆದಿದ್ದಾರೆ.

ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್, “ಬಾಬರಿ ಮಸೀದಿ ಧ್ವಂಸ ಪ್ರಕರಣದ 2,000 ಪುಟಗಳ ತೀರ್ಪು ಎಲ್ಲ ತಪ್ಪಿತಸ್ಥರನ್ನು ದೋಷಮುಕ್ತಗೊಳಿಸಿದೆ! ಭಾರತೀಯ ಸಂವಿಧಾನಕ್ಕೆ ಶ್ರದ್ದಾಂಜಲಿ” ಎಂದು ಟ್ವೀಟ್ ಮಾಡಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಗೌರವ್ ಅವರು ಮಾಜಿ ಪ್ರಧಾನಿ ವಾಜಪೇಯಿ ಮಾತನಾಡುವ ವಿಡಿಯೋ ಒಂದನ್ನು ಹಾಕಿ “ಈ ಭಾಷಣವು ಬಾಬರಿ ಮಸೀದಿಯನ್ನು ಧ್ವಂಸಗೊಳಿಸುವ ಮೊದಲು ಸಂಜೆ ವಾಜಪೇಯಿ ಮಾಡಿದ್ದಾಗಿದ್ದು, ಅದರಲ್ಲಿ ಆರೆಸ್ಸೆಸ್ ಗೂಂಡಾಗಳಿಗೆ ಮಸೀದಿಯನ್ನು ಕೆಡವಬೇಕೆಂದು ಸೂಚಿಸಿ, ’ಪ್ರದೇಶವನ್ನು ನೆಲಸಮ ಮಾಡಬೇಕು’ ಎಂದಿದ್ದರು. ಕಾನೂನಿನ ಕಣ್ಣು ಕುರುಡು ಎಂದು ಹೇಳಲಾಗುತ್ತದೆ, ಆದರೆ ಅದಕ್ಕೆ ಕಣ್ಣು ಕಾಣುವುದಿಲ್ಲ ಹಾಗೂ ಕಿವಿಯೂ ಕೇಳುವುದಿಲ್ಲ ಎಂದು ನನಗೆ ತಿಳಿದಿರಲಿಲ್ಲ!” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಸುಪ್ರೀಮ್ ಕೋರ್ಟಿನ ನೇರ ಆದೇಶವನ್ನು ಜಾರಿಗೊಳಿಸುವಲ್ಲಿ ಭಾರತ ಸೋತಿದೆ.

ವಿಡಿಯೋ ನೋಡಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...