Homeಕರ್ನಾಟಕಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

- Advertisement -
- Advertisement -

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ ಹಾಗೂ ಜಾನಪದ ಕಲಾವಿದರಾದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತೆ ಚಂದ್ರಮ್ಮ, ಹಿರಿಯ ಪತ್ರಕರ್ತರಾದ ಬೆಳಗಾವಿಯ ಸರಜೂ ಕಾಟ್ಕರ್‌, ಮೈಸೂರು ನಗರದ ಮಾಜಿ ಮೇಯರ್‌ ನಾರಾಯಣ, ತುಮಕೂರಿನ ನಗರಸಭೆ ಮಾಜಿ ಸದಸ್ಯ ನರಸೀಯಪ್ಪ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ​ಸಮಾಜ ಕಲ್ಯಾಣ ಇಲಾಖೆ ರಚಿಸಿದ್ದ ಉನ್ನತಮಟ್ಟದ ಆಯ್ಕೆ ಸಮಿತಿಯು ಶಿಫಾರಸು ಮಾಡಿದ್ದ ಅರ್ಹರ ಪಟ್ಟಿಯನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಣೆ ಮಾಡಿದೆ.

ಪ್ರಶಸ್ತಿಯು ತಲಾ‌ ₹5 ಲಕ್ಷ ನಗದು, 20 ಗ್ರಾಂ ಚಿನ್ನದ ಪದಕ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ. ಮಾಜಿ ಉಪಪ್ರಧಾನಿ ದಿವಂಗತ ಬಾಬು ಜಗಜೀವನ್‌ ರಾಮ್‌ ಅವರ ಜನ್ಮದಿನವಾದ ಏ.5ರಂದು ಬೆಂಗಳೂರಿನ ವಿಧಾನಸೌಧ‌‌ ಪೂರ್ವ ದ್ವಾರದ ಮೆಟ್ಟಿಲುಗಳ ಮೇಲೆ ನಡೆಯುವ ಕಾರ್ಯಕ್ರಮದಲ್ಲಿ ಐವರು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಅಯುಕ್ತ ರಾಕೇಶ್‌ಕುಮಾರ್‌ ಮಾಹಿತಿ ನೀಡಿದ್ದಾರೆ.

ಪ್ರಶಸ್ತಿ ಪುರಸ್ಕೃತರ ಕುರಿತು:

ಬೆಂಗಳೂರಿನ ಚಂದ್ರಮ್ಮ ಅವರು ಸಾವಿತ್ರಿಭಾ ಫುಲೆ ಸಂಘದ ಅಧ್ಯಕ್ಷರಾಗಿದ್ದು, ನಗರದ ಹಕ್ಕಿ ಪಿಕ್ಕಿ ಜನಾಂಗದ ಕೊಳೆಗೇರಿಗಳಲ್ಲಿ ವಾಸಿಸುವ ದಲಿತ ಮಹಿಳೆಯರಿಗೆ ಭೂಮಿ ಹಾಗೂ ವಸತಿ ಗಾಗಿ ಹೋರಾಡುತ್ತಿದ್ದಾರೆ. ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯ ಮಾಡುವುದು ಸೇರಿದಂತೆ ವಿದ್ಯಾರ್ಥಿವೇತನ ನೀಡುವುದರ ಮುಖಾಂತರ ದಲಿತ ಕುಟುಂಬಗಳಿಗೆ ಸೇವೆ ಮಾಡುತ್ತಾ ಬಂದಿರುತ್ತಾರೆ.

ತಮ್ಮ 18ನೇ ವಯಸ್ಸಿನಲ್ಲೇ ದಲಿತ ಚಳವಳಿಗೆ ದುಮುಕಿದ ಡಿಂಗ್ರಿ ನರಸಪ್ಪ, ತಮಟೆ ವಾದ್ಯದಲ್ಲಿ ರಾಜ್ಯದಲ್ಲೇ ಪ್ರಸಿದ್ಧಿ ಪಡೆದಿದ್ದಾರೆ. ಅವರು ಶ್ರುತಿ ಸಂಸ್ಕೃತಿ ಸಂಸ್ಥೆ ಕಟ್ಟಿ ಕಿಶೋರಿಯರಿಗೆ ತಮಟೆ, ಹಾಡುಗಾರಿಕೆ ಹಾಗೂ ಬೀದಿನಾಟಕ ಕಲಿಕಾ ತರಬೇತಿ ಕಾರ್ಯಗಾರಗಳನ್ನು ನಡೆಸಿದ್ದಾರೆ. ನಲವತ್ತು ವರ್ಷಗಳಿಂದ ತಮಟೆ, ಹಾಡುಗಾರಿಕೆ ಹಾಗೂ ಬೀದಿನಾಟಕಗಳಲ್ಲಿ ತೊಡಗಿಸಿಕೊಂಡಿರುವ ಅವರ ಸೇವೆ ಅನನ್ಯವಾದುದು.

ಡಾ.ಸರಜೂ ಕಾಟ್ಕರ್‌ ಅವರು ದಲಿತ ಬಂಡಾಯ ಸಾಹಿತ್ಯ ಸಂಘಟನೆ ಹಾಗೂ ಚಳವಳಿಗಳಲ್ಲಿ ತೊಡಗಿಸಿಕೊಂಡು ಸಾಮಾಜಿಕ ನ್ಯಾಯಕ್ಕಾಗಿ ದುಡಿದವರು. ಪತ್ರಕರ್ತರಾಗಿ ಅಂಬೇಡ್ಕರ್‌ ಚಿಂತನೆಗಳನ್ನು ಪ್ರಸಾರ ಮಾಡಿ, ವಿದ್ಯಾರ್ಥಿ ದೆಸೆಯಿಂದಲೇ ಶೋಷಿತರ ಪರಧ್ವನಿ ಎತ್ತಿದವರು.

ನಾರಾಯಣ ಅವರು ಪೌರಕಾರ್ಮಿಕ ಸಮುದಾಯದವರು. ಆ ಸಮುದಾಯವು ಅನುಭವಿಸುತ್ತಿದ್ದ ಕಷ್ಟ ಕಾರ್ಪಣ್ಯಗಳನ್ನು ಬಾಲ್ಯದಿಂದಲೂ ಕಣ್ಣಾರೆ ಕಂಡವರು. ಸ್ವತಃ ಅವರೇ ಆ ಸಮುದಾಯದ ನೋವುಗಳನ್ನು ಅನುಭವಿಸಿದ್ದರು. ಪೌರಕಾರ್ಮಿಕನಾಗಿ ವೃತ್ತಿಜೀವನವನ್ನು ಆರಂಭಿಸಿ ವಸತಿರಹಿತರಿಗೆ ಸೂರು ಕಲ್ಪಿಸಿ ಹಾಗೂ ದೌರ್ಜನ್ಯ ಮತ್ತು ದಬ್ಬಾಳಿಕೆಯ ವಿರುದ್ಧ ನ್ಯಾಯಾಯುತ ಹಕ್ಕುಗಳಿಗಾಗಿ ಹಲವಾರು ಯಶಸ್ವಿಯ ಹೋರಾಟಗಳನ್ನು ಮಾಡುತ್ತಾ ಸಮಾಜದ ಮುಖ್ಯವಾಹಿನಿಗೆ ತಂದು ಕೊಳೆಗೇರಿ ನಿವಾಸಿಗಳ ಬದುಕಿಗೆ ಹೊಸಬೆಳಕನ್ನು ನೀಡಿದರು. ಮೈಸೂರು ಮಹಾನಗರ ಪಾಲಿಕೆಯ ಸದಸ್ಯರು, ಮೇಯರ್ ಆಗಿ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾಗಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡವರು.

ನರಸೀಯಪ್ಪ ಅವರು ಬಡತನ ಮತ್ತು ಅಸ್ಪೃಶ್ಯತೆ ಕಾರಣದಿಂದಾಗಿ ವಿದ್ಯಾಭ್ಯಾಸವನ್ನು ಅರ್ಧದಲ್ಲಿಯೇ ಮೊಟಕುಗೊಳಿಸಿ ಮೂಟೆ ಹೊರುವ ಹಮಾಲಿಯಾಗಿ ದುಡಿಯಲು ಆರಂಭಿಸಿದರು. ಅನುಭವಿಸಿದ ಅವಮಾನ, ಸಂಕಟ ಮತ್ತು ನೋವುಗಳನ್ನು ಸಾಧನಗಳನ್ನಾಗಿ ಮಾಡಿಕೊಂಡು ನಾಯಕತ್ವದ ಗುಣಗಳನ್ನು ಯುವಕನಿದ್ದಾಗಲೇ ರೂಪಿಸಿಕೊಂಡು ಹಮಾಲಿಗಳ ಬದುಕನ್ನು ಹಸನುಗೊಳಿಸಲು ಹಮಾಲಿಗಳ ಸಂಘ ಸ್ಥಾಪಿಸಿ ಹೋರಾಟದ ಮತ್ತು ಸಾರ್ವಜನಿಕ ಬದುಕಿಗೆ ಕಾಲಿಟ್ಟವರು. ಕರ್ನಾಟಕದ ಸಾಮಾಜಿಕ ಚಳವಳಿಯಿಂದ ದಲಿತ ಸಂಘರ್ಷ ಸಮಿತಿ ಹುಟ್ಟು ಮತ್ತು ಬೆಳವಣಿಗೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...