Homeಕರ್ನಾಟಕಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

- Advertisement -
- Advertisement -

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ ಹಾಗೂ ಜಾನಪದ ಕಲಾವಿದರಾದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತೆ ಚಂದ್ರಮ್ಮ, ಹಿರಿಯ ಪತ್ರಕರ್ತರಾದ ಬೆಳಗಾವಿಯ ಸರಜೂ ಕಾಟ್ಕರ್‌, ಮೈಸೂರು ನಗರದ ಮಾಜಿ ಮೇಯರ್‌ ನಾರಾಯಣ, ತುಮಕೂರಿನ ನಗರಸಭೆ ಮಾಜಿ ಸದಸ್ಯ ನರಸೀಯಪ್ಪ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ​ಸಮಾಜ ಕಲ್ಯಾಣ ಇಲಾಖೆ ರಚಿಸಿದ್ದ ಉನ್ನತಮಟ್ಟದ ಆಯ್ಕೆ ಸಮಿತಿಯು ಶಿಫಾರಸು ಮಾಡಿದ್ದ ಅರ್ಹರ ಪಟ್ಟಿಯನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಣೆ ಮಾಡಿದೆ.

ಪ್ರಶಸ್ತಿಯು ತಲಾ‌ ₹5 ಲಕ್ಷ ನಗದು, 20 ಗ್ರಾಂ ಚಿನ್ನದ ಪದಕ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ. ಮಾಜಿ ಉಪಪ್ರಧಾನಿ ದಿವಂಗತ ಬಾಬು ಜಗಜೀವನ್‌ ರಾಮ್‌ ಅವರ ಜನ್ಮದಿನವಾದ ಏ.5ರಂದು ಬೆಂಗಳೂರಿನ ವಿಧಾನಸೌಧ‌‌ ಪೂರ್ವ ದ್ವಾರದ ಮೆಟ್ಟಿಲುಗಳ ಮೇಲೆ ನಡೆಯುವ ಕಾರ್ಯಕ್ರಮದಲ್ಲಿ ಐವರು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಅಯುಕ್ತ ರಾಕೇಶ್‌ಕುಮಾರ್‌ ಮಾಹಿತಿ ನೀಡಿದ್ದಾರೆ.

ಪ್ರಶಸ್ತಿ ಪುರಸ್ಕೃತರ ಕುರಿತು:

ಬೆಂಗಳೂರಿನ ಚಂದ್ರಮ್ಮ ಅವರು ಸಾವಿತ್ರಿಭಾ ಫುಲೆ ಸಂಘದ ಅಧ್ಯಕ್ಷರಾಗಿದ್ದು, ನಗರದ ಹಕ್ಕಿ ಪಿಕ್ಕಿ ಜನಾಂಗದ ಕೊಳೆಗೇರಿಗಳಲ್ಲಿ ವಾಸಿಸುವ ದಲಿತ ಮಹಿಳೆಯರಿಗೆ ಭೂಮಿ ಹಾಗೂ ವಸತಿ ಗಾಗಿ ಹೋರಾಡುತ್ತಿದ್ದಾರೆ. ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯ ಮಾಡುವುದು ಸೇರಿದಂತೆ ವಿದ್ಯಾರ್ಥಿವೇತನ ನೀಡುವುದರ ಮುಖಾಂತರ ದಲಿತ ಕುಟುಂಬಗಳಿಗೆ ಸೇವೆ ಮಾಡುತ್ತಾ ಬಂದಿರುತ್ತಾರೆ.

ತಮ್ಮ 18ನೇ ವಯಸ್ಸಿನಲ್ಲೇ ದಲಿತ ಚಳವಳಿಗೆ ದುಮುಕಿದ ಡಿಂಗ್ರಿ ನರಸಪ್ಪ, ತಮಟೆ ವಾದ್ಯದಲ್ಲಿ ರಾಜ್ಯದಲ್ಲೇ ಪ್ರಸಿದ್ಧಿ ಪಡೆದಿದ್ದಾರೆ. ಅವರು ಶ್ರುತಿ ಸಂಸ್ಕೃತಿ ಸಂಸ್ಥೆ ಕಟ್ಟಿ ಕಿಶೋರಿಯರಿಗೆ ತಮಟೆ, ಹಾಡುಗಾರಿಕೆ ಹಾಗೂ ಬೀದಿನಾಟಕ ಕಲಿಕಾ ತರಬೇತಿ ಕಾರ್ಯಗಾರಗಳನ್ನು ನಡೆಸಿದ್ದಾರೆ. ನಲವತ್ತು ವರ್ಷಗಳಿಂದ ತಮಟೆ, ಹಾಡುಗಾರಿಕೆ ಹಾಗೂ ಬೀದಿನಾಟಕಗಳಲ್ಲಿ ತೊಡಗಿಸಿಕೊಂಡಿರುವ ಅವರ ಸೇವೆ ಅನನ್ಯವಾದುದು.

ಡಾ.ಸರಜೂ ಕಾಟ್ಕರ್‌ ಅವರು ದಲಿತ ಬಂಡಾಯ ಸಾಹಿತ್ಯ ಸಂಘಟನೆ ಹಾಗೂ ಚಳವಳಿಗಳಲ್ಲಿ ತೊಡಗಿಸಿಕೊಂಡು ಸಾಮಾಜಿಕ ನ್ಯಾಯಕ್ಕಾಗಿ ದುಡಿದವರು. ಪತ್ರಕರ್ತರಾಗಿ ಅಂಬೇಡ್ಕರ್‌ ಚಿಂತನೆಗಳನ್ನು ಪ್ರಸಾರ ಮಾಡಿ, ವಿದ್ಯಾರ್ಥಿ ದೆಸೆಯಿಂದಲೇ ಶೋಷಿತರ ಪರಧ್ವನಿ ಎತ್ತಿದವರು.

ನಾರಾಯಣ ಅವರು ಪೌರಕಾರ್ಮಿಕ ಸಮುದಾಯದವರು. ಆ ಸಮುದಾಯವು ಅನುಭವಿಸುತ್ತಿದ್ದ ಕಷ್ಟ ಕಾರ್ಪಣ್ಯಗಳನ್ನು ಬಾಲ್ಯದಿಂದಲೂ ಕಣ್ಣಾರೆ ಕಂಡವರು. ಸ್ವತಃ ಅವರೇ ಆ ಸಮುದಾಯದ ನೋವುಗಳನ್ನು ಅನುಭವಿಸಿದ್ದರು. ಪೌರಕಾರ್ಮಿಕನಾಗಿ ವೃತ್ತಿಜೀವನವನ್ನು ಆರಂಭಿಸಿ ವಸತಿರಹಿತರಿಗೆ ಸೂರು ಕಲ್ಪಿಸಿ ಹಾಗೂ ದೌರ್ಜನ್ಯ ಮತ್ತು ದಬ್ಬಾಳಿಕೆಯ ವಿರುದ್ಧ ನ್ಯಾಯಾಯುತ ಹಕ್ಕುಗಳಿಗಾಗಿ ಹಲವಾರು ಯಶಸ್ವಿಯ ಹೋರಾಟಗಳನ್ನು ಮಾಡುತ್ತಾ ಸಮಾಜದ ಮುಖ್ಯವಾಹಿನಿಗೆ ತಂದು ಕೊಳೆಗೇರಿ ನಿವಾಸಿಗಳ ಬದುಕಿಗೆ ಹೊಸಬೆಳಕನ್ನು ನೀಡಿದರು. ಮೈಸೂರು ಮಹಾನಗರ ಪಾಲಿಕೆಯ ಸದಸ್ಯರು, ಮೇಯರ್ ಆಗಿ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾಗಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡವರು.

ನರಸೀಯಪ್ಪ ಅವರು ಬಡತನ ಮತ್ತು ಅಸ್ಪೃಶ್ಯತೆ ಕಾರಣದಿಂದಾಗಿ ವಿದ್ಯಾಭ್ಯಾಸವನ್ನು ಅರ್ಧದಲ್ಲಿಯೇ ಮೊಟಕುಗೊಳಿಸಿ ಮೂಟೆ ಹೊರುವ ಹಮಾಲಿಯಾಗಿ ದುಡಿಯಲು ಆರಂಭಿಸಿದರು. ಅನುಭವಿಸಿದ ಅವಮಾನ, ಸಂಕಟ ಮತ್ತು ನೋವುಗಳನ್ನು ಸಾಧನಗಳನ್ನಾಗಿ ಮಾಡಿಕೊಂಡು ನಾಯಕತ್ವದ ಗುಣಗಳನ್ನು ಯುವಕನಿದ್ದಾಗಲೇ ರೂಪಿಸಿಕೊಂಡು ಹಮಾಲಿಗಳ ಬದುಕನ್ನು ಹಸನುಗೊಳಿಸಲು ಹಮಾಲಿಗಳ ಸಂಘ ಸ್ಥಾಪಿಸಿ ಹೋರಾಟದ ಮತ್ತು ಸಾರ್ವಜನಿಕ ಬದುಕಿಗೆ ಕಾಲಿಟ್ಟವರು. ಕರ್ನಾಟಕದ ಸಾಮಾಜಿಕ ಚಳವಳಿಯಿಂದ ದಲಿತ ಸಂಘರ್ಷ ಸಮಿತಿ ಹುಟ್ಟು ಮತ್ತು ಬೆಳವಣಿಗೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...