Homeಮುಖಪುಟಅಝಾನ್‌ಗೆ ಧ್ವನಿವರ್ಧಕ ಬಳಸಿದರೆ ಶಬ್ಧಮಾಲಿನ್ಯವಾಗುತ್ತದೆ ಎನ್ನುವುದು ತಪ್ಪು ಕಲ್ಪನೆ: ಹೈಕೋರ್ಟ್‌

ಅಝಾನ್‌ಗೆ ಧ್ವನಿವರ್ಧಕ ಬಳಸಿದರೆ ಶಬ್ಧಮಾಲಿನ್ಯವಾಗುತ್ತದೆ ಎನ್ನುವುದು ತಪ್ಪು ಕಲ್ಪನೆ: ಹೈಕೋರ್ಟ್‌

- Advertisement -
- Advertisement -

ಅಝಾನ್‌ಗೆ ಧ್ವನಿವರ್ಧಕಗಳ ಬಳಕೆಯನ್ನು ನಿಷೇಧಿಸುವಂತೆ ಕೋರಿ ಬಜರಂಗದಳದ ನಾಯಕ ಶಕ್ತಿಸಿಂಹ ಝಾಲಾ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದ್ದು, ಮನವಿಯನ್ನು ಸಂಪೂರ್ಣವಾಗಿ ತಪ್ಪು ಕಲ್ಪನೆ ಎಂದು ಹೇಳಿದೆ.

ಧ್ವನಿವರ್ಧಕಗಳ ಮೂಲಕ ಅಝಾನ್‌ ಕೊಡುವುದರಿಂದ ಶಬ್ದ ಮಾಲಿನ್ಯ ಉಂಟಾಗುತ್ತದೆ. ಇದು ಜನರ  ವಿಶೇಷವಾಗಿ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಅರ್ಜಿದಾರ ಬಜರಂಗದಳದ ನಾಯಕ ಕೋರ್ಟ್‌ನಲ್ಲಿ ವಾದಿಸಿದ್ದರು.

ಮುಖ್ಯ ನ್ಯಾಯಮೂರ್ತಿ ಸುನೀತಾ ಅಗರ್ವಾಲ್ ಮತ್ತು ನ್ಯಾಯಮೂರ್ತಿ ಅನಿರುದ್ಧ ಪಿ ಮಾಯೆ ಅವರ ವಿಭಾಗೀಯ ಪೀಠವು, ಅರ್ಜಿ ವಿಚಾರಣೆಯ ವೇಳೆ ದೇವಾಲಯದಲ್ಲಿ ಆರತಿ ಸಮಯದಲ್ಲಿ ಗಂಟೆ ಶಬ್ಧವು ಹೊರಗೆ ಕೇಳಿಸುವುದಿಲ್ಲವೇ ಎಂದು ಕೇಳಿದೆ. ಯಾವ ಆಧಾರದ ಮೇಲೆ ಶಬ್ದ ಮಾಲಿನ್ಯ ಉಂಟಾಗುತ್ತದೆ ಎಂದು ಅರ್ಜಿದಾರರು ಹೇಳುತ್ತಿದ್ದಾರೆ ಎಂದು ಪೀಠವು ಪ್ರಶ್ನಿಸಿದೆ.

ಅಝಾನ್‌ನ್ನು ದಿನದಲ್ಲಿ ಹೆಚ್ಚೆಂದರೆ 10ನಿಮಿಷಗಳಂತೆ 5 ಬಾರಿ ಕೂಗಲಾಗುತ್ತದೆ. ಬೆಳಿಗ್ಗೆ ಧ್ವನಿವರ್ಧಕದ ಮೂಲಕ ಅಝಾನ್ ನೀಡುವ ಮಾನವ ಧ್ವನಿಯು ಶಬ್ದ ಮಾಲಿನ್ಯವನ್ನು ಹೇಗೆ ಉಂಟು ಮಾಡುತ್ತದೆ ಎಂದು ನಾವು ತಿಳಿಯಲು ವಿಫಲರಾಗಿದ್ದೇವೆ ಎಂದು ಕೋರ್ಟ್‌ ಹೇಳಿದೆ.

ನಾವು ಈ ರೀತಿಯ ಪಿಐಎಲ್‌ನ್ನು ಪರಿಗಣಿಸುತ್ತಿಲ್ಲ. ಇದು ವರ್ಷಗಳಿಂದ ನಡೆದುಕೊಂಡು ಬಂದಿರುವ ನಂಬಿಕೆ ಮತ್ತು ಆಚರಣೆಯಾಗಿದೆ. ಇದು 5-10 ನಿಮಿಷಗಳ ಕಾಲ ಇರುತ್ತದೆ. ಮುಂಜಾನೆ 3 ಗಂಟೆಗೆ ದೇವಸ್ಥಾನದಲ್ಲಿ, ಡ್ರಮ್ಸ್ ಮತ್ತು ಸಂಗೀತದೊಂದಿಗೆ ಬೆಳಿಗ್ಗೆ ಆರತಿ ಕೂಡ ಪ್ರಾರಂಭವಾಗುತ್ತದೆ. ಹಾಗಾದರೆ ಇದು ಯಾರಿಗೂ ಯಾವುದೇ ರೀತಿಯ ಶಬ್ದವನ್ನು ಉಂಟುಮಾಡುವುದಿಲ್ಲವೇ? ಗಂಟೆಯ ಶಬ್ಧ ದೇವಾಲಯದ ಹೊರಗೆ ಕೇಳಿಸುವುದಿಲ್ಲವೇ ಎಂದು ಕೋರ್ಟ್‌ ಪ್ರಶ್ನಿಸಿದೆ. ಅರ್ಜಿದಾರರ ವಾದವು ಯಾವುದೇ ವೈಜ್ಞಾನಿಕ ಅಂಶವನ್ನು ಒಳಗೊಂಡಿಲ್ಲ ಎಂದು ಹೈಕೋರ್ಟ್ ಹೇಳಿದೆ.

ಶಬ್ದ ಮಾಲಿನ್ಯವನ್ನು ಅಳೆಯಲು ವೈಜ್ಞಾನಿಕ ವಿಧಾನವಿದೆ. ಆದರೆ ಅರ್ಜಿದಾರರು 10 ನಿಮಿಷಗಳ ಅಝಾನ್ ಶಬ್ದ ಮಾಲಿನ್ಯವನ್ನು ಹೇಗೆ ಉಂಟುಮಾಡುತ್ತದೆ ಎಂಬುದನ್ನು ತೋರಿಸಲು ಯಾವುದೇ ದಾಖಲೆಯನ್ನು ಒದಗಿಸಿಲ್ಲ ಎಂದು ನ್ಯಾಯಾಲಯವು ಹೇಳಿದೆ.

ಇದನ್ನು ಓದಿ: ಉನ್ನತ ಶಿಕ್ಷಣ ಪಡೆಯುವ ಮುಸ್ಲಿಮರ ಸಂಖ್ಯೆಯಲ್ಲಿ ಗಣನೀಯ ಇಳಿಕೆ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...