Homeಅಂಕಣಗಳುಕಂಗೆಟ್ಟಿದ್ದ ಬಿಜೆಪಿಗೆ ಸಿಕ್ಕ ಭಜರಂಗಿ ಭಜನೆ!

ಕಂಗೆಟ್ಟಿದ್ದ ಬಿಜೆಪಿಗೆ ಸಿಕ್ಕ ಭಜರಂಗಿ ಭಜನೆ!

- Advertisement -
- Advertisement -

ಕರ್ನಾಟಕದ ವಿಧಾನಸಭಾ ಚುನಾವಣೆಯ ಮತದಾನಕ್ಕೆ ದಿನಗಣನೆ ಶುರುವಾಗುತ್ತಿದ್ದಂತೆ ಚುನಾವಣಾ ಪ್ರಣಾಳಿಕೆಗಳನ್ನು ಬಿಡುಗಡೆ ಮಾಡಿರುವ ವಿವಿಧ ಪಕ್ಷಗಳು ಭರವಸೆಗಳ ಮಹಾಪೂರವನ್ನೇ ಹರಿಸಿವೆ ಮತ್ತು ಆ ಭರವಸೆಗಳ ವಿಮರ್ಶೆಯಲ್ಲಿ ಪರಸ್ಪರ ನಿರತವಾಗಿವೆ. ಇದು ಅಗತ್ಯವಾದದ್ದೇ. ಆದರೆ ಮಂಗಳವಾರ ಬೆಳಗ್ಗೆ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆಯಾಗುತ್ತಿದ್ದಂತೆಯೇ, ’ಇದಕ್ಕೇ ಕಾಯುತ್ತಿದ್ದೆವು’ ಎಂಬಂತೆ ಬಿಜೆಪಿ ಮತ್ತು ಸಂಘ ಪರಿವಾರ, ಅದರೊಳಗಿನ ಒಂದು ಭರವಸೆಯನ್ನು ಹೆಕ್ಕಿ ತೆಗೆದು ಅದನ್ನೇ ತನ್ನ ಚುನಾವಣೆಯ ಪ್ರಮುಖ ವಿಷಯವನ್ನಾಗಿಸಿಕೊಳ್ಳಲು ಮುಂದಾಗಿದೆ. ’ಸರ್ವ ಜನಾಂಗದ ಶಾಂತಿಯ ತೋಟ’ ಎಂಬ ಹೆಸರಿನಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದ ಕಾಂಗ್ರೆಸ್, ಅದರಲ್ಲಿ “ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷವನ್ನು ಬಿತ್ತಿ ವಿಭಜನೆಗೆ ಕಾರಣವಾಗುವ, ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಕಠಿಣ ಮತ್ತು ನಿರ್ಣಾಯಕ ಕಾನೂನು ಕ್ರಮವನ್ನು ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ಸಂವಿಧಾನವೇ ಪವಿತ್ರ ಎಂದು ನಂಬಿರುವ ನಾವು ಯಾವುದೇ ವ್ಯಕ್ತಿಗಳಾಗಲಿ ಭಜರಂಗದಳ ಮತ್ತು ಪಿ.ಎಫ್.ಐಗಳು ಸೇರಿದಂತೆ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಇತರರಾಗಲಿ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುವುದನ್ನು ಸಹಿಸುವುದಿಲ್ಲ, ಆದಕಾರಣ ಇಂತಹ ವ್ಯಕ್ತಿಗಳು ಮತ್ತು ಸಂಘಟನೆಗಳ ನಿಷೇಧವೂ ಸೇರಿದಂತೆ ಬಲವಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು” ಎಂಬ ಸಾಲುಗಳನ್ನು ಸೇರಿಸಿದೆ. ಕೋಮು ಧ್ರುವೀಕರಣವನ್ನೇ ಬಲವಾಗಿ ನಂಬಿರುವ ಬಿಜೆಪಿ ಈ ಅಂಶವನ್ನು ಅಸ್ತ್ರವನ್ನಾಗಿಸಿಕೊಳ್ಳಲು ತೊಡಗಿದೆ. ಇಲ್ಲಿಯವರೆಗೂ ಭಜರಂಗ ದಳದ ಸದಸ್ಯರನ್ನು ಕಾಲಾಳುಗಳಾಗಿ ಬಳಸಿಕೊಂಡು ಕಷ್ಟದ ಸಂದರ್ಭಗಳಲ್ಲಿ ಫ್ರಿಂಜ್‌ಗಳೆಂದು ದೂರವಿಡುತ್ತಿದ್ದ ಬಿಜೆಪಿ ಈಗ ಚುನಾವಣಾ ಸಂದರ್ಭದಲ್ಲಿ ಆ ಸಂಘಟನೆಯನ್ನು ರಕ್ಷಿಸುವುದು ತನ್ನ ಪರಮ ಕರ್ತವ್ಯ ಎಂಬಂತೆ ಬಗೆದು, ಅದರ ಮುಖಂಡರೆಲ್ಲಾ ಭಜರಂಗಿ ಭಜನೆಯಲ್ಲಿ ಮುಳುಗಿದ್ದಾರೆ.

ಕಳೆದ ವಾರ ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕಕ್ಕೆ ಆಗಮಿಸಿ ಹಲವು ಚುನಾವಣಾ ರ್‍ಯಾಲಿಗಳಲ್ಲಿ ಭಾಗವಹಿಸಿ, ತಾನು ಹೇಗೆ ಕಾಂಗ್ರೆಸ್ ಕಾರ್ಯಕರ್ತರಿಂದ ನಿಂದನೆಗೆ ಗುರಿಯಾಗಿದ್ದೇನೆ ಎಂದು ಲೆಕ್ಕ ಹೇಳಿದ ಮೇಲೆಯೂ ಬಿಜೆಪಿ ಪ್ರಚಾರ ಚುರುಕು ಪಡೆದಿರಲಿಲ್ಲ. ಬಹುತೇಕ ಒಪಿನಿಯನ್ ಪೋಲ್‌ಗಳು ಕಾಂಗ್ರೆಸ ಸ್ಪಷ್ಟ ಬಹುಮತ ಗಳಿಸುತ್ತದೆಂಬ ಸುಳಿವು ನೀಡಿದ್ದವು. ಈದಿನ.ಕಾಂ ತನ್ನ ಸಮೀಕ್ಷೆಯಲ್ಲಿ ಕಾಂಗ್ರೆಸ್ 132-140 ಸ್ಥಾನಗಳನ್ನು ಗಳಿಸಿತ್ತದೆ ಎಂದು ಅಂದಾಜಿಸಿದರೆ, ಬಿಜೆಪಿ 57-65 ಸ್ಥಾನಗಳಿಗೆ ಕುಸಿಯುತ್ತದೆ ಎಂದಿತ್ತು. ಇನ್ನು ಸಿ-ವೋಟರ್ ವಿವಿಧ ಮಾಧ್ಯಮ ಸಂಸ್ಥೆಗಳ ಜೊತೆಗೆ ನಡೆಸಿದ ಸಮೀಕ್ಷೆಯಲ್ಲಿ ಕಾಂಗ್ರೆಸ್‌ಗೆ ಅಂದಾಜು 107-119 ಸ್ಥಾನಗಳನ್ನು ನೀಡಿ ಬಹುಮತದತ್ತ ದಾಪುಗಾಲು ಹಾಕುತ್ತಿರುವುದನ್ನು ಸೂಚಿಸಿತ್ತು. ಮಾರ್ಚ್ ಮತ್ತು ಏಪ್ರಿಲ್ ತಿಂಗಳುಗಳ ಕೊನೆಯಲ್ಲಿ ನಡೆಸಿದ ಪ್ರತ್ಯೇಕ ಒಪಿನಿಯನ್ ಪೋಲ್‌ಗಳಲ್ಲಿ ಕಾಂಗ್ರೆಸ್ ಬಹುಮತದ ಸ್ಥಾನಗಳನ್ನು ಉಳಿಸಿಕೊಳ್ಳುವುದರಲ್ಲಿ ಹೆಚ್ಚುಕಮ್ಮಿ ಯಾವುದೇ ಬದಲಾವಣೆಯಿಲ್ಲವೆಂದು ಬಿಂಬಿತವಾಗುತ್ತಿದ್ದುದು ಬಿಜೆಪಿ ಮುಖಂಡರು ಇನ್ನಷ್ಟು ಅಗ್ರೆಸ್ಸಿವ್ ಆಗಿ ಪ್ರಚಾರ ಮಾಡಲು ಹಾತೊರೆಯುವಂತೆ ಮಾಡಿತ್ತು. ಅದರ ಪರಿಣಾಮವಾಗಿಯೇ ಈಗ ಭಜರಂಗಿ ಮತ್ತು ಹನುಮಂತನ ಅಸ್ಮಿತೆಯನ್ನು ಹಿಡಿದುಕೊಂಡು, ಹಿಂದೂ ಉಗ್ರವಾದಿ ಬಣವಾದ ಭಜರಂಗ ದಳದ ನಿಷೇಧದ ಬಗ್ಗೆ ಕಾಂಗ್ರೆಸ್ ನೀಡಿರುವ ಆಶ್ವಾಸನೆಯನ್ನು, ಧಾರ್ಮಿಕ ಯುದ್ಧವಾಗಿ ಪರಿವರ್ತಿಸುವುದಕ್ಕೆ ಪ್ರಯತ್ನಿಸುತ್ತಿರುವುದು.

ಇದನ್ನೂ ಓದಿ: ಬಜರಂಗದಳ, ಪಿಎಫ್‌ಐ ನಿಷೇಧ: ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

ಕಾಂಗ್ರೆಸ್ ಮೊದಲಿನಿಂದಲೂ ತನ್ನ ಪ್ರಚಾರವನ್ನು ಬೆಲೆಯೇರಿಕೆ, ಭ್ರಷ್ಟಾಚಾರದ ಸಮಸ್ಯೆಗಳು ಹಾಗೂ ವಿದ್ಯುತ್, ಪ್ರಯಾಣ, ಪಡಿತರ ಮುಂತಾದವುಗಳ ಬಗ್ಗೆ ಕಲ್ಯಾಣ ಯೋಜನೆಗಳ ಭರವಸೆಯನ್ನು ನೀಡುವುದರ ಕಡೆಗೆ ತಿರುಗಿಸಿತ್ತು. ಬಿಜೆಪಿ ಇದನ್ನು ಮೊದಮೊದಲಿಗೆ ’ಬಿಟ್ಟಿ’, ’ಫ್ರೀಬೀಸ್’ ಎಂಬಿತ್ಯಾದಿಯಾಗಿ ಜರೆಯುವ ಮಾತನಾಡುತ್ತಿದ್ದರೂ, ಕೊನೆಗೆ, ಉಚಿತ ಗ್ಯಾಸ್ ಸಿಲಿಂಡರ್‌ಗಳನ್ನು ಕೊಡುವ, ಐದು ಕೆ.ಜಿ ಅಕ್ಕಿ ಮತ್ತು ಸಿರಿಧಾನ್ಯವನ್ನು ನೀಡುವ, ಅಟಲ್ ಆಹಾರ ಕೇಂದ್ರಗಳನ್ನು ತೆರೆಯುವ ಕಲ್ಯಾಣ ಯೋಜನೆಗಳಿಗೆ ತನ್ನ ಪ್ರಣಾಳಿಕೆಯಲ್ಲಿ ಮಣೆ ಹಾಕಬೇಕಾದ ಒತ್ತಡಕ್ಕೆ ಒಳಗಾಯಿತು. ಆದರೆ, ಹಿಂದಿನಿಂದಲೂ ಇಂದಿರಾ ಕ್ಯಾಂಟೀನ್ ಅನ್ನು ವಿರೋಧಿಸಿಕೊಂಡು, ಅವಮಾನಿಸಿಕೊಂಡು, ಸಿದ್ದರಾಮಯ್ಯ ಸರ್ಕಾರ ಜಾರಿಗೆ ತಂದಿದ್ದ ಅನ್ನಭಾಗ್ಯ ಯೋಜನೆಯ ಬಗ್ಗೆ ಕುಹಕ ವಾಡಿಕೊಂಡು ಬಂದಿದ್ದ ಬಿಜೆಪಿ ಪಕ್ಷದ ಈ ಹೊಸ ಭರವಸೆಗಳನ್ನು ನಂಬುವ ಮಟ್ಟಕ್ಕೆ ಜನರಿರಲಿಲ್ಲ. ಅಲ್ಲದೆ, 2018ರ ಭರವಸೆಗಳು ಈಡೇರಿಸಿರುವ ಬಗ್ಗೆ ರಿಪೋರ್ಟ್ ಕಾರ್ಡ್ ನೀಡಿ ಎಂಬ ಆಗ್ರಹವನ್ನು ಜನರು ಮಾಡಲಾರಂಭಿಸಿದರು. ಇನ್ನೂ ಒಂದು ಹೆಜ್ಜೆ ಮುಂದುಹೋಗಿ, ಉತ್ತರಪ್ರದೇಶದಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ನೀಡುವ ಬಗ್ಗೆ ಭರವಸೆ ನೀಡಿ ಅಧಿಕಾರಕ್ಕೆ ಬಂದ ಯೋಗಿ ಸರ್ಕಾರ ಒಂದು ವರ್ಷ ಕಳೆದರೂ ಇನ್ನೂ ಯಾರಿಗೂ ಸಿಲಿಂಡರ್ ವಿತರಿಸದ ಬಗ್ಗೆ ಪ್ರಶ್ನೆಗಳು ತೂರಿ ಬರಲಾರಂಭವಾದವು. ಇಂತಹ ಸಮಯದಲ್ಲಿ ಕೈಚೆಲ್ಲಿ ಕಂಗೆಟ್ಟು ಕೂತಿದ್ದ ಬಿಜೆಪಿ ಪಕ್ಷಕ್ಕೆ ಕಾಂಗ್ರೆಸ್ ಪ್ರಣಾಳಿಕೆಯ ಕೆಲವು ಮಾತುಗಳೇ ಬೇಕಾಗಿದ್ದವು. ಜನ ಕಲ್ಯಾಣ, ಸರ್ವಾಂಗೀಣ ಅಭಿವೃದ್ಧಿಯ ಬಗ್ಗೆ ಕೊಚ್ಚಿಕೊಳ್ಳಲು ಏನೂ ಇಲ್ಲದಿರುವಾಗ, ತಮ್ಮ ಹಳೇ ಚಾಳಿಯೇ ಗತಿಯೆಂದು ಹನುಮನ ಹೆಸರಿನಲ್ಲಿ ಧ್ರುವೀಕರಣಕ್ಕೆ ಮುಂದಾಗಿದೆ ಬಿಜೆಪಿ ಪಕ್ಷ.

ಆಗಲೇ ಮೋದಿಯವರು ತಮ್ಮ ಚುನಾವಣಾ ರ್‍ಯಾಲಿಯೊಂದರ ಭಾಷಣದಲ್ಲಿ ಭಜರಂಗಿಯನ್ನು ಭಜಿಸಿದ್ದಾರೆ. ಇನ್ನು ಮುಖ್ಯಮಂತ್ರಿ ಬೊಮ್ಮಾಯಿಯವರು “ಭಯೋತ್ಪಾದನೆ, ಹಿಂಸೆ ಹಾಗೂ ದೇಶದ್ರೋಹದ ಚಟುವಟಿಕೆ ನಡೆಸುವ ಪಿ.ಎಫ್.ಐ ಜೊತೆ ಧರ್ಮ, ಪರಂಪರೆ ಹಾಗೂ ಇತಿಹಾಸವನ್ನು ಗಟ್ಟಿಗೊಳಿಸಲು ಪ್ರಯತ್ನಿಸುತ್ತಿರುವ ಭಜರಂಗದಳವನ್ನು ತುಲನೆ ಮಾಡುವುದು ದೊಡ್ಡ ಅಪರಾಧ. ಆದರೆ ಕಾಂಗ್ರೆಸ್ ಇಂತಹ ತಪ್ಪು ಮಾಡಿ, ಭಜರಂಗದಳವನ್ನು ನಿಷೇಧಿಸುತ್ತೇವೆ ಎಂದು ಹೇಳಿದೆ. ಹನುಮ ಭಕ್ತರು ಸಿಡಿದು ನಿಂತರೇ, ಈಗಾಗಲೇ ಅವಸಾನದಲ್ಲಿರುವ ಕಾಂಗ್ರೆಸ್ ಪಕ್ಷವನ್ನು ಬೇರು ಸಮೇತ ಈ ದೇಶದಿಂದ ಕಿತ್ತೆಸೆಯುತ್ತಾರೆ. ಉತ್ತರದ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ, ದಕ್ಷಿಣದ ಅಂಜನಾದ್ರಿಯಲ್ಲಿ ಶ್ರೀ ಹನುಮ ಮಂದಿರ ನಿರ್ಮಾಣ ನಮ್ಮ ಧ್ಯೇಯವಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ. ತೇಜಸ್ವಿ ಸೂರ್ಯನಿಂದ ಹಿಡಿದು ಬಿಜೆಪಿ ಮುಖಂಡರು ಲೀಲಾಜಾಲವಾಗಿ ಭಜರಂಗದಳದ ಸಮರ್ಥನೆಗೆ ನಿಂತಿದ್ದಾರೆ. ಅಂದರೆ ಇದರರ್ಥ ದೇಶದಾದ್ಯಂತ ನೂರಾರು ಗಲಭೆ-ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಭಜರಂಗದಳದ ಪಾಪಕರ್ಮಗಳನ್ನೂ ಇವರು ಹೊತ್ತುಕೊಳ್ಳಲಿದ್ದಾರೆಯೇ? ಇವುಗಳಿಗೆ ತಾವೂ ಕಾರಣ ಎಂದು ಆ ಕೃತ್ಯಗಳಿಗೆ ಉತ್ತರದಾಯಿಯಾಗಲಿದ್ದಾರೆಯೇ?

ಕಾಂಗ್ರೆಸ್‌ನ ಒಂದು ವಲಯದಲ್ಲಿ ’ಇದು ಬೇಕಾಗಿತ್ತಾ’ ಎಂಬ ಅಪಸ್ವರದ ಚರ್ಚೆಗಳು ವೇಗ ಪಡೆಯುತ್ತಿವೆ. ಇಂತಹ ಕರಾಳ ಸಮಯದಲ್ಲಿ ಇಂತಹ ಗಟ್ಟಿ ನಿಲುವನ್ನು ತೆಗೆದುಕೊಂಡಿರುವ ಕಾಂಗ್ರೆಸ್ ಪಕ್ಷ ಯಾವುದೇ ಕಾರಣಕ್ಕೂ ಹಿಂದಡಿಯಿಡಬಾರದು. ಸಂವಿಧಾನದ ಉದಾತ್ತ ಧ್ಯೇಯಗಳ ಬಗ್ಗೆ ಬರೆದುಕೊಂಡಿರುವ ಪ್ರಣಾಳಿಕೆಯನ್ನು ಮುಂದೆ ಅಕ್ಷರಶಃ ಜಾರಿಗೆ ತರಲು ಪ್ರಯತ್ನಿಸಬೇಕು. ಯಾರಾದರೂ ಕಾಂಗ್ರೆಸ್ ಕಾರ್ಯಕರ್ತರು ಇದರ ಬಗ್ಗೆ ಗೊಂದಲಗೊಂಡಿದ್ದರೆ ಸೂಕ್ತ ಮಾತು ಮತ್ತು ವಿಧಾನಗಳಲ್ಲಿ ಸಂವಿಧಾನ ವಿರೋಧಿ ಗುಂಪುಗಳನ್ನು ನಿಷೇಧಿಸುವ ಅಗತ್ಯವನ್ನು ಮನಗಾಣಿಸಬೇಕು. ಜನಸಾಮಾನ್ಯರ ವಿವೇಕ ಇಂಥಹ ಸಂಘಟನೆಗಳನ್ನು ನಿಷೇಧಿಸುವ ಕಡೆಗಿದೆ ಎಂಬುದನ್ನು ಮನಗಂಡು ಬಿಜೆಪಿ ಪಕ್ಷದ ಅಪಪ್ರಚಾರಕ್ಕೆ ಹೆದರಬಾರದು. ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿಸಲು ತಾವು ನೀಡಿರುವ ಭರವಸೆಗೆ ಬದ್ಧರಾಗಿರಬೇಕು. ಇಂತಹ ಶಾಂತಿಯ ತೋಟದಲ್ಲಷ್ಟೆ ಯಾವುದೇ ಪಕ್ಷ ನೀಡುವ ಜನಪರವಾದ ಯೋಜನೆಗಳು ಯಶಸ್ವಿಯಾಗಲು ಸಾಧ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...

‘ಒಂದು ಲೀಟರ್ ತೈಲವನ್ನೂ ರಫ್ತು ಮಾಡುವುದಿಲ್ಲ’: ಟ್ರಂಪ್ ‘ಹಾರ್ಮುಜ್ ಜಲಸಂಧಿ ಸ್ವಾಧೀನ’ ಹೇಳಿಕೆಯ ನಂತರ ಕಠಿಣ ಎಚ್ಚರಿಕೆ ನೀಡಿದ ಇರಾನ್

ಟೆಹ್ರಾನ್: ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷದ ಮಧ್ಯೆ, ತನ್ನ ವಿರುದ್ಧ ದಾಳಿಗಳು ಮುಂದುವರಿದರೆ, ಈ ಪ್ರದೇಶದಿಂದ ಒಂದು ಲೀಟರ್ ತೈಲವನ್ನು ರಫ್ತು ಮಾಡಲು ಸಹ ಇರಾನ್ ಅನುಮತಿಸುವುದಿಲ್ಲ ಎಂದು ಇರಾನ್...

ನ್ಯಾಯಾಂಗದ ಕುರಿತ ಅಧ್ಯಾಯ ವಿವಾದ: ಬೇಷರತ್ ಕ್ಷಮೆಯಾಚಿಸಿದ ಎನ್‌ಸಿಇಆರ್‌ಟಿ

ಇತ್ತೀಚೆಗೆ ಪ್ರಕಟವಾದ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗ ಭ್ರಷ್ಟಾಚಾರದ ಅಧ್ಯಾಯವನ್ನು ಸೇರಿಸಿದ್ದಕ್ಕಾಗಿ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಮಂಗಳವಾರ (ಮಾ.10) ಬೇಷರತ್ತಾಗಿ ಸಾರ್ವಜನಿಕ ಕ್ಷಮೆಯಾಚಿಸಿದೆ ಮತ್ತು...

ಟ್ರಕ್ ಚಾಲಕನಿಗೆ ಥಳಿಸಿ, ಸೆಗಣಿ ತಿನ್ನಿಸಿದ ಪ್ರಕರಣ : ಇಬ್ಬರು ಸ್ವಘೋಷಿತ ಗೋರಕ್ಷಕರ ಬಂಧನ

ಎಮ್ಮೆಗಳನ್ನು ಸಾಗಿಸುತ್ತಿದ್ದ ಟ್ರಕ್‌ ಚಾಲಕನಿಗೆ ಥಳಿಸಿ, ಸೆಗಣಿ ತಿನ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸ್ವಘೋಷಿತ ಗೋರಕ್ಷಕರನ್ನು ಮಹಾರಾಷ್ಟ್ರದ ಪುಣೆ ನಗರ ಪೊಲೀಸರು ಬಂಧಿಸಿದ್ದಾರೆ. ಬಿಪಾಶಾ ಅಲಿಯಾಸ್ ಆಕಾಶ್ ಮಾಣಿಕಂ ಮತ್ತು ಹೇಮಂತ್ ಗಾಯಕ್ವಾಡ್ ಬಂಧಿತರು....