Homeಕರ್ನಾಟಕಹಂಸಲೇಖ ಪ್ರಕರಣ ಹಿನ್ನೆಲೆ: ಪೇಜಾವರ ಶ್ರೀಗಳ ಹಳೆಯ ವಿಡಿಯೊ ವೈರಲ್‌

ಹಂಸಲೇಖ ಪ್ರಕರಣ ಹಿನ್ನೆಲೆ: ಪೇಜಾವರ ಶ್ರೀಗಳ ಹಳೆಯ ವಿಡಿಯೊ ವೈರಲ್‌

ಕೆಲವು ಬ್ರಾಹ್ಮಣರು ಮಾಂಸಾಹಾರ ತಿನ್ನುತ್ತಿದ್ದಾರೆ ಎಂದು ಪೇಜಾವರ ಶ್ರೀಗಳು ಆಕ್ಷೇಪ ವ್ಯಕ್ತಪಡಿಸಿರುವ ಹಳೆಯ ವಿಡಿಯೊ ಚರ್ಚೆಗೆ ಗ್ರಾಸವಾಗಿದೆ.

- Advertisement -
- Advertisement -

ಉಡುಪಿಯ ಪೇಜಾವರ ಮಠದ ಹಿರಿಯ ಸ್ವಾಮೀಜಿಗಳಾದ ದಿವಂಗತ ವಿಶ್ವೇಶ ತೀರ್ಥರು ಹಿಂದೊಮ್ಮೆ ಮಾತನಾಡಿದ್ದ ವಿಡಿಯೊ ಈಗ ವೈರಲ್ ಆಗಿದೆ. ಮಾಂಸಾಹಾರ ಹಾಗೂ ಸಸ್ಯಾಹಾರ ವಿವಾದಕ್ಕೆ ಹೊಸ ತಿರುವು ನೀಡಿದೆ.

ಸಂಗೀತ ನಿರ್ದೇಶಕರಾದ ಹಂಸಲೇಖ ಅವರು ಮೈಸೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತ, ದಲಿತರ ಮನೆಗೆ ಹೋಗುವುದು ಮುಖ್ಯವಲ್ಲ, ದಲಿತರನ್ನು ತಮ್ಮ ಮನೆಗೆ ಬಲಿತರು ಕರೆಸಿಕೊಳ್ಳುವುದು ಮುಖ್ಯ ಎಂದಿದ್ದರು. ಆಗ ಮಾತನಾಡುತ್ತ, ದಲಿತ ಕೇರಿಗೆ ಭೇಟಿ ನೀಡಿದ್ದ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿಯವರ ಪ್ರಸ್ತಾಪವನ್ನು ಮಾಡಿದ್ದರು. “ದಲಿತರು ಕೋಳಿ ಕೊಟ್ಟರೆ ತಿನ್ನುತ್ತಾರಾ? ಕುರಿಯ ರಕ್ತ ಉರಿದುಕೊಟ್ಟರೆ ತಿನ್ನುತ್ತಾರಾ?” ಎಂದು ಪ್ರಾಸಂಗಿಕವಾಗಿ ಪ್ರಶ್ನಿಸಿದ್ದರು.

ವಿಡಿಯೊ ವೈರಲ್‌ ಆದ ಬಳಿಕ ಹಂಸಲೇಖರ ವಿರುದ್ಧ ಮುಗಿಬಿದ್ದ ಮತೀಯವಾದಿ ಟ್ರೋಲ್‌ ಪಡೆ, ಹಂಸಲೇಖ ಅವರ ಕುರಿತು ತುಚ್ಛವಾಗಿ ಮಾತನಾಡಲು ಆರಂಭಿಸಿತು. ಹಂಸಲೇಖ ಅವರು ಪೇಜಾವರ ಶ್ರೀಗಳಿಗೆ ಅವಮಾನ ಮಾಡಿದ್ದಾರೆ ಎಂದು ಬಿಂಬಿಸಿತು. ಹಂಸಲೇಖ ಅವರು ಕ್ಷಮೆ ಯಾಚಿಸಿದ ಬಳಿಕವೂ ವಿವಾದ ಮುಂದುವರಿದಿದೆ.

ಮೀರಾ ರಾಘವೇಂದ್ರ ಎಂಬವರು ಹಂಸಲೇಖ ಪ್ರಕರಣಕ್ಕೆ ಪ್ರತಿಕ್ರಿಯಿಸುತ್ತಾ ವೈವಿಧ್ಯಮಯ ಆಹಾರ ಸಂಸ್ಕೃತಿ ಕುರಿತು ಲಘುವಾಗಿ ಮಾತನಾಡಿ, ‘ಬಾಡೇ ನಮ್‌ ಗಾಡು’ ಎಂಬ ವಿನೂತನ ಅಭಿಯಾನ ಆರಂಭವಾಗಲೂ ಕಾರಣಕರ್ತರಾದರು. ಒಂದು ಸಪ್ತಾಹವಾಗಿ ನಡೆಯುತ್ತಿರುವ ‘ಬಾಡೇ ನಮ್‌ ಗಾಡು’ ಅಭಿಯಾನದ ಜೊತೆಜೊತೆಗೆ ಮಾಂಸಾಹಾರಿಗಳ ಕುರಿತು ಒಂದು ವರ್ಗದ ಜನಕ್ಕೆ ಯಾಕಿಷ್ಟು ಅಸಹನೆ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ. ಆಹಾರ ಸಂಸ್ಕೃತಿಯನ್ನು ಅಣಕಿಸುವುದರ ವಿರುದ್ಧ ಜನರು ದನಿಎತ್ತಿದ್ದಾರೆ.

ಪೇಜಾವರ ಶ್ರೀಗಳು ಹಿಂದೊಮ್ಮೆ ಖಾಸಗಿ ಸುದ್ದಿವಾಹಿನಿಗೆ ನೀಡಿದ್ದ ಸಂದರ್ಶನದ ತುಣುಕು ಈಗ, “ಮಾಂಸಾಹಾರ, ಸಸ್ಯಾಹಾರ” ವಿವಾದದ ಬೆನ್ನಲ್ಲೇ ವೈರಲ್ ಆಗಿದೆ. ಸಂದರ್ಶನದಲ್ಲಿ ಪೇಜಾವರ ಶ್ರೀಗಳು ಹಿರಿಯ ಪತ್ರಕರ್ತ ಎಚ್‌.ಆರ್‌.ರಂಗನಾಥ್ ಅವರಿಗೆ ಉತ್ತರಿಸುತ್ತಾ, “ಮಾಂಸಾಹಾರವನ್ನು ಕೆಲವು ಬ್ರಾಹ್ಮಣರು ಗುಟ್ಟುಗುಟ್ಟಾಗಿ ತಿನ್ನುತ್ತಿದ್ದಾರೆ” ಎಂದು ಹೇಳಿರುವುದು ದಾಖಲಾಗಿದೆ.

“ಪುರಾಣ ಕಾಲದಿಂದಲೂ ಬಂದಿರುವ ಮಾಂಸದ ಭಕ್ಷಣೆ, ಪೇಜಾವರರು ಹೇಳಿದ ತಕ್ಷಣ ನಿಂತು ಹೋಗಿಬಿಡುತ್ತದೆಯೇ?” ಎಂದು ರಂಗನಾಥ್‌ ಅವರು ಕೇಳುತ್ತಾರೆ.

“ಪುರಾಣ ಕಾಲದಿಂದ ಬಂದದ್ದು ನಿಂತು ಹೋಗಿ ಸಾವಿರಾರು ವರ್ಷಗಳಾಗಿದೆ. ಪುರಾಣ ಕಾಲದಲ್ಲಿ ಇದ್ದದ್ದು ಕಲಿಯುಗ ಪ್ರಾರಂಭದ ಬಳಿಕ ಮೂರ್ನಾಲ್ಕು ಸಾವಿರ ವರ್ಷಗಳ ಹಿಂದೆಯೇ ನಿಂತು ಹೋಗಿದೆ. ಇದು ಪೇಜಾವರರು ಹೇಳಿದ್ದಲ್ಲ. ಬ್ರಾಹ್ಮಣರಲ್ಲಿ ಮಾಂಸಾಹಾರಿ ಪದ್ಧತಿ ಇತ್ತು, ಇಲ್ಲ ಎಂಬ ಚರ್ಚೆ ಇದೆ. ಇತ್ತು ಎಂದು ಇಟ್ಟುಕೊಂಡರೂ ಕೂಡ ಅದನ್ನೆಲ್ಲ ನಿಲ್ಲಿಸಿದ್ದಾರೆ. ಮಾಂಸಾಹಾರ ಕೂಡದು, ಅದು ಬ್ರಾಹ್ಮಣರಲ್ಲಿ ಇರಬಾರದು ಎಂದು ಹಿಂದಿನವರು ಹಠ ತೊಟ್ಟು, ಅನೇಕ ಶತಮಾನಗಳ ಪ್ರಯತ್ನದಿಂದ ನಿಂತುಹೋಗಿದೆ” ಎಂದು ವಿಶ್ವೇಶತೀರ್ಥರು ಹೇಳುತ್ತಾರೆ.

“ಒಂದು ಅಭ್ಯಾಸವಾಗಿ…” ಎಂದು ರಂಗನಾಥ್‌ ಅವರು ಏನನ್ನೋ ಕೇಳಲು ಹೊರಡುತ್ತಾರೆ, ಅಷ್ಟರಲ್ಲಿ ಮಾತು ಮುಂದುವರಿಸುವ ಶ್ರೀಗಳು, “ನಿಂತು ಹೋಗಿದ್ದು, ಪುನಃ ಪ್ರಾರಂಭವಾಗಿದೆ. ಯಾಕೆಂದರೆ ಇವತ್ತಿನ ವಾತಾವರಣದಲ್ಲಿ ಬ್ರಾಹ್ಮಣರು ಕೂಡ ಗುಟ್ಟುಗುಟ್ಟಾಗಿ, ಕೆಲವರು ಬಹಿರಂಗವಾಗಿ ಮದ್ಯ ಮಾಂಸವನ್ನು ಸ್ವೀಕಾರ ಮಾಡುತ್ತಿದ್ದಾರೆ…. ಬ್ರಾಹ್ಮಣ್ಯವನ್ನು ಅವರು (ಬ್ರಾಹ್ಮಣರು) ಮತ್ತಷ್ಟು ಚೆನ್ನಾಗಿ ಉಳಿಸಿಕೊಳ್ಳಬೇಕು. ಇದು ಮೊದಲಿನಿಂದಲೂ ಇದೆ. ಆದರೆ ಶಿಥಿಲವಾಗುತ್ತಿದೆ. ಇದು ಶಿಥಿಲವಾಗಬಾರದು ಅಂತ ಎರಡು ಜವಾಬ್ದಾರಿ ಇದೆ. ಒಂದು: ಬ್ರಾಹ್ಮಣ್ಯದ ರಕ್ಷಣೆಯಾಗಬೇಕು. ಹಿಂದುತ್ವ ರಕ್ಷಣೆಯಾಗಬೇಕು. ಈ ಎರಡು ಜವಾಬ್ದಾರಿ…” ಎನ್ನುತ್ತಾರೆ.

“ಬ್ರಾಹ್ಮಣ್ಯಕ್ಕೂ ಹಿಂದುತ್ವಕ್ಕೂ ಸಂಬಂಧ ಇದೆಯಾ?” ಎಂದು ರಂಗನಾಥ್‌ ಮರುಪ್ರಶ್ನಿಸುತ್ತಾರೆ. “ಸಂಬಂಧ ಇಲ್ಲ. ಎರಡೂ ಬೇಕು. ಬ್ರಾಹ್ಮಣ್ಯ ಬ್ರಾಹ್ಮಣರಿಗೆ ಸೀಮಿತ, ಹಿಂದುತ್ವ ಎಲ್ಲರಿಗೂ ಸಂಬಂಧಪಟ್ಟಿರುವಂತಹದ್ದು” ಎಂದು ಶ್ರೀಗಳು ಪ್ರತಿಕ್ರಿಯಿಸುತ್ತಾರೆ.

ಶ್ರೀಗಳು ಬ್ರಾಹ್ಮಣವನ್ನು ಉಳಿಸಿಕೊಳ್ಳಬೇಕು ಎನ್ನುತ್ತಿರುವುದು, ಹಿಂದುತ್ವ ಹಾಗೂ ಬ್ರಾಹ್ಮಣ್ಯಕ್ಕೆ ಸಂಬಂಧ ಇಲ್ಲ ಎಂದು ಹೇಳುತ್ತಿರುವುದು ಹಾಗೂ ಮಾಂಸಾಹರದ ಕುರಿತು ಅವರು ಪ್ರಸ್ತಾಪಿಸಿರುವುದು ಈಗ ಚರ್ಚೆಯ ವಿಷಯವಾಗಿದೆ.

ಬರಹಗಾರ, ಚಿಂತಕ ನಾಗೇಗೌಡ ಕೀಲಾರ ಅವರು ಫೇಸ್‌ಬುಕ್‌ನಲ್ಲಿ ಮಾಡಿರುವ ಪೋಸ್ಟ್‌ ಅನ್ನು ಸುಮಾರು 300ಕ್ಕೂ ಹೆಚ್ಚು ಜನರು (ಈ ವರದಿ ಮಾಡುವ ವೇಳೆಗೆ) ಶೇರ್‌ ಮಾಡಿದ್ದಾರೆ. ಈ ಮೂಲಕ ವಿಡಿಯೊ ವೈರಲ್‌ ಆಗಿದೆ.


ಇದನ್ನೂ ಓದಿರಿ: ಸಿಎಂ ಯೋಗಿ, ಪಿಎಂ ಮೋದಿ ಗಹನ ಚಿಂತನೆಯ ಫೋಟೋ: ವ್ಯತ್ಯಾಸ ಗುರುತಿಸಿದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ಹಿಂದೂ ಧರ್ಮದಲ್ಲಿ ಜಾತಿ ಬೇಧ ಜಾಸ್ತಿ ಅಂದರೆ ಬೌದ್ಧ ಧರ್ಮದಲ್ಲಿ ಜಾತಿ ವ್ಯವಸ್ಥೆ ಇಲ್ಲ ಎಲ್ಲಾರು ಸಮಾನರು ನಮೋ ಬುದ್ಧ ಜೈ ಬಸವಣ್ಣ ಜೈ ಭೀಮ್ ✍️✍️✍️✍️🇪🇺🏳️‍🌈

  2. Bhudda dhrama ondhu dharma Kintha, Hindha Dharmada ondu Bhaga ಎಂದು nambiddene. Lord Budda adhu bereye Dharma ಎಂದು helalulla. ಎಂದು nanu nambiddene. Lord Budda🙏🙏🙏

  3. ಮಾಂಸ ತಿನ್ನುವುದು ಮೃಗೀಯ ಗುಣ. ಅದನ್ನೂ ಸಾಧಿಸಿಕೊಳ್ಳಬೇಡಿ. ಈ ಮೃಗೀಯ ಗುಣ ನನ್ನಲ್ಲೂ ಇದೆ. ನನ್ನಲ್ಲಿದೆ ಎಂದ ಮಾತ್ರಕ್ಕೆ ಸರಿಯಲ್ಲ. ಸಾತ್ವಿಕ ಗುಣವಿರುವವರನ್ನು ದೂಷಿಸುವುದು ಸರಿಯಲ್ಲ. ಕಾಡಿನಲ್ಲಿ ಜಿಂಕೆ ಬಳಿ ಹೋಗುತ್ತೀರೊ ಇಲ್ಲ ಹುಲಿಯ ಬಳಿ ಹೋಗುತ್ತೀರೊ.

  4. ಮಂಗನಿಂದ ಮಾನವರಾದ ಯಾವ ಜಾತಿ,ಯಾವ ಧರ್ಮ ಇರಲಿಲ್ಲ.ಯುಗಗಳು ಕಳೆಯುತ್ತಾ ಜಾತಿ ಧರ್ಮ ಸೃಷ್ಟಿ ಆಯ್ತು.ಆಹಾರ ಪದ್ಧತಿ ಬದಲಾಯಿತು,ಇಲ್ಲಿ ಯಾವ ಜಾತಿ ಮೇಲೆ ಅಲ್ಲಾ,ಕೀಳು ಅಲ್ಲಾ.ಎಲ್ಲಾರು ಒಂದೆ.

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....