Homeಕರ್ನಾಟಕಹಂಸಲೇಖ ಪ್ರಕರಣ ಹಿನ್ನೆಲೆ: ಪೇಜಾವರ ಶ್ರೀಗಳ ಹಳೆಯ ವಿಡಿಯೊ ವೈರಲ್‌

ಹಂಸಲೇಖ ಪ್ರಕರಣ ಹಿನ್ನೆಲೆ: ಪೇಜಾವರ ಶ್ರೀಗಳ ಹಳೆಯ ವಿಡಿಯೊ ವೈರಲ್‌

ಕೆಲವು ಬ್ರಾಹ್ಮಣರು ಮಾಂಸಾಹಾರ ತಿನ್ನುತ್ತಿದ್ದಾರೆ ಎಂದು ಪೇಜಾವರ ಶ್ರೀಗಳು ಆಕ್ಷೇಪ ವ್ಯಕ್ತಪಡಿಸಿರುವ ಹಳೆಯ ವಿಡಿಯೊ ಚರ್ಚೆಗೆ ಗ್ರಾಸವಾಗಿದೆ.

- Advertisement -
- Advertisement -

ಉಡುಪಿಯ ಪೇಜಾವರ ಮಠದ ಹಿರಿಯ ಸ್ವಾಮೀಜಿಗಳಾದ ದಿವಂಗತ ವಿಶ್ವೇಶ ತೀರ್ಥರು ಹಿಂದೊಮ್ಮೆ ಮಾತನಾಡಿದ್ದ ವಿಡಿಯೊ ಈಗ ವೈರಲ್ ಆಗಿದೆ. ಮಾಂಸಾಹಾರ ಹಾಗೂ ಸಸ್ಯಾಹಾರ ವಿವಾದಕ್ಕೆ ಹೊಸ ತಿರುವು ನೀಡಿದೆ.

ಸಂಗೀತ ನಿರ್ದೇಶಕರಾದ ಹಂಸಲೇಖ ಅವರು ಮೈಸೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತ, ದಲಿತರ ಮನೆಗೆ ಹೋಗುವುದು ಮುಖ್ಯವಲ್ಲ, ದಲಿತರನ್ನು ತಮ್ಮ ಮನೆಗೆ ಬಲಿತರು ಕರೆಸಿಕೊಳ್ಳುವುದು ಮುಖ್ಯ ಎಂದಿದ್ದರು. ಆಗ ಮಾತನಾಡುತ್ತ, ದಲಿತ ಕೇರಿಗೆ ಭೇಟಿ ನೀಡಿದ್ದ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿಯವರ ಪ್ರಸ್ತಾಪವನ್ನು ಮಾಡಿದ್ದರು. “ದಲಿತರು ಕೋಳಿ ಕೊಟ್ಟರೆ ತಿನ್ನುತ್ತಾರಾ? ಕುರಿಯ ರಕ್ತ ಉರಿದುಕೊಟ್ಟರೆ ತಿನ್ನುತ್ತಾರಾ?” ಎಂದು ಪ್ರಾಸಂಗಿಕವಾಗಿ ಪ್ರಶ್ನಿಸಿದ್ದರು.

ವಿಡಿಯೊ ವೈರಲ್‌ ಆದ ಬಳಿಕ ಹಂಸಲೇಖರ ವಿರುದ್ಧ ಮುಗಿಬಿದ್ದ ಮತೀಯವಾದಿ ಟ್ರೋಲ್‌ ಪಡೆ, ಹಂಸಲೇಖ ಅವರ ಕುರಿತು ತುಚ್ಛವಾಗಿ ಮಾತನಾಡಲು ಆರಂಭಿಸಿತು. ಹಂಸಲೇಖ ಅವರು ಪೇಜಾವರ ಶ್ರೀಗಳಿಗೆ ಅವಮಾನ ಮಾಡಿದ್ದಾರೆ ಎಂದು ಬಿಂಬಿಸಿತು. ಹಂಸಲೇಖ ಅವರು ಕ್ಷಮೆ ಯಾಚಿಸಿದ ಬಳಿಕವೂ ವಿವಾದ ಮುಂದುವರಿದಿದೆ.

ಮೀರಾ ರಾಘವೇಂದ್ರ ಎಂಬವರು ಹಂಸಲೇಖ ಪ್ರಕರಣಕ್ಕೆ ಪ್ರತಿಕ್ರಿಯಿಸುತ್ತಾ ವೈವಿಧ್ಯಮಯ ಆಹಾರ ಸಂಸ್ಕೃತಿ ಕುರಿತು ಲಘುವಾಗಿ ಮಾತನಾಡಿ, ‘ಬಾಡೇ ನಮ್‌ ಗಾಡು’ ಎಂಬ ವಿನೂತನ ಅಭಿಯಾನ ಆರಂಭವಾಗಲೂ ಕಾರಣಕರ್ತರಾದರು. ಒಂದು ಸಪ್ತಾಹವಾಗಿ ನಡೆಯುತ್ತಿರುವ ‘ಬಾಡೇ ನಮ್‌ ಗಾಡು’ ಅಭಿಯಾನದ ಜೊತೆಜೊತೆಗೆ ಮಾಂಸಾಹಾರಿಗಳ ಕುರಿತು ಒಂದು ವರ್ಗದ ಜನಕ್ಕೆ ಯಾಕಿಷ್ಟು ಅಸಹನೆ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ. ಆಹಾರ ಸಂಸ್ಕೃತಿಯನ್ನು ಅಣಕಿಸುವುದರ ವಿರುದ್ಧ ಜನರು ದನಿಎತ್ತಿದ್ದಾರೆ.

ಪೇಜಾವರ ಶ್ರೀಗಳು ಹಿಂದೊಮ್ಮೆ ಖಾಸಗಿ ಸುದ್ದಿವಾಹಿನಿಗೆ ನೀಡಿದ್ದ ಸಂದರ್ಶನದ ತುಣುಕು ಈಗ, “ಮಾಂಸಾಹಾರ, ಸಸ್ಯಾಹಾರ” ವಿವಾದದ ಬೆನ್ನಲ್ಲೇ ವೈರಲ್ ಆಗಿದೆ. ಸಂದರ್ಶನದಲ್ಲಿ ಪೇಜಾವರ ಶ್ರೀಗಳು ಹಿರಿಯ ಪತ್ರಕರ್ತ ಎಚ್‌.ಆರ್‌.ರಂಗನಾಥ್ ಅವರಿಗೆ ಉತ್ತರಿಸುತ್ತಾ, “ಮಾಂಸಾಹಾರವನ್ನು ಕೆಲವು ಬ್ರಾಹ್ಮಣರು ಗುಟ್ಟುಗುಟ್ಟಾಗಿ ತಿನ್ನುತ್ತಿದ್ದಾರೆ” ಎಂದು ಹೇಳಿರುವುದು ದಾಖಲಾಗಿದೆ.

“ಪುರಾಣ ಕಾಲದಿಂದಲೂ ಬಂದಿರುವ ಮಾಂಸದ ಭಕ್ಷಣೆ, ಪೇಜಾವರರು ಹೇಳಿದ ತಕ್ಷಣ ನಿಂತು ಹೋಗಿಬಿಡುತ್ತದೆಯೇ?” ಎಂದು ರಂಗನಾಥ್‌ ಅವರು ಕೇಳುತ್ತಾರೆ.

“ಪುರಾಣ ಕಾಲದಿಂದ ಬಂದದ್ದು ನಿಂತು ಹೋಗಿ ಸಾವಿರಾರು ವರ್ಷಗಳಾಗಿದೆ. ಪುರಾಣ ಕಾಲದಲ್ಲಿ ಇದ್ದದ್ದು ಕಲಿಯುಗ ಪ್ರಾರಂಭದ ಬಳಿಕ ಮೂರ್ನಾಲ್ಕು ಸಾವಿರ ವರ್ಷಗಳ ಹಿಂದೆಯೇ ನಿಂತು ಹೋಗಿದೆ. ಇದು ಪೇಜಾವರರು ಹೇಳಿದ್ದಲ್ಲ. ಬ್ರಾಹ್ಮಣರಲ್ಲಿ ಮಾಂಸಾಹಾರಿ ಪದ್ಧತಿ ಇತ್ತು, ಇಲ್ಲ ಎಂಬ ಚರ್ಚೆ ಇದೆ. ಇತ್ತು ಎಂದು ಇಟ್ಟುಕೊಂಡರೂ ಕೂಡ ಅದನ್ನೆಲ್ಲ ನಿಲ್ಲಿಸಿದ್ದಾರೆ. ಮಾಂಸಾಹಾರ ಕೂಡದು, ಅದು ಬ್ರಾಹ್ಮಣರಲ್ಲಿ ಇರಬಾರದು ಎಂದು ಹಿಂದಿನವರು ಹಠ ತೊಟ್ಟು, ಅನೇಕ ಶತಮಾನಗಳ ಪ್ರಯತ್ನದಿಂದ ನಿಂತುಹೋಗಿದೆ” ಎಂದು ವಿಶ್ವೇಶತೀರ್ಥರು ಹೇಳುತ್ತಾರೆ.

“ಒಂದು ಅಭ್ಯಾಸವಾಗಿ…” ಎಂದು ರಂಗನಾಥ್‌ ಅವರು ಏನನ್ನೋ ಕೇಳಲು ಹೊರಡುತ್ತಾರೆ, ಅಷ್ಟರಲ್ಲಿ ಮಾತು ಮುಂದುವರಿಸುವ ಶ್ರೀಗಳು, “ನಿಂತು ಹೋಗಿದ್ದು, ಪುನಃ ಪ್ರಾರಂಭವಾಗಿದೆ. ಯಾಕೆಂದರೆ ಇವತ್ತಿನ ವಾತಾವರಣದಲ್ಲಿ ಬ್ರಾಹ್ಮಣರು ಕೂಡ ಗುಟ್ಟುಗುಟ್ಟಾಗಿ, ಕೆಲವರು ಬಹಿರಂಗವಾಗಿ ಮದ್ಯ ಮಾಂಸವನ್ನು ಸ್ವೀಕಾರ ಮಾಡುತ್ತಿದ್ದಾರೆ…. ಬ್ರಾಹ್ಮಣ್ಯವನ್ನು ಅವರು (ಬ್ರಾಹ್ಮಣರು) ಮತ್ತಷ್ಟು ಚೆನ್ನಾಗಿ ಉಳಿಸಿಕೊಳ್ಳಬೇಕು. ಇದು ಮೊದಲಿನಿಂದಲೂ ಇದೆ. ಆದರೆ ಶಿಥಿಲವಾಗುತ್ತಿದೆ. ಇದು ಶಿಥಿಲವಾಗಬಾರದು ಅಂತ ಎರಡು ಜವಾಬ್ದಾರಿ ಇದೆ. ಒಂದು: ಬ್ರಾಹ್ಮಣ್ಯದ ರಕ್ಷಣೆಯಾಗಬೇಕು. ಹಿಂದುತ್ವ ರಕ್ಷಣೆಯಾಗಬೇಕು. ಈ ಎರಡು ಜವಾಬ್ದಾರಿ…” ಎನ್ನುತ್ತಾರೆ.

“ಬ್ರಾಹ್ಮಣ್ಯಕ್ಕೂ ಹಿಂದುತ್ವಕ್ಕೂ ಸಂಬಂಧ ಇದೆಯಾ?” ಎಂದು ರಂಗನಾಥ್‌ ಮರುಪ್ರಶ್ನಿಸುತ್ತಾರೆ. “ಸಂಬಂಧ ಇಲ್ಲ. ಎರಡೂ ಬೇಕು. ಬ್ರಾಹ್ಮಣ್ಯ ಬ್ರಾಹ್ಮಣರಿಗೆ ಸೀಮಿತ, ಹಿಂದುತ್ವ ಎಲ್ಲರಿಗೂ ಸಂಬಂಧಪಟ್ಟಿರುವಂತಹದ್ದು” ಎಂದು ಶ್ರೀಗಳು ಪ್ರತಿಕ್ರಿಯಿಸುತ್ತಾರೆ.

ಶ್ರೀಗಳು ಬ್ರಾಹ್ಮಣವನ್ನು ಉಳಿಸಿಕೊಳ್ಳಬೇಕು ಎನ್ನುತ್ತಿರುವುದು, ಹಿಂದುತ್ವ ಹಾಗೂ ಬ್ರಾಹ್ಮಣ್ಯಕ್ಕೆ ಸಂಬಂಧ ಇಲ್ಲ ಎಂದು ಹೇಳುತ್ತಿರುವುದು ಹಾಗೂ ಮಾಂಸಾಹರದ ಕುರಿತು ಅವರು ಪ್ರಸ್ತಾಪಿಸಿರುವುದು ಈಗ ಚರ್ಚೆಯ ವಿಷಯವಾಗಿದೆ.

ಬರಹಗಾರ, ಚಿಂತಕ ನಾಗೇಗೌಡ ಕೀಲಾರ ಅವರು ಫೇಸ್‌ಬುಕ್‌ನಲ್ಲಿ ಮಾಡಿರುವ ಪೋಸ್ಟ್‌ ಅನ್ನು ಸುಮಾರು 300ಕ್ಕೂ ಹೆಚ್ಚು ಜನರು (ಈ ವರದಿ ಮಾಡುವ ವೇಳೆಗೆ) ಶೇರ್‌ ಮಾಡಿದ್ದಾರೆ. ಈ ಮೂಲಕ ವಿಡಿಯೊ ವೈರಲ್‌ ಆಗಿದೆ.


ಇದನ್ನೂ ಓದಿರಿ: ಸಿಎಂ ಯೋಗಿ, ಪಿಎಂ ಮೋದಿ ಗಹನ ಚಿಂತನೆಯ ಫೋಟೋ: ವ್ಯತ್ಯಾಸ ಗುರುತಿಸಿದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ಹಿಂದೂ ಧರ್ಮದಲ್ಲಿ ಜಾತಿ ಬೇಧ ಜಾಸ್ತಿ ಅಂದರೆ ಬೌದ್ಧ ಧರ್ಮದಲ್ಲಿ ಜಾತಿ ವ್ಯವಸ್ಥೆ ಇಲ್ಲ ಎಲ್ಲಾರು ಸಮಾನರು ನಮೋ ಬುದ್ಧ ಜೈ ಬಸವಣ್ಣ ಜೈ ಭೀಮ್ ✍️✍️✍️✍️🇪🇺🏳️‍🌈

  2. Bhudda dhrama ondhu dharma Kintha, Hindha Dharmada ondu Bhaga ಎಂದು nambiddene. Lord Budda adhu bereye Dharma ಎಂದು helalulla. ಎಂದು nanu nambiddene. Lord Budda🙏🙏🙏

  3. ಮಾಂಸ ತಿನ್ನುವುದು ಮೃಗೀಯ ಗುಣ. ಅದನ್ನೂ ಸಾಧಿಸಿಕೊಳ್ಳಬೇಡಿ. ಈ ಮೃಗೀಯ ಗುಣ ನನ್ನಲ್ಲೂ ಇದೆ. ನನ್ನಲ್ಲಿದೆ ಎಂದ ಮಾತ್ರಕ್ಕೆ ಸರಿಯಲ್ಲ. ಸಾತ್ವಿಕ ಗುಣವಿರುವವರನ್ನು ದೂಷಿಸುವುದು ಸರಿಯಲ್ಲ. ಕಾಡಿನಲ್ಲಿ ಜಿಂಕೆ ಬಳಿ ಹೋಗುತ್ತೀರೊ ಇಲ್ಲ ಹುಲಿಯ ಬಳಿ ಹೋಗುತ್ತೀರೊ.

  4. ಮಂಗನಿಂದ ಮಾನವರಾದ ಯಾವ ಜಾತಿ,ಯಾವ ಧರ್ಮ ಇರಲಿಲ್ಲ.ಯುಗಗಳು ಕಳೆಯುತ್ತಾ ಜಾತಿ ಧರ್ಮ ಸೃಷ್ಟಿ ಆಯ್ತು.ಆಹಾರ ಪದ್ಧತಿ ಬದಲಾಯಿತು,ಇಲ್ಲಿ ಯಾವ ಜಾತಿ ಮೇಲೆ ಅಲ್ಲಾ,ಕೀಳು ಅಲ್ಲಾ.ಎಲ್ಲಾರು ಒಂದೆ.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...