Homeಮುಖಪುಟಶೃಂಗಸಭೆ ಹಿನ್ನೆಲೆ: ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್‌ ಆಗಮನ

ಶೃಂಗಸಭೆ ಹಿನ್ನೆಲೆ: ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್‌ ಆಗಮನ

- Advertisement -
- Advertisement -

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಸೋಮವಾರ ಡಿಸೆಂಬರ್ 6 ರಂದು ಭಾರತಕ್ಕೆ ಬಂದಿಳಿದರು ಮತ್ತು ದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪುಟಿನ್ ಅವರನ್ನು ಬರಮಾಡಿಕೊಂಡರು.

ಪುಟಿನ್ ಆಗಮಿಸಿದ ಸ್ವಲ್ಪ ಸಮಯದ ನಂತರ, ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿದ್ದಾರೆ:

“ಭಾರತದ ವಿಶ್ವಾಸಾರ್ಹ ಸ್ನೇಹಿತ ಮತ್ತು ದೀರ್ಘಕಾಲದ ಪಾಲುದಾರನನ್ನು ಸ್ವಾಗತಿಸುತ್ತಿದ್ದೇನೆ” ಎಂದು ಟ್ವೀಟ್ ಹೇಳಿದೆ.

ರಷ್ಯಾದ ಅಧ್ಯಕ್ಷರಾದ ಪುಟಿನ್‌ 21ನೇ ವಾರ್ಷಿಕ ಭಾರತ-ರಷ್ಯಾ ಶೃಂಗಸಭೆಯಲ್ಲಿ ತಮ್ಮ ಭಾರತೀಯ ಸಹವರ್ತಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಭಾಗವಹಿಸಲಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಬ್ರೆಜಿಲ್‌ನ ಬ್ರೆಸಿಲಿಯಾದಲ್ಲಿ 2019ರಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಪುಟಿನ್ ಅವರು ಕೊನೆಯ ಬಾರಿ ಮುಖಾಮುಖಿ ಭೇಟಿಯಾಗಿದ್ದರು. ನಂತರ ಇದೇ ಮೊದಲ ಬಾರಿಗೆ ವೈಯಕ್ತಿಕವಾಗಿ ಭೇಟಿಯಾಗಿದ್ದಾರೆ. ಪ್ರಧಾನಿ ಮೋದಿ ಅವರು ಪುಟಿನ್‌ ಅವರಿಗೆ ಹೈದರಾಬಾದ್ ಹೌಸ್‌ನಲ್ಲಿ ಔತಣಕೂಟವನ್ನೂ ಏರ್ಪಡಿಸಲಿದ್ದಾರೆ.

ಉಭಯ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳ ಕುರಿತು ಚರ್ಚೆ ನಡೆಯಲಿದೆ. ಚೀನಾ ಕೂಡ ಪ್ರಮುಖ ಚರ್ಚೆಯ ವಿಷಯವಾಗಿದೆ ಎಂದು ನಿರೀಕ್ಷಿಸಲಾಗಿದೆ. ತಾಲಿಬಾನ್ ಹಿಡಿತದಲ್ಲಿರುವ ಅಫ್ಘಾನಿಸ್ತಾನದ ಭದ್ರತಾ ಪರಿಸ್ಥಿತಿಯ ಬಗ್ಗೆಯೂ ಮೋದಿ ಮತ್ತು ಪುಟಿನ್ ಚರ್ಚಿಸಲಿದ್ದಾರೆ.

ಯುನೈಟೆಡ್ ಸ್ಟೇಟ್ಸ್ ಬೆಂಬಲಿತ ಅಶ್ರಫ್ ಘನಿ ಸರ್ಕಾರವನ್ನು ತಾಲಿಬಾನ್ ಹೊರಹಾಕಿದ ನಂತರ, ಪುಟಿನ್ ಮತ್ತು ಮೋದಿ ತಾಲಿಬಾನ್ ಬಗ್ಗೆ ಚರ್ಚೆಗಳನ್ನು ಪ್ರಾರಂಭಿಸಿದರು. ಚರ್ಚೆಯನ್ನು ಮುಂದುವರೆಸಲು ರಷ್ಯಾದ ರಾಷ್ಟ್ರೀಯ ಭದ್ರತಾ ಸಲಹೆಗಾರ ನಿಕೊ ಲಾಯ್ ಪಟ್ರುಶೇವ್ ಅವರನ್ನು ನವದೆಹಲಿಗೆ ಕಳುಹಿಸಲಾಯಿತು.

ಭಾರತ ಮತ್ತು ರಷ್ಯಾ ಮುಂದಿನ 10 ವರ್ಷಗಳವರೆಗೆ ಮಿಲಿಟರಿ-ತಾಂತ್ರಿಕ ಸಹಕಾರಕ್ಕಾಗಿ ಚೌಕಟ್ಟುಗಳನ್ನು ನಿಗದಿಪಡಿಸಿಕೊಳ್ಳಲಿದೆ. ತಂತ್ರಜ್ಞಾನ ಮತ್ತು ವಿಜ್ಞಾನದ ಜಂಟಿ ಆಯೋಗವನ್ನು ಘೋಷಿಸುವ ನಿರೀಕ್ಷೆಯಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮೋದಿ ಮತ್ತು ಪುಟಿನ್‌ ಹಲವಾರು ರಕ್ಷಣಾ ಖರೀದಿ ಪ್ರಸ್ತಾವನೆಗಳನ್ನು ಅಂತಿಮಗೊಳಿಸಲಿದ್ದಾರೆ. ಭಾರತೀಯ ಸೇನೆಗಾಗಿ ಅವಳಿ-ಎಂಜಿನ್ Kamov-226T ಲಘು ಹೆಲಿಕಾಪ್ಟರ್‌ಗಳ ಜಂಟಿ ಉತ್ಪಾದನೆ ಕುರಿತು ಚರ್ಚಿಸಲಿದ್ದಾರೆ ಎನ್ನಲಾಗಿದೆ.

“ಸಂವಾದದ ಕಾರ್ಯಸೂಚಿಯು ಪರಸ್ಪರ ಹಿತಾಸಕ್ತಿಯ ರಾಜಕೀಯ ಮತ್ತು ರಕ್ಷಣಾ ವಿಷಯಗಳನ್ನು ಒಳಗೊಂಡಿರುತ್ತದೆ. ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ನಿರೀಕ್ಷೆಯಿದೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ.


ಇದನ್ನೂ ಓದಿರಿ: ನೊಬೆಲ್‌ ಪ್ರಶಸ್ತಿ ಪುರಸ್ಕೃತ ಆಂಗ್‌ ಸಾನ್‌ ಸೂಕಿಗೆ ನಾಲ್ಕು ವರ್ಷ ಜೈಲು ಶಿಕ್ಷೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...