Homeಮುಖಪುಟಶೃಂಗಸಭೆ ಹಿನ್ನೆಲೆ: ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್‌ ಆಗಮನ

ಶೃಂಗಸಭೆ ಹಿನ್ನೆಲೆ: ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್‌ ಆಗಮನ

- Advertisement -
- Advertisement -

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಸೋಮವಾರ ಡಿಸೆಂಬರ್ 6 ರಂದು ಭಾರತಕ್ಕೆ ಬಂದಿಳಿದರು ಮತ್ತು ದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪುಟಿನ್ ಅವರನ್ನು ಬರಮಾಡಿಕೊಂಡರು.

ಪುಟಿನ್ ಆಗಮಿಸಿದ ಸ್ವಲ್ಪ ಸಮಯದ ನಂತರ, ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿದ್ದಾರೆ:

“ಭಾರತದ ವಿಶ್ವಾಸಾರ್ಹ ಸ್ನೇಹಿತ ಮತ್ತು ದೀರ್ಘಕಾಲದ ಪಾಲುದಾರನನ್ನು ಸ್ವಾಗತಿಸುತ್ತಿದ್ದೇನೆ” ಎಂದು ಟ್ವೀಟ್ ಹೇಳಿದೆ.

ರಷ್ಯಾದ ಅಧ್ಯಕ್ಷರಾದ ಪುಟಿನ್‌ 21ನೇ ವಾರ್ಷಿಕ ಭಾರತ-ರಷ್ಯಾ ಶೃಂಗಸಭೆಯಲ್ಲಿ ತಮ್ಮ ಭಾರತೀಯ ಸಹವರ್ತಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಭಾಗವಹಿಸಲಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಬ್ರೆಜಿಲ್‌ನ ಬ್ರೆಸಿಲಿಯಾದಲ್ಲಿ 2019ರಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಪುಟಿನ್ ಅವರು ಕೊನೆಯ ಬಾರಿ ಮುಖಾಮುಖಿ ಭೇಟಿಯಾಗಿದ್ದರು. ನಂತರ ಇದೇ ಮೊದಲ ಬಾರಿಗೆ ವೈಯಕ್ತಿಕವಾಗಿ ಭೇಟಿಯಾಗಿದ್ದಾರೆ. ಪ್ರಧಾನಿ ಮೋದಿ ಅವರು ಪುಟಿನ್‌ ಅವರಿಗೆ ಹೈದರಾಬಾದ್ ಹೌಸ್‌ನಲ್ಲಿ ಔತಣಕೂಟವನ್ನೂ ಏರ್ಪಡಿಸಲಿದ್ದಾರೆ.

ಉಭಯ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳ ಕುರಿತು ಚರ್ಚೆ ನಡೆಯಲಿದೆ. ಚೀನಾ ಕೂಡ ಪ್ರಮುಖ ಚರ್ಚೆಯ ವಿಷಯವಾಗಿದೆ ಎಂದು ನಿರೀಕ್ಷಿಸಲಾಗಿದೆ. ತಾಲಿಬಾನ್ ಹಿಡಿತದಲ್ಲಿರುವ ಅಫ್ಘಾನಿಸ್ತಾನದ ಭದ್ರತಾ ಪರಿಸ್ಥಿತಿಯ ಬಗ್ಗೆಯೂ ಮೋದಿ ಮತ್ತು ಪುಟಿನ್ ಚರ್ಚಿಸಲಿದ್ದಾರೆ.

ಯುನೈಟೆಡ್ ಸ್ಟೇಟ್ಸ್ ಬೆಂಬಲಿತ ಅಶ್ರಫ್ ಘನಿ ಸರ್ಕಾರವನ್ನು ತಾಲಿಬಾನ್ ಹೊರಹಾಕಿದ ನಂತರ, ಪುಟಿನ್ ಮತ್ತು ಮೋದಿ ತಾಲಿಬಾನ್ ಬಗ್ಗೆ ಚರ್ಚೆಗಳನ್ನು ಪ್ರಾರಂಭಿಸಿದರು. ಚರ್ಚೆಯನ್ನು ಮುಂದುವರೆಸಲು ರಷ್ಯಾದ ರಾಷ್ಟ್ರೀಯ ಭದ್ರತಾ ಸಲಹೆಗಾರ ನಿಕೊ ಲಾಯ್ ಪಟ್ರುಶೇವ್ ಅವರನ್ನು ನವದೆಹಲಿಗೆ ಕಳುಹಿಸಲಾಯಿತು.

ಭಾರತ ಮತ್ತು ರಷ್ಯಾ ಮುಂದಿನ 10 ವರ್ಷಗಳವರೆಗೆ ಮಿಲಿಟರಿ-ತಾಂತ್ರಿಕ ಸಹಕಾರಕ್ಕಾಗಿ ಚೌಕಟ್ಟುಗಳನ್ನು ನಿಗದಿಪಡಿಸಿಕೊಳ್ಳಲಿದೆ. ತಂತ್ರಜ್ಞಾನ ಮತ್ತು ವಿಜ್ಞಾನದ ಜಂಟಿ ಆಯೋಗವನ್ನು ಘೋಷಿಸುವ ನಿರೀಕ್ಷೆಯಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮೋದಿ ಮತ್ತು ಪುಟಿನ್‌ ಹಲವಾರು ರಕ್ಷಣಾ ಖರೀದಿ ಪ್ರಸ್ತಾವನೆಗಳನ್ನು ಅಂತಿಮಗೊಳಿಸಲಿದ್ದಾರೆ. ಭಾರತೀಯ ಸೇನೆಗಾಗಿ ಅವಳಿ-ಎಂಜಿನ್ Kamov-226T ಲಘು ಹೆಲಿಕಾಪ್ಟರ್‌ಗಳ ಜಂಟಿ ಉತ್ಪಾದನೆ ಕುರಿತು ಚರ್ಚಿಸಲಿದ್ದಾರೆ ಎನ್ನಲಾಗಿದೆ.

“ಸಂವಾದದ ಕಾರ್ಯಸೂಚಿಯು ಪರಸ್ಪರ ಹಿತಾಸಕ್ತಿಯ ರಾಜಕೀಯ ಮತ್ತು ರಕ್ಷಣಾ ವಿಷಯಗಳನ್ನು ಒಳಗೊಂಡಿರುತ್ತದೆ. ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ನಿರೀಕ್ಷೆಯಿದೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ.


ಇದನ್ನೂ ಓದಿರಿ: ನೊಬೆಲ್‌ ಪ್ರಶಸ್ತಿ ಪುರಸ್ಕೃತ ಆಂಗ್‌ ಸಾನ್‌ ಸೂಕಿಗೆ ನಾಲ್ಕು ವರ್ಷ ಜೈಲು ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...