Homeಮುಖಪುಟಶೃಂಗಸಭೆ ಹಿನ್ನೆಲೆ: ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್‌ ಆಗಮನ

ಶೃಂಗಸಭೆ ಹಿನ್ನೆಲೆ: ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್‌ ಆಗಮನ

- Advertisement -
- Advertisement -

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಸೋಮವಾರ ಡಿಸೆಂಬರ್ 6 ರಂದು ಭಾರತಕ್ಕೆ ಬಂದಿಳಿದರು ಮತ್ತು ದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪುಟಿನ್ ಅವರನ್ನು ಬರಮಾಡಿಕೊಂಡರು.

ಪುಟಿನ್ ಆಗಮಿಸಿದ ಸ್ವಲ್ಪ ಸಮಯದ ನಂತರ, ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿದ್ದಾರೆ:

“ಭಾರತದ ವಿಶ್ವಾಸಾರ್ಹ ಸ್ನೇಹಿತ ಮತ್ತು ದೀರ್ಘಕಾಲದ ಪಾಲುದಾರನನ್ನು ಸ್ವಾಗತಿಸುತ್ತಿದ್ದೇನೆ” ಎಂದು ಟ್ವೀಟ್ ಹೇಳಿದೆ.

ರಷ್ಯಾದ ಅಧ್ಯಕ್ಷರಾದ ಪುಟಿನ್‌ 21ನೇ ವಾರ್ಷಿಕ ಭಾರತ-ರಷ್ಯಾ ಶೃಂಗಸಭೆಯಲ್ಲಿ ತಮ್ಮ ಭಾರತೀಯ ಸಹವರ್ತಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಭಾಗವಹಿಸಲಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಬ್ರೆಜಿಲ್‌ನ ಬ್ರೆಸಿಲಿಯಾದಲ್ಲಿ 2019ರಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಪುಟಿನ್ ಅವರು ಕೊನೆಯ ಬಾರಿ ಮುಖಾಮುಖಿ ಭೇಟಿಯಾಗಿದ್ದರು. ನಂತರ ಇದೇ ಮೊದಲ ಬಾರಿಗೆ ವೈಯಕ್ತಿಕವಾಗಿ ಭೇಟಿಯಾಗಿದ್ದಾರೆ. ಪ್ರಧಾನಿ ಮೋದಿ ಅವರು ಪುಟಿನ್‌ ಅವರಿಗೆ ಹೈದರಾಬಾದ್ ಹೌಸ್‌ನಲ್ಲಿ ಔತಣಕೂಟವನ್ನೂ ಏರ್ಪಡಿಸಲಿದ್ದಾರೆ.

ಉಭಯ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳ ಕುರಿತು ಚರ್ಚೆ ನಡೆಯಲಿದೆ. ಚೀನಾ ಕೂಡ ಪ್ರಮುಖ ಚರ್ಚೆಯ ವಿಷಯವಾಗಿದೆ ಎಂದು ನಿರೀಕ್ಷಿಸಲಾಗಿದೆ. ತಾಲಿಬಾನ್ ಹಿಡಿತದಲ್ಲಿರುವ ಅಫ್ಘಾನಿಸ್ತಾನದ ಭದ್ರತಾ ಪರಿಸ್ಥಿತಿಯ ಬಗ್ಗೆಯೂ ಮೋದಿ ಮತ್ತು ಪುಟಿನ್ ಚರ್ಚಿಸಲಿದ್ದಾರೆ.

ಯುನೈಟೆಡ್ ಸ್ಟೇಟ್ಸ್ ಬೆಂಬಲಿತ ಅಶ್ರಫ್ ಘನಿ ಸರ್ಕಾರವನ್ನು ತಾಲಿಬಾನ್ ಹೊರಹಾಕಿದ ನಂತರ, ಪುಟಿನ್ ಮತ್ತು ಮೋದಿ ತಾಲಿಬಾನ್ ಬಗ್ಗೆ ಚರ್ಚೆಗಳನ್ನು ಪ್ರಾರಂಭಿಸಿದರು. ಚರ್ಚೆಯನ್ನು ಮುಂದುವರೆಸಲು ರಷ್ಯಾದ ರಾಷ್ಟ್ರೀಯ ಭದ್ರತಾ ಸಲಹೆಗಾರ ನಿಕೊ ಲಾಯ್ ಪಟ್ರುಶೇವ್ ಅವರನ್ನು ನವದೆಹಲಿಗೆ ಕಳುಹಿಸಲಾಯಿತು.

ಭಾರತ ಮತ್ತು ರಷ್ಯಾ ಮುಂದಿನ 10 ವರ್ಷಗಳವರೆಗೆ ಮಿಲಿಟರಿ-ತಾಂತ್ರಿಕ ಸಹಕಾರಕ್ಕಾಗಿ ಚೌಕಟ್ಟುಗಳನ್ನು ನಿಗದಿಪಡಿಸಿಕೊಳ್ಳಲಿದೆ. ತಂತ್ರಜ್ಞಾನ ಮತ್ತು ವಿಜ್ಞಾನದ ಜಂಟಿ ಆಯೋಗವನ್ನು ಘೋಷಿಸುವ ನಿರೀಕ್ಷೆಯಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮೋದಿ ಮತ್ತು ಪುಟಿನ್‌ ಹಲವಾರು ರಕ್ಷಣಾ ಖರೀದಿ ಪ್ರಸ್ತಾವನೆಗಳನ್ನು ಅಂತಿಮಗೊಳಿಸಲಿದ್ದಾರೆ. ಭಾರತೀಯ ಸೇನೆಗಾಗಿ ಅವಳಿ-ಎಂಜಿನ್ Kamov-226T ಲಘು ಹೆಲಿಕಾಪ್ಟರ್‌ಗಳ ಜಂಟಿ ಉತ್ಪಾದನೆ ಕುರಿತು ಚರ್ಚಿಸಲಿದ್ದಾರೆ ಎನ್ನಲಾಗಿದೆ.

“ಸಂವಾದದ ಕಾರ್ಯಸೂಚಿಯು ಪರಸ್ಪರ ಹಿತಾಸಕ್ತಿಯ ರಾಜಕೀಯ ಮತ್ತು ರಕ್ಷಣಾ ವಿಷಯಗಳನ್ನು ಒಳಗೊಂಡಿರುತ್ತದೆ. ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ನಿರೀಕ್ಷೆಯಿದೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ.


ಇದನ್ನೂ ಓದಿರಿ: ನೊಬೆಲ್‌ ಪ್ರಶಸ್ತಿ ಪುರಸ್ಕೃತ ಆಂಗ್‌ ಸಾನ್‌ ಸೂಕಿಗೆ ನಾಲ್ಕು ವರ್ಷ ಜೈಲು ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...